Connect with us

ದಿನದ ಸುದ್ದಿ

ಹತ್ತಿ ಬೆಳೆಗಾರರಿಗೆ ಮಹತ್ವದ ಸಲಹೆಗಳು : ಮಿಸ್ ಮಾಡ್ದೆ ಓದಿ

Published

on

ಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯು ಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಲಾಗಿದೆ.

ಸುಧಾರಿತ ಕ್ರಮಗಳಾದ ಸುಧಾರಿತ ತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ ಗುಣಮಟ್ಟದ ಇಳುವರಿಯ ಜೊತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ.

ಬಿತ್ತನೆ ಕಾಲ

ವಿಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ (ಡಿ.ಹೆಚ್.ಬಿ-105, ಡಿ.ಸಿ.ಹೆಚ್ 32 ಮತ್ತು ವರಲಕ್ಷ್ಮಿ ತಳಿಗಳು) ಹಾಗೂ ಸ್ವಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜುಲೈ (ಎನ್.ಹೆಚ್.ಹೆಚ್44 ಮತ್ತು ಡಿ.ಹೆಚ್.ಹೆಚ್11 ತಳಿಗಳು) ತಿಂಗಳವರೆಗೆ ಬೆಳೆಯಬಹುದಾಗಿದೆ.

ಬೀಜ ಪ್ರಮಾಣ ಮತ್ತು ಅಂತರ

ಪ್ರತಿ ಎಕರೆಗೆ 0.5 ಕಿ.ಗ್ರಾಂ. ಗುಂಜು ರಹಿತ ಹತ್ತಿಯ ಬೀಜಗಳನ್ನು ಸಾಲಿನಿಂದ ಸಾಲಿಗೆ 3 ಅಡಿ ಅಂತರದಲಿ ಹಾಗೂ ಗಿಡದಿಂದ ಗಿಡಕ್ಕೆ 2 ಅಡಿ ಅಂತರ ನೀಡಿ ಬಿತ್ತನೆ ಮಾಡುವುದು. ಪ್ರಮಾಣಿತ ಬಿಟಿ ಹತ್ತಿ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ ಬೆಳೆಯಬಹುದಾಗಿದೆ.

  • ಬಿಟಿ ಹತ್ತಿಯ ಜೊತೆಗೆ ಬಿಟಿ ಹತ್ತಿರಹಿತ ಹತ್ತಿಯನ್ನುಅಥವಾ ಬಿಟಿ ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  • ಹೆಚ್ಚು ಗುಲಾಬಿ ಕಾಯಿ ಕೊರಕದ ಭಾಧೆಯಿದ್ಧಲ್ಲಿ ಅಲ್ಪ ಕಾಲಾವಧಿ ಬಿಟಿ ಹತ್ತಿ ಹೈಬ್ರಿಡನ್ನು ಬೆಳೆಯುವುದು.

ಬೀಜೋಪಚಾರ

ಪ್ರಾರಂಭದಲ್ಲಿ ಬರುವ ಹತ್ತಿ ರಸ ಹೀರುವ ಕೀಟಗಳನ್ನು ಹತೋಟಿಯಲ್ಲಿಡಲು ಪ್ರತಿ ಕಿ.ಗ್ರಾಂ. ಹತ್ತಿ ಬೀಜವನ್ನು 10 ಗ್ರಾಂ ಇಮಿಡಾಕ್ಲೋಪ್ರಿಡ್-70 ಡಬ್ಲ್ಯೂ.ಎಸ್. ನಿಂದ ಉಪಚಾರ ಮಾಡಿ ಬಿತ್ತನೆ ಮಾಡುವುದು.

ಪೋಷಕಾಂಶಗಳ ನಿರ್ವಹಣೆ

ಬಿತ್ತನೆಗೆ 2-3 ವಾರಗಳ ಮೊದಲು 5 ಟನ್ ಕೊಟ್ಟಿಗೆ ಗೊಬ್ಬರ / ಸಾವಯವ ಗೊಬ್ಬರವನ್ನು ಪ್ರತಿ ಎಕರೆಗೆ ಬಳಸಬೇಕು. ಹಾಗೂ ಪ್ರತಿ ಎಕರೆಗೆ 60ಕಿ.ಗ್ರಾಂ. ಸಾರಜನಕ, 30 ಕಿ.ಗ್ರಾಂ. ರಂಜಕ, 30 ಕಿ.ಗ್ರಾಂ. ಪೊಟ್ಯಾಷ್ ರಾಸಾಯನಿಕ ಗೊಬ್ಬರಗಳ ಶಿಪಾರಸಿದ್ದು, ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕ, ಪೂರ್ತಿ ಪ್ರಮಾಣದ ರಂಜಕ & ಪೊಟ್ಯಾಶ್ ಗೊಬ್ಬರಗಳನ್ನು ಹಾಕಬೇಕು.

ಉಳಿದ ಶೇ.50ರ ಸಾರಜನಕವನ್ನು ಬಿತ್ತನೆಯಾದ 60 ದಿನಗಳ ನಂತರ ಮೇಲುಗೊಬ್ಬರವಾಗಿ ನೀಡುವುದು. ಬಿತ್ತನೆ ಸಮಯದಲ್ಲಿ 10ಕಿ.ಗ್ರಾಂ. ಮೆಗ್ನಿಷಿಯಂ ಸಲ್ಫೇಟ್ ಪ್ರತಿ ಎಕರೆಗೆ ಬಳಸುವುದು.
ಹತ್ತಿಯಲ್ಲಿ ಸಮತೋಲನ ಗೊಬ್ಬರಗಳ ಬಳಕೆ ಅತೀ ಅಗತ್ಯವಾಗಿದ್ದು, ಕೆಲವೊಂದು ರೈತರು ಪೊಟ್ಯಾಷ್ ಗೊಬ್ಬರಗಳನ್ನು ಬಳಸುತ್ತಿರುವುದಿಲ್ಲ.

ಇದರಿಂದಾಗಿ ಕಾಯಿಯ ಗಾತ್ರ ಕಡಿಮೆಯಾಗುವುದಲ್ಲದೆ ಇಳುವರಿಯು ಕಡಿಮೆಯಾಗುವುದು. ಪೊಟ್ಯಾಷ್ ಗೊಬ್ಬರದ ಬಳಕೆಯಿಂದಾಗಿ ಕಾಂಡ ಮತ್ತು ಕಾಯಿಯ ತೊಗಟೆ ದಪ್ಪನಾಗಿ ರೋಗ ಹಾಗೂ ಕೀಟದ ಹಾವಳಿ ಕಡಿಮೆಯಾಗುವುದು.

ಕಳೆ ನಿರ್ವಹಣೆ

ಬಿತ್ತನೆಯಾದ ದಿವಸ/ಮಾರನೆ ದಿವಸ ಎಕರೆಗೆ 400 ಗ್ರಾಂಡೈಯುರಾನ್ ಶೇ.80 ಅಥವಾ 800 ಮಿ.ಲೀ. ಫ್ಲೋಕ್ಲೋರಾಲಿನ್ 45ಇ.ಸಿ. ಅಥವಾ 1.3ಲೀ. ಪೆಂಡಿಮೆಥಾಲಿನ್ ಶೇ.30ಇ.ಸಿ. ಅಥವಾ 800ಮಿ.ಲೀ. ಬ್ಯೂಟಾಕ್ಲೋರ್ 50 ಇ.ಸಿ.ನ್ನು 300 ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸುವುದು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು. ಬಿತ್ತಿದ 30 ದಿವಸಗಳ ನಂತರ 3 ರಿಂದ 4 ಬಾರಿ ಅಳವಾಗಿ ಎಡೆಕುಂಟೆ ಹೊಡೆಯುವುದು.

ಅಂತರ ಬೆಳೆ

ಹತ್ತಿಯಜೊತೆಗೆ ಮೆಣಸಿನಕಾಯಿ, ಸೊಯಾ ಆವರೆ, ಬೀನ್ಸ್, ಅಲಸಂದೆ, ಉದ್ದು ಬೆಳೆಗಳನ್ನು 1:1 ಅನುಪಾತದಲ್ಲಿ ಬೆಳೆಯಬಹುದಾಗಿದೆ.

ಜೋಡಿ ಸಾಲು ಪದ್ಧತಿ

ಹತ್ತಿಯನ್ನು 120 ಸೆಂ.ಮೀ-60 ಸೆಂ.ಮೀ-120 ಸೆಂ.ಮೀ ಅಂತರz ಜೋಡಿ ಸಾಲುಗಳಲ್ಲಿ, ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರ ನೀಡಿ ಬೆಳೆಯುವುದರಿಂದ ವಿವಿಧ ಅಂತರ ಬೆಳೆಗಳನ್ನು ಬೆಳೆಯಬಹುದಾಗಿದೆ.

ಪ್ರಮುಖ ಸಲಹೆಗಳು

  1. ಪ್ರತಿ ವರ್ಷ ಒಂದೇ ಜಮೀನಿನಲ್ಲಿ ಹತ್ತಿಯು ನಂತರ ಹತ್ತಿ ಬೆಳೆಯದೆ ಬೆಳೆ ಪರಿವರ್ತನೆ ಮಾಡುವುದು.
  2. ಪ್ರಮಾಣಿತ ಹಾಗೂ ಶಿಫಾರಸ್ಸು ಮಾಡಿದ ಬಿತ್ತನೆ ಬೀಜಗಳನ್ನು ಬಳಸುವುದು.
  3. ಬಿ.ಟಿ. ಹತ್ತಿಯ ಜೊತೆಗೆ ಬಿ.ಟಿ. ಹತ್ತಿ ರಹಿತ ಹತ್ತಿಯನ್ನು ಅಥವಾ ಬಿ.ಟಿ. ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  4. ಹೊಲದ ಸುತ್ತಲೂ ಪ್ರತಿ 20 ಸಾಲು ಹತ್ತಿಗೆ 1 ಸಾಲಿನಲ್ಲಿ ಬೆಂಡೆ ಬೀಜ ಹಾಕುವುದರಿಂದ ಕೀಟಗಳ ಹಾವಳಿ ಕಡಿಮೆಯಾಗುವುದು.
  5. ಶಿಫಾರಸ್ಸಿನ ರಸಾಯನಿಕ ಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿಯೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯ.
  • ಹೆಸರು ಬೆಳೆಯ ಬೇಸಾಯ ಕ್ರಮಗಳು: ತಳಿಗಳು: ಪಿ.ಎಸ್.16

ಬೀಜ ಪ್ರಮಾಣ ಮತ್ತು ಅಂತರ

ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ

ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟುದ್ರಾವಣ ಬಳಸಿ ಉಪಚರಿಸುವುದು.

ಪೋಷಕಾಂಶ ನಿರ್ವಹಣೆ

  • ಎಕರೆಗೆ 3 ಟನ್ ಸಾವಯವ ಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
  • ಎಕರೆಗೆ 5 ಕೆ.ಜಿ. ಸಾರಜನಕ, 10 ಕೆ.ಜಿ. ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ನೀಡುವುದು.

ಕಳೆ ನಿರ್ವಹಣೆ

ಬಿತ್ತಿದ ದಿವಸ/ ಮಾರನೆಯ ದಿವಸ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30ಇ.ಸಿ ಕಳೆನಾಶಕವನ್ನು 300 ಲೀ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.

ಸಸ್ಯ ಸಂರಕ್ಷಣೆ

  • ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
  • ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
  • ಬೂದಿ ರೋಗದ ಹತೋಟಿಗೆ ಕಾರ್ಬೆನ್‍ಡೈಜಿಂ. 50 ಡಬ್ಲ್ಯೂಪಿನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು.

ಉದ್ದು ಬೆಳೆಯ ಬೇಸಾಯ ಕ್ರಮಗಳು

  • ತಳಿ:- ಕರಂಗಾವ್-3, ಟಿ-9, ರಶ್ಮಿ (ಎಲ್.ಬಿ.ಜಿ.625) ಬೀಜಗಳ ಪ್ರಮಾಣ 8-10 ಕೆ.ಜಿ. ಪ್ರತಿ ಎಕರೆಗೆ.
  • ಬೀಜ ಪ್ರಮಾಣ ಮತ್ತು ಅಂತರ
  • ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದ ಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ

ಬಿತ್ತನೆಗೆ ಮುಂಚಿತವಾಗಿ ಬರ ನಿರೋಧಕ ಗುಣ ಹೆಚ್ಚಿಸಲು ಶೇ.2 ರಕ್ಯಾಲ್ಸಿಯಂಕ್ಲೋರೈಡ್ ದ್ರಾವಣದಲ್ಲಿ ಅರ್ಧತಾಸು ನೆನೆಸಿ, ನಂತರ ನೆರಳಿನಲ್ಲಿ ಕನಿಷ್ಠ 7 ತಾಸು ಒಣಗಿಸಬೇಕು ನಂತರ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟು ದ್ರಾವಣ ಬಳಸಿ ಉಪಚರಿಸುವುದು.

ಪೋಷಕಾಂಶ ನಿರ್ವಹಣೆ

  • ಎಕರೆಗೆ 3 ಟನ್ ಸಾವಯವಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
  • ಎಕರೆಗೆ 5 ಕೆ.ಜಿ. ಸಾರಜಕನ, 10 ಕೆ.ಜಿ.ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ನೀಡುವುದು.

ಕಳೆ ನಿರ್ವಹಣೆ

ಬಿತ್ತಿದ 2 ದಿನಗಳೊಳಗಾಗಿ ಪ್ರತಿ ಎಕರೆಗೆ 0.8 ಲೀ ಫ್ಲುಕ್ಲೋರಾಲಿನ್ 45ಇ.ಸಿ ಅಥವಾ 1.2 ಲೀ. ಅಲಾಕ್ಲೋರ್ 50 ಇ.ಸಿ ಕಳೆನಾಶಕಗಳನ್ನು 300 ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.

ಸಸ್ಯ ಸಂರಕ್ಷಣೆ

  • ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗ ಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
  • ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7 ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
  • ಬೂದಿ ರೋಗದ ಹತೋಟಿಗೆ ಕಾರ್ಬನ್‍ಡೈಜಿಂ. 50 ಡಬ್ಲ್ಯೂಪಿ ನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending