ದಿನದ ಸುದ್ದಿ
ಹತ್ತಿ ಬೆಳೆಗಾರರಿಗೆ ಮಹತ್ವದ ಸಲಹೆಗಳು : ಮಿಸ್ ಮಾಡ್ದೆ ಓದಿ
ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯು ಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಲಾಗಿದೆ.
ಸುಧಾರಿತ ಕ್ರಮಗಳಾದ ಸುಧಾರಿತ ತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ ಗುಣಮಟ್ಟದ ಇಳುವರಿಯ ಜೊತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ.
ಬಿತ್ತನೆ ಕಾಲ
ವಿಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ (ಡಿ.ಹೆಚ್.ಬಿ-105, ಡಿ.ಸಿ.ಹೆಚ್ 32 ಮತ್ತು ವರಲಕ್ಷ್ಮಿ ತಳಿಗಳು) ಹಾಗೂ ಸ್ವಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜುಲೈ (ಎನ್.ಹೆಚ್.ಹೆಚ್44 ಮತ್ತು ಡಿ.ಹೆಚ್.ಹೆಚ್11 ತಳಿಗಳು) ತಿಂಗಳವರೆಗೆ ಬೆಳೆಯಬಹುದಾಗಿದೆ.
ಬೀಜ ಪ್ರಮಾಣ ಮತ್ತು ಅಂತರ
ಪ್ರತಿ ಎಕರೆಗೆ 0.5 ಕಿ.ಗ್ರಾಂ. ಗುಂಜು ರಹಿತ ಹತ್ತಿಯ ಬೀಜಗಳನ್ನು ಸಾಲಿನಿಂದ ಸಾಲಿಗೆ 3 ಅಡಿ ಅಂತರದಲಿ ಹಾಗೂ ಗಿಡದಿಂದ ಗಿಡಕ್ಕೆ 2 ಅಡಿ ಅಂತರ ನೀಡಿ ಬಿತ್ತನೆ ಮಾಡುವುದು. ಪ್ರಮಾಣಿತ ಬಿಟಿ ಹತ್ತಿ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ ಬೆಳೆಯಬಹುದಾಗಿದೆ.
- ಬಿಟಿ ಹತ್ತಿಯ ಜೊತೆಗೆ ಬಿಟಿ ಹತ್ತಿರಹಿತ ಹತ್ತಿಯನ್ನುಅಥವಾ ಬಿಟಿ ಹತ್ತಿ ಪ್ಯಾಕ್ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
- ಹೆಚ್ಚು ಗುಲಾಬಿ ಕಾಯಿ ಕೊರಕದ ಭಾಧೆಯಿದ್ಧಲ್ಲಿ ಅಲ್ಪ ಕಾಲಾವಧಿ ಬಿಟಿ ಹತ್ತಿ ಹೈಬ್ರಿಡನ್ನು ಬೆಳೆಯುವುದು.
ಬೀಜೋಪಚಾರ
ಪ್ರಾರಂಭದಲ್ಲಿ ಬರುವ ಹತ್ತಿ ರಸ ಹೀರುವ ಕೀಟಗಳನ್ನು ಹತೋಟಿಯಲ್ಲಿಡಲು ಪ್ರತಿ ಕಿ.ಗ್ರಾಂ. ಹತ್ತಿ ಬೀಜವನ್ನು 10 ಗ್ರಾಂ ಇಮಿಡಾಕ್ಲೋಪ್ರಿಡ್-70 ಡಬ್ಲ್ಯೂ.ಎಸ್. ನಿಂದ ಉಪಚಾರ ಮಾಡಿ ಬಿತ್ತನೆ ಮಾಡುವುದು.
ಪೋಷಕಾಂಶಗಳ ನಿರ್ವಹಣೆ
ಬಿತ್ತನೆಗೆ 2-3 ವಾರಗಳ ಮೊದಲು 5 ಟನ್ ಕೊಟ್ಟಿಗೆ ಗೊಬ್ಬರ / ಸಾವಯವ ಗೊಬ್ಬರವನ್ನು ಪ್ರತಿ ಎಕರೆಗೆ ಬಳಸಬೇಕು. ಹಾಗೂ ಪ್ರತಿ ಎಕರೆಗೆ 60ಕಿ.ಗ್ರಾಂ. ಸಾರಜನಕ, 30 ಕಿ.ಗ್ರಾಂ. ರಂಜಕ, 30 ಕಿ.ಗ್ರಾಂ. ಪೊಟ್ಯಾಷ್ ರಾಸಾಯನಿಕ ಗೊಬ್ಬರಗಳ ಶಿಪಾರಸಿದ್ದು, ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕ, ಪೂರ್ತಿ ಪ್ರಮಾಣದ ರಂಜಕ & ಪೊಟ್ಯಾಶ್ ಗೊಬ್ಬರಗಳನ್ನು ಹಾಕಬೇಕು.
ಉಳಿದ ಶೇ.50ರ ಸಾರಜನಕವನ್ನು ಬಿತ್ತನೆಯಾದ 60 ದಿನಗಳ ನಂತರ ಮೇಲುಗೊಬ್ಬರವಾಗಿ ನೀಡುವುದು. ಬಿತ್ತನೆ ಸಮಯದಲ್ಲಿ 10ಕಿ.ಗ್ರಾಂ. ಮೆಗ್ನಿಷಿಯಂ ಸಲ್ಫೇಟ್ ಪ್ರತಿ ಎಕರೆಗೆ ಬಳಸುವುದು.
ಹತ್ತಿಯಲ್ಲಿ ಸಮತೋಲನ ಗೊಬ್ಬರಗಳ ಬಳಕೆ ಅತೀ ಅಗತ್ಯವಾಗಿದ್ದು, ಕೆಲವೊಂದು ರೈತರು ಪೊಟ್ಯಾಷ್ ಗೊಬ್ಬರಗಳನ್ನು ಬಳಸುತ್ತಿರುವುದಿಲ್ಲ.
ಇದರಿಂದಾಗಿ ಕಾಯಿಯ ಗಾತ್ರ ಕಡಿಮೆಯಾಗುವುದಲ್ಲದೆ ಇಳುವರಿಯು ಕಡಿಮೆಯಾಗುವುದು. ಪೊಟ್ಯಾಷ್ ಗೊಬ್ಬರದ ಬಳಕೆಯಿಂದಾಗಿ ಕಾಂಡ ಮತ್ತು ಕಾಯಿಯ ತೊಗಟೆ ದಪ್ಪನಾಗಿ ರೋಗ ಹಾಗೂ ಕೀಟದ ಹಾವಳಿ ಕಡಿಮೆಯಾಗುವುದು.
ಕಳೆ ನಿರ್ವಹಣೆ
ಬಿತ್ತನೆಯಾದ ದಿವಸ/ಮಾರನೆ ದಿವಸ ಎಕರೆಗೆ 400 ಗ್ರಾಂಡೈಯುರಾನ್ ಶೇ.80 ಅಥವಾ 800 ಮಿ.ಲೀ. ಫ್ಲೋಕ್ಲೋರಾಲಿನ್ 45ಇ.ಸಿ. ಅಥವಾ 1.3ಲೀ. ಪೆಂಡಿಮೆಥಾಲಿನ್ ಶೇ.30ಇ.ಸಿ. ಅಥವಾ 800ಮಿ.ಲೀ. ಬ್ಯೂಟಾಕ್ಲೋರ್ 50 ಇ.ಸಿ.ನ್ನು 300 ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸುವುದು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು. ಬಿತ್ತಿದ 30 ದಿವಸಗಳ ನಂತರ 3 ರಿಂದ 4 ಬಾರಿ ಅಳವಾಗಿ ಎಡೆಕುಂಟೆ ಹೊಡೆಯುವುದು.
ಅಂತರ ಬೆಳೆ
ಹತ್ತಿಯಜೊತೆಗೆ ಮೆಣಸಿನಕಾಯಿ, ಸೊಯಾ ಆವರೆ, ಬೀನ್ಸ್, ಅಲಸಂದೆ, ಉದ್ದು ಬೆಳೆಗಳನ್ನು 1:1 ಅನುಪಾತದಲ್ಲಿ ಬೆಳೆಯಬಹುದಾಗಿದೆ.
ಜೋಡಿ ಸಾಲು ಪದ್ಧತಿ
ಹತ್ತಿಯನ್ನು 120 ಸೆಂ.ಮೀ-60 ಸೆಂ.ಮೀ-120 ಸೆಂ.ಮೀ ಅಂತರz ಜೋಡಿ ಸಾಲುಗಳಲ್ಲಿ, ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರ ನೀಡಿ ಬೆಳೆಯುವುದರಿಂದ ವಿವಿಧ ಅಂತರ ಬೆಳೆಗಳನ್ನು ಬೆಳೆಯಬಹುದಾಗಿದೆ.
ಪ್ರಮುಖ ಸಲಹೆಗಳು
- ಪ್ರತಿ ವರ್ಷ ಒಂದೇ ಜಮೀನಿನಲ್ಲಿ ಹತ್ತಿಯು ನಂತರ ಹತ್ತಿ ಬೆಳೆಯದೆ ಬೆಳೆ ಪರಿವರ್ತನೆ ಮಾಡುವುದು.
- ಪ್ರಮಾಣಿತ ಹಾಗೂ ಶಿಫಾರಸ್ಸು ಮಾಡಿದ ಬಿತ್ತನೆ ಬೀಜಗಳನ್ನು ಬಳಸುವುದು.
- ಬಿ.ಟಿ. ಹತ್ತಿಯ ಜೊತೆಗೆ ಬಿ.ಟಿ. ಹತ್ತಿ ರಹಿತ ಹತ್ತಿಯನ್ನು ಅಥವಾ ಬಿ.ಟಿ. ಹತ್ತಿ ಪ್ಯಾಕ್ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
- ಹೊಲದ ಸುತ್ತಲೂ ಪ್ರತಿ 20 ಸಾಲು ಹತ್ತಿಗೆ 1 ಸಾಲಿನಲ್ಲಿ ಬೆಂಡೆ ಬೀಜ ಹಾಕುವುದರಿಂದ ಕೀಟಗಳ ಹಾವಳಿ ಕಡಿಮೆಯಾಗುವುದು.
- ಶಿಫಾರಸ್ಸಿನ ರಸಾಯನಿಕ ಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿಯೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯ.
- ಹೆಸರು ಬೆಳೆಯ ಬೇಸಾಯ ಕ್ರಮಗಳು: ತಳಿಗಳು: ಪಿ.ಎಸ್.16
ಬೀಜ ಪ್ರಮಾಣ ಮತ್ತು ಅಂತರ
ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.
ಬೀಜೋಪಚಾರ
ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟುದ್ರಾವಣ ಬಳಸಿ ಉಪಚರಿಸುವುದು.
ಪೋಷಕಾಂಶ ನಿರ್ವಹಣೆ
- ಎಕರೆಗೆ 3 ಟನ್ ಸಾವಯವ ಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
- ಎಕರೆಗೆ 5 ಕೆ.ಜಿ. ಸಾರಜನಕ, 10 ಕೆ.ಜಿ. ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ನೀಡುವುದು.
ಕಳೆ ನಿರ್ವಹಣೆ
ಬಿತ್ತಿದ ದಿವಸ/ ಮಾರನೆಯ ದಿವಸ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30ಇ.ಸಿ ಕಳೆನಾಶಕವನ್ನು 300 ಲೀ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.
ಸಸ್ಯ ಸಂರಕ್ಷಣೆ
- ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
- ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
- ಬೂದಿ ರೋಗದ ಹತೋಟಿಗೆ ಕಾರ್ಬೆನ್ಡೈಜಿಂ. 50 ಡಬ್ಲ್ಯೂಪಿನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು.
ಉದ್ದು ಬೆಳೆಯ ಬೇಸಾಯ ಕ್ರಮಗಳು
- ತಳಿ:- ಕರಂಗಾವ್-3, ಟಿ-9, ರಶ್ಮಿ (ಎಲ್.ಬಿ.ಜಿ.625) ಬೀಜಗಳ ಪ್ರಮಾಣ 8-10 ಕೆ.ಜಿ. ಪ್ರತಿ ಎಕರೆಗೆ.
- ಬೀಜ ಪ್ರಮಾಣ ಮತ್ತು ಅಂತರ
- ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದ ಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.
ಬೀಜೋಪಚಾರ
ಬಿತ್ತನೆಗೆ ಮುಂಚಿತವಾಗಿ ಬರ ನಿರೋಧಕ ಗುಣ ಹೆಚ್ಚಿಸಲು ಶೇ.2 ರಕ್ಯಾಲ್ಸಿಯಂಕ್ಲೋರೈಡ್ ದ್ರಾವಣದಲ್ಲಿ ಅರ್ಧತಾಸು ನೆನೆಸಿ, ನಂತರ ನೆರಳಿನಲ್ಲಿ ಕನಿಷ್ಠ 7 ತಾಸು ಒಣಗಿಸಬೇಕು ನಂತರ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟು ದ್ರಾವಣ ಬಳಸಿ ಉಪಚರಿಸುವುದು.
ಪೋಷಕಾಂಶ ನಿರ್ವಹಣೆ
- ಎಕರೆಗೆ 3 ಟನ್ ಸಾವಯವಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
- ಎಕರೆಗೆ 5 ಕೆ.ಜಿ. ಸಾರಜಕನ, 10 ಕೆ.ಜಿ.ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ನೀಡುವುದು.
ಕಳೆ ನಿರ್ವಹಣೆ
ಬಿತ್ತಿದ 2 ದಿನಗಳೊಳಗಾಗಿ ಪ್ರತಿ ಎಕರೆಗೆ 0.8 ಲೀ ಫ್ಲುಕ್ಲೋರಾಲಿನ್ 45ಇ.ಸಿ ಅಥವಾ 1.2 ಲೀ. ಅಲಾಕ್ಲೋರ್ 50 ಇ.ಸಿ ಕಳೆನಾಶಕಗಳನ್ನು 300 ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.
ಸಸ್ಯ ಸಂರಕ್ಷಣೆ
- ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗ ಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
- ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7 ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
- ಬೂದಿ ರೋಗದ ಹತೋಟಿಗೆ ಕಾರ್ಬನ್ಡೈಜಿಂ. 50 ಡಬ್ಲ್ಯೂಪಿ ನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ22 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

