ದಿನದ ಸುದ್ದಿ
ದಲಿತ ರಾಜಕೀಯ – ದಲಿತ ಚಳವಳಿಯ ಚಿಲ್ಲರೆ ಅಂಗಡಿಗಳ ಜೋರು ವ್ಯಾಪಾರದ ಈ ಕಾಲದಲ್ಲಿ
![](https://suddidina.com/wp-content/uploads/2018/12/Ambedkar-suddidina680.jpg)
- ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ
ನಾವು ನಮಗೆ ಕೇಳಿಕೊಳ್ಳಲೇಬೇಕಾದ ಕೆಲವು ಪ್ರಶ್ನೆಗಳು ನನ್ನನ್ನು ಕಾಡುತ್ತಿವೆ. ಭೂಮಿ, ಬಂಡವಾಳ ಮತ್ತು ರಾಜಕೀಯಾಧಿಕಾರಗಳನ್ನು ಮೇಲ್ಜಾತಿಗಳ ಶಾಶ್ವತ ಕಬ್ಜಾದಲ್ಲಿರಿಸಿ ಸೃಷ್ಟಿಸಲಾಗಿರುವಂತದ್ದು ಜಾತಿವ್ಯವಸ್ಥೆ. ಇದೊಂದು ಶುದ್ದ ರಾಜಕೀಯ- ಆರ್ಥಿಕ ಸಂಚು. ಆದರೆ ಅದು ಕಾರ್ಯಾಚರಣೆ ಮಾಡುವುದು ಸಮಾಜದಲ್ಲಿ. ಸಾಮಾಜಿಕ ಕ್ರಿಯೆಗಳ ಮೂಲಕ ಆ ರಾಜಕೀಯ ಆರ್ಥಿಕ ವ್ಯವಸ್ಥೆಗಳು ತಮ್ಮ ಶಕ್ತಿ- ಸಂಪನ್ಮೂಲಗಳನ್ನು ಕೆಳಜಾತಿಗಳಿಗೆ ನಿರಾಕರಿಸುತ್ತವೆ. ಅದರ ಭಾಗವಾಗಿ ಮಡಿ, ಮೈಲಿಗೆ, ಮೇಲು ಕೀಳು, ಶುದ್ಧ ಅಶುದ್ದ ಪರಿಕಲ್ಪನೆಗಳನ್ನು ಗ್ರಹಿಸಬೇಕು.
ಆ ರಾಜಕೀಯ ಆರ್ಥಿಕ ಶಕ್ತಿ ಸಂಪನ್ಮೂಲಗಳ ಮೇಲೆ ದಲಿತರು ಹಿಡಿತ ಸಾಧಿಸಲು ಎಲ್ಲಿಯವರೆಗೆ ಸಾಧ್ಯವಿಲ್ಲವೊ ಅಲ್ಲಿಯವರೆಗೆ ಜಾತಿ ತಾರತಮ್ಯಗಳು ಸಾಯುವುದಿಲ್ಲ. ಜಾತಿ ವ್ಯವಸ್ಥೆ ನಿರಂತರವಾಗಿ ಮುಂದುವರೆಯುತ್ತದೆ.
ಭೂಮಿ ಬಂಡವಾಳ ರಾಜಕೀಯಾಧಿಕಾರಗಳ ನಿರಂತರ ನಿರಾಕರಣೆಗೆ ಒಳಗಾದ ಈ ದೇಶದ ಸಾವಿರಾರು ತಬ್ಬಲಿ ಕೆಳಜಾತಿ ಸಮುದಾಯಗಳಿಗೆ ಬಿಡುಗಡೆಯ ದಾರಿಯನ್ನು ತೋರಿದ್ದು ಬಾಬಾಸಾಹೇಬರು. ಅವರು ತಮ್ಮ ಚಿಂತನೆ, ಕ್ರಿಯೆ ಮತ್ತು ಹೋರಾಟಗಳ ಮೂಲಕ ರೂಢಿಸಿಕೊಟ್ಟ ಜ್ಞಾನಮಾರ್ಗವೇ ದಲಿತರ ಬಿಡುಗಡೆಯ ದಾರಿ. ಇದೇ ದಾರಿಯಲ್ಲಿ ಹೋಗಿದ್ದರೆ ತಳಸಮುದಾಯಗಳು 21 ನೇ ಶತಮಾನದ ಸವಾಲುಗಳನ್ನೆದುರಿಸಲು ಸಜ್ಜಾದ ಜ್ಞಾನಸಮುದಾಯಗಳಾಗಿ ಮೇಲೇಳುವ ಎಲ್ಲಾ ಅವಕಾಶಗಳಿದ್ದವು.
ಆದರೆ ಜ್ಞಾನ ಮಾರ್ಗವನ್ನು ಬಲವಾಗಿ ಅಪ್ಪಿಕೊಂಡು ಮುನ್ನಡೆಯಬೇಕಿದ್ದ ದಲಿತ ಸಮುದಾಯಗಳು ಆತ್ಮವಂಚನೆಯ ವಿರಾಟ್ ಕಾಲಘಟ್ಟದಲ್ಲಿವೆ. ಸವಲತ್ತುಗಳನ್ನ ಪಡೆದುಕೊಂಡ ದಲಿತರಲ್ಲಿನ ಮಧ್ಯಮ ಮತ್ತು ಮೇಲ್ವರ್ಗಗಳು, ಜಾತಿವ್ಯವಸ್ಥೆಯಲ್ಲಿರುವ ಮೇಲ್ಜಾತಿಗಳ ಎಲ್ಲಾ ವ್ಯಸನಗಳನ್ನು ತಮ್ಮದನ್ನಾಗಿಸಿಕೊಂಡಿವೆ. ಆ ವ್ಯಸನಗಳನ್ನೇ ತಮ್ಮ ಶ್ರೇಷ್ಟತೆಯ ಗುರುತುಗಳನ್ನಾಗಿ ಮಾಡಿಕೊಂಡಿವೆ. ಈ ಎರಡೂ ವರ್ಗಗಳಿಗೆ ಬಾಬಾಸಾಹೇಬರು ಕಟ್ಟಿಕೊಟ್ಟ ಮೌಲ್ಯಗಳಾಗಲಿ, ತೋರಿದ ಜ್ಞಾನಮಾರ್ಗವಾಗಲಿ, ಆಧ್ಯಾತ್ಮದ ದಾರಿಯಾಗಲಿ ಬೇಕಿಲ್ಲದ ಸ್ಥಿತಿಗೆ ಬಂದು ನಿಂತಿವೆ. ತಮ್ಮ ಶೋಷಕ ವ್ಯವಸ್ಥೆಯು ಕಟ್ಟಿಕೊಟ್ಟ ಮನುಪ್ರಣೀತ ಆಚರಣೆ, ಸಂಪ್ರದಾಯಗಳಲ್ಲೆ ಸುಖಿಸುತ್ತಿವೆ. ಇದೊಂತರ ಸ್ಟಾಕ್ ಹೋಂ ಸಿಂಡ್ರೋಪಮ್. ಶೋಷಕನನ್ನೆ ಮೆಚ್ಚಿ ಅನುಕರಿಸುವುದು.
ಇದೇ ದಲಿತ ಮಧ್ಯಮ, ಮೇಲ್ವರ್ಗಗಳು ತಮ್ಮ ಅಹಮ್ಮಿಗೆ, ಅನುಕೂಲಕ್ಕೆ, ಸವಲತ್ತುಗಳಿಗೆ ಏಟುಬಿದ್ದಾಗ ಮಾತ್ರ ಅಂಬೇಡ್ಕರರ ಸಂವಿಧಾನದ ಆಸರೆ ಪಡೆಯುತ್ತವೆ.
ಸಂಖ್ಯೆಯಲ್ಲಿ ಬಹುಸಂಖ್ಯಾತರಾದ ದಲಿತರ ಕೆಳ/ಬಡವರ್ಗ ತನ್ನ ಅಸ್ಥಿತ್ವಕ್ಕಾಗಿ ಅನ್ನ, ಸೂರು, ಬಟ್ಟೆಗಳಂತ ಪ್ರಾಥಮಿಕ ಅವಶ್ಯಕತೆಗಳಿಗಾಗಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳ ನಂತರವೂ ಹೆಣಗಾಡುತ್ತಲೇ ಇವೆ. ಈಗಲೂ ಅವು ಅತ್ಯಂತ ಹೀನಾಯ & ಅನಾಥ ಸ್ಥಿತಿಯಲ್ಲಿವೆ.
ಭಾರತದ ಮಟ್ಟಿಗೆ ತುಂಬಾ ಅತ್ಯಂತ ವೈಚಾರಿಕ ಮಾನವೀಯತೆಯ ನೆಲೆಗಟ್ಟನ್ನ ಪ್ರತಿಪಾದಿಸಿ, ಪ್ರಜಾಪ್ರಭುತ್ವದ ಆತ್ಯಂತಿಕ ಆದರ್ಶಗಳನ್ನು ಸಂವಿಧಾನಕ್ಕೆ ಅಳವಡಿಸಿದ ಬಾಬಾಸಾಹೇಬರ ಚಿಂತನಾಧಾರೆ ಭಾರತೀಯರಿಗೆ ಧಾರಾಳವಾಗಿ ಹರಿದುಬಂದದ್ದು ಅವರ ಮಹಾಪರಿನಿಬ್ಬಾಣದ ನಂತರವೆ.. ಅದರಲ್ಲೂ ಎಪ್ಪತ್ತರ ದಶಕದಲ್ಲಿ.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಪ್ರೊ. ಬಿ. ಕೃಷ್ಣಪ್ಪನವರು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದ ನಂತರ.
ಪ್ರೊ. ಬಿ.ಕೆ.ಯವರು ಬಾಬಾಸಾಹೇಬರ ಚಿಂತನೆಯನ್ನು ತನ್ನ ಭಾಷಣ, ಹಾಡು, ಹೋರಾಟ, ಪ್ರತಿಭಟನೆಗಳ ಭಾಗವಾಗಿಸಿಕೊಂಡು ರಾಜ್ಯದ ಪ್ರತಿ ದಲಿತರ ಕೇರಿಗೆ ಕೊಂಡೊಯ್ದರು. ಸಾವಿರಾರು ವರ್ಷ ಅಸ್ಪೃಶ್ಯತೆಯ ಕಳಂಕ ಹೊತ್ತು ಗುಲಾಮಗಿರಿಯಲ್ಲೇ ಉಸಿರಾಡಿಕೊಂಡಿದ್ದ ಜನರ ನರನಾಡಿಗಳಿಗೆ ಬಾಬಾಸಾಹೇಬರ ಚಿಂತನೆಯನ್ನು ತುಂಬಿದರು, ಆ ಮೂಲಕ ರಾಜಕೀಯ ಪ್ರಜ್ಞೆ ಮತ್ತು ಪ್ರತಿಭಟನೆಯ ಕೆಚ್ಚನ್ನು ಜಾಗೃತಗೊಳಿಸಿದರು.
ದಲಿತರ ನೋವಿಗಷ್ಟೇ ಅಲ್ಲ, ಹಿಂದುಳಿದ ವರ್ಗಗಳ ಪಾಲಿಗೂ ಭರವಸೆ ತುಂಬಿದವರು ಪ್ರೊ. ಬಿ.ಕೆ.
ಆ ಹೊತ್ತಿಗೆ ಎಚ್ಚೆತ್ತ ದಲಿತ ಅಕ್ಷರಸ್ಥ ತಲೆಮಾರು ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ಸಾಗರಕ್ಕೆ ಹರಿದು ಬಂತು. ಅವರ ಅದಮ್ಯ ಹೋರಾಟದ ಕುಲುಮೆಯಲ್ಲಿ ಕವಿಗಳಾಗಿ, ಹೋರಾಟಗಾರರಾಗಿ, ಸಾಹಿತಿಗಳಾಗಿ, ಯುವ ಮುಂದಾಳುಗಳಾಗಿ ಮೇಲೆದ್ದರು. ಅಷ್ಟರಮಟ್ಟಿಗೆ ಸ್ಥಗಿತಕೊಂಡಿದ್ದ ರಾಜ್ಯದ ರಾಜಕಾರಣವನ್ನು ಬೆಚ್ಚಿಬೀಳಿಸಿದ್ದು, ಫ್ಯೂಡಲ್ ಶಕ್ತಿಗಳನ್ನು ಬಗ್ಗಿಸಿದ್ದ ಪ್ರೊ. ಬಿ. ಕೃಷ್ಣಪ್ಪ ದಲಿತ ಚಳವಳಿ ಕರ್ನಾಟಕದ ಚೆರಿತ್ರೆಯನ್ನು ಇನ್ನೊಂದು ಮಗ್ಗುಲಿಗೆ ಹೊರಳಿಸಿದರು.
ಬಿ. ಕೆ. ಯವರ ನಂತರ ಬಂದ ದಲಿತ ರಾಜಕಾರಣಿಗಳು ಮತ್ತು ಹೋರಾಟದ ದಾರಿಗೆ ನುಸುಳಿದ ಅವಕಾಶವಾದಿಗಳಿಬ್ಬರೂ ಸೇರಿ ಪ್ರೊ. ಬಿ.ಕೆ.ಕಟ್ಟಿದ ದಲಿತ ಚಳವಳಿಯನ್ನು ಒಳಜಾತಿಗಳ ಆಧಾರದ ಮೇಲೆ ಹತ್ತಾರು ಬಣಗಳಾಗಿ ಒಡೆದರು. ಅವರ ವಯಕ್ತಿಕ ದರ್ದುಗಳ ನಿವಾರಣೆಗೆ ಚಳವಳಿಯನ್ನು ಬಲಿಕೊಟ್ಟರು. ದಲಿತರ ಮೇಲಿ ದೌರ್ಜನ್ಯಗಳು ಮಿತಿಮೀರಿದ ಹೊತ್ತಲ್ಲೆ ಈ ದಲಿತ ರಾಜಕಾರಣ-ಚಳವಳಿಯ (ನ)ಕಲಿಗಳು ತಮ್ಮ ಹೊಟ್ಟೆ ತುಂಬಿಸಿಕೊಂಡರು.
ಪ್ರೊ. ಬಿ. ಕೆ. ಯವರೇ ಕೊನೆ..
ಆನಂತರ ರಾಜ್ಯದ ಯಾವ ಮೂಲೆಯಿಂದಲಾದರೂ ಸರಿ, ಅಖಂಡ ದಲಿತ ಸಮುದಾಯದ ಏಳಿಗೆಗೆ ಬದ್ಧನಾದ ಒಬ್ಬನೇ ಒಬ್ಬ ರಾಜಕೀಯ ನಾಯಕನಾಗಲಿ, ಅಖಂಡ ದಲಿತ ಚಳವಳಿಗೆ ಕಟಿಬದ್ಧನಾದ ಒಬ್ಬ ಚಳವಳಿಗಾರನಾಗಲಿ ಈ ಹೊತ್ತಿಗೂ ಹುಟ್ಟಿಬರಲಿಲ್ಲ. ದಲಿತ ರಾಜಕಾರಣ ಮತ್ತು ದಲಿತ ಚಳವಳಿಗಳು ಈಗ ಕೇವಲ ಒಳಜಾತಿಗಳ ಮೇಲಾಟಗಳು ಮಾತ್ರ. ಅಂಬೇಡ್ಕರರು ಕೇವಲ ಒಂದು ಫೋಟೊ ಆಗುವುದು ಮತ್ತು ಬಿ.ಕೆ.ಯವರನ್ನು ಒಂದು ಹೆಸರನ್ನಾಗಿಸಿ ಮರೆವಿಗೆ ಸರಿಸುವುದು ಅವರ ಹಿಡನ್ ಅಜೆಂಡಾ.
ಇದನ್ನು ಸರಳವಾಗಿ ರೂಪಕಾತ್ಮಕವಾಗಿ ಹೇಳುವುದಾದರೆ ದಲಿತರ ಬೀದಿಗಳಲ್ಲಿ ರಾಜಕೀಯ ಮತ್ತು ಚಳವಳಿಗಳ ಚಿಲ್ಲರೆ ಅಂಗಡಿಗಳು ತಲೆ ಎತ್ತಿವೆ. ಒಂದೊಂದು ಅಂಗಡಿಯಲ್ಲಿ ಒಂದೊಂದು ವ್ಯಾಪಾರ. ಲಾಭವೇ ವ್ಯಾಪಾರದ ಅಂತಿಮ ಗುರಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!