Connect with us

ದಿನದ ಸುದ್ದಿ

ದೇಹ ಮನಸ್ಸು ಹೃದಯವೇ ಬಹು ಡೊಡ್ಡ ಸಂಪತ್ತು : ಡಾ. ಸಿದ್ದೇಶ್ವರನ್

Published

on

ಸುದ್ದಿದಿನ, ಮಲೆಬೆನ್ನೂರು : ತನು ಮನ ಧನದ ಸಮರ್ಪಕ ಬಳಕೆಯ ಅರಿವು ಇರುವ ವ್ಯಕ್ತಿ ಮಾತ್ರ ಜೀವನದಲ್ಲಿ ಸಂಪೂರ್ಣ ಯಶಸ್ಸನ್ನು ಗಳಿಸಬಲ್ಲನು. ಆದ್ದರಿಂದ ಮನೆಯಲ್ಲಿ ಪೋಷಕರು ಹಾಗೂ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಈ ಅರಿವನ್ನು ಮೂಡಿಸಬೇಕು ಎಂದು ದಾವಣಗೆರೆ ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರೊಫೆಸರ್ ಹಾಗೂ ಹಾರ್ಟ್ ಫುಲ್ ನೆಸ್ಸ್ ಧ್ಯಾನ ತರಬೇತುದಾರರಾದ ಡಾ. ಸಿದ್ದೇಶ್ವರನ್ ಅವರು ಸಲಹೆ ನೀಡಿದರು.

ಮಲೇಬೆನ್ನೂರು ಪಟ್ಟಣದ ಜಿಗಳಿ ರಸ್ತೆಯಲ್ಲಿರುವ ಒಡೆಯರ ಬಸವಾಪುರದ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ದಿನಾಂಕ: 24/12/2022 ರ ಸಂಜೆ 4.30 ಕ್ಕೆ ನಡೆದ 17 ನೇ ವರ್ಷದ ಕಲ್ಚರಲ್ ಫೆಸ್ಟ್ – ಮೆಗಾ ಇವೆಂಟ್ : ಸಾಂಸ್ಕೃತಿಕ ಉತ್ಸವವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಹೃದಯವೇ ನಮ್ಮ ಬಹು ದೊಡ್ಡ ಸಂಪತ್ತು . ಇದರ ಸದ್ಭಳಕೆ ಮಾಡಿಕೊಳ್ಳುವುದೇ ದೊಡ್ಡ ಸಾಧನೆ. ಈ ಕುರಿತು ಮಕ್ಕಳಿಗೆ ತಿಳಿಸಿಕೊಡುವುದು ಹಿರಿಯರ ಕರ್ತವ್ಯ. ಇದುವೇ ಮೂಲ ಶಿಕ್ಷಣ ಎಂದು ವಿವರಿಸಿದರು.

ಮತ್ತೋರ್ವ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿಕ್ಷಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಂಗ್ಲ ಭಾಷಾ ವಿಷಯದ ಸಂಪನ್ಮೂಲ ವ್ಯಕ್ತಿ ಕಲಿವೀರ ಕಳ್ಳಿಮನಿ ಮಾತನಾಡಿ, ಸರಿ ತಪ್ಪಿನ ಅರಿವೇ ವ್ಯಕ್ತಿತ್ವ ವಿಕಸನದ ಮೂಲ. ಸರಿ ಮತ್ತು ತಪ್ಪುಗಳ ಅರಿವು ಇರುವ ಮನುಷ್ಯ ತನ್ನ ವ್ಯಕ್ತಿತ್ವವನ್ನು ಉಜ್ವಲವಾಗಿ ನಿರ್ಮಿಸಿಕೊಳ್ಳಬಲ್ಲನು. ಈ ದಿಸೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ಬೇಕು – ಬೇಡಗಳ ಆಯ್ಕೆಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಶಿಕ್ಷಣ ವೈಯುಕ್ತಿಕವಾಗಿ ತನ್ನ ಬದುಕನ್ನು ಕಟ್ಟಿಕೊಂಡು ತನ್ನವರ ಬದುಕಿಗೆ ಆಸರೆ ಆಗುವುದನ್ನು ಕಲಿಸಬೇಕು. ಅದರ ಕೊರತೆಯ ಕಾರಣ ವೃದ್ದಾಶ್ರಮಗಳ ಸಂಖ್ಯೆ ಪ್ರಸ್ತುತ ಹೆಚ್ಚಿದೆ. ಅದು ತಗ್ಗ ಬೇಕಾದರೆ ಮಕ್ಕಳು ಹೆತ್ತವರನ್ನು ಪ್ರೀತಿಸುವ ಪ್ರೇರಣೆಯನ್ನು ಶಿಕ್ಷಣ ನೀಡಬೇಕು ಎಂದರು.

ಬೆಳಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮವನ್ನು ಸಸ್ಯಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ, ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದ ದಾವಣಗೆರೆ ಸರ್ಕಾರಿ ಪ.ಪೂ ಕಾಲೇಜಿನ ಶಿಕ್ಷಕ ಹಾಗೂ ಶಿಕ್ಷಣ ಕ್ಷೇತ್ರದ ಆಂಗ್ಲ ಭಾಷಾ ವಿಷಯದ ಸಂಪನ್ಮೂಲ ವ್ಯಕ್ತಿಯಾದ ಗೋವಿಂದ್ ರಾಜು ಅವರು, ಸೋಲಿನ ಅರಿವಿಲ್ಲದೆ ಗೆಲುವು ಅಸಾಧ್ಯ. ಸೋತಾಗ ಎದೆಗುಂದದೆ ಗೆಲ್ಲುವುದನ್ನು ರೂಢಿಸಿಕೊಂಡರೆ ಶಾಶ್ವತ ಯಶಸ್ಸು ದಕ್ಕುತ್ತದೆ. ಪ್ರಪಂಚ ಮೊದಲು ವ್ಯಕ್ತಿತ್ವವನ್ನು ಗುರುತಿಸುತ್ತದೆ. ನಂತರ ಸಾಧನೆಯನ್ನು ಹೊಗಳುತ್ತದೆ. ಅಂತಹ ವ್ಯಕ್ತಿತ್ವ ಮತ್ತು ಸಾಧನೆ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.

ಬೆಳಗಿನ ಮತ್ತು ಸಂಜೆಯ ಕಾರ್ಯಕ್ರಮದಲ್ಲಿ ಶೈಕ್ಷಣಿಕ ವರ್ಷದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಚಾಂಪಿಯನ್ಸ್ ಗಳಿಗೆ ಅಭಿನಂದನಾ ಪತ್ರ, ಮೆಡೆಲ್ , ಶೀಲ್ಡ್ ವಿತರಿಸಿ ಅಭಿನಂದಿಸಲಾಯಿತು.

ಹಿಂದಿನ ವರ್ಷಗಳ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಂಸ್ಥೆಯ ಟಾಪರ್ ಆಗಿ ಹೊರ ಹೊಮ್ಮಿದ್ದ 13 ವಿದ್ಯಾರ್ಥಿಗಳನ್ನು ಆಹ್ವಾನಿಸಿ ಗೌರವಿಸಿದ ಕಾರ್ಯ ಸಂಸ್ಥೆಯ ವಿಶೇಷ ಕಾಳಜಿಗೆ ಸಾಕ್ಷಿ ಎನಿಸಿತು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಚೆಂದ ಮೂಡಿ ಬಂದವು. ಶಿವ ತಾಂಡವ, ಸುಗ್ಗಿ ಹಾಡು, ಕೋಲಾಟ, ಚಾರ್ಲಿ ಚಾಪ್ಲಿನ್ ಡಾನ್ಸ್ , ಹೆಣ್ಣು ಭ್ರೂಣ ಹತ್ಯೆ, ಅನಕ್ಷರತೆ, ಕಲಿಕಾ ದೋಷ ನಿವಾರಣೆಯ ಸಂದೇಶ ಸಾರಿದ ನೃತ್ಯ ರೂಪಕ ಇತ್ಯಾದಿಗಳು ವಿದ್ಯಾರ್ಥಿಗಳ ಜಾಣ್ಮೆ, ಕಲೆ ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸಿದವು. ” ತೊಲಗಲಿ ತ್ರಾಸ – ಮಿನುಗಲಿ ರೈತನ ಮೊಗದಲಿ ಮಂದಹಾಸ ” ಎಂಬ ಶೀರ್ಷಿಕೆಯಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಕಿರು ನಾಟಕ ಪ್ರಸ್ತುತ ರೈತಾಪಿ ವರ್ಗದ ಬವಣೆ ತೆರೆದಿಡುವ ಜೊತೆ ಪರಿಹಾರೋಪಾಯದ ಆಶಯ ವ್ಯಕ್ತಪಡಿಸಿತು.

ಸಂಸ್ಥೆಯ ಕಾರ್ಯದರ್ಶಿ ಶಿವಾನಂದಪ್ಪ ಜಿ.ಬಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಸುಜಾತ ಶಿವಾನಂದಪ್ಪ , ಮುಖ್ಯೋಪಾಧ್ಯಾಯ ಶಶಿಧರ್ ಎಸ್ ವೇದಿಕೆಯಲ್ಲಿದ್ದರು.

ಶಿಕ್ಷಕರಾದ ರವೀಂದ್ರ, ಆಸೀಫುಲ್ಲಾ, ಶಿಕ್ಷಕಿಯರಾದ ಕವಿತಾ ಕೊಮಾರನಹಳ್ಳಿ, ಪ್ರತಿಭಾ ಜಗದೀಶ್ , ಶಾಂತಾ, ಭಾಗ್ಯ ರೇಣುಕಾ ಪ್ರಸನ್ನ, ಅನುಷಾ, ಚಂದನ, ಜಯಲಕ್ಷ್ಮೀ, ಸಂಗೀತ ಕಾರ್ಯಕ್ರಮದ ಶಿಸ್ತು ನಿರ್ವಹಿಸಿದರು.

ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ವೀಕ್ಷಕರು ನೆರೆದಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

Published

on

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending