ದಿನದ ಸುದ್ದಿ
ಹತ್ತಿ ಬೆಳೆಗಾರರಿಗೆ ಮಹತ್ವದ ಸಲಹೆಗಳು : ಮಿಸ್ ಮಾಡ್ದೆ ಓದಿ
ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯು ಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಲಾಗಿದೆ.
ಸುಧಾರಿತ ಕ್ರಮಗಳಾದ ಸುಧಾರಿತ ತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ ಗುಣಮಟ್ಟದ ಇಳುವರಿಯ ಜೊತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ.
ಬಿತ್ತನೆ ಕಾಲ
ವಿಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ (ಡಿ.ಹೆಚ್.ಬಿ-105, ಡಿ.ಸಿ.ಹೆಚ್ 32 ಮತ್ತು ವರಲಕ್ಷ್ಮಿ ತಳಿಗಳು) ಹಾಗೂ ಸ್ವಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜುಲೈ (ಎನ್.ಹೆಚ್.ಹೆಚ್44 ಮತ್ತು ಡಿ.ಹೆಚ್.ಹೆಚ್11 ತಳಿಗಳು) ತಿಂಗಳವರೆಗೆ ಬೆಳೆಯಬಹುದಾಗಿದೆ.
ಬೀಜ ಪ್ರಮಾಣ ಮತ್ತು ಅಂತರ
ಪ್ರತಿ ಎಕರೆಗೆ 0.5 ಕಿ.ಗ್ರಾಂ. ಗುಂಜು ರಹಿತ ಹತ್ತಿಯ ಬೀಜಗಳನ್ನು ಸಾಲಿನಿಂದ ಸಾಲಿಗೆ 3 ಅಡಿ ಅಂತರದಲಿ ಹಾಗೂ ಗಿಡದಿಂದ ಗಿಡಕ್ಕೆ 2 ಅಡಿ ಅಂತರ ನೀಡಿ ಬಿತ್ತನೆ ಮಾಡುವುದು. ಪ್ರಮಾಣಿತ ಬಿಟಿ ಹತ್ತಿ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ ಬೆಳೆಯಬಹುದಾಗಿದೆ.
- ಬಿಟಿ ಹತ್ತಿಯ ಜೊತೆಗೆ ಬಿಟಿ ಹತ್ತಿರಹಿತ ಹತ್ತಿಯನ್ನುಅಥವಾ ಬಿಟಿ ಹತ್ತಿ ಪ್ಯಾಕ್ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
- ಹೆಚ್ಚು ಗುಲಾಬಿ ಕಾಯಿ ಕೊರಕದ ಭಾಧೆಯಿದ್ಧಲ್ಲಿ ಅಲ್ಪ ಕಾಲಾವಧಿ ಬಿಟಿ ಹತ್ತಿ ಹೈಬ್ರಿಡನ್ನು ಬೆಳೆಯುವುದು.
ಬೀಜೋಪಚಾರ
ಪ್ರಾರಂಭದಲ್ಲಿ ಬರುವ ಹತ್ತಿ ರಸ ಹೀರುವ ಕೀಟಗಳನ್ನು ಹತೋಟಿಯಲ್ಲಿಡಲು ಪ್ರತಿ ಕಿ.ಗ್ರಾಂ. ಹತ್ತಿ ಬೀಜವನ್ನು 10 ಗ್ರಾಂ ಇಮಿಡಾಕ್ಲೋಪ್ರಿಡ್-70 ಡಬ್ಲ್ಯೂ.ಎಸ್. ನಿಂದ ಉಪಚಾರ ಮಾಡಿ ಬಿತ್ತನೆ ಮಾಡುವುದು.
ಪೋಷಕಾಂಶಗಳ ನಿರ್ವಹಣೆ
ಬಿತ್ತನೆಗೆ 2-3 ವಾರಗಳ ಮೊದಲು 5 ಟನ್ ಕೊಟ್ಟಿಗೆ ಗೊಬ್ಬರ / ಸಾವಯವ ಗೊಬ್ಬರವನ್ನು ಪ್ರತಿ ಎಕರೆಗೆ ಬಳಸಬೇಕು. ಹಾಗೂ ಪ್ರತಿ ಎಕರೆಗೆ 60ಕಿ.ಗ್ರಾಂ. ಸಾರಜನಕ, 30 ಕಿ.ಗ್ರಾಂ. ರಂಜಕ, 30 ಕಿ.ಗ್ರಾಂ. ಪೊಟ್ಯಾಷ್ ರಾಸಾಯನಿಕ ಗೊಬ್ಬರಗಳ ಶಿಪಾರಸಿದ್ದು, ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕ, ಪೂರ್ತಿ ಪ್ರಮಾಣದ ರಂಜಕ & ಪೊಟ್ಯಾಶ್ ಗೊಬ್ಬರಗಳನ್ನು ಹಾಕಬೇಕು.
ಉಳಿದ ಶೇ.50ರ ಸಾರಜನಕವನ್ನು ಬಿತ್ತನೆಯಾದ 60 ದಿನಗಳ ನಂತರ ಮೇಲುಗೊಬ್ಬರವಾಗಿ ನೀಡುವುದು. ಬಿತ್ತನೆ ಸಮಯದಲ್ಲಿ 10ಕಿ.ಗ್ರಾಂ. ಮೆಗ್ನಿಷಿಯಂ ಸಲ್ಫೇಟ್ ಪ್ರತಿ ಎಕರೆಗೆ ಬಳಸುವುದು.
ಹತ್ತಿಯಲ್ಲಿ ಸಮತೋಲನ ಗೊಬ್ಬರಗಳ ಬಳಕೆ ಅತೀ ಅಗತ್ಯವಾಗಿದ್ದು, ಕೆಲವೊಂದು ರೈತರು ಪೊಟ್ಯಾಷ್ ಗೊಬ್ಬರಗಳನ್ನು ಬಳಸುತ್ತಿರುವುದಿಲ್ಲ.
ಇದರಿಂದಾಗಿ ಕಾಯಿಯ ಗಾತ್ರ ಕಡಿಮೆಯಾಗುವುದಲ್ಲದೆ ಇಳುವರಿಯು ಕಡಿಮೆಯಾಗುವುದು. ಪೊಟ್ಯಾಷ್ ಗೊಬ್ಬರದ ಬಳಕೆಯಿಂದಾಗಿ ಕಾಂಡ ಮತ್ತು ಕಾಯಿಯ ತೊಗಟೆ ದಪ್ಪನಾಗಿ ರೋಗ ಹಾಗೂ ಕೀಟದ ಹಾವಳಿ ಕಡಿಮೆಯಾಗುವುದು.
ಕಳೆ ನಿರ್ವಹಣೆ
ಬಿತ್ತನೆಯಾದ ದಿವಸ/ಮಾರನೆ ದಿವಸ ಎಕರೆಗೆ 400 ಗ್ರಾಂಡೈಯುರಾನ್ ಶೇ.80 ಅಥವಾ 800 ಮಿ.ಲೀ. ಫ್ಲೋಕ್ಲೋರಾಲಿನ್ 45ಇ.ಸಿ. ಅಥವಾ 1.3ಲೀ. ಪೆಂಡಿಮೆಥಾಲಿನ್ ಶೇ.30ಇ.ಸಿ. ಅಥವಾ 800ಮಿ.ಲೀ. ಬ್ಯೂಟಾಕ್ಲೋರ್ 50 ಇ.ಸಿ.ನ್ನು 300 ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸುವುದು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು. ಬಿತ್ತಿದ 30 ದಿವಸಗಳ ನಂತರ 3 ರಿಂದ 4 ಬಾರಿ ಅಳವಾಗಿ ಎಡೆಕುಂಟೆ ಹೊಡೆಯುವುದು.
ಅಂತರ ಬೆಳೆ
ಹತ್ತಿಯಜೊತೆಗೆ ಮೆಣಸಿನಕಾಯಿ, ಸೊಯಾ ಆವರೆ, ಬೀನ್ಸ್, ಅಲಸಂದೆ, ಉದ್ದು ಬೆಳೆಗಳನ್ನು 1:1 ಅನುಪಾತದಲ್ಲಿ ಬೆಳೆಯಬಹುದಾಗಿದೆ.
ಜೋಡಿ ಸಾಲು ಪದ್ಧತಿ
ಹತ್ತಿಯನ್ನು 120 ಸೆಂ.ಮೀ-60 ಸೆಂ.ಮೀ-120 ಸೆಂ.ಮೀ ಅಂತರz ಜೋಡಿ ಸಾಲುಗಳಲ್ಲಿ, ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರ ನೀಡಿ ಬೆಳೆಯುವುದರಿಂದ ವಿವಿಧ ಅಂತರ ಬೆಳೆಗಳನ್ನು ಬೆಳೆಯಬಹುದಾಗಿದೆ.
ಪ್ರಮುಖ ಸಲಹೆಗಳು
- ಪ್ರತಿ ವರ್ಷ ಒಂದೇ ಜಮೀನಿನಲ್ಲಿ ಹತ್ತಿಯು ನಂತರ ಹತ್ತಿ ಬೆಳೆಯದೆ ಬೆಳೆ ಪರಿವರ್ತನೆ ಮಾಡುವುದು.
- ಪ್ರಮಾಣಿತ ಹಾಗೂ ಶಿಫಾರಸ್ಸು ಮಾಡಿದ ಬಿತ್ತನೆ ಬೀಜಗಳನ್ನು ಬಳಸುವುದು.
- ಬಿ.ಟಿ. ಹತ್ತಿಯ ಜೊತೆಗೆ ಬಿ.ಟಿ. ಹತ್ತಿ ರಹಿತ ಹತ್ತಿಯನ್ನು ಅಥವಾ ಬಿ.ಟಿ. ಹತ್ತಿ ಪ್ಯಾಕ್ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
- ಹೊಲದ ಸುತ್ತಲೂ ಪ್ರತಿ 20 ಸಾಲು ಹತ್ತಿಗೆ 1 ಸಾಲಿನಲ್ಲಿ ಬೆಂಡೆ ಬೀಜ ಹಾಕುವುದರಿಂದ ಕೀಟಗಳ ಹಾವಳಿ ಕಡಿಮೆಯಾಗುವುದು.
- ಶಿಫಾರಸ್ಸಿನ ರಸಾಯನಿಕ ಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿಯೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯ.
- ಹೆಸರು ಬೆಳೆಯ ಬೇಸಾಯ ಕ್ರಮಗಳು: ತಳಿಗಳು: ಪಿ.ಎಸ್.16
ಬೀಜ ಪ್ರಮಾಣ ಮತ್ತು ಅಂತರ
ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.
ಬೀಜೋಪಚಾರ
ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟುದ್ರಾವಣ ಬಳಸಿ ಉಪಚರಿಸುವುದು.
ಪೋಷಕಾಂಶ ನಿರ್ವಹಣೆ
- ಎಕರೆಗೆ 3 ಟನ್ ಸಾವಯವ ಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
- ಎಕರೆಗೆ 5 ಕೆ.ಜಿ. ಸಾರಜನಕ, 10 ಕೆ.ಜಿ. ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ನೀಡುವುದು.
ಕಳೆ ನಿರ್ವಹಣೆ
ಬಿತ್ತಿದ ದಿವಸ/ ಮಾರನೆಯ ದಿವಸ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30ಇ.ಸಿ ಕಳೆನಾಶಕವನ್ನು 300 ಲೀ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.
ಸಸ್ಯ ಸಂರಕ್ಷಣೆ
- ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
- ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
- ಬೂದಿ ರೋಗದ ಹತೋಟಿಗೆ ಕಾರ್ಬೆನ್ಡೈಜಿಂ. 50 ಡಬ್ಲ್ಯೂಪಿನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು.
ಉದ್ದು ಬೆಳೆಯ ಬೇಸಾಯ ಕ್ರಮಗಳು
- ತಳಿ:- ಕರಂಗಾವ್-3, ಟಿ-9, ರಶ್ಮಿ (ಎಲ್.ಬಿ.ಜಿ.625) ಬೀಜಗಳ ಪ್ರಮಾಣ 8-10 ಕೆ.ಜಿ. ಪ್ರತಿ ಎಕರೆಗೆ.
- ಬೀಜ ಪ್ರಮಾಣ ಮತ್ತು ಅಂತರ
- ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದ ಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.
ಬೀಜೋಪಚಾರ
ಬಿತ್ತನೆಗೆ ಮುಂಚಿತವಾಗಿ ಬರ ನಿರೋಧಕ ಗುಣ ಹೆಚ್ಚಿಸಲು ಶೇ.2 ರಕ್ಯಾಲ್ಸಿಯಂಕ್ಲೋರೈಡ್ ದ್ರಾವಣದಲ್ಲಿ ಅರ್ಧತಾಸು ನೆನೆಸಿ, ನಂತರ ನೆರಳಿನಲ್ಲಿ ಕನಿಷ್ಠ 7 ತಾಸು ಒಣಗಿಸಬೇಕು ನಂತರ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟು ದ್ರಾವಣ ಬಳಸಿ ಉಪಚರಿಸುವುದು.
ಪೋಷಕಾಂಶ ನಿರ್ವಹಣೆ
- ಎಕರೆಗೆ 3 ಟನ್ ಸಾವಯವಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
- ಎಕರೆಗೆ 5 ಕೆ.ಜಿ. ಸಾರಜಕನ, 10 ಕೆ.ಜಿ.ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್ನ್ನು ಬಿತ್ತನೆ ಸಮಯದಲ್ಲಿ ನೀಡುವುದು.
ಕಳೆ ನಿರ್ವಹಣೆ
ಬಿತ್ತಿದ 2 ದಿನಗಳೊಳಗಾಗಿ ಪ್ರತಿ ಎಕರೆಗೆ 0.8 ಲೀ ಫ್ಲುಕ್ಲೋರಾಲಿನ್ 45ಇ.ಸಿ ಅಥವಾ 1.2 ಲೀ. ಅಲಾಕ್ಲೋರ್ 50 ಇ.ಸಿ ಕಳೆನಾಶಕಗಳನ್ನು 300 ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.
ಸಸ್ಯ ಸಂರಕ್ಷಣೆ
- ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗ ಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
- ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7 ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
- ಬೂದಿ ರೋಗದ ಹತೋಟಿಗೆ ಕಾರ್ಬನ್ಡೈಜಿಂ. 50 ಡಬ್ಲ್ಯೂಪಿ ನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ದಿನದ ಸುದ್ದಿ7 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ಅಂಕಣ5 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ12 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ

