Connect with us

ರಾಜಕೀಯ

ಬಲಪಂಥೀಯ ದಾಳಿಯ ಕ್ರೋಡೀಕರಣಕ್ಕೆ ಎದುರಾಗಿ ವರ್ಗಪರ್ಯಾಯವನ್ನು ಆಧರಿಸಿದ ಎಡಪಂಥೀಯ ಪ್ರತಿಧಾಳಿ –ಇದೀಗ ದೇಶದಲ್ಲಿನ ಹೊಸಧ್ರುವೀಕರಣ : ಸೀತಾರಾಂಯೆಚುರಿ

Published

on

17ನೇ ಲೋಕಸಭಾ ಚುನಾವಣೆಗಳಲ್ಲಿ ಬಲಪಂಥೀಯರಿಗೆ ಒಂದು ದೊಡ್ಡ ವಿಜಯಸಿಕ್ಕಿದೆ, ಇದು ಕಳೆದ ಐದು ವರ್ಷಗಳಲ್ಲಿ ನಡೆಸಿದ ಬಲಪಂಥೀಯದಾಳಿಗಳ ಕ್ರೋಡೀಕರಣ, ಎಡಶಕ್ತಿಗಳು ದೊಡ್ಡ ಹಿನ್ನಡೆ ಅನುಭವಿಸಿವೆ, ಆದರೆ ಎಡಪಂಥೀಯರು, ಕೆಲವರು ಹೇಳುವ ಹಾಗೆ ನಿಶ್ಶಸ್ತ್ರರಾಗಿಲ್ಲ, ಅಥವ ನಿರ್ಮೂಲಗೊಂಡಿಲ್ಲ., ನೆನಪಿಟ್ಟುಕೊಳ್ಳಿ, ಬಲಪಂಥೀಯ ರಾಜಕೀಯ ದಾಳಿಯನ್ನು ಎಡಪಂಥೀಯ ರಾಜಕೀಯ ಪ್ರತಿಧಾಳಿ ಮಾತ್ರವೇ ಎದುರಿಸಬಲ್ಲದು. ಈ ಪ್ರತಿದಾಳಿ ಒಂದು ವರ್ಗ ಪರ್ಯಾಯವನ್ನು, ವರ್ಗರಾಜಕೀಯವನ್ನು ಆಧರಿಸಿದೆ. ಕೇಂದ್ರಸಮಿತಿಯಲ್ಲಿಸಿಪಿಐ(ಎಂ) ಈಗಇದನ್ನೇಮಾಡಲುನಿರ್ಧರಿಸಿದೆ” ಎಂದುಸೀತಾರಾಮ್‍ ಯೆಚುರಿ, ಸಿಪಿಐ(ಎಂ) ಪ್ರಧಾನಕಾರ್ಯದರ್ಶಿ ಹೇಳಿದ್ದಾರೆ.

ಅವರು ಜೂನ್‍ 7ರಿಂದ 9 ರವರೆಗೆ ನಡೆದ ಸಿಪಿಐ(ಎಂ)ನ ಕೇಂದ್ರ ಸಮಿತಿಯ ಚರ್ಚೆಗಳು, ನಿರ್ಧಾರಗಳ ಬಗ್ಗೆ ಪತ್ರಿಕಾ ಸಮ್ಮೇಳನವನ್ನು ಉದ್ದೇಶಿಸಿ ಮಾತಾಡುತ್ತಿದ್ದರು. ಎಡಶಕ್ತಿಗಳು ಹಿಮ್ಮೆಟ್ಟುತ್ತಿಲ್ಲ, ಪ್ರತಿದಾಳಿ ನಡೆಸುತ್ತವೆ. ಇದೀಗ ಎಡಶಕ್ತಿಗಳು ಸೆಟೆದುನಿಲ್ಲುವ ಸಮಯ, ಆಧುನಿಕ ಭಾರತದ ಮೌಲ್ಯಗಳನ್ನು ಎತ್ತಿಹಿಡಿಯಲು, ನಮ್ಮ ಸಂವಿಧಾನದ ಆಶ್ವಾಸನೆಗಳನ್ನು ರಕ್ಷಿಸಿಕೊಳ್ಳಲು ಮತ್ತು ಜನಗಳ ಪ್ರಜಾಪ್ರಭುತ್ವ ಹಕ್ಕುಗಳು ಹಾಗೂ ನಾಗರಿಕ ಸ್ವಾತಂತ್ರ್ಯಗಳನ್ನು ರಕ್ಷಿಸಿಕೊಳ್ಳಲು ಸೆಟೆದುನಿಲ್ಲುವ ಸಮಯ. ಬಲಪಂಥಬಲಗೊಂಡಾಗ, ಎಡಪಂಥವೂ ಶಕ್ತಿಶಾಲಿಯಾಗಬೇಕಾಗುತ್ತದೆ. ಇದೀಗ ದೇಶದಲ್ಲಿನ ಹೊಸಧ್ರುವೀಕರಣ, ಮೆದುಹಿಂದುತ್ವವು ಕಟ್ಟಾಹಿಂದುತ್ವಕ್ಕೆ ಉತ್ತರವಾಗದು, ಎಡಪಂಥಮಾತ್ರವೇ ಏಕೈಕ ಆಯ್ಕೆ ಎಂದು ಯೆಚುರಿ ಹೇಳಿದರು.

ಸಿಪಿಐ(ಎಂ) ಕೇಂದ್ರಸಮಿತಿ ಈ ಮೂರು ದಿನಗಳ ಸಭೆಯಲ್ಲಿ 17ನೇ ಲೋಕಸಭಾ ಚುನಾವಣೆಗಳ ಫಲಿತಾಂಶದ ಪ್ರಾಥಮಿಕ ವಿಮರ್ಶೆ ನಡೆಸಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ ಎಂದು ವಿಶ್ಲೇಷಿಸಿರುವ ಕೇಂದ್ರಸಮಿತಿ, ಪ್ರತಿಪಕ್ಷಗಳ ವಿಫಲತೆ, ಎಡಶಕ್ತಿಗಳ ತೀವ್ರಪರಾಭವದ ಪ್ರಾಥಮಿಕ ವಿಮರ್ಶೆಯನ್ನು ನಡೆಸಿತು.

ಪಕ್ಷದ ಸ್ವತಂತ್ರಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಗಮನಿಸಿದ ಸಿಪಿಐ(ಎಂ) ಕೇಂದ್ರಸಮಿತಿ ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವು ಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಅದು ಇಂತಹ ನಾಲ್ಕು ಮುಖ್ಯಸವಾಲುಗಳನ್ನು ಗಮನಿಸಿ, ಅವನ್ನು ಎದುರಿಸುವ ಬಗೆಗಳನ್ನೂ ಗುರುತಿಸಿದೆ.

ಪಕ್ಷಕ್ಕೆ ಆಗಿರುವ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ, ಪಕ್ಷದ ಕೊಲ್ಕತಾಪ್ಲೀನಂನ ಮಹತ್ವದ ನಿರ್ಣಯಗಳ ಜಾರಿಯ ವಿಮರ್ಶೆಯೂ ಸೇರಿದಂತೆ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

ಕೇಂದ್ರಸಮಿತಿಯ ಸಭೆ ಚುನಾಣಾ ಸುಧಾರಣೆಗಳ, ಅದರಲ್ಲೂ ಚುನಾವಣಾ ಆಯೋಗದ ಸುಧಾರಣೆಗಳ ಅಗತ್ಯ ಮತ್ತು ಇಲೆಕ್ಟ್ರಾನಿಕ್ಮತಯಂತ್ರಗಳ ಬಗ್ಗೆ ಎದ್ದಿರುವ ಸಂದೇಹಗಳನ್ನೂ ಚರ್ಚಿಸಿತು.

ಚುನಾವಣೆಗಳ ನಂತರ ಮುಂಬಯಿಯಲ್ಲಿ ಖ್ಯಾತ ಜಾತ್ಯತೀತಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಬೆದರಿಕೆಗಳು ಬರುತ್ತಿರುವುದನ್ನು ಕೇಂದ್ರಸಮಿತಿ ಖಂಡಿಸಿದೆ, ಹಾಗೂ ಚುನಾವಣಾ ಫಲಿತಾಂಶಗಳು ಪ್ರಕಟವಾಗುವ ಹಿಂದಿನ ದಿನವೇ ಜಾತಿಕಿರುಕುಳ-ದ್ವೇ಼ಷ ಪ್ರಚಾರಕ್ಕೆ ಬಲಿಯಾದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಪಾಯಲ್ ‍ ತಡ್ವಿ ಆತ್ಮಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿದೆ.

ಈ ಸಭೆಯನಂತರ ಪ್ರಕಟಿಸಿರುವ ಸಿಪಿಐ(ಎಂ) ಕೇಂದ್ರಸಮಿತಿಯ ಹೇಳಿಕೆಯ ಪೂರ್ಣಪಾಟವನ್ನು ಈ ಮುಂದೆಕೊಡಲಾಗಿದೆ.

ಲೋಕ ಸಭಾಚುನಾವಣೆಗಳ ಪ್ರಾಥಮಿಕ ಪರಾಮರ್ಶೆ

ಬಿಜೆಪಿ ವಿಜಯ

17ನೇ ಲೋಕಸಭಾಚುನಾವಣೆಗಳ ತೀರ್ಪು ಬಿಜೆಪಿ ನೇತೃತ್ವದ ಎನ್‍.ಡಿ.ಎ. ಗೆ 2014ರಲ್ಲಿ ಗೆದ್ದುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮತ್ತು ಹೆಚ್ಚಿನ ಮತಗಳಿಕೆಯನ್ನು ಕೊಟ್ಟಿದೆ. ಇದು ಅವರ ಪರವಾದ ಒಂದು ನಿರ್ಣಾಯಕ ಜನಾದೇಶವಾಗಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ.

ಪುಲ್ವಾಮ ಮತ್ತು ಬಾಲಾಕೋಟ್‍ ನಂತರ ಜನಗಳ ನಡುವೆ ಕಥನವನ್ನು ಕಳೆದ ಐದುವರ್ಷಗಳಲ್ಲಿ ಎನ್.ಡಿ.ಎ. ಸರಕಾರ ಹೇರಿದ ಹತ್ತು-ಹಲವು ಜೀವನಾಧಾರದ ಪ್ರಶ್ನೆಗಳಿಂದ ಪಲ್ಲಟಗೊಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಂಕುಚಿತ ಕೋಮುವಾದಿ ರಾಷ್ಟ್ರವಾದಿ ಅಬ್ಬರದ ಹೊಸ ಕಥನಕ್ಕೆ ಹಲವಾರು ಅಂಶಗಳ ಮೂಲಕ ಮೋದಿಯ ವ್ಯಕ್ತಿತ್ವವನ್ನು ಕಟ್ಟಿದ್ದು ಇದಕ್ಕೆ ನೆರವಾಯಿತು. ಮಾಧ್ಯಮಗಳ ವಿಭಾಗಗಳು ಈ ಪ್ರಾಜೆಕ್ಟಿನಲ್ಲಿ ಪಾಲುದಾರರಾದವು. ಹಿಂದೆಂದೂ ಕಾಣದಂತಹ ಹಣಬಲದ ಬಳಕೆ ಈ ಚುನಾವಣೆಗಳಲ್ಲಿ ಕಂಡುಬಂತು. ಚುನಾವಣಾ ಬಾಂಡುಗಳ ಮೂಲಕ ಅಗಾಧ ಮೊತ್ತಗಳು ಬಿಜೆಪಿಗೆ ವರ್ಗಾಯಿಸಲ್ಪಟ್ಟವು. ಚುನಾವಣಾಆಯೋಗದ ಪಾತ್ರವೂತನ್ನಕೊಡುಗೆನೀಡಿತು.

ಪ್ರತಿಪಕ್ಷಗಳು

ಹೆಚ್ಚಿನ ಪ್ರತಿಪಕ್ಷಗಳು, ತಮಿಳುನಾಡು, ಆಂಧ್ರಪ್ರದೇಶ, ಇನ್ನು ಕೆಲವು ರಾಜ್ಯಗಳನ್ನು ಬಿಟ್ಟರೆ ಬೇರೆಡೆಗಳಲ್ಲಿ ದೊಡ್ಡ ನಷ್ಟವನ್ನು ಕಂಡಿವೆ. ಪ್ರತಿಪಕ್ಷಗಳು, ನಿರ್ದಿಷ್ಟವಾಗಿ ಕಾಂಗ್ರೆಸ್‍, ಚುನಾವಣೆಗಳ ಮೊದಲು ಮುಂದಿಟ್ಟ ಜಾತ್ಯತೀತ ಪ್ರತಿಪಕ್ಷಗಳ ಐಕ್ಯತೆಯನ್ನು ಪ್ರಸ್ತುತ ಪಡಿಸುವಲ್ಲಿ ವಿಫಲವಾದವು. ಕೋಮುವಾದಿದಾಳಿಗೆ ಎದುರಾಗಿ ಜಾತ್ಯತೀತತೆಯನ್ನು ರಕ್ಷಿಸಿಕೊಳ್ಳುವ ಒಂದು ಪ್ರಚಾರಾಂದೋಲನವನ್ನು ನಡೆಸಲಿಲ್ಲ. ಕಟ್ಟಾಹಿಂದುತ್ವಕ್ಕೆ ಮೆದುಹಿಂದುತ್ವ ಉತ್ತರವಲ್ಲ. ಹಿಂದುತ್ವ ಮತ್ತು ಜಾತ್ಯತೀತತೆಯ ನಡುವಿನ ಸೈದ್ಧಾಂತಿಕ ಸಮರವನ್ನು ಶಕ್ತಿಯುತವಾಗಿ ನಡೆಸಲಿಲ್ಲ.

ಸಿಪಿಐ(ಎಂ) ಮತ್ತು ಎಡಶಕ್ತಿಗಳಿಗೆ ತೀವ್ರಪರಾಭವ

ಸಿಪಿಐ(ಎಂ) ಮತ್ತು ಎಡಶಕ್ತಿಗಳು ಒಂದು ತೀವ್ರ ಹಿನ್ನಡೆಯನ್ನು, ವಿಶೇಷವಾಗಿ ಕೇರಳ, ಪಶ್ಚಿಮಬಂಗಾಲ ಮತ್ತು ತ್ರಿಪುರಾದಲ್ಲಿನ ತಮ್ಮ ಬಲಿಷ್ಟನೆಲೆಗಳಲ್ಲಿ, ಅನುಭವಿಸಿವೆ.ಪಶ್ಚಿಮಬಂಗಾಲ ಮತ್ತು ತ್ರಿಪುರಾ ಈ ಎರಡರಲ್ಲೂ ಚುನಾವಣೆಗಳು ತೀವ್ರಭಯೋತ್ಪಾದನೆ ಮತ್ತು ಹಿಂಸಾಚಾರದ ವಾತಾವರಣದಲ್ಲಿ ನಡೆದವು. ಇಂತಹ ಹಿಂಸಾಚಾರದಲ್ಲಿ ಪಶ್ಚಿಮಬಂಗಾಲದಲ್ಲಿ ಐವರು ಮತ್ತು ತ್ರಿಪುರಾದಲ್ಲಿ ಒಬ್ಬರು ಸಿಪಿಐ(ಎಂ) ಕಾರ್ಯಕರ್ತರು ಜೀವ ಕಳಕೊಂಡಿದ್ದಾರೆ.

ತ್ರಿಪುರಾ ಪಶ್ಚಿಮಕ್ಷೇತ್ರ ಮತ್ತು ಪಶ್ಚಿಮಬಂಗಾಲದ ಡೈಮಂಡ್‍ ಹಾರ್ಬರ್‍ ಕ್ಷೇತ್ರದಲ್ಲಿ ಬಹುಪಾಲು ಮತಗಟ್ಟೆಗಳಲ್ಲಿ ಚುನಾವಣಾ ಮೋಸನಡೆದಿದೆ, ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ದೂಷಿತಗೊಂಡಿದೆ. ಚುನಾವಣಾ ಆಯೋಗಕ್ಕೆ “ಮುಕ್ತ ಮತ್ತು ನ್ಯಾಯಯುತ ಮತದಾನ”ಗಳನ್ನು ನಡೆಸುವ ತನ್ನ ಆಶ್ವಾಸನೆಯನ್ನು ಜಾರಿಗೊಳಿಸಲು ಆಗಲಿಲ್ಲ.

ಈ ಮೂರು ರಾಜ್ಯಸಮಿತಿಗಳು ನಡೆಸಿರುವ ಪ್ರಾಥಮಿಕ ವಿಮರ್ಶೆಗಳನ್ನು ಕೇಂದ್ರಸಮಿತಿ ಚರ್ಚಿಸಿತು. ಒಂದು ವಿವರವಾದ ಮತಗಟ್ಟೆವಾರು ವಿಮರ್ಶೆ ನಡೆಯುತ್ತಿದ್ದು, ಅದರ ಆಧಾರದಲ್ಲಿ ಅಂತಿಮ ಅನುಭವಗಳ ಮೌಲ್ಯಮಾಪನ ಮಾಡಲಾಗುವುದು.

ಈ ಚುನಾವಣೆಗಳಲ್ಲಿ, ಬಿಜೆಪಿ ಮತ್ತು ಅದರ ಮಿತ್ರರನ್ನು ಸೋಲಿಸಬೇಕು, ಸಂಸತ್ತಿನಲ್ಲಿ ಎಡಪಕ್ಷಗಳ ಬಲವನ್ನು ಹೆಚ್ಚಿಸಬೇಕು ಮತ್ತು ಕೇಂದ್ರದಲ್ಲಿ ಒಂದು ಪರ್ಯಾಯ ಜಾತ್ಯತಿತ ಸರಕಾರವನ್ನು ಸ್ಥಾಪಿಸಲು ಅನುವುಮಾಡಿಕೊಡಬೇಕು ಎಂದು ಸಿಪಿಐ(ಎಂ) ಕರೆನೀಡಿತ್ತು. ಈ ಧ್ಯೇಯೋದ್ದೇಶಗಳನ್ನು ಈ ಜನಾದೇಶ ನಿರಾಕರಿಸಿದೆ.

ಕೇರಳದಲ್ಲಿ ಮತದಾರರು ಒಂದು ಪರ್ಯಾಯ ಜಾತ್ಯತೀತ ಸರಕಾರವನ್ನು ರಚಿಸುವಲ್ಲಿ ಕಾಂಗ್ರೆಸ್‍ ಗೇ ಸಾಧ್ಯತೆ ಹೆಚ್ಚು ಎಂದು ಭಾವಿಸಿದರು. ಇದರ ಫಲಿತಾಂಶವಾಗಿ ಜಾತ್ಯತೀತ ಒಲವಿನ ಜನಗಳು ಮತ್ತು ಅಲ್ಪಸಂಖ್ಯಾತರು ಅವರಿಗೆ ಮತ ನೀಡುವಂತಾಯಿತು. ಶಬರಿಮಲೆ ಕುರಿತ ಸುಪ್ರಿಂಕೋರ್ಟ್‍ ತೀರ್ಪನ್ನು ಜಾರಿಗೊಳಿಸಲು ಬದ್ಧವಾಗಿದ್ದ ಎಲ್‍.ಡಿ. ಎಫ್‍. ಸರಕಾರದ ಸರಿಯಾದ ನಿಲುವನ್ನು ಕುರಿತಂತೆ ಬಿಜೆಪಿ ಮತ್ತು ಯುಡಿಎಫ್ ಆಸ್ತಿಕ ಜನ ವಿಭಾಗಗಳಲ್ಲಿ ಹಲವರಲ್ಲಿ ತಪ್ಪುಕಲ್ಪನೆಗಳನ್ನು ಸೃಷ್ಟಿಸಿದವು. ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ಪಕ್ಷವು ಸರ್ವಪ್ರಯತ್ನಗಳನ್ನು ನಡೆಸುತ್ತದೆ.

ಪಶ್ಚಿಮಬಂಗಾಲದಲ್ಲಿ ಚುನಾವಣೆಗಳು ಅತ್ಯಂತ ಧ್ರುವೀಕೃತ ವಾತಾವರಣದಲ್ಲಿ ನಡೆದಿವೆ. ಮಾಧ್ಯಮ ಒಂದು ಅವಳಿಕಥನವನ್ನು ಕಟ್ಟಿ ಟಿಎಂಸಿ ಮತ್ತು ಬಿಜೆಪಿ ನಡುವೆ ಇಂತಹ ಧ್ರುವೀಕರಣದಲ್ಲಿ ನೆರವಾಗುವಲ್ಲಿ ಒಂದು ದೊಡ್ಡಪಾತ್ರವನ್ನು ವಹಿಸಿತು. ಕೋಮುವಾದ ಪ್ರೇರಿತ ಪ್ರಚಾರವು ಮತದಾರರನ್ನು ಮತ್ತಷ್ಟು ಧ್ರುವೀಕರಿಸಿತು. ಟಿಎಂಸಿ ವಿರುದ್ಧ ಅಧಿಕಾರ ಸ್ಥ-ವಿರೋಧಿ ಭಾವನೆ ಬಹಳಗಟ್ಟಿಯಾಗಿತ್ತು. ಅದಕ್ಕೆ ಸಿಪಿಐ(ಎಂ) ಮತ್ತು ಎಡಶಕ್ತಿಗಳು ಪರ್ಯಾಯ ಎಂದು ಮತದಾರರು ಕಾಣಲಿಲ್ಲ, ಇದರಿಂದಾಗಿ ನಮ್ಮ ಪಾರಂಪರಿಕ ಬೆಂಬಲಿಗರಲ್ಲಿ ಒಂದು ವಿಭಾಗ ಪಲ್ಲಟಗೊಳ್ಳುವಂತಾಯಿತು. ಬಜೆಪಿ-ವಿರೋಧಿ, ಟಿಎಂಸಿ-ವಿರೋಧಿ ಮತಗಳನ್ನು ಗರಿಷ್ಟ ಪ್ರಮಾಣದಲ್ಲಿ ಕ್ರೋಡೀಕರಿಸುವ ಎಡಪಕ್ಷಗಳ ಪ್ರಸ್ತಾವವನ್ನು ಸ್ವೀಕರಿಸಲು ಕಾಂಗ್ರೆಸ್‍ ನಿರಾಕರಿಸಿದ್ದು ಈ ಅವಳಿ ಕಥನವನ್ನು ಗಟ್ಟಿಗೊಳಿಸಿತು.

ತ್ರಿಪುರಾದಲ್ಲಿ ಎರಡರಲ್ಲಿ ಒಂದು ಸ್ಥಾನದಲ್ಲಿ ಸುಮಾರಾಗಿ ಚುನಾವಣಾ ಮೋಸವೇ ನಡೆದಿದೆ. ಮೀಸಲು ಎಸ್‍.ಟಿ. ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ, ಕಾಂಗ್ರೆಸ್‍ ಎರಡನೇ ಸ್ಥಾನಪಡೆದಿದೆ.

ಈ ಎರಡೂ ರಾಜ್ಯಗಳಲ್ಲಿ ಪಕ್ಷದಸಮಿತಿಗಳು ನಮ್ಮ ಪಾರಂಪರಿಕ ಬೆಂಬಲ ನೆಲೆಕುಗ್ಗುತ್ತಿರುವ ಬಗ್ಗೆ ಪ್ರಾಮಾಣಿಕ ಮೌಲ್ಯಮಾಪನ ನಡೆಸುತ್ತಿವೆ ಮತ್ತು ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ತುರ್ತುಕ್ರಮಗಳನ್ನು ರೂಪಿಸಲಾಗುವುದು.

ಈ ಬಲಿಷ್ಟ ನೆಲೆಗಳ ಹೊರಗೆ, ಸಿಪಿಐ(ಎಂ) ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಚುನಾವಣಾ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದ್ದ ಎರಡೂಸ್ಥಾನಗಳನ್ನು ಗೆದ್ದುಕೊಂಡಿದೆ. ಬೇರೆಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಈ ಸ್ಥಾನಗಳಲ್ಲಿ, ಮಹಾರಾಷ್ಟ್ರದ ದಿಂಡೋರಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ 1,09,570 ಮತಗಳನ್ನು ಪಡೆದಿದೆ. ಒಡಿಶಾ ವಿಧಾನಸಭೆಯ ಚುನಾವಣೆಗಳಲ್ಲಿ ಸಿಪಿಐ(ಎಂ) ತನ್ನ ಬೊನೈ ಕ್ಷೇತ್ರವನ್ನು, ಕಳೆದ ಬಾರಿಗಿಂತ 20,000 ಹೆಚ್ಚುಮತಗಳನ್ನು (34.67%) ಗಳಿಸಿ ಉಳಿಸಿಕೊಂಡಿದೆ.

ಪಕ್ಷದ ಸ್ವತಂತ್ರ ಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಕೇಂದ್ರಸಮಿತಿ ಗಮನಿಸಿತು. ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಕೇಂದ್ರ ಸಮಿತಿ ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವುಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಚುನಾವಣೆಗಳ ನಂತರದ ಸವಾಲುಗಳು

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಕೇಂದ್ರಸಮಿತಿ ಇಂತಹ ನಾಲ್ಕು ಸವಾಲುಗಳನ್ನು ಗಮನಿಸಿದೆ.

  1. ಬಿಜೆಪಿ ಈ ನಿರ್ಣಾಯಕ ವಿಜಯವನ್ನು ಅಭೂತಪೂರ್ವ ಹಣಬಲ ಮತ್ತು ಅಂತರ್ರಾಷ್ಟ್ರೀಯ ಹಾಗೂ ದೇಶೀಕಾರ್ಪೊರೇಟ್ಗಳ ಸಂಪೂರ್ಣ ಬೆಂಬಲದಿಂದ ಗೆದ್ದಿದೆ. ದೊಡ್ಡವ್ಯವಹಾರಸ್ಥರು ಮತ್ತು ಶ್ರೀಮಂತರಿಗೆ ಅನುಕೂಲಕರವಾದ ಜನ-ವಿರೋಧಿ ಆರ್ಥಿಕ ಸುಧಾರಣೆಗಳ ದಿಕ್ಪಥವನ್ನು ಅದು ಇನ್ನಷ್ಟು ತೀವ್ರಗೊಳಿಸಲು ಬಹುಪಾಲು ಜನತೆಯ ಮೇಲೆ ಮತ್ತಷ್ಟು ಹೆಚ್ಚಿನ ಸಂಕಟಗಳನ್ನು ಖಂಡಿತವಾಗಿಯೂ ಹೇರುತ್ತದೆ. ಇಂತಹ ಆರ್ಥಿಕ ಹೊಡೆತಗಳ ವಿರುದ್ಧ ಹೋರಾಟಗಳಲ್ಲಿ ಗರಿಷ್ಟ ಜನವಿಭಾಗಗಳನ್ನು ಅಣಿನೆರೆಸುವಲ್ಲಿ ಪಕ್ಷವು ನೇತೃತ್ವ ನೀಡುತ್ತದೆ.
  2. ಹಿಂದುತ್ವ ಕೋಮುವಾದಿ ಧ್ರುವೀಕರಣದ ಕ್ರೋಡೀಕರಣದಿಂದಾಗಿ ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಹೆಚ್ಚೆಚ್ಚು ಹಲ್ಲೆಗಳು ನಡೆಯಲಿವೆ, ಇದರಿಂದಾಗಿ, ಈ ಜನ ವಿಭಾಗಗಳ ಭದ್ರತೆ ಮತ್ತು ಜೀವನಾಧಾರ ಕುರಿತ ಆತಂಕಗಳು ಇನ್ನಷ್ಟು ಹದಗೆಡಲಿವೆ. ನಮ್ಮ ಸಂವಿಧಾನದಲ್ಲಿ ಪ್ರತಿಷ್ಟಾಪಿಸಿರುವ ಜಾತ್ಯತೀತತೆಯನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಪಕ್ಷವು ಈ ಹೋರಾಟಗಳಲ್ಲಿ ಸಾಕಷ್ಟು ವಿಶಾಲ ಪ್ರಮಾಣದಲ್ಲಿ ಜನವಿಭಾಗಗಳನ್ನು ಸೆಳೆದುಕೊಂಡು ಕೈಗೆತ್ತಿಕೊಳ್ಳುತ್ತದೆ.
  3. ಕಳೆದ ಐದುವರ್ಷಗಳಲ್ಲಿ ಎಲ್ಲಸಂವಿಧಾನಿಕ ಅಧಿಕಾರ ಪಡೆದಿರುವ ಸಂಸ್ಥೆಗಳಲ್ಲಿ ನಡೆದಿರುವ ಆರೆಸ್ಸೆಸ್‍ ನ ನುಸುಳಿಕೆ ಇನ್ನಷ್ಟು ತೀವ್ರಗೊಳ್ಳುವುದು ಖಂಡಿತ. ಇದು, ಸಂವಿಧಾನಿಕ ಗಣತಂತ್ರವನ್ನು ಆರೆಸ್ಸೆಸ್‍ ನ ಸೈದ್ಧಾಂತಿಕ ಯೋಜನೆಯಾದ ‘ಹಿಂದೂರಾಷ್ಟ್ರ’ವಾಗಿ ಪರಿವರ್ತಿಸಲು ಅನುವುಮಾಡಿಕೊಳ್ಳುವುದಕ್ಕಾಗಿ, ಇಂತಹ ಸಂವಿಧಾನಿಕ ಪ್ರಾಧಿಕಾರಗಳನ್ನು ಶಿಥಿಲಗೊಳಿಸುವ ದಿಕ್ಕಿನಲ್ಲಿ ಸಾಗಲಿದೆ. ಎಲ್ಲ ಸಂವಿಧಾನಿಕ ಪ್ರಾಧಿಕಾರಗಳನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಸಿಪಿಐ(ಎಂ) ಈ ಹೋರಾಟಗಳಲ್ಲಿ ಜತೆಗೂಡಲು ಸಿದ್ಧವಿರುವ ಇತರ ಎಲ್ಲ ಶಕ್ತಿಗಳೊಂದಿಗೆ ಪ್ರತಿಪಾದಿಸುತ್ತದೆ.
  4. ಬಿಜೆಪಿಯ ವಿಜಯವು ಭಾರತದಲ್ಲಿ ಒಂದು “ಭದ್ರತಾ’ ಪ್ರಭುತ್ವವನ್ನು ಸ್ಥಾಪಿಸುವ ಅಗತ್ಯವಿದೆಯೆಂಬುದರತ್ತ ಗಮನ ಕೇಂದ್ರೀಕರಿಸಿತ್ತು. ಇದರಿಂದಾಗಿ ವ್ಯಕ್ತಿಗಳ ಹಕ್ಕುಗಳನ್ನು, ನಿರ್ದಿಷ್ಟವಾಗಿ ಭಿನ್ನಾಭಿಪ್ರಾಯದ ಹಕ್ಕನ್ನುತೀವ್ರವಾಗಿ ಮೊಟಕುಗೊಳಿಸಲಾಗುತ್ತದೆ. ಈಗಾಗಲೇ ಅನಿಷ್ಟಕಾರಿ ಸಂಕೇತಗಳು ಕಾಣುತ್ತಿವೆ. ಒಂದಿಲ್ಲೊಂದುನೆ ಪದಲ್ಲಿ ದಲಿತರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಖಾಸಗಿಪಡೆಗಳ ಹಲ್ಲೆಗಳು ತೀವ್ರಗೊಳ್ಳಲಿವೆ. ದುಡಿಯುವ ಜನಗಳ ಮತ್ತು ಧಾರ್ಮಿಕ, ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳು ದಾಳಿಗೆ ಒಳಗಾಗಲಿವೆ, ಅವರ ಬೇಟೆ ನಡೆಯಲಿದೆ.

ಈ ಸವಾಲುಗಳನ್ನುನೇರವಾಗಿ ಎದುರಿಸಲು, ಪ್ರಜಾಪ್ರಭುತ್ವ ಮತ್ತು ನಾಗರಿಕ ಸ್ವಾತಂತ್ರ್ಯಗಳನ್ನು ನೆಚ್ಚಿಕೊಂಡಿರುವ ಸಾಧ್ಯವಾದಷ್ಟು ವಿಶಾಲವಾದ ಜನವಿಭಾಗಗಳನ್ನು ಅಣಿ ನೆರೆಸುವಲ್ಲಿ ಸಿಪಿಐ(ಎಂ) ನೇತೃತ್ವವಹಿಸುತ್ತದೆ.

ಕಾರ್ಯಭಾರಗಳು

ಪಕ್ಷಕ್ಕೆ ಈ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

  1. ಜನಗಳೊಂದಿಗೆ ಸಂಪರ್ಕವನ್ನು ಆಳಗೊಳಿಸಲು ಮತ್ತು ವಿವಿಧರಂಗಗಳ ಚಟುವಟಿಕೆಗಳನ್ನು ಬಲಪಡಿಸಲು ನಿರ್ದಿಷ್ಟಕ್ರಮಗಳನ್ನು ನಿರ್ಧರಿಸಲಾಗಿದೆ. ಜೀವನಾಧಾರದ ಪ್ರಶ್ನೆಗಳನ್ನು ಕುರಿತ ಹೋರಾಟಗಳನ್ನು, ಪರಿಶಿಷ್ಟಜಾತಿಗಳು, ಪರಿಶಿಷ್ಟ ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಸಾಮಾಜಿಕ ದಮನದ ವಿರುದ್ಧ ಹೋರಾಟಗಳೊಂದಿಗೆ ಸಮಗ್ರೀಕರಿಸಲು ನಿರ್ದಿಷ್ಟ ಗಮನವನ್ನು ಕೊಡಲಾಗುವುದು.
  2. ಪಕ್ಷವು 2015ರಲ್ಲಿ ಕೊಲ್ಕತಾಪ್ಲೀನಂನಲ್ಲಿ ಅಂಗೀಕರಿಸಿದ ಪಕ್ಷದ ಸಂಘಟನೆ ಮತ್ತು ಅದರ ಕಾರ್ಯವೈಖರಿ ಕುರಿತ ಮಹತ್ವದ ನಿರ್ಣಯಗಳ ಜಾರಿಯ ಒಂದು ಪರಾಮರ್ಶೆಯನ್ನು ನಡೆಸುತ್ತದೆ. ಆಗಸ್ಟ್ಕೊನೆಯ ವೇಳೆಗೆ ರಾಜ್ಯಗಳು ಈ ಪರಾಮರ್ಶೆಯನ್ನು ಪೂರ್ಣಗೊಳಿಸಲಿದ್ದು, ಇದರ ಆಧಾರದಲ್ಲಿ ಪಕ್ಷವನ್ನು ಬಲಿಷ್ಟಗೊಳಿಸುವ ಮತ್ತು ನಮ್ಮ ಕಾರ್ಯಕರ್ತರಲ್ಲಿ ಹುರುಪು ತುಂಬುವ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
  3. ಈ ಚುನಾವಣೆಗಳ ಅನುಭವವು ವ್ಯಾಪಕವಾದ ಚುನಾವಣಾ ಸುಧಾರಣೆಗಳ ಅಗತ್ಯವನ್ನು, ಚುನಾವಣಾ ಆಯೋಗವನ್ನು ಸುಧಾರಿಸಬೇಕಾದ ತುರ್ತನ್ನು ತೋರಿದೆ. ಚುನಾವಣಾ ಆಯುಕ್ತರುಗಳನ್ನು ತತ್ಕಾಲೀನ ಸರಕಾರ ನೇಮಿಸುವ ಬದಲು ಭಾರತದ ರಾಷ್ಟ್ರಪತಿಗಳ ನೇತೃತ್ವದ ಒಂದು ವ್ಯವಸ್ಥೆಯ ಮೂಲಕ ನೇಮಿಸುವಂತೆ ಮಾಡಲು, ಇದನ್ನು ಒಪ್ಪುವ ಎಲ್ಲ ರಾಜಕಿಯ ಅಭಿಪ್ರಾಯದವರನ್ನು ಸಿಪಿಐ(ಎಂ) ಅಣಿನೆರೆಸುತ್ತದೆ.
  4. ಇಲೆಕ್ಟ್ರಾನಿಕ್ಮತಯಂತ್ರ(ಇವಿಎಂ)ಗಳ ತಟಸ್ಥತೆಯ ಕುರಿತಂತೆ ಇರುವ ವಿವಿಧ ದೂರುಗಳು ಮತ್ತು ಈ ಯಂತ್ರಗಳಲ್ಲಿ ಕೈಯಾಡಿಸುವ ಸಾಧ್ಯತೆಯ ಬಗ್ಗೆ ಎದ್ದಿರುವ ಸಂದೇಹಗಳನ್ನು ಕುರಿತ ವರದಿಗಳ ಒಂದು ಅಧ್ಯಯನವನ್ನು ಸಿಪಿಐ(ಎಂ) ನಡೆಸುತ್ತದೆ ಮತ್ತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುತ್ತದೆ.

ಜಾತ್ಯತೀತ ಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಚುನಾವಣೆಗಳ ನಂತರ ಬೆದರಿಕೆಯ ಕರೆಗಳನ್ನು ಮಾಡಿರುವುದನ್ನು ಕೇಂದ್ರ ಸಮಿತಿ ಖಂಡಿಸಿದೆ.ಒಬ್ಬ ಯುವಪರಿಶಿಷ್ಟ ಬುಡಕಟ್ಟಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ. ಪಾಯಲ್‍ ತಡ್ವಿಯ ಆತ್ಮಹತ್ಯೆಯ ಬಗ್ಗೆ ಕೇಂದ್ರ ಸಮಿತಿ ತನ್ನ ದುಃಖವನ್ನು ವ್ಯಕ್ತಪಡಿಸಿದೆ. ಜಾತಿ ಕಿರುಕುಳಗಳು ಆಕೆಯನ್ನು ಆತ್ಮಹತ್ಯೆಯ ತ್ತತಳ್ಳಿದವು. ಮಹಾರಾಷ್ಟ್ರ ರಾಜ್ಯ ಸರಕಾರ ಅಪರಾಧಿಗಳ ವಿರುದ್ಧ ಮತ್ತು ಇಂತಹ ದ್ವೇಷಪ್ರಚಾರಗಳನ್ನು ಹುಟ್ಟಿಹಾಕುವವರ ವಿರುದ್ಧ ದೃಢವಾದ ಕ್ರಮವನ್ನು ಕೈಗೊಳ್ಳಬೇಕು.

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್| 9980346243

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.

ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

Published

on

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.

ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.

ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending