Connect with us

ದಿನದ ಸುದ್ದಿ

ದೂಡಾ ನಿರ್ಲಕ್ಷ್ಯ ಧೋರಣೆ ; ಅಡ ಕತ್ತರಿಯಲ್ಲಿ ಸಿಲುಕಿದ ಅನ್ನದಾತ : ದೂಡಾಗೆ ಮೇ31ರವರೆಗೆ ಡೆಡ್ ಲೈನ್ ನೀಡಿದ ಹಳೇ ಕುಂದುವಾಡ ರೈತರು

Published

on

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾ ಇಲಾಖೆ ಹೊಸ ಬಡಾವಣೆ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಆದರೆ ಎರಡುವರೆ ವರ್ಷಗಳಿಂದ ರೈತರನ್ನು ಅಲೆದಾಡಿಸುತ್ತಾ ಜಮೀನು ಖರೀದಿ ಪ್ರಕ್ರಿಯೆಯನ್ನೆ ಶುರು ಮಾಡದೇ ರೈತರನ್ನ ಅಡಕತ್ತರಿಯಲ್ಲಿ ಸಿಲುಕಿಸಿದೆ, ಮೇ 31ರೊಳಗೆ ಖರೀದಿ ಪ್ರಕ್ರಿಯೆ ಶುರು ಮಾಡಬೇಕು, ಇಲ್ಲದಿದ್ದಲ್ಲಿ ರೈತರು ಜಮೀನು ಮಾರಾಟ ಮಾಡುವುದಿಲ್ಲ ಎಂದು ದೂಡಾ ಇಲಾಖೆಗೆ ರೈತರು ಅಂತಿಮ ಗಡುವು ನೀಡಿದ್ದಾರೆ.

ನಗರದ ದೂಡಾ ಕಚೇರಿಗೆ ಆಗಮಿಸಿದ ಹಳೇ ಕುಂದುವಾಡ
ರೈತರು, ದೂಡಾ ಆಯುಕ್ತ ಕುಮಾರಸ್ಚಾಮಿ ಅವರಿಗೆ ಮನವಿ ಸಲ್ಲಿಸಿದರು.. ಈ ಸಂದರ್ಭದಲ್ಲಿ ಮಾತನಾಡಿದ ರೈತರು, ಹಳೇ ಕುಂದುವಾಡದಲ್ಲಿ ದೂಡಾ ಇಲಾಖೆ ಸುಮಾರು 53.19 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲು ತಯಾರಿ ನಡೆಸಿದೆ. ಈ ಪ್ರಕ್ರಿಯೆ ಸುಮಾರು ಎರಡುವರೆ ವರ್ಷದಿಂದ ನಡೆಯುತ್ತಲೇ ಇದೆ.ಮೊದಲು ರೈತರನ್ನು ಆಹ್ವಾನಿಸದೇ ದರ ನಿಗದಿ ಮಾಡಿ ವಿವಾದ ಸೃಷ್ಟಿಸಿತ್ತು.

53 ಎಕರೆ ಜಮೀನನ್ನೆ ಖರೀದಿ ಮಾಡಲು ಆಗುತ್ತಿಲ್ಲ, 53 ಎಕರೆ ಪ್ರದೇಶದ ಸುತ್ತಾಮುತ್ತಾ ಇರುವ 150 ಎಕರೆಯನ್ನ ಸ್ವಾಧೀನ ಮಾಡಿಕೊಳ್ಳುತ್ತೇವೆ ಎಂದು ಪ್ರಕಟಣೆ ಹೊರಡಿಸುವ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿತ್ತು.. ಅದಾದ ಬಳಿಕ ರೈತರನ್ನು ಮನವರಿಕೆ ಮಾಡಿ ಬಳಿಕ ನಾಲ್ಕು ತಿಂಗಳ ಹಿಂದೆ ಡಿಸಿ ಮಹಾಂತೇಶ್ ಬೀಳಗಿಯವರ ಅಧ್ಯಕ್ಷತೆಯಲ್ಲಿ ಮರು ಸಭೆ ಕರೆದು ಒಂದು ಎಕರೆಗೆ 1.28 ಕೋಟಿ ರೂ. ಹಾಗೂ ಸರ್ಕಾರಿ ದರದಲ್ಲಿ ಒಂದು ನಿವೇಶನ ನೀಡಲು ರೈತರು ಹಾಗೂ ದೂಡಾ ಇಲಾಖೆ ನಡೆಯುವ ಅಂತಿಮ ಒಪ್ಪಂದ ನಡೆದಿತ್ತು.‌

ಈ ವೇಳೆ ಎರಡೇ ತಿಂಗಳಲ್ಲಿ ಜಮೀನು ಖರೀದಿ ಮಾಡುತ್ತೇವೆ ಎಂದು ದೂಡಾ ಸಮಯ ಕೇಳಿತ್ತು.. ಆದರೆ ನಾಲ್ಕು ತಿಂಗಳು ಕಳೆದರು ಖರೀದಿ ಪ್ರಕ್ರಿಯನ್ನೆ ಶುರು ಮಾಡಿಲ್ಲ, ಇತ್ತ ನಮ್ಮ ಜಮೀನು ನಮಗೆ ಬಿಟ್ಟುಕೊಡಿ ಎಂದರು ಬಿಡುತ್ತಿಲ್ಲ, ಎರಡುವರೆ ವರ್ಷದಿಂದ ರೈತರನ್ನು ಅಲೆದಾಡಿಸುತ್ತಾ ಮೂಗಿಗೆ ತುಪ್ಪ ಸವರುವ ಕೆಲಸವನ್ನು ದೂಡಾ ಇಲಾಖೆ ಮಾಡಿತ್ತಿದೆ ಎಂದು ರೈತರು ದೂರಿದರು.

ಕೆಲವು ರೈತರು ಸಾಲಸೋಲು ಮಾಡಿ ಸಂಕಷ್ಟದಲ್ಲಿದ್ದಾರೆ.. ಇನ್ನೂ ಕೆಲವರು ಜಮೀನು ಬೇರೆಯವರಿಗೆ ಮಾರಾಟ ಮಾಡಲಾಗದ ಸ್ಥಿತಿಯಲ್ಲಿದ್ದಾರೆ, ಇಲ್ಲಿ ಜಮೀನು ಮಾರಾಟ ಮಾಡಿ ಬೇರೆಡೆ ಜಮೀನು ಖರೀದಿಸಲು ಮುಂದಾದರೆ ಈಗಾಗಲೇ ಬೇರೆಡೆ ಜಮೀನು ದರ ಗಗನಕ್ಕೆ ಏರಿದೆ, ಇಲ್ಲಿ ಮಾರಾಟ ಮಾಡಿ ದುಬಾರಿ ಬೆಲೆಗೆ ಬೇರೆಡೆಗೆ ಜಮೀನು ಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೆಲವು ರೈತರು ಗೊಂದಲಕ್ಕೆ ಹೀಡಾಗಿದ್ದಾರೆ, ಕೆಲವರು ಜಮೀನು ಕೊಡಲ್ಲ ಎಂದರು ಸಹ ಈಗಾಗಲೇ ಬಡಾವಣೆ ನಿರ್ಮಾಣಕ್ಕೆ ಸೇರ್ಪಡೆ ಮಾಡಿ ರೈತರಿಗೆ ದೂಡಾ ತೊಂದರೆ ನೀಡುತ್ತಿದೆ.

ಈ ಹಿನ್ನಲೆ ಇದೇ ಮೇ31 ರೊಳಗೆ ಜಮೀನು ಖರೀದಿ ಪ್ರಕ್ರಿಯೆ ಶುರು ಮಾಡಬೇಕು, ದಿನಾಂಕ ಮೀರಿದರೆ ಯಾವುದು ಕಾರಣಕ್ಕೂ ನಾವು ನಿಮಗೆ ಜಮೀನು ಮಾರಾಟ ಮಾಡುವುದಿಲ್ಲ, ದೂಡಾ ಎಲ್ಲಾ ಜಮೀನುಗಳಿಗೆ ನಿರಪೇಕ್ಷಣ ಪತ್ರ(ಎನ್ ಒಸಿ) ನೀಡಿ ನಮ್ಮ ಜಮೀನುಗಳಿಗೆ ಮುಕ್ತಿ ನೀಡಿ ಎಂದು ರೈತರು ಅಂತಿಮ ಗಡುವು ನೀಡಿದ್ದಾರೆ.

ಇನ್ನೂ ಸಂದರ್ಭದಲ್ಲಿ ಹರಿಹರ ಶಾಸಕ ಎಸ್ ರಾಮಪ್ಪ ಮಾತನಾಡಿ, ಜಮೀನು ಖರೀದಿ ಮಾಡಲು ನಿಮಗೆ ಆಗದಿದ್ದರೆ ರೈತರಿಗೆ ಅಲೆದಾಡಿಸಿ ಯಾಕೆ ತೊಂದರೆ ನೀಡುತ್ತೀರಿ, ಅವರ ಪಾಡಿಗೆ ಅವರನ್ನು ಬಿಟ್ಟುಬಿಡಿ ಎಂದು ಆಯುಕ್ತರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಿಟ್ಲಕಟ್ಟೆ ಚಂದ್ರಪ್ಪ, ನರಸಪ್ಪರ ಶಿವಪ್ಪ, ಹನುಮಂತಪ್ಪ, ಜಯ್ಯಪ್ಪ, ದೇವರಾಜ್, ರೇವಣಪ್ಪ, ಮಧುನಾಗರಾಜ್, ಆನಂದಪ್ಪ ಸೇರಿದಂತೆ ರೈತರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.

ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.

ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending