ದಿನದ ಸುದ್ದಿ
ದಾವಣಗೆರೆ | ಗಣಿ-ಕಲ್ಲು, ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ಗಳಿಗೆ ಅನುಮತಿ
ಸುದ್ದಿದಿನ,ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್ಡೌನ್ ಅವಧಿಯಲ್ಲಿ ಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವ ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಜಿಲ್ಲೆಯ ವ್ಯಾಪಿಯಲ್ಲಿ ಮಾತ್ರ ಅನುಮತಿಯನ್ನು ನೀಡಿದೆ.
ಷರತ್ತುಗಳು
- ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಮಾನ್ಯ ಭಾರತ ಸರ್ಕಾರ ಜಾರಿಗೊಳಿಸಿದ ಎಲ್ಲಾ ವಿಧಾನಗಳನ್ನು ಕಾರ್ಮಿಕರು ಅಳವಡಿಸಿಕೊಂಡು ಸುರಕ್ಷತೆ ಕಾಪಾಡಿಕೊಳ್ಳುವುದು.
- ಕಾರ್ಮಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.
- ಶೌಚಾಲಯ, ವಾಟರ್ ಪಂಪ್ ಮುಂತಾದ ಕಡೆ ಕಡ್ಡಾಯವಾಗಿ ಸೋಪ್ ಮತ್ತು ಸ್ಯಾನಿಟೈಸರ್ ಬಳಸುವುದು.
- ಸ್ಥಳೀಯರನ್ನು ಮಾತ್ರ ಬಳಸಿಕೊಳ್ಳವುದು. ಹೊರ ಪ್ರದೇಶದಿಂದ ಕಾರ್ಮಿಕರನ್ನು ಕರೆತರುವಂತಿಲ್ಲ.
- ಕಾರ್ಮಿಕರು ಮಾಸ್ಕ್ ಮತ್ತು ಗ್ಲೌಸ್ ಧರಿಸುವುದು.
- ಗಣಿಗಾರಿಕೆ/ಕ್ರಷರ್ ಪ್ರದೇಶಗಳಲ್ಲಿ 05 ಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ.
- 60 ವರ್ಷ ಮೇಲ್ಪಟ್ಟ, ದೃಷ್ಟಿಹೀನ, ಅಂಗವೈಕಲ್ಯ ಹೊಂದಿರುವ ಹಾಗೂ 14 ವರ್ಷದ ಒಳಪಟ್ಟ ಮಕ್ಕಳನ್ನು ಹಾಗೂ ಅನಾರೋಗ್ಯ ಪೀಡಿತರನ್ನು ನಿರ್ಬಂಧಿಸಬೇಕು.
- ಕಾರ್ಮಿಕರಿಗೆ ಕಡ್ಡಾಯವಾಗಿ ಆರೋಗ್ಯ ವಿಮೆಯನ್ನು ಮಾಡಿಸುವುದು.
- ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವುದು. ಕಾರ್ಮಿಕರಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿಯನ್ನು ಮೂಡಿಸುವುದು.
- ಬೆಳಿಗ್ಗೆ 06 ರಿಂದ ಸಂಜೆ 06 ರವರೆಗೆ ಮಾತ್ರ ಕೆಲಸ ನಿರ್ವಹಿಸುವುದು.
- ಶೀತ, ಕೆಮ್ಮು, ಜ್ವರ ರೋಗದ ಲಕ್ಷಣಗಳು ಕಂಡು ಬಂದರೆ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 1077 ಗೆ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಮಾಹಿತಿಯನ್ನು ನೀಡುವುದು.
ಈ ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 58 ಹಾಗೂ ಐ.ಪಿ.ಸಿ ಸೆಕ್ಷನ್ 188ರ ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243