Connect with us

ದಿನದ ಸುದ್ದಿ

ಹತ್ತಿ ಬೆಳೆಗಾರರಿಗೆ ಮಹತ್ವದ ಸಲಹೆಗಳು : ಮಿಸ್ ಮಾಡ್ದೆ ಓದಿ

Published

on

ಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯು ಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಲಾಗಿದೆ.

ಸುಧಾರಿತ ಕ್ರಮಗಳಾದ ಸುಧಾರಿತ ತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ ಗುಣಮಟ್ಟದ ಇಳುವರಿಯ ಜೊತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ.

ಬಿತ್ತನೆ ಕಾಲ

ವಿಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ (ಡಿ.ಹೆಚ್.ಬಿ-105, ಡಿ.ಸಿ.ಹೆಚ್ 32 ಮತ್ತು ವರಲಕ್ಷ್ಮಿ ತಳಿಗಳು) ಹಾಗೂ ಸ್ವಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜುಲೈ (ಎನ್.ಹೆಚ್.ಹೆಚ್44 ಮತ್ತು ಡಿ.ಹೆಚ್.ಹೆಚ್11 ತಳಿಗಳು) ತಿಂಗಳವರೆಗೆ ಬೆಳೆಯಬಹುದಾಗಿದೆ.

ಬೀಜ ಪ್ರಮಾಣ ಮತ್ತು ಅಂತರ

ಪ್ರತಿ ಎಕರೆಗೆ 0.5 ಕಿ.ಗ್ರಾಂ. ಗುಂಜು ರಹಿತ ಹತ್ತಿಯ ಬೀಜಗಳನ್ನು ಸಾಲಿನಿಂದ ಸಾಲಿಗೆ 3 ಅಡಿ ಅಂತರದಲಿ ಹಾಗೂ ಗಿಡದಿಂದ ಗಿಡಕ್ಕೆ 2 ಅಡಿ ಅಂತರ ನೀಡಿ ಬಿತ್ತನೆ ಮಾಡುವುದು. ಪ್ರಮಾಣಿತ ಬಿಟಿ ಹತ್ತಿ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ ಬೆಳೆಯಬಹುದಾಗಿದೆ.

  • ಬಿಟಿ ಹತ್ತಿಯ ಜೊತೆಗೆ ಬಿಟಿ ಹತ್ತಿರಹಿತ ಹತ್ತಿಯನ್ನುಅಥವಾ ಬಿಟಿ ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  • ಹೆಚ್ಚು ಗುಲಾಬಿ ಕಾಯಿ ಕೊರಕದ ಭಾಧೆಯಿದ್ಧಲ್ಲಿ ಅಲ್ಪ ಕಾಲಾವಧಿ ಬಿಟಿ ಹತ್ತಿ ಹೈಬ್ರಿಡನ್ನು ಬೆಳೆಯುವುದು.

ಬೀಜೋಪಚಾರ

ಪ್ರಾರಂಭದಲ್ಲಿ ಬರುವ ಹತ್ತಿ ರಸ ಹೀರುವ ಕೀಟಗಳನ್ನು ಹತೋಟಿಯಲ್ಲಿಡಲು ಪ್ರತಿ ಕಿ.ಗ್ರಾಂ. ಹತ್ತಿ ಬೀಜವನ್ನು 10 ಗ್ರಾಂ ಇಮಿಡಾಕ್ಲೋಪ್ರಿಡ್-70 ಡಬ್ಲ್ಯೂ.ಎಸ್. ನಿಂದ ಉಪಚಾರ ಮಾಡಿ ಬಿತ್ತನೆ ಮಾಡುವುದು.

ಪೋಷಕಾಂಶಗಳ ನಿರ್ವಹಣೆ

ಬಿತ್ತನೆಗೆ 2-3 ವಾರಗಳ ಮೊದಲು 5 ಟನ್ ಕೊಟ್ಟಿಗೆ ಗೊಬ್ಬರ / ಸಾವಯವ ಗೊಬ್ಬರವನ್ನು ಪ್ರತಿ ಎಕರೆಗೆ ಬಳಸಬೇಕು. ಹಾಗೂ ಪ್ರತಿ ಎಕರೆಗೆ 60ಕಿ.ಗ್ರಾಂ. ಸಾರಜನಕ, 30 ಕಿ.ಗ್ರಾಂ. ರಂಜಕ, 30 ಕಿ.ಗ್ರಾಂ. ಪೊಟ್ಯಾಷ್ ರಾಸಾಯನಿಕ ಗೊಬ್ಬರಗಳ ಶಿಪಾರಸಿದ್ದು, ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕ, ಪೂರ್ತಿ ಪ್ರಮಾಣದ ರಂಜಕ & ಪೊಟ್ಯಾಶ್ ಗೊಬ್ಬರಗಳನ್ನು ಹಾಕಬೇಕು.

ಉಳಿದ ಶೇ.50ರ ಸಾರಜನಕವನ್ನು ಬಿತ್ತನೆಯಾದ 60 ದಿನಗಳ ನಂತರ ಮೇಲುಗೊಬ್ಬರವಾಗಿ ನೀಡುವುದು. ಬಿತ್ತನೆ ಸಮಯದಲ್ಲಿ 10ಕಿ.ಗ್ರಾಂ. ಮೆಗ್ನಿಷಿಯಂ ಸಲ್ಫೇಟ್ ಪ್ರತಿ ಎಕರೆಗೆ ಬಳಸುವುದು.
ಹತ್ತಿಯಲ್ಲಿ ಸಮತೋಲನ ಗೊಬ್ಬರಗಳ ಬಳಕೆ ಅತೀ ಅಗತ್ಯವಾಗಿದ್ದು, ಕೆಲವೊಂದು ರೈತರು ಪೊಟ್ಯಾಷ್ ಗೊಬ್ಬರಗಳನ್ನು ಬಳಸುತ್ತಿರುವುದಿಲ್ಲ.

ಇದರಿಂದಾಗಿ ಕಾಯಿಯ ಗಾತ್ರ ಕಡಿಮೆಯಾಗುವುದಲ್ಲದೆ ಇಳುವರಿಯು ಕಡಿಮೆಯಾಗುವುದು. ಪೊಟ್ಯಾಷ್ ಗೊಬ್ಬರದ ಬಳಕೆಯಿಂದಾಗಿ ಕಾಂಡ ಮತ್ತು ಕಾಯಿಯ ತೊಗಟೆ ದಪ್ಪನಾಗಿ ರೋಗ ಹಾಗೂ ಕೀಟದ ಹಾವಳಿ ಕಡಿಮೆಯಾಗುವುದು.

ಕಳೆ ನಿರ್ವಹಣೆ

ಬಿತ್ತನೆಯಾದ ದಿವಸ/ಮಾರನೆ ದಿವಸ ಎಕರೆಗೆ 400 ಗ್ರಾಂಡೈಯುರಾನ್ ಶೇ.80 ಅಥವಾ 800 ಮಿ.ಲೀ. ಫ್ಲೋಕ್ಲೋರಾಲಿನ್ 45ಇ.ಸಿ. ಅಥವಾ 1.3ಲೀ. ಪೆಂಡಿಮೆಥಾಲಿನ್ ಶೇ.30ಇ.ಸಿ. ಅಥವಾ 800ಮಿ.ಲೀ. ಬ್ಯೂಟಾಕ್ಲೋರ್ 50 ಇ.ಸಿ.ನ್ನು 300 ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸುವುದು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು. ಬಿತ್ತಿದ 30 ದಿವಸಗಳ ನಂತರ 3 ರಿಂದ 4 ಬಾರಿ ಅಳವಾಗಿ ಎಡೆಕುಂಟೆ ಹೊಡೆಯುವುದು.

ಅಂತರ ಬೆಳೆ

ಹತ್ತಿಯಜೊತೆಗೆ ಮೆಣಸಿನಕಾಯಿ, ಸೊಯಾ ಆವರೆ, ಬೀನ್ಸ್, ಅಲಸಂದೆ, ಉದ್ದು ಬೆಳೆಗಳನ್ನು 1:1 ಅನುಪಾತದಲ್ಲಿ ಬೆಳೆಯಬಹುದಾಗಿದೆ.

ಜೋಡಿ ಸಾಲು ಪದ್ಧತಿ

ಹತ್ತಿಯನ್ನು 120 ಸೆಂ.ಮೀ-60 ಸೆಂ.ಮೀ-120 ಸೆಂ.ಮೀ ಅಂತರz ಜೋಡಿ ಸಾಲುಗಳಲ್ಲಿ, ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರ ನೀಡಿ ಬೆಳೆಯುವುದರಿಂದ ವಿವಿಧ ಅಂತರ ಬೆಳೆಗಳನ್ನು ಬೆಳೆಯಬಹುದಾಗಿದೆ.

ಪ್ರಮುಖ ಸಲಹೆಗಳು

  1. ಪ್ರತಿ ವರ್ಷ ಒಂದೇ ಜಮೀನಿನಲ್ಲಿ ಹತ್ತಿಯು ನಂತರ ಹತ್ತಿ ಬೆಳೆಯದೆ ಬೆಳೆ ಪರಿವರ್ತನೆ ಮಾಡುವುದು.
  2. ಪ್ರಮಾಣಿತ ಹಾಗೂ ಶಿಫಾರಸ್ಸು ಮಾಡಿದ ಬಿತ್ತನೆ ಬೀಜಗಳನ್ನು ಬಳಸುವುದು.
  3. ಬಿ.ಟಿ. ಹತ್ತಿಯ ಜೊತೆಗೆ ಬಿ.ಟಿ. ಹತ್ತಿ ರಹಿತ ಹತ್ತಿಯನ್ನು ಅಥವಾ ಬಿ.ಟಿ. ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  4. ಹೊಲದ ಸುತ್ತಲೂ ಪ್ರತಿ 20 ಸಾಲು ಹತ್ತಿಗೆ 1 ಸಾಲಿನಲ್ಲಿ ಬೆಂಡೆ ಬೀಜ ಹಾಕುವುದರಿಂದ ಕೀಟಗಳ ಹಾವಳಿ ಕಡಿಮೆಯಾಗುವುದು.
  5. ಶಿಫಾರಸ್ಸಿನ ರಸಾಯನಿಕ ಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿಯೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯ.
  • ಹೆಸರು ಬೆಳೆಯ ಬೇಸಾಯ ಕ್ರಮಗಳು: ತಳಿಗಳು: ಪಿ.ಎಸ್.16

ಬೀಜ ಪ್ರಮಾಣ ಮತ್ತು ಅಂತರ

ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ

ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟುದ್ರಾವಣ ಬಳಸಿ ಉಪಚರಿಸುವುದು.

ಪೋಷಕಾಂಶ ನಿರ್ವಹಣೆ

  • ಎಕರೆಗೆ 3 ಟನ್ ಸಾವಯವ ಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
  • ಎಕರೆಗೆ 5 ಕೆ.ಜಿ. ಸಾರಜನಕ, 10 ಕೆ.ಜಿ. ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ನೀಡುವುದು.

ಕಳೆ ನಿರ್ವಹಣೆ

ಬಿತ್ತಿದ ದಿವಸ/ ಮಾರನೆಯ ದಿವಸ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30ಇ.ಸಿ ಕಳೆನಾಶಕವನ್ನು 300 ಲೀ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.

ಸಸ್ಯ ಸಂರಕ್ಷಣೆ

  • ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
  • ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
  • ಬೂದಿ ರೋಗದ ಹತೋಟಿಗೆ ಕಾರ್ಬೆನ್‍ಡೈಜಿಂ. 50 ಡಬ್ಲ್ಯೂಪಿನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು.

ಉದ್ದು ಬೆಳೆಯ ಬೇಸಾಯ ಕ್ರಮಗಳು

  • ತಳಿ:- ಕರಂಗಾವ್-3, ಟಿ-9, ರಶ್ಮಿ (ಎಲ್.ಬಿ.ಜಿ.625) ಬೀಜಗಳ ಪ್ರಮಾಣ 8-10 ಕೆ.ಜಿ. ಪ್ರತಿ ಎಕರೆಗೆ.
  • ಬೀಜ ಪ್ರಮಾಣ ಮತ್ತು ಅಂತರ
  • ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದ ಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ

ಬಿತ್ತನೆಗೆ ಮುಂಚಿತವಾಗಿ ಬರ ನಿರೋಧಕ ಗುಣ ಹೆಚ್ಚಿಸಲು ಶೇ.2 ರಕ್ಯಾಲ್ಸಿಯಂಕ್ಲೋರೈಡ್ ದ್ರಾವಣದಲ್ಲಿ ಅರ್ಧತಾಸು ನೆನೆಸಿ, ನಂತರ ನೆರಳಿನಲ್ಲಿ ಕನಿಷ್ಠ 7 ತಾಸು ಒಣಗಿಸಬೇಕು ನಂತರ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟು ದ್ರಾವಣ ಬಳಸಿ ಉಪಚರಿಸುವುದು.

ಪೋಷಕಾಂಶ ನಿರ್ವಹಣೆ

  • ಎಕರೆಗೆ 3 ಟನ್ ಸಾವಯವಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
  • ಎಕರೆಗೆ 5 ಕೆ.ಜಿ. ಸಾರಜಕನ, 10 ಕೆ.ಜಿ.ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ನೀಡುವುದು.

ಕಳೆ ನಿರ್ವಹಣೆ

ಬಿತ್ತಿದ 2 ದಿನಗಳೊಳಗಾಗಿ ಪ್ರತಿ ಎಕರೆಗೆ 0.8 ಲೀ ಫ್ಲುಕ್ಲೋರಾಲಿನ್ 45ಇ.ಸಿ ಅಥವಾ 1.2 ಲೀ. ಅಲಾಕ್ಲೋರ್ 50 ಇ.ಸಿ ಕಳೆನಾಶಕಗಳನ್ನು 300 ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.

ಸಸ್ಯ ಸಂರಕ್ಷಣೆ

  • ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗ ಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
  • ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7 ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
  • ಬೂದಿ ರೋಗದ ಹತೋಟಿಗೆ ಕಾರ್ಬನ್‍ಡೈಜಿಂ. 50 ಡಬ್ಲ್ಯೂಪಿ ನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending