Connect with us

ಲೈಫ್ ಸ್ಟೈಲ್

‘ಕೊರೋನ ವೈರಸ್’ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು ; ಮಿಸ್ ಮಾಡ್ದೆ ಈ ಲೇಖನ ಓದಿ..!

Published

on

  • ಡಾ. ಸಂತೋಷ್. ಕೆ. ಬಿ.

ಲ್ಲರ ಬಾಯಲ್ಲೂ ಕೊರೋನಾದೇ ಸುದ್ದಿ. 2019ರ ವಿದಾಯದಲ್ಲಿ ಚೀನಾ ದೇಶವನ್ನು ಮಾತ್ರವೇ ಕಾಡಿದ ಕೊರೋನ, ಇದೀಗ ಭಾರತವನ್ನೂ ಹಬ್ಬಿದೆ. ಅದರಲ್ಲೂ ನಮ್ಮ ಸುತ್ತಮುತ್ತಲಿನವರಲ್ಲಿಯೇ ಎನಾದರೂ ಕೊರೋನ ಇದ್ದರೆ ಎಂಬ ಭಯ ಎಲ್ಲರಲ್ಲೂ ಮನೆ ಮಾಡಿದೆ. ಕಾರಣ ಅದರ ಅಸಾಮಾನ್ಯ ಸಾಂಕ್ರಾಮಿಕ ಗುಣ.

ಕೊರೋನ ವೈರಸ್ ಡಿಸೀಸ್ 2019, ಕೋವಿಡ್-19, ನೋವೆಲ್ ಕೊರೋನ ವೈರಸ್,
SARS CoV-2 ಎಂದೆಲ್ಲಾ ಕರೆಯಲ್ಪಡುವ ಈ ಸಾಂಕ್ರಾಮಿಕ ಖಾಯಿಲೆ, 2019ರ ಅಂತ್ಯ ಮತ್ತು 2020ರ ಆರಂಭದಲ್ಲಿ ದೇಶ – ವಿದೇಶಗಳಲ್ಲಿ ಹರಡಿಕೊಂಡಿರುವ ಒಂದು ವೈರಸ್ ಸೋಂಕು. ಚೀನಾ ದೇಶದಲ್ಲಿ ಒಂದು ಸಣ್ಣ ಅವಧಿಯಲ್ಲಿ ಸಾಕಷ್ಟು ಜನರಿಗೆ ಹಬ್ಬಿದ ನಂತರ ಚೀನಾ ದೇಶವು ವಿಶ್ವ ಆರೋಗ್ಯ ಸಂಸ್ಥೆಗೆ ನೋಟಿಫಿಕೇಶನ್ ಸಲ್ಲಿಸಿತು.

ನಂತರ, ಅಮೇರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಅದೇ ವೈರಸ್ ಸೋಂಕು ತಗುಲಿದ್ದನ್ನು ಗಮನಿಸಿದ ವಿಶ್ವ ಆರೋಗ್ಯ ಸಂಸ್ಥೆ ಕೊರೋನ ವೈರಸ್ ಡಿಸೀಸ್ 2019 ನ್ನು ಒಂದು ಪ್ಯಾಂಡೆಮಿಕ್ ಖಾಯಿಲೆ ಅಂದರೆ, ದೇಶದಾದ್ಯಂತ ಅಥವಾ ವಿಶ್ವದಾದ್ಯಂತ ಹರಡಬಹುದಾದ ಸೋಂಕು ಎಂದು ಘೋಷಿಸಿತು. ಇದೊಂದು ಅತ್ಯಂತ ತುರ್ತಾಗಿ ಕ್ರಮ ಕೈಗೊಳ್ಳಬೇಕಾದ ಸೋಂಕಾಗಿದೆ.

ವೈರಸ್ ಹರಡಬಹುದಾದ ಜಾಗಗಳು

  • ಸಾರ್ವಜನಿಕ ಪ್ರಯಾಣ, ಸಾಮಾಜಿಕ ಕಾರ್ಯಕ್ರಮಗಳು, ಜನಸಂದಣಿಯಿಂದ ಕೂಡಿರುವ ಪ್ರದೇಶಗಳು.

ಯಾರಲ್ಲಿ ಕಂಡುಬರಬಹುದು?

  • ಇತ್ತೀಚಿನ ಯಾವುದಾದರೂ ಕೊರೋನ ಹರಡಿರುವ ಪ್ರದೇಶಕ್ಕೆ ಕಳೆದ 14 ದಿನಗಳಲ್ಲಿ ಪ್ರಯಾಣ ಬೆಳೆಸಿದವರು.
  • ಕೊರೋನ ಎಂದು ಖಾತ್ರಿಯಾದ ಅಥವಾ ಸಂಶಯಾಸ್ಪದ ಯಾವುದೇ ವ್ಯಕ್ತಿಯ ಜೊತೆ ಕಳೆದ 14 ದಿನಗಳಲ್ಲಿ ಸಂಪರ್ಕ ಹೊಂದಿದವರು.
  • ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುವವರು.

ಸೋಂಕಿನ ಲಕ್ಷಣಗಳು

  1. ಜ್ವರ(83%), ಕೆಮ್ಮು(82%), ಉಸಿರಾಟದ ತೊಂದರೆ (31%), ಗಂಟಲು ಕಡಿತ(5%), ಶೀತ(4%), ಭೇದಿ(2%)
    ಇವೆಲ್ಲವೂ ಸಾಮಾನ್ಯವಾಗಿ ಕಂಡುಬರುವ ಗುಣಲಕ್ಷಣಗಳೇ ಆದರೂ ಇವುಗಳೊಂದಿಗೆ ಯಾವುದಾದರೂ ಊರಿಗೆ ಪ್ರಯಾಣ ಬೆಳೆಸಿದವರು ಅಥವಾ ಕೊರೋನ ಶಂಕಿತ ವ್ಯಕ್ತಿಯೊಂದಿಗಿನ ಸಂಪರ್ಕ ಇದ್ದಲ್ಲಿ ಕೊರೋನ ಇರುವ ಸಾಧ್ಯತೆಗಳು ಹೆಚ್ಚು ಎಂದು ಪರಿಗಣಿಸಬಹುದು.ಸೋಂಕಿನ ಲಕ್ಷಣಗಳು ಕಂಡುಬರಲು ವೈರಸ್ ದೇಹದೊಳಗೆ ಸೇರಿ ಸುಮಾರು14 ದಿನಗಳವರೆಗೂ ಸಮಯ ಬೇಕಾಗಬಹುದು.
  2. ಅತೀ ಚಿಕ್ಕ ವಯಸ್ಸಿನವರಲ್ಲಿ, ವಯಸ್ಸಾದವರಲ್ಲಿ, ಮೊದಲೇ ಮಧುಮೇಹ ಅಥವಾ ಶ್ವಾಸಕೋಶದ ತೊಂದರೆ ಅಥವಾ ಹೃದಯ ಸಂಬಂಧಿತ ರೋಗ ಉಳ್ಳವರಲ್ಲಿ ಈ ಸೋಂಕು ಅತೀ ತೀವ್ರವಾಗಿ ಕಾಣಿಸಿಕೊಳ್ಳಬಹುದು.

ಸೋಂಕು ನಿರ್ಣಯ

  1. ರಕ್ತಪರೀಕ್ಷೆ : ಬಿಳಿ ರಕ್ತಕಣಗಳು ಕಡಿಮೆಯಾಗುವುದು, ಮೂತ್ರಪಿಂಡ ಹಾಗೂ ಲಿವರ್ ನ ಕಾರ್ಯಕ್ಷಮತೆ ಕಡಿಮೆಯಿರುವ ಅಂಶಗಳು ಮತ್ತು ರಕ್ತದಲ್ಲಿ ಸೋಂಕಿನ ಮೂಲ ಮತ್ತು ಪ್ರಮಾಣವನ್ನು ತಿಳಿಯಲು ಬೇಕಾದ ಸಿ.ಆರ್.ಪಿ., ಪ್ರೊಕ್ಯಾಲ್ಸಿಟೊನಿನ್, ಎಲ್.ಡಿ.ಎಚ್ ಗಳಂತಹ ಪರೀಕ್ಷೆಗಳು.
  2. ಎಕ್ಸ್ರೇ: ಸೋಂಕಿನ ಪ್ರಭಾವದಿಂದ ಹಾನಿಗೊಳಗಾದ ಶ್ವಾಸಕೋಶಗಳ ಅಂಗಾಂಶಗಳನ್ನು ಕಾಣಬಹುದು.
  3. ಶ್ವಾಸಕೋಶಗಳ ಪರಿಸ್ಥಿತಿಯನ್ನು ತಿಳಿಯಲು ಕೆಲವೊಮ್ಮೆ ಇನ್ನೂ ಹೆಚ್ಚಿನ ಪರೀಕ್ಷೆಗಳು ಅಂದರೆ ಸಿ.ಟಿ.ಸ್ಕ್ಯಾನ್ ಕೂಡ ಅವಶ್ಯಕವಾಗಬಹುದು.
  4. ಇದೆಲ್ಲವೂ ಕೇವಲ ಸೋಂಕಿನ ಪ್ರಭಾವದಿಂದ ದೇಹದಲ್ಲಿ ಉಂಟಾಗುವ ವ್ಯತ್ಯಾಸಗಳನ್ನು ತಿಳಿಯುವ ಪರೀಕ್ಷೆಗಳು ಮಾತ್ರ. ಆದರೆ, ಸೋಂಕನ್ನು ನಿರ್ಣಾಯಕ ತಿಳಿದುಕೊಳ್ಳಬೇಕೆಂದರೆ ಕೊರೋನ ವೈರಸ್‌ನ ಪಿ. ಸಿ. ಆರ್. ಎಂಬ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅದನ್ನು ಕೆಲವೇ ಪ್ರಯೋಗಾಲಯಗಳಲ್ಲಿ ಮಾಡಲಾಗುತ್ತಿದೆ.

ಕೊರೋನಾ ಲಕ್ಷಣಗಳು

ಚಿಕಿತ್ಸೆ

  • ಕೊರೋನ ಎಂದು ಶಂಕಿತ ಅಥವಾ ಸೋಂಕಿತನೆಂದು ತಿಳಿದ ಕೂಡಲೇ ಚಿಕಿತ್ಸೆಯ ಮೊಟ್ಟಮೊದಲನೇ ಹೆಜ್ಜೆ ಆ ವ್ಯಕ್ತಿಯನ್ನು ಪ್ರತ್ಯೇಕಿಸುವುದು. ಮತ್ತು ಇದೊಂದು ಸಾಂಕ್ರಾಮಿಕ ಸೋಂಕಾಗಿರುವುದರಿಂದ ವೈದ್ಯರು ನೀಡುವ ಚಿಕಿತ್ಸೆ ಅಥವಾ ಪರೀಕ್ಷೆಗಳಿಗೆ ಸಹಕರಿಸುವುದು.
  • ಕೊರೋನ ವೈರಸ್‌ನ ಪಿ. ಸಿ. ಆರ್. ಪರೀಕ್ಷೆಗಾಗಿ ಮೂಗು, ಗಂಟಲು ಅಥವಾ ಶ್ವಾಸಕೋಶದ ಮಾದರಿಯನ್ನು ಪಿ.ಸಿ.ಆರ್. ವ್ಯವಸ್ಥಿತ ಪ್ರಯೋಗಾಲಯಕ್ಕೆ ಕಳುಹಿಸಬೇಕಾಗುತ್ತದೆ. ಇದರ ಫಲಿತಾಂಶಕ್ಕಾಗಿ ಕೆಲವು ದಿನಗಳವರಗೆ ಕಾಯಬೇಕಾಗಬಹುದು.
  • ರೋಗಿಯ ಪರಿಸ್ಥತಿಗೆ ತಕ್ಕ ಹಾಗೆ ಆಮ್ಲಜನಕದ ಜೊತೆಗೆ ಇನ್ನೂ ಉಸಿರಾಟದ ತೊಂದರೆಯನ್ನು ನೀಗಿಸಲು ಉಸಿರಾಟದ ಯಂತ್ರಗಳ ಚಿಕಿತ್ಸೆಯೂ ಬೇಕಾಗಬಹುದು. ಆಗ ರೋಗಿ ಪರಿಸ್ಥಿತಿ ಗಂಭೀರವಾಗಿರುತ್ತದೆ.
  • ವೈರಸ್ ಅನ್ನು ಹೋಗಲಾಡಿಸುವ ಪ್ರಯತ್ನದ ಸಲುವಾಗಿ ವಿವಿಧ ಆಂಟಿವೈರಲ್ ಚಿಕಿತ್ಸೆಯೂ ಬೇಕಾಗಬಹುದು. ಆದರೆ ಕೋರೋನ ವೈರಸ್ ಬಾರದಂತೆ ತಡೆಯುವುದಕ್ಕೆ ಅಥವಾ ಚಿಕಿತ್ಸೆಗೆ ಬೇಕಾದ ಅಧಿಕೃತ ಯಾವುದೇ ಆಂಟಿವೈರಲ್ ಧಾತುವನ್ನು ಈವರೆಗೂ ಸಂಶೋಧಿಸಲಾಗಿಲ್ಲ ಮತ್ತು ಸಂಶೋಧನೆ ಇನ್ನೂ ಪ್ರಗತಿಯಲ್ಲಿದೆ.

ಮುಂಜಗ್ರತಾ ಕ್ರಮಗಳು

  1. ಈ ಮೇಲೆ ತಿಳಿಸಿರುವ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರ ಸಲಹೆ ಪಡೆಯುವುದು. ಕೆಮ್ಮುವ, ಸೀನುವ, ಅಥವಾ ಮಾತನಾಡುವ ವೇಳೆ ವೈಜ್ಞಾನಿಕವಾಗಿ ಕನಿಷ್ಟ 0.5ರಿಂದ 2 ಮೀಟರ್‌ನಷ್ಟು ಅಂತರ ಕಾಪಾಡಿಕೊಳ್ಳುವುದು. ಮತ್ತು ಇನ್ನೊಬ್ಬರಿಗೆ ಹರಡದಂತೆ ಕ್ರಮ ವಹಿಸುವುದು. ಮೂಗು, ಬಾಯಿಗಳನ್ನು ಕರ್ಚಿಫ್, ಮಾಸ್ಕ್ ಗಳಿಂದ ಮುಚ್ಚಿಕೊಳ್ಳುವುದು. ಮತ್ತು ಮನೆಯಿಂದ ಹೊರಗೆ ಬಾರದಂತೆ ಮನೆಯೊಳಗೇ ಸ್ವ ಇಚ್ಚೆಯಿಂದ ಪ್ರತ್ಯೇಕ  (Home Quarantine)ವಾಗುವುದು.
  2. ಕೈಗಳನ್ನು ಸರಿಯಾಗಿ ಸಾಬೂನು, ಇನ್ನಿತರ ಅದಕ್ಕೆಂದೇ ತಯಾರಿಸಿರುವ ಸಲ್ಯೂಷನ್ ಗಳಿಂದ ತೊಳೆದುಕೊಳ್ಳುವುದು.
  3. ಈ ಮಧ್ಯದಲ್ಲಿ ಯಾವುದಾದರೂ ಊರಿಗೆ ಪ್ರಯಾಣ ಬೆಳೆಸಿದ್ದರೆ ಶಂಕಿತ ಅಥವಾ ಸೋಂಕಿತನೆಂದು ತಿಳಿದ ವ್ಯಕ್ತಿಯೊಂದಿಗಿನ ಸಂಪರ್ಕವಿದ್ದರೆ ವೈದ್ಯರಿಗೆ ಅಥವಾ ಆರೋಗ್ಯ ಇಲಾಖೆಯ ಯಾವುದೇ ಅಧಿಕಾರಿಗೆ ಮೊದಲೇ ತಿಳಿಸುವುದು.
  4. ಮದುವೆಗಳು, ಸಾಮಾಜಿಕ ಕಾರ್ಯಕ್ರಮಗಳು, ದೂರದೂರಿಗೆ ಪ್ರಯಾಣಗಳಿಗೆ ಆದಷ್ಟು ಕಡಿವಾಣ ಹಾಕುವುದು.

(ಈ ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಡಾ. ಸಂತೋಷ್ ಅವರ ಈ  ಇಮೇಲ್ ಗೆ ಕಳಿಸಿ. santhosh.achar15892@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending