ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243