Connect with us

ಬಹಿರಂಗ

ಲಸಿಕೋತ್ಸವ ಮರೆತುಬಿಡಿ ; ನೀತಿಯೇ ನಿಷ್ಪ್ರಯೋಜಕವಾಗಿದೆ

Published

on

  • ಮೂಲ : ಪಾರ್ಥ ಮುಖೋಪಾಧ್ಯಾಯ, ಅನುವಾದ : ನಾ ದಿವಾಕರ

ಕೇಂದ್ರದ ಲಸಿಕೆ ನೀತಿಯನ್ನು ಕುರಿತು ದ ಹಿಂದೂ ಪತ್ರಿಕೆಯ ಲೇಖನದ ಅನುವಾದ – ಓದಿ

ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ.

ನ್ಯಾಯಮೂರ್ತಿ ಹೋಮ್ಸ್ ಅವರ ಮಾತುಗಳಲ್ಲೇ ಹೇಳುವುದಾದರೆ ಈಗ ಸುಪ್ರೀಂಕೋರ್ಟ್ “ ಯಂತ್ರದ ಕೀಲುಗಳನ್ನು ಚಾಲ್ತಿಯಲ್ಲಿಡಲು ಯಂತ್ರವನ್ನು ಚಾಲನೆಯಲ್ಲಿ ಇಡಬೇಕಿದೆ. ” ಈ ಸಂದರ್ಭದಲ್ಲಿ ಲಸಿಕೋತ್ಸವದ ಮುಂದುವರಿಕೆಯೂ ಅಪ್ರಸ್ತುತ ಎನಿಸುತ್ತದೆ.. ಏಕೆಂದರೆ ಈ ಯಂತ್ರವೇ ನಿಷ್ಪ್ರಯೋಜಕವಾಗಿದ್ದು ಕೈಬಿಡಬೇಕಿದೆ. ಕೇಂದ್ರ ಸರ್ಕಾರ ಕೂಡಲೇ ತನ್ನ ಲಸಿಕೆಯ ನೀತಿಯನ್ನು ಪರಿಷ್ಕರಿಸುವುದೇ ಅಲ್ಲದೆ ಎಲ್ಲ ರಾಜ್ಯಗಳಿಗೂ ಸಮಾನ ಹಂಚಿಕೆ ಮಾಡುವಂತಹ ಹೊಸ ಲಸಿಕೆ ನೀತಿಯನ್ನು ಈ ಕೂಡಲೇ ಜಾರಿಗೊಳಿಸಬೇಕಿದೆ.

ನೀತಿ ಪರಿಷ್ಕರಣೆ ಏಕೆ ಬೇಕು ?

45 ವರ್ಷಕ್ಕೂ ಮೇಲ್ಪಟ್ಟವರಿಗೆ ಆದ್ಯತೆಯ ಮೇಲೆ ಲಸಿಕೆಯನ್ನು ನೀಡುವ ನೀತಿಯನ್ನು ಬದಿಗಿರಿಸಿ ಎಲ್ಲ ವಯಸ್ಕರಿಗೂ ಲಸಿಕೆ ನೀಡಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರಗಳು ಕೋರಿಕೆ ಸಲ್ಲಿಸಿರುವುದೇ ಮತಿಹೀನ ಕ್ರಮ. ಆದರೆ ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರವನ್ನು ನೋಡಿದರೆ, ಸರ್ಕಾರ ಬಹಳ ನಾಜೂಕಾಗಿ ತನ್ನ ಅಭಿಪ್ರಾಯವನ್ನು ಸಲ್ಲಿಸಿರುವಂತೆ ತೋರುತ್ತದೆ.

ಉದಾರವಾಗಿ ಸಮಸ್ತ ವಯಸ್ಕರಿಗೂ ಲಸಿಕೆ ನೀಡುವ ಹೊಸ ನೀತಿಯನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಪ್ರಮಾಣಪತ್ರದಲ್ಲೇ ಮೂರು ಕಾರಣಗಳನ್ನು ಗುರುತಿಸಬಹುದು.

ಮೊದಲನೆಯದಾಗಿ, ಇದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅನುಸರಿಸುತ್ತಿರುವ ನೀತಿಗೆ ವ್ಯತಿರಿಕ್ತವಾದುದು. ಮತ್ತು ಕಟು ಶಬ್ದಗಳಲ್ಲಿ ಹೇಳುವುದಾದರೆ ಇದು ಅವಿವೇಕದ ಕ್ರಮ.

ಎರಡನೆಯದಾಗಿ, ಆಂತರಿಕವಾಗಿ ನೋಡಿದಾಗಲೂ ಇದು ಅಸಂಬದ್ಧ ಎನಿಸುವುದೇ ಅಲ್ಲದೆ ಅಸಂಗತವಾದುದೂ ಹೌದು. ಪ್ರತಿಯೊಂದು ರಾಜ್ಯಕ್ಕೆ ಒದಗಿಸುವ ಲಸಿಕೆಯ ಪ್ರಮಾಣ ಮತ್ತು ದರ ಎರಡನ್ನೂ ಕೇಂದ್ರವೇ ನಿಯಂತ್ರಿಸುತ್ತಲೇ ಉದಾರ ನೀತಿಯನ್ನು ಪ್ರತಿಪಾದಿಸುವುದೇ ಅಸಂಬದ್ಧತೆಗೆ ಸಾಕ್ಷಿ. ಹಾಗಾಗಿಯೇ ಪ್ರಸ್ತುತ ಸಂದರ್ಭದಲ್ಲಿ ಈ ಉದಾರ ನೀತಿಯು ಸಮಂಜಸವಾಗಿ ಕಂಡುಬರುತ್ತಿಲ್ಲ. ಲಸಿಕೆಯ ಎರಡನೆ ಡೋಸ್ ನೀಡದಿರುವ ರಾಜ್ಯಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಕೇಂದ್ರ ಸರ್ಕಾರ ಎಚ್ಚರಿಕೆ ನೀಡುತ್ತಿದೆ.

ಮೂರನೆಯ ಕಾರಣವೆಂದರೆ, ತನ್ನ ಪ್ರಮಾಣ ಪತ್ರದಲ್ಲಿ ಕೇಂದ್ರ ಸರ್ಕಾರ ತನ್ನ ಎದುರಿರುವ ಸಮಸ್ಯೆಯನ್ನು ನೇರವಾಗಿ ಪ್ರಸ್ತಾಪಿಸುವ ಬದಲು ಕಾನೂನು ಕೈಚಳಕ ತೋರಿಸುವ ಮೂಲಕ ತನ್ನ ವಾದವನ್ನು ಸಮರ್ಥಿಸಿಕೊಳ್ಳುತ್ತಿದೆ.

ಈ ಮುನ್ನ ಪೈಪೋಟಿಯ ಮಾರುಕಟ್ಟೆಯಲ್ಲಿ ಹಲವು ಉತ್ಪಾದಕರು ರೆಮಿಡಿಸಿವಿರ್ ಔಷಧಿಯನ್ನು ತಯಾರಿಸುತ್ತಿದ್ದರು. ಈಗ ಯಾವ ಉತ್ಪಾದಕ ಕಂಪನಿಯು ರೆಮಿಡಿಸಿವಿರ್ ಮಾತ್ರೆಗಳನ್ನು ಉತ್ಪಾದಿಸಬೇಕು ಎಂದು ನಿರ್ಧರಿಸುವುದರಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ. ಹಾಗೆಯೇ ಯಾವ ರಾಜ್ಯಕ್ಕೆ ಎಷ್ಟು ಸರಬರಾಜು ಮಾಡಬೇಕು, ಯಾವ ದರ ನಿಗದಿಪಡಿಸಬೇಕು ಎಂದು ನಿಗದಿಪಡಿಸಲು ಯೋಚಿಸುತ್ತಿದೆ.

ಮತ್ತೊಂದೆಡೆ ಸದ್ಯಕ್ಕೆ ಎರಡೇ ಪೂರೈಕೆದಾರರನ್ನು ಹೊಂದಿರುವ ಲಸಿಕೆಯನ್ನು ನಿಯಂತ್ರಣಮುಕ್ತವಾಗಿ ಸರಬರಾಜು ಮಾಡಲು ಯೋಚಿಸುತ್ತಿದೆ. ಇದೇ ಸಂದರ್ಭದಲ್ಲಿ 18 ರಿಂದ 45 ವರ್ಷದ ವಯಸ್ಕರನ್ನು ಲಸಿಕೆಯ ಯೋಜನೆಯಲ್ಲಿ ಸೇರ್ಪಡಿಸುವ ಮೂಲಕ ಈಗಾಗಲೇ ಲಸಿಕೆ ಪಡೆಯಲು ಕಾಯುತ್ತಿರುವ 20 ಕೋಟಿ ಜನತೆಗೆ ಇನ್ನೂ 60 ಕೋಟಿ ಜನರನ್ನು ಸೇರಿಸಲಾಗಿದೆ. ಈ ಸಂದರ್ಭದಲ್ಲಿ ವಿಭಿನ್ನ ದರಗಳನ್ನು ವಿಧಿಸುವ ಮೂಲಕ ಮಾರುಕಟ್ಟೆ ಪೈಪೋಟಿಯನ್ನು ಉತ್ತೇಜಿಸುವುದು ಸಮರ್ಥನೀಯವಲ್ಲ.

ಇತರ ಎಲ್ಲ ದೇಶಗಳಲ್ಲೂ ರಾಷ್ಟ್ರೀಯ ಸರ್ಕಾರವೇ ಲಸಿಕೆಯನ್ನು ಖರೀದಿಸುತ್ತಿದೆ. ಇಂಡೋನೇಷಿಯಾ ಮತ್ತು ಫಿಲಿಪೈನ್ಸ್ ದೇಶಗಳಲ್ಲಿ ಮಾತ್ರ ಕಾರ್ಪೋರೇಟ್ ಉದ್ದಿಮೆಗಳು ತಮ್ಮ ಸಿಬ್ಬಂದಿ ವರ್ಗದವರಿಗೆ ನೀಡಲು ಲಸಿಕೆಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಿಂದ ಖರೀದಿಸಲು ಅವಕಾಶ ನೀಡಲಾಗುತ್ತಿದೆ.

ಲಸಿಕೆಯ ಉತ್ಪಾದನೆಯ ಹಂತದಲ್ಲಿ ಪುಣೆಯಲ್ಲಿರುವ ಐಸಿಎಂಆರ್-ಎನ್‍ಐವಿ ಸಂಸ್ಥೆಯ ಆಶ್ರಯದಲ್ಲಿಯೇ ಹೆಚ್ಚಿನ ಯಶಸ್ಸು ಸಾಧಿಸಲಾಗಿದೆ ಎಂಬ ಅರಿವಿದ್ದರೂ, ಕೋವ್ಯಾಕ್ಸಿನ್ ಲಸಿಕೆಗೆ ಹೆಚ್ಚಿನ ಉತ್ಪಾದನೆಯ ಪರವಾನಗಿ ಏಕೆ ನೀಡಲಾಗಿಲ್ಲ ಎನ್ನುವ ಪ್ರಶ್ನೆ, ಬಹುಶಃ ಪ್ರಶ್ನೆಯಾಗಿಯೇ ಉಳಿಯಲಿದೆ.

ರಾಜ್ಯಗಳು ತೆರಬೇಕಾಗುವ ಹೆಚ್ಚಿನ ದರ

ತನ್ನ ಪ್ರಮಾಣಪತ್ರದಲ್ಲಿ ಕೇಂದ್ರ ಸರ್ಕಾರವು, “ ಕೇಂದ್ರ ಸರ್ಕಾರ ಬೃಹತ್ ಪ್ರಮಾಣದ ವ್ಯಾಪಕವಾದ ಲಸಿಕಾ ಯೋಜನೆಯನ್ನು ಹಮ್ಮಿಕೊಂಡಿರುವುದರಿಂದ, ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗಿಂತಲೂ ಕೇಂದ್ರವೇ ಹೆಚ್ಚಿನ ಪ್ರಮಾಣದ ಲಸಿಕೆಗಳಿಗಾಗಿ ಬೇಡಿಕೆಯನ್ನು ಸಲ್ಲಿಸುತ್ತದೆ.

ಈ ವಾಸ್ತವ ಸನ್ನಿವೇಶವೇ ದರ ನಿಗದಿಯ ಮಾತುಕತೆಗಳಲ್ಲೂ ಬಿಂಬಿತವಾಗುತ್ತದೆ ,,,,, ” ಎಂದು ಹೇಳುತ್ತದೆ. ಅಂದರೆ ರಾಜ್ಯ ಸರ್ಕಾರ ಅಥವಾ ಖಾಸಗಿ ಆಸ್ಪತ್ರೆಗಳಿಗಿಂತಲೂ ಕಡಿಮೆ ದರದಲ್ಲಿ ಕೇಂದ್ರ ಲಸಿಕೆ ಖರೀದಿಸಬಹುದು ಎಂದರ್ಥ. ಹಾಗಾದಲ್ಲಿ ಏಪ್ರಿಲ್ 30ರವರೆಗೂ ಮಾಡಿದಂತೆ ಕೇಂದ್ರ ಸರ್ಕಾರವೇ ಏಕೆ ಲಸಿಕೆ ಖರೀದಿಸಿ ವಿತರಣೆ ಮಾಡಬಾರದು ?

ಮತ್ತೊಂದು ನಿಯಮದ ಅನುಸಾರ, 45 ವರ್ಷಕ್ಕೆ ಮೇಲ್ಪಟ್ಟವರಿಗಾಗಿ ಖರೀದಿಸುವ ಲಸಿಕೆಯಲ್ಲಿ ಶೇ 50ರಷ್ಟನ್ನು ಕೇಂದ್ರ ಸರ್ಕಾರವೇ ಖರೀದಿಸಿ ರಾಜ್ಯಗಳಿಗೆ ಹಂಚುತ್ತದೆ. ರಾಜ್ಯ ಸರ್ಕಾರಗಳು ಒಟ್ಟು ಉತ್ಪಾದನೆಯಾಗುವ ಲಸಿಕೆಯಲ್ಲಿ ಶೇ 25ರಷ್ಟನ್ನು ಖರೀದಿಸಿ ಬಳಸಬೇಕಾಗುತ್ತದೆ. ರಾಜ್ಯಗಳಿಗೆ ಎಷ್ಟು ಪ್ರಮಾಣದ ಲಸಿಕೆ ಪೂರೈಸಲಾಗುತ್ತದೆ ಎನ್ನುವುದನ್ನು ಪ್ರತಿಯೊಂದು ರಾಜ್ಯಕ್ಕೂ ಮುಂಚಿತವಾಗಿಯೇ ತಿಳಿಸಲಾಗಿರುತ್ತದೆ,,, ಎಂದೂ ಹೇಳಲಾಗಿದೆ.

“ ಲಸಿಕೆ ಉತ್ಪಾದಕ ಕಂಪನಿಗಳೊಡನೆ ಅನೌಪಚಾರಿಕ ಮಾತುಕತೆಗಳನ್ನು ನಡೆಸುವ ಮೂಲಕ ಎಲ್ಲ ರಾಜ್ಯಗಳಿಗೂ ಸಮಾನ ಬೆಲೆಯಲ್ಲಿ ವಿತರಿಸಲು ಸೂಚಿಸಲಾಗಿದೆ,,,” ಎಂದೂ ಹೇಳಲಾಗಿದೆ. ಅಂದರೆ ಕೇಂದ್ರ ಸರ್ಕಾರ ಲಸಿಕೆಯ ಪ್ರಮಾಣ ಮತ್ತು ದರ ಎರಡನ್ನೂ ನಿರ್ಧರಿಸಿದೆ ಎಂದರೆ ಇದು ಉದಾರ ನೀತಿ ಎನಿಸಿಕೊಳ್ಳುವುದಿಲ್ಲ.

ಪ್ರತಿಯೊಂದು ರಾಜ್ಯದಲ್ಲಿ ಲಭಿಸುವ ಉಳಿದ ಶೇ 25ರಷ್ಟು ಲಸಿಕೆಗಳು ಖಾಸಗಿ ಕ್ಷೇತ್ರ ಮತ್ತು ಲಸಿಕೆ ಉತ್ಪಾದಕರ ನಡುವೆ ಏರ್ಪಟ್ಟ ಒಪ್ಪಂದಗಳಿಗೆ ಅನುಗುಣವಾಗಿ, ಖಾಸಗಿ ಆಸ್ಪತ್ರೆಗಳಿಗೆ ಲಭಿಸುತ್ತವೆ. ಇಲ್ಲಿ ಉದ್ಭವಿಸುವ ಪ್ರಶ್ನೆ ಎಂದರೆ ಈ ಒಪ್ಪಂದಗಳು ರಾಜ್ಯಮಟ್ಟದಲ್ಲಿ ನಡೆಯದೆ ಕಾರ್ಪೋರೇಟ್ ಮಟ್ಟದಲ್ಲಿ ನಡೆಯುವುದರಿಂದ ಖಾಸಗಿ ಕ್ಷೇತ್ರದ ಲಕ್ಷಣವನ್ನು ಹೇಗೆ ನಿಷ್ಕರ್ಷೆ ಮಾಡಲು ಸಾಧ್ಯ ? ಒಂದು ವೇಳೆ ಖಾಸಗಿ ಕ್ಷೇತ್ರ ಲಸಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಲು ಸಾಧ್ಯವಾಗದಿದ್ದರೆ ಏನಾಗುತ್ತದೆ ?

ಈ ಪ್ರಶ್ನೆಗಳ ನಡುವೆಯೇ ಗಮನಿಸಬೇಕಾದ ಅಂಶ ಎಂದರೆ ಕೋವಿನ್ ವೆಬ್ ತಾಣಗಳ ಸಂಖ್ಯೆಯಲ್ಲಿ ಖಾಸಗಿ ಕ್ಷೇತ್ರದ ಪ್ರಮಾಣ ಮೊದಲು ಶೇ 10ರಷ್ಟಿದ್ದುದು ಈಗ ಶೇ 3ರಷ್ಟಾಗಿದೆ. ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ಒಂಬತ್ತು, ಚಂದಿಘಡದಲ್ಲಿ 32 ಮತ್ತು ಅನರುಣಾಚಲ ಪ್ರದೇಶದಲ್ಲಿ ಒಂದೂ ತಾಣ ಇರಲಿಲ್ಲ. ಖಾಸಗಿ ಕ್ಷೇತ್ರದ ಅಸ್ತಿತ್ವ ನಗರ ಪ್ರದೇಶಗಳಲ್ಲೇ ಹೆಚ್ಚಿರುವುದರಿಂದ ವಿತರಣೆಯೂ ನಗರ ಕೇಂದ್ರಿತವೇ ಆಗಿರುತ್ತದೆ.

ಈ ಹಿನ್ನೆಲೆಯಲ್ಲಿ ನೋಡಿದಾಗ, ಶೂನ್ಯ ವೆಚ್ಚದಲ್ಲಿ ಸಂಪೂರ್ಣ ಉತ್ಪಾದನೆಯನ್ನು ಮಾಡುವ ಬದಲು, ರಾಜ್ಯಗಳು ಉತ್ಪಾದನೆಯ ಶೇ 25ರಷ್ಟನ್ನು ದುಪ್ಪಟ್ಟು ದರ ಅಥವಾ ಇನ್ನೂ ಹೆಚ್ಚಿನ ಬೆಲೆ ಕೊಟ್ಟು ಖರೀದಿಸಬೇಕಿದೆ. ಉಳಿದ ಕಾಲು ಭಾಗವನ್ನು ಖಾಸಗಿ ಕ್ಷೇತ್ರವು, ಮೊದಲಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಬೆಲೆ ನೀಡಿ ಆಕ್ರಮಿಸುತ್ತದೆ. ಎಲ್ಲರಿಗೂ ಲಸಿಕೆ ನೀಡುವ ಘೋಷಣೆ ಮಾಡಿದ ರಾಜ್ಯಗಳಿಗೆ ತಮ್ಮ ಘೋಷಣೆ ಇಷ್ಟು ದುಬಾರಿಯಾದೀತು ಎಂಬ ಊಹೆಯೂ ಇರಲಿಕ್ಕಿಲ್ಲ.

ಕೇಂದ್ರದ ಕಳಪೆ ಸಾಧನೆ

ಆದರೆ ರಾಜ್ಯಗಳು ಇತರ ಮೂಲಗಳಿಂದ ಲಸಿಕೆಯನ್ನು ಪಡೆಯಬಹುದೇ ? ಈಗಾಗಲೇ ಜಾಗತಿಕ ಟೆಂಡರ್ ಮೂಲಕ ಖರೀದಿಸಲು ಯತ್ನಿಸುತ್ತಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಮಾಣ ಪತ್ರದಲ್ಲಿ “ ಈಗ ಸದ್ಯಕ್ಕೆ ಇತರ ದೇಶಗಳಿಂದ ಇತರ ಲಸಿಕೆಗಳನ್ನು ಖರೀದಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಾಗಿರುತ್ತದೆ,,,, ಕಳೆದ ವರ್ಷದ ಕೊನೆಯ ತ್ರೈಮಾಸಿಕದಿಂದಲೇ ಈ ಕುರಿತು ಮಾತುಕತೆಗಳು ನಡೆಯುತ್ತಿವೆ,,,,ಸದ್ಯದ ಪರಿಸ್ಥಿತಿಯಲ್ಲಿ ಸಮರೋಪಾದಿಯಲ್ಲಿ ಈ ಪ್ರಯತ್ನಗಳು ನಡೆಯುತ್ತಿದ್ದು ರಾಜತಾಂತ್ರಿಕ ಮಾರ್ಗಗಳನ್ನೂ ಒಳಗೊಂಡಂತೆ ಎಲ್ಲ ಸಂಪನ್ಮೂಲಗಳನ್ನೂ ಬಳಸಿಕೊಂಡು ಮಾತುಕತೆಗಳನ್ನು ನಡೆಸಲಾಗುತ್ತಿದೆ ” ಎಂದು ಹೇಳುತ್ತದೆ.

ಇದರ ಅರ್ಥ ಏನೆಂದರೆ ಕಳೆದ ಆರು ತಿಂಗಳಿನಿಂದಲೂ ಕೇಂದ್ರ ಸರ್ಕಾರ ಈ ಪ್ರಯತ್ನ ನಡೆಸುತ್ತಿದೆ ಆದರೆ ಶೂನ್ಯ ಸಾಧನೆ ಎಂದಷ್ಟೆ. ಈ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಗಳನ್ನು ಸುಂದರ ಭ್ರಮೆಗೊಳಪಡಿಸಲಾಗುತ್ತಿದೆ ಎನ್ನಬಹುದು ಅಥವಾ ರಾಜ್ಯ ಸರ್ಕಾರಗಳು ಅಷ್ಟೊಂದು ಅಮಾಯಕ ಎಂದು ಹೇಳಲಾಗದಿದ್ದರೆ, ಈ ಸರ್ಕಾರಗಳ ಜಾಗತಿಕ ಟೆಂಡರ್ ಗಳು ಕೇವಲ ನಾಮಕಾವಸ್ಥೆ ಎನ್ನಬಹುದು.

ಅಂತಿಮವಾಗಿ, ಮನೆಮನೆಗೆ ತಲುಪಿ ಲಸಿಕೆ ನೀಡುವ ಯೋಜನೆಯ ಬಗ್ಗೆ ಪ್ರಮಾಣಪತ್ರದಲ್ಲಿ ಕಾನೂನು ಕೈಚಳಕವನ್ನು ಸ್ಪಷ್ಟವಾಗಿ ಗುರುತಿಸಬಹುದು. ಇದು ಕಷ್ಟ ಸಾಧ್ಯ ಎನ್ನುವುದು ನಿರ್ವಿವಾದ ಅಂಶ. ಆದರೆ ಜನರು ಲಸಿಕೆಯನ್ನು ಸುಲಭವಾಗಿ ಪಡೆಯುವಂತೆ ಮಾಡಲು ಪ್ರತಿಯೊಂದು ಬ್ಲಾಕ್‍ಗಳಲ್ಲೂ, ಸಮುದಾಯ ಕೇಂದ್ರಗಳಲ್ಲಿ, ಕೋವಿದ್ ನಿಯಮಗಳನ್ನು ಪಾಲಿಸುವುದರ ಮೂಲಕವೇ ಅನುಕೂಲ ಮಾಡಿಕೊಡುವ ಉತ್ಸಾಹ ತೋರಬಹುದಿತ್ತು.

ಬದಲಾಗಿ, ಮನೆಮನೆಗೆ ಲಸಿಕೆ ತಲುಪಿಸುವ ಅನಗತ್ಯ ಕ್ರಮವನ್ನು ಅಲ್ಲಗಳೆಯುತ್ತಲೇ, ಈ ಪ್ರಮಾಣ ಪತ್ರದಲ್ಲಿ ಸರ್ಕಾರವು “ ಕೇಂದ್ರ ಸರ್ಕಾರವು ತನ್ನ ನೀತಿಯನ್ನು ಪರಿಷ್ಕರಿಸಿ ಶೇ 100ರಷ್ಟು ಲಸಿಕೆಯನ್ನು ತಾನೇ ಖರೀದಿಸಿ ರಾಜ್ಯಗಳಿಗೆ ಸಮನಾಗಿ ಹಂಚುತ್ತದೆಯೇ ” ಎಂಬ ನ್ನು ಒಮ್ಮೆಲೇ ನಿರಾಕರಿಸಿದೆ. ಈ ನಿರಾಕರಣೆಯನ್ನೂ ನಯವಾಗಿಯೇ ಸೂಚಿಸಲಾಗಿದ್ದು “ ಈ ಪ್ರಶ್ನೆಗೆ ಉತ್ತರವನ್ನು ಈ ಮೇಲೆ ಉಲ್ಲೇಖಿಸಲಾಗಿದೆ ” ಎಂದು ಹೇಳುತ್ತದೆ. ಮೇಲಿನ ಯಾವ ಪುಟದಲ್ಲೂ ಈ ನಿಟ್ಟಿನಲ್ಲಿ ಉತ್ತರ ದೊರೆಯುವುದಿಲ್ಲ !

ಈ ರೀತಿಯ ಸಮಾನ ಹಂಚಿಕೆಗೆ ಅಗತ್ಯವಾದ ನಂಬಿಕೆ ಮತ್ತು ವಿಶ್ವಾಸ ಕೇಂದ್ರ ಮತ್ತು ರಾಜ್ಯಗಳ ನಡುವೆ ಉಳಿದಿಲ್ಲವೇ? ಹಾಗಿದ್ದಲ್ಲಿ ಈ ಅಪನಂಬಿಕೆಯನ್ನು ಇನ್ನೂ ಹೆಚ್ಚು ಮಾಡಿ ವಿಘಟನೆಯತ್ತ ಸಾಗುವುದಕ್ಕಿಂತಲೂ, ವಿಶ್ವಾಸವನ್ನು ಗಳಿಸುವುದು ಆದ್ಯತೆಯಾಗಬೇಕು.

ಈ ಹಿನ್ನೆಲೆಯಲ್ಲಿ ನೋಡಿದಾಗ ಕೇಂದ್ರ ಸರ್ಕಾರದ ಉದಾರ ಲಸಿಕೆ ನೀತಿ ಸಾಧಿಸಿರುವುದಾದರೂ ಏನು ? ಲಸಿಕೆ ಉತ್ಪಾದಿಸುವ ಕಂಪನಿಯ ಆದಾಯವನ್ನು ಹೆಚ್ಚಿಸಿದೆಯಷ್ಟೆ. ರಾಜ್ಯ ಸರ್ಕಾರಗಳು ಮತ್ತು ಖಾಸಗಿ ವಲಯ ಪಾವತಿಸಬೇಕಿರುವ ದರದಲ್ಲಿ ಕೋವ್ಯಾಕ್ಸಿನ್‍ಗೆ ಒಂದು ಡೋಸ್‍ಗೆ 477 ರೂ, ಕೋವಿಷೀಲ್ಡ್ ಒಂದು ಡೋಸ್‍ಗೆ 302 ನಿಗದಿಪಡಿಸುವ ಮೂಲಕ ಕಂಪನಿಗಳ ಆದಾಯ ಹೆಚ್ಚಿಸಲಾಗಿದೆ.

ಸರಾಸರಿ ಹೊರೆಯ ಆಧಾರದಲ್ಲಿ ದರವನ್ನು ನಿಗದಿಪಡಿಸುವಾಗ, ಲಸಿಕೆ ಪೂರೈಕೆಯನ್ನು ಕೇಂದ್ರಕ್ಕೆ ಶೇ 50, ರಾಜ್ಯಗಳಿಗೆ ಶೇ 25 ಮತ್ತು ಖಾಸಗಿ ಕ್ಷೇತ್ರಕ್ಕೆ ಶೇ 25 ಎಂದು ನಿಗದಿಪಡಿಸಿ ಲೆಕ್ಕ ಮಾಡಲಾಗುತ್ತದೆ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ |ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ : ಸಿಎಂ ಯಡಿಯೂರಪ್ಪ

ಉತ್ಪಾದಕ ಕಂಪನಿಗಳು ಕೋವ್ಯಾಕ್ಸಿನ್ ಮತ್ತು ಕೋವಿಷೀಲ್ಡ್ ಎರಡನ್ನೂ ಕೇಂದ್ರ ಸರ್ಕಾರಕ್ಕೆ 154 ರೂನಂತೆ ಪೂರೈಕೆ ಮಾಡಬೇಕು. ಕೋವ್ಯಾಕ್ಸಿನ್ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ 400 ರೂನಂತೆ ಮತ್ತು ಖಾಸಗಿ ಕ್ಷೇತ್ರಕ್ಕೆ 1200 ರೂನಂತೆ, ಕೋವಿಷೀಲ್ಡ್ ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ 300 ರೂನಂತೆ, ಖಾಸಗಿ ಕ್ಷೇತ್ರಕ್ಕೆ 600 ರೂನಂತೆ ಪೂರೈಸಬೇಕು ಎಂದು ನಿಗದಿಪಡಿಸಲಾಗಿದೆ.

ಈ ಬೆಲೆಗಳು ಸ್ವಾಭಾವಿಕವಾಗಿಯೇ ಹೆಚ್ಚಾಗಿ ಕಾಣುತ್ತದೆ. ಈ ಕಂಪನಿಗಳ ಆದಾಯವನ್ನು ಹೆಚ್ಚಿಸಬೇಕಾದರೆ ಕೇಂದ್ರ ಸರ್ಕಾರಕ್ಕೆ ನಿಗದಿಯಾಗಿರುವ 154 ರೂಗಳನ್ನು ಮತ್ತಷ್ಟು ಹೆಚ್ಚಿಸಬೇಕಾಗುತ್ತದೆ. ಇದರಿಂದ ಉತ್ಪಾದಕರು ಜಾಗತಿಕವಾಗಿ ಮಾರಾಟ ಮಾಡಲು ಹೆಚ್ಚಿನ ಉತ್ಪಾದನೆ ಮಾಡಬಹುದು ಮತ್ತು ಅಂತರಿಕವಾಗಿಯೂ ಶೇ 100ರಷ್ಟು ಬೇಡಿಕೆಯನ್ನು ಪೂರೈಸಲೂಬಹುದು.

ಈ ಹೊಸ ಜಟಿಲ ನೀತಿಗಳ ಹೊರತಾಗಿಯೂ ರಾಜ್ಯ ಸರ್ಕಾರಗಳು ಹೆಚ್ಚಿನ ಹೊರೆಯನ್ನು ಭರಿಸಲು ಸಾಧ್ಯವಾಗುತ್ತದೆ. ಕಳೆದ ವರ್ಷ ಮೂಲ ಸೌಕರ್ಯಗಳಿಗಾಗಿ ಕೇಂದ್ರ ವಿತ್ತಸಚಿವಾಲಯ ಘೋಷಿಸಿದ ಬಡ್ಡಿ ರಹಿತ ಸಾಲಗಳನ್ನು ಐವತ್ತು ವರ್ಷಗಳ ಅವಧಿಗಾಗಿ ರಾಜ್ಯ ಸರ್ಕಾರಗಳಿಗೆ ನೀಡುವುದರ ಮೂಲಕ ಕೇಂದ್ರ ಸರ್ಕಾರ ಈ ಹೊರೆಯನ್ನು ನೀಗಿಸಲು ನೆರವಾಗಬಹುದು.

ಲಸಿಕೆಯನ್ನು ಖಾಸಗಿ ಕ್ಷೇತ್ರಗಳ ಮೂಲಕ, ಕಾರ್ಪೋರೇಟ್ ಕ್ಷೇತ್ರದ ಮೂಲಕ ಪಡೆಯುವ ಸಾಮರ್ಥ್ಯ ಇದ್ದವರು ಮುಂದುವರೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವರು ಸ್ಪಷ್ಟವಾಗಿ ಹೇಳಿದ್ದಾಗಿದೆ. ಈ ನೀತಿಯನ್ನು ಒಪ್ಪಿಕೊಳ್ಳುವುದೇ ಆದರೆ, ಪೂರೈಕೆಯ ಪ್ರಮಾಣವನ್ನು ನಂಬಲು ಸಾಧ್ಯವಾಗುವುದಿಲ್ಲ.

ಲಸಿಕೆಗಳು ದುಬಾರಿಯಾಗುತ್ತವೆ. ಇದರಿಂದ ವಿವಿಧ ರಾಜ್ಯಗಳಿಗೆ ಹೆಚ್ಚಿನ ಹೊರೆಯಾಗುವುದೇ ಅಲ್ಲದೆ, ಬಡ ಜನತೆ ಲಸಿಕೆಗಾಗಿ ನಿಲ್ಲುವ ಸಾಲುಗಳ ಅಂಚಿಗೆ ತಳ್ಳಲ್ಪಡುತ್ತಾರೆ. ಅಲ್ಲವೇ ? ಅಂದರೆ ಲಸಿಕೆಯ ವಿತರಣೆಯನ್ನೇ ಅರ್ಧದಷ್ಟು ಕಡಿಮೆ ಮಾಡುವ ಮೂಲಕ ದುರ್ಬಲ ವರ್ಗಗಳಿಗೆ ಲಸಿಕೆ ನೀಡುವುದೂ ವಿಳಂಬ ಮಾಡಲಾಗುತ್ತದೆ ಅಲ್ಲವೇ ? ಹಾಗಾದರೆ ಈ ಹೊಸ ನೀತಿಯನ್ನು ತಿರಸ್ಕರಿಸುವುದೇ ವಿವೇಕಯುತ ಕ್ರಮ.

( ಲೇಖಕರು ಕೇಂದ್ರೀಯ ಕಾರ್ಯನೀತಿ ಸಂಶೋಧನಾ ಸಂಸ್ಥೆಯ ಹಿರಿಯ ಸದಸ್ಯರು )

ಕೃಪೆ : Thepolitic

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending