ದಿನದ ಸುದ್ದಿ
ನಾಲ್ಕು ದಿನಗಳಲ್ಲಿ 2ನೇ ಸಲ ‘ಐಪಿಎಸ್ ಅಧಿಕಾರಿ ರೂಪಾ’ರಿಂದ ವಂಚನೆ ದೂರು ಸಲ್ಲಿಕೆ..!
ಸುದ್ದಿದಿನ, ಬೆಂಗಳೂರು : ‘ಡಿ_ರೂಪಾ_ಐಪಿಎಸ್’ ಹೆಸರಿನಲ್ಲಿ ‘ಇನ್ಸ್ಟಾಗ್ರಾಂ’ನಲ್ಲಿ ನಕಲಿ ಖಾತೆ ತೆರೆದಿದ್ದ ಅಪರಿಚಿತರು, ‘ಬಡ ಹೆಣ್ಣು ಮಕ್ಕಳ ಏಳಿಗೆಗೆ ಸಹಾಯ ಮಾಡಿ’ ಎಂಬ ಪೋಸ್ಟ್ ಹಾಕಿದ್ದರು. ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ‘ನಾನು ಯಾವುದೇ ಇನ್ಸ್ಟಾಗ್ರಾಂ ಖಾತೆ ಹೊಂದಿಲ್ಲ. ಯಾರೂ ಹಣ ಹಾಕಬೇಡಿ’ ಎಂದು ಟ್ವೀಟ್ ಮೂಲಕ ರೂಪಾ ಸ್ಪಷ್ಟಪಡಿಸಿದ್ದರು.ಈ ಸಂಬಂಧ 2018ರ ಡಿ.30ರಂದು ಸೈಬರ್ ಕ್ರೈಂ ಠಾಣೆಗೂ ದೂರು ನೀಡಿದ್ದರು ರೂಪಾ.
ಬೆಂಗಳೂರಿನಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಹೆಸರಿನಲ್ಲಿ ವಂಚನೆ ಮಾಡಿದ್ದು, ಮಹಿಳೆಯೊಬ್ಬರು ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಲಖನೌ ಪೊಲೀಸರಿಗೆ ಕರೆಮಾಡಿನಾನು ಗೃಹರಕ್ಷಕದಳದ ಐಜಿಪಿ ಡಿ.ರೂಪಾ ಮಾತನಾಡುತ್ತಿದ್ದೇನೆ. ಕೆಲಸದ ನಿಮಿತ್ತ ಲಖನೌಗೆ ಬರುತ್ತಿದ್ದೇನೆ.ಡಿ.29ರಿಂದ ಜ.3ರವರೆಗೆ ಹೋಟೆಲ್ನಲ್ಲಿ ರೂಂ ಬುಕ್ ಮಾಡಿ ಎಂದು ಹೇಳಿದ್ದರು ಆ ಮಹಿಳೆ.
This is not my account. I'm not on Instagram. This is brought to my notice only now. Will complain to Cyber crime police station @CIDKarnataka . Meanwhile request those on @instagram to report this issue https://t.co/DBYNDzzTog
— D Roopa IPS (@D_Roopa_IPS) December 28, 2018
ಅವರ ಮಾತನ್ನು ನಂಬಿದ್ದ ಅಧಿಕಾರಿ, ರೂಂ ಬುಕ್ ಮಾಡಿದ್ದರು. ಈ ಬಗ್ಗೆ ಪರಿಚಯದ ಅಧಿಕಾರಿ ವಿಕಾಸ್ ಚಂದ್ರ ತ್ರಿಪಾಠಿ ರೂಪಾಗೆ ಕರೆ ಮಾಡಿ ವಿಚಾರಿಸಿದಾಗ ಕೃತ್ಯ ಬಯಲಾಗಿದೆ. ನಾನು ರೂಂ ಬುಕ್ ಮಾಡುವಂತೆ ಯಾರಿಗೂ ಕರೆ ಮಾಡಿಲ್ಲವಲ್ಲ ಎಂದಿದ್ದ ರೂಪಾ. ಯಾರೋ ನಿಮ್ಮ ಹೆಸರು ಹೇಳಿಕೊಂಡು 9449990544 ಸಂಖ್ಯೆಯಿಂದ ಕರೆ ಮಾಡಿದ್ದರು ಎಂದಿದ್ದರು ತ್ರಿಪಾಠಿ. ಬಳಿಕ ಆ ಸಂಖ್ಯೆಗೆ ಕರೆ ಮಾಡಿದ್ದ ಅಧಿಕಾರಿ ರೂಪಾ ಅವರು ಆ ಮಹಿಳೆ ಸರಿಯಾಗಿ ಮಾತನಾಡದ ಕಾರಣ ಬನಶಂಕರಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ ರೂಪಾ.
Posted by We Support D Roopa IPS on Saturday, 29 December 2018
ಮೊಬೈಲ್ ಸಂಖ್ಯೆಯ ಮೂಲ ಪತ್ತೆ ಹಚ್ಚಿರುವ ಪೊಲೀಸರು ಮಂಗಳೂರಿನ ಬಲ್ಮಠದಲ್ಲಿರುವ ಚಿರಾಗ್’ ಅಪಾರ್ಟ್ಮೆಂಟ್ ನಿವಾಸಿ ಮಹಿಳೆಯ ನಂಬರ್ ಅದಾಗಿತ್ತು, ಆದರೆ ತಿಂಗಳ ಹಿಂದೆಯೇ ನನ್ನ ಮೊಬೈಲ್ ಕಳೆದುಹೋಗಿತ್ತು ಎಂದಿರೋ ಮಹಿಳೆ, ಈ ಸಂಬಂಧ ಪಾಂಡೇಶ್ವರ ಠಾಣೆಗೆ ದೂರು ಕೊಟ್ಟಿದಾಗಿ ಹೇಳಿದ್ದಾರೆ.
Gave complaint to cyber crime police to register FIR for the Instagram fraud @BlrCityPolice. I sincerely hope @instagram deactivates this account also. pic.twitter.com/6b6GpCQX9A
— D Roopa IPS (@D_Roopa_IPS) December 29, 2018
ಎಫ್ಐಆರ್ ಹಾಗೂ ದೂರು ಸ್ವೀಕೃತಿ ಅರ್ಜಿಯನ್ನು ಬಿಎಸ್ಎನ್ಎಲ್ ಕಚೇರಿಗೆ ಸಲ್ಲಿಸಿ, ಅದೇ ಸಂಖ್ಯೆಯ ಹೊಸ ಸಿಮ್ ಖರೀದಿಸಿದ್ದೇನೆ’ ಎಂದು ಹೇಳಿಕೆ ಕೊಟ್ಟಿದ್ದಾರೆ ಮಹಿಳೆ. ಆದರೆ, ಕರೆ ಹೋದ ದಿನ ಆ ಮೊಬೈಲ್ ಸಂಖ್ಯೆಯನ್ನು ಅದೇ ಮಹಿಳೆ ಬಳಸುತ್ತಿದ್ದರೋ? ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


