Connect with us

ದಿನದ ಸುದ್ದಿ

ದೇಹ ಮನಸ್ಸು ಹೃದಯವೇ ಬಹು ಡೊಡ್ಡ ಸಂಪತ್ತು : ಡಾ. ಸಿದ್ದೇಶ್ವರನ್

Published

on

ಸುದ್ದಿದಿನ, ಮಲೆಬೆನ್ನೂರು : ತನು ಮನ ಧನದ ಸಮರ್ಪಕ ಬಳಕೆಯ ಅರಿವು ಇರುವ ವ್ಯಕ್ತಿ ಮಾತ್ರ ಜೀವನದಲ್ಲಿ ಸಂಪೂರ್ಣ ಯಶಸ್ಸನ್ನು ಗಳಿಸಬಲ್ಲನು. ಆದ್ದರಿಂದ ಮನೆಯಲ್ಲಿ ಪೋಷಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಈ ಅರಿವನ್ನು ಮೂಡಿಸಬೇಕು ಎಂದು ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರೊಫೆಸರ್ ಹಾಗೂ ಹಾರ್ಟ್ ಫುಲ್ ನೆಸ್ಸ್ ಧ್ಯಾನ ತರಬೇತುದಾರರಾದ ಡಾ. ಸಿದ್ದೇಶ್ವರನ್ ಅವರು ಸಲಹೆ ನೀಡಿದರು.

ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯಲ್ಲಿರುವ ಒಡೆಯರ ಬಸವಾಪುರದ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ದಿನಾಂಕ: 24/12/2022 ರ ಸಂಜೆ 4.30 ಕ್ಕೆ ನಡೆದ 17 ನೇ ವರ್ಷದ ಕಲ್ಚರಲ್ ಫೆಸ್ಟ್ – ಮೆಗಾ ಇವೆಂಟ್ : ಸಾಂಸ್ಕೃತಿಕ ಉತ್ಸವವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಹೃದಯವೇ ನಮ್ಮ ಬಹು ದೊಡ್ಡ ಸಂಪತ್ತು . ಇದರ ಸದ್ಭಳಕೆ ಮಾಡಿಕೊಳ್ಳುವುದೇ ದೊಡ್ಡ ಸಾಧನೆ. ಈ ಕುರಿತು ಮಕ್ಕಳಿಗೆ ತಿಳಿಸಿಕೊಡುವುದು ಹಿರಿಯರ ಕರ್ತವ್ಯ. ಇದುವೇ ಮೂಲ ಶಿಕ್ಷಣ ಎಂದು ವಿವರಿಸಿದರು.

ಮತ್ತೋರ್ವ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿಕ್ಷಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಂಗ್ಲ ಭಾಷಾ ವಿಷಯದ ಸಂಪನ್ಮೂಲ ವ್ಯಕ್ತಿ ಕಲಿವೀರ ಕಳ್ಳಿಮನಿ ಮಾತನಾಡಿ, ಸರಿ ತಪ್ಪಿನ ಅರಿವೇ ವ್ಯಕ್ತಿತ್ವ ವಿಕಸನದ ಮೂಲ. ಸರಿ ಮತ್ತು ತಪ್ಪುಗಳ ಅರಿವು ಇರುವ ಮನುಷ್ಯ ತನ್ನ ವ್ಯಕ್ತಿತ್ವವನ್ನು ಉಜ್ವಲವಾಗಿ ನಿರ್ಮಿಸಿಕೊಳ್ಳಬಲ್ಲನು. ಈ ದಿಸೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಬೇಕು – ಬೇಡಗಳ ಆಯ್ಕೆಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಶಿಕ್ಷಣ ವೈಯುಕ್ತಿಕವಾಗಿ ತನ್ನ ಬದುಕನ್ನು ಕಟ್ಟಿಕೊಂಡು ತನ್ನವರ ಬದುಕಿಗೆ ಆಸರೆ ಆಗುವುದನ್ನು ಕಲಿಸಬೇಕು. ಅದರ ಕೊರತೆಯ ಕಾರಣ ವೃದ್ದಾಶ್ರಮಗಳ ಸಂಖ್ಯೆ ಪ್ರಸ್ತುತ ಹೆಚ್ಚಿದೆ. ಅದು ತಗ್ಗ ಬೇಕಾದರೆ ಮಕ್ಕಳು ಹೆತ್ತವರನ್ನು ಪ್ರೀತಿಸುವ ಪ್ರೇರಣೆಯನ್ನು ಶಿಕ್ಷಣ ನೀಡಬೇಕು ಎಂದರು.

ಬೆಳಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮವನ್ನು ಸಸ್ಯಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ, ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದ ದಾವಣಗೆರೆ ಸರ್ಕಾರಿ ಪ.ಪೂ ಕಾಲೇಜಿನ ಶಿಕ್ಷಕ ಹಾಗೂ ಶಿಕ್ಷಣ ಕ್ಷೇತ್ರದ ಆಂಗ್ಲ ಭಾಷಾ ವಿಷಯದ ಸಂಪನ್ಮೂಲ ವ್ಯಕ್ತಿಯಾದ ಗೋವಿಂದ್ ರಾಜು ಅವರು, ಸೋಲಿನ ಅರಿವಿಲ್ಲದೆ ಗೆಲುವು ಅಸಾಧ್ಯ. ಸೋತಾಗ ಎದೆಗುಂದದೆ ಗೆಲ್ಲುವುದನ್ನು ರೂಢಿಸಿಕೊಂಡರೆ ಶಾಶ್ವತ ಯಶಸ್ಸು ದಕ್ಕುತ್ತದೆ. ಪ್ರಪಂಚ ಮೊದಲು ವ್ಯಕ್ತಿತ್ವವನ್ನು ಗುರುತಿಸುತ್ತದೆ. ನಂತರ ಸಾಧನೆಯನ್ನು ಹೊಗಳುತ್ತದೆ. ಅಂತಹ ವ್ಯಕ್ತಿತ್ವ ಮತ್ತು ಸಾಧನೆ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.

ಬೆಳಗಿನ ಮತ್ತು ಸಂಜೆಯ ಕಾರ್ಯಕ್ರಮದಲ್ಲಿ ಶೈಕ್ಷಣಿಕ ವರ್ಷದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಚಾಂಪಿಯನ್ಸ್ ಗಳಿಗೆ ಅಭಿನಂದನಾ ಪತ್ರ, ಮೆಡೆಲ್ , ಶೀಲ್ಡ್ ವಿತರಿಸಿ ಅಭಿನಂದಿಸಲಾಯಿತು.

ಹಿಂದಿನ ವರ್ಷಗಳ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಂಸ್ಥೆಯ ಟಾಪರ್ ಆಗಿ ಹೊರ ಹೊಮ್ಮಿದ್ದ 13 ವಿದ್ಯಾರ್ಥಿಗಳನ್ನು ಆಹ್ವಾನಿಸಿ ಗೌರವಿಸಿದ ಕಾರ್ಯ ಸಂಸ್ಥೆಯ ವಿಶೇಷ ಕಾಳಜಿಗೆ ಸಾಕ್ಷಿ ಎನಿಸಿತು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಚೆಂದ ಮೂಡಿ ಬಂದವು. ಶಿವ ತಾಂಡವ, ಸುಗ್ಗಿ ಹಾಡು, ಕೋಲಾಟ, ಚಾರ್ಲಿ ಚಾಪ್ಲಿನ್ ಡಾನ್ಸ್ , ಹೆಣ್ಣು ಭ್ರೂಣ ಹತ್ಯೆ, ಅನಕ್ಷರತೆ, ಕಲಿಕಾ ದೋಷ ನಿವಾರಣೆಯ ಸಂದೇಶ ಸಾರಿದ ನೃತ್ಯ ರೂಪಕ ಇತ್ಯಾದಿಗಳು ವಿದ್ಯಾರ್ಥಿಗಳ ಜಾಣ್ಮೆ, ಕಲೆ ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸಿದವು. ” ತೊಲಗಲಿ ತ್ರಾಸ – ಮಿನುಗಲಿ ರೈತನ ಮೊಗದಲಿ ಮಂದಹಾಸ ” ಎಂಬ ಶೀರ್ಷಿಕೆಯಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಿರು ನಾಟಕ ಪ್ರಸ್ತುತ ರೈತಾಪಿ ವರ್ಗದ ಬವಣೆ ತೆರೆದಿಡುವ ಜೊತೆ ಪರಿಹಾರೋಪಾಯದ ಆಶಯ ವ್ಯಕ್ತಪಡಿಸಿತು.

ಸಂಸ್ಥೆಯ ಕಾರ್ಯದರ್ಶಿ ಶಿವಾನಂದಪ್ಪ ಜಿ.ಬಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಸುಜಾತ ಶಿವಾನಂದಪ್ಪ , ಮುಖ್ಯೋಪಾಧ್ಯಾಯ ಶಶಿಧರ್ ಎಸ್ ವೇದಿಕೆಯಲ್ಲಿದ್ದರು.

ಶಿಕ್ಷಕರಾದ ರವೀಂದ್ರ, ಆಸೀಫುಲ್ಲಾ, ಶಿಕ್ಷಕಿಯರಾದ ಕವಿತಾ ಕೊಮಾರನಹಳ್ಳಿ, ಪ್ರತಿಭಾ ಜಗದೀಶ್ , ಶಾಂತಾ, ಭಾಗ್ಯ ರೇಣುಕಾ ಪ್ರಸನ್ನ, ಅನುಷಾ, ಚಂದನ, ಜಯಲಕ್ಷ್ಮೀ, ಸಂಗೀತ ಕಾರ್ಯಕ್ರಮದ ಶಿಸ್ತು ನಿರ್ವಹಿಸಿದರು.

ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ವೀಕ್ಷಕರು ನೆರೆದಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending