ದಿನದ ಸುದ್ದಿ
ನಾಲ್ಕು ದಿನಗಳಲ್ಲಿ 2ನೇ ಸಲ ‘ಐಪಿಎಸ್ ಅಧಿಕಾರಿ ರೂಪಾ’ರಿಂದ ವಂಚನೆ ದೂರು ಸಲ್ಲಿಕೆ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ನಾಲ್ಕು ದಿನಗಳಲ್ಲಿ 2ನೇ ಸಲ ‘ಐಪಿಎಸ್ ಅಧಿಕಾರಿ ರೂಪಾ’ರಿಂದ ವಂಚನೆ ದೂರು ಸಲ್ಲಿಕೆ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ನಾಲ್ಕು ದಿನಗಳಲ್ಲಿ 2ನೇ ಸಲ ‘ಐಪಿಎಸ್ ಅಧಿಕಾರಿ ರೂಪಾ’ರಿಂದ ವಂಚನೆ ದೂರು ಸಲ್ಲಿಕೆ..!', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಬೆಂಗಳೂರು : ‘ಡಿ_ರೂಪಾ_ಐಪಿಎಸ್’ ಹೆಸರಿನಲ್ಲಿ ‘ಇನ್ಸ್ಟಾಗ್ರಾಂ’ನಲ್ಲಿ ನಕಲಿ ಖಾತೆ ತೆರೆದಿದ್ದ ಅಪರಿಚಿತರು, ‘ಬಡ ಹೆಣ್ಣು ಮಕ್ಕಳ ಏಳಿಗೆಗೆ ಸಹಾಯ ಮಾಡಿ’ ಎಂಬ ಪೋಸ್ಟ್ ಹಾಕಿದ್ದರು. ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ‘ನಾನು ಯಾವುದೇ ಇನ್ಸ್ಟಾಗ್ರಾಂ ಖಾತೆ ಹೊಂದಿಲ್ಲ. ಯಾರೂ ಹಣ ಹಾಕಬೇಡಿ’ ಎಂದು ಟ್ವೀಟ್ ಮೂಲಕ ರೂಪಾ ಸ್ಪಷ್ಟಪಡಿಸಿದ್ದರು.ಈ ಸಂಬಂಧ 2018ರ ಡಿ.30ರಂದು ಸೈಬರ್ ಕ್ರೈಂ ಠಾಣೆಗೂ ದೂರು ನೀಡಿದ್ದರು ರೂಪಾ.
ಬೆಂಗಳೂರಿನಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಹೆಸರಿನಲ್ಲಿ ವಂಚನೆ ಮಾಡಿದ್ದು, ಮಹಿಳೆಯೊಬ್ಬರು ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಲಖನೌ ಪೊಲೀಸರಿಗೆ ಕರೆಮಾಡಿನಾನು ಗೃಹರಕ್ಷಕದಳದ ಐಜಿಪಿ ಡಿ.ರೂಪಾ ಮಾತನಾಡುತ್ತಿದ್ದೇನೆ. ಕೆಲಸದ ನಿಮಿತ್ತ ಲಖನೌಗೆ ಬರುತ್ತಿದ್ದೇನೆ.ಡಿ.29ರಿಂದ ಜ.3ರವರೆಗೆ ಹೋಟೆಲ್ನಲ್ಲಿ ರೂಂ ಬುಕ್ ಮಾಡಿ ಎಂದು ಹೇಳಿದ್ದರು ಆ ಮಹಿಳೆ.
This is not my account. I'm not on Instagram. This is brought to my notice only now. Will complain to Cyber crime police station @CIDKarnataka . Meanwhile request those on @instagram to report this issue https://t.co/DBYNDzzTog
— D Roopa IPS (@D_Roopa_IPS) December 28, 2018
ಅವರ ಮಾತನ್ನು ನಂಬಿದ್ದ ಅಧಿಕಾರಿ, ರೂಂ ಬುಕ್ ಮಾಡಿದ್ದರು. ಈ ಬಗ್ಗೆ ಪರಿಚಯದ ಅಧಿಕಾರಿ ವಿಕಾಸ್ ಚಂದ್ರ ತ್ರಿಪಾಠಿ ರೂಪಾಗೆ ಕರೆ ಮಾಡಿ ವಿಚಾರಿಸಿದಾಗ ಕೃತ್ಯ ಬಯಲಾಗಿದೆ. ನಾನು ರೂಂ ಬುಕ್ ಮಾಡುವಂತೆ ಯಾರಿಗೂ ಕರೆ ಮಾಡಿಲ್ಲವಲ್ಲ ಎಂದಿದ್ದ ರೂಪಾ. ಯಾರೋ ನಿಮ್ಮ ಹೆಸರು ಹೇಳಿಕೊಂಡು 9449990544 ಸಂಖ್ಯೆಯಿಂದ ಕರೆ ಮಾಡಿದ್ದರು ಎಂದಿದ್ದರು ತ್ರಿಪಾಠಿ. ಬಳಿಕ ಆ ಸಂಖ್ಯೆಗೆ ಕರೆ ಮಾಡಿದ್ದ ಅಧಿಕಾರಿ ರೂಪಾ ಅವರು ಆ ಮಹಿಳೆ ಸರಿಯಾಗಿ ಮಾತನಾಡದ ಕಾರಣ ಬನಶಂಕರಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ ರೂಪಾ.
Posted by We Support D Roopa IPS on Saturday, 29 December 2018
ಮೊಬೈಲ್ ಸಂಖ್ಯೆಯ ಮೂಲ ಪತ್ತೆ ಹಚ್ಚಿರುವ ಪೊಲೀಸರು ಮಂಗಳೂರಿನ ಬಲ್ಮಠದಲ್ಲಿರುವ ಚಿರಾಗ್’ ಅಪಾರ್ಟ್ಮೆಂಟ್ ನಿವಾಸಿ ಮಹಿಳೆಯ ನಂಬರ್ ಅದಾಗಿತ್ತು, ಆದರೆ ತಿಂಗಳ ಹಿಂದೆಯೇ ನನ್ನ ಮೊಬೈಲ್ ಕಳೆದುಹೋಗಿತ್ತು ಎಂದಿರೋ ಮಹಿಳೆ, ಈ ಸಂಬಂಧ ಪಾಂಡೇಶ್ವರ ಠಾಣೆಗೆ ದೂರು ಕೊಟ್ಟಿದಾಗಿ ಹೇಳಿದ್ದಾರೆ.
Gave complaint to cyber crime police to register FIR for the Instagram fraud @BlrCityPolice. I sincerely hope @instagram deactivates this account also. pic.twitter.com/6b6GpCQX9A
— D Roopa IPS (@D_Roopa_IPS) December 29, 2018
ಎಫ್ಐಆರ್ ಹಾಗೂ ದೂರು ಸ್ವೀಕೃತಿ ಅರ್ಜಿಯನ್ನು ಬಿಎಸ್ಎನ್ಎಲ್ ಕಚೇರಿಗೆ ಸಲ್ಲಿಸಿ, ಅದೇ ಸಂಖ್ಯೆಯ ಹೊಸ ಸಿಮ್ ಖರೀದಿಸಿದ್ದೇನೆ’ ಎಂದು ಹೇಳಿಕೆ ಕೊಟ್ಟಿದ್ದಾರೆ ಮಹಿಳೆ. ಆದರೆ, ಕರೆ ಹೋದ ದಿನ ಆ ಮೊಬೈಲ್ ಸಂಖ್ಯೆಯನ್ನು ಅದೇ ಮಹಿಳೆ ಬಳಸುತ್ತಿದ್ದರೋ? ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
ಸುದ್ದಿದಿನ,ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ವೆಬ್ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸ್ಆ್ಯಪ್/ ಎಸ್ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.
ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ2 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ21 hours agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ20 hours agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ
-
ದಿನದ ಸುದ್ದಿ41 minutes agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

