Connect with us

ದಿನದ ಸುದ್ದಿ

ಕಾರ್ಯಕ್ಷಮತೆಗೆ ಕಿವಿ ಹಿಂಡಲೇಬೇಕೇ…

Published

on

  • ಡಾ ಜಿ. ಎನ್. ಮಲ್ಲಿಕಾರ್ಜುನಪ್ಪ, ವಿಶ್ರಾಂತ ಪ್ರಾಂಶುಪಾಲರು, ದಾವಣಗೆರೆ

ಸ್ಮಾರ್ಟ್‌ ಸಿಟಿ, ವಿದ್ಯಾನಗರಿ, ಎಂದು ಹೆಸರಾಗಿರುವ ಮಧ್ಯಕರ್ನಾಟಕದ ಮಹಾನಗರ ದಾವಣಗೆರೆ. ಇಲ್ಲಿ ವೃತ್ತಿಪರ ಮತ್ತು ಸಾಮಾನ್ಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಖಾಸಗೀ ಸಂಸ್ಥೆಗಳೇ ಹೆಚ್ಚು.

ಅಂತಹುದರಲ್ಲಿ ಕೆಲವು ವರ್ಷಗಳ ಹಿಂದೆ ಚಿಕ್ಕದಾಗಿ ಪ್ರಾರಂಭವಾದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಕೂಡ ಒಂದು. ಒಂದು ನೂರು ವಿದ್ಯಾರ್ಥಿಗಳಿಂದ ಆರಂಭವಾದ ಈ ಕಾಲೇಜಿನಲ್ಲಿ ಇವತ್ತು ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬಿ.ಎಮ್‌., ಬಿ.ಸಿ.ಎ., ಮೊದಲಾದ ಸ್ನಾತಕ ಪದವಿ ತರಗತಿಗಳು ಮತ್ತು ಎಂ.ಎ., ಎಂ.ಕಾಂ., ಎಂ.ಬಿ.ಎಗಳಂಥ ಸ್ನಾತಕೋತ್ತರ ತರಗತಿಗಳು ನಡೆಯುತ್ತಿವೆ. ಯಾತಕ್ಕೂ ಸಾಲದ ಕನಿಷ್ಠ ಮೂಲ ಸೌಲಭ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನ ಈ ಸಂಸ್ಥೆ ನೀಡುತ್ತಾ ಬಂದಿದೆ.

ಶೇ.70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಶಿಷ್ಠ ಜಾತಿ, ಪಂಗಡ ಮತ್ತು ಹೊಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿದ್ದು ಅರ್ಧದಷ್ಟು ವಿದ್ಯಾರ್ಥಿನಿಯರೇ ಇದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಈ ಕಾಲೇಜಿನಲ್ಲಿ ಸಂಜೆ ಮಹಾವಿದ್ಯಾಲಯವಿದ್ದು ಬಿ.ಎ. ಮತ್ತು ಬಿ.ಕಾಂ ತರಗತಿಗಳಲ್ಲಿ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುವ ಹಾಸ್ಟೆಲ್ಗಳಲ್ಲಿ ನಿಯಮಾವಳಿ ಪ್ರಕಾರ ಇವರಿಗೆ ಸೌಲಭ್ಯಗಳಿವೆ.

ಮೊನ್ನೆ ಆ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ಕ್ರೀಡಾ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾಯೋಜನೆ, ಎನ್.ಸಿ.ಸಿ, ಯುವ ರೆಡ್‌ ಕ್ರಾಸ್, ರೋವರ್ರ್ಸ್‌ ಮತ್ತು ರೇಂಜರ್ಸ್‌, ಮುಂತಾದ ಘಟಕಗಳ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕೆಲವು ವರ್ಷಗಳ ಹಿಂದೆ ನಾನಲ್ಲಿ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸಿದ್ದಕ್ಕೋ ಅಥವಾ ಆ ಎಲ್ಲ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಕಾರಣಕ್ಕೋ ನನ್ನನ್ನೂ ಅತಿಥಿಯಾಗಿ ಆಹ್ವಾನಿಸಿದ್ದರು.

ರಾಜ್ಯದ ಸಚಿವರೂ ಮತ್ತು ಆ ಕ್ಷೇತ್ರದ ಶಾಸಕರೂ ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್‌ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಕಾರ್ಯನಿಮಿತ್ತ ಅವರಿಗೆ ಭಾಗವಹಿಸಲು ಸಾಧ್ಯವಾಗದ ಕಾರಣ, ಅದೇ ಕಾರ್ಯಕ್ರಮಕ್ಕೆ ಇನ್ನೋರ್ವ ಅತಿಥಿಯಾಗಿ ಆಗಮಿಸಿದ್ದ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಂತರ ಅದೇ ಸಂಜೆ ಮಹಾವಿದ್ಯಾಲಯದ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮಗೆ ವಿದ್ಯಾರ್ಥಿಗಳಿಗಿರುವಂತೆ ಹಾಸ್ಟೆಲ್‌ ಸೌಲಭ್ಯ ಒದಗಿಸಲು ಶಿಫಾರಸು ಮಾಡುವಂತೆ ಕೋರಿ ಪ್ರಾಂಶುಪಾಲರ ಮೂಲಕ ಮನವಿ ಪತ್ರವೊಂದನ್ನು ಅವರಿಗೆ ಕೊಟ್ಟರು.

ಪ್ರಾಂಶುಪಾಲರನ್ನು ವಿಚಾರಿಸಲಾಗಿ, ಇಲಾಖೆಯ ಅಧಿಕಾರಿಗಳ ಪ್ರಕಾರ ವಿದ್ಯಾರ್ಥಿಗಳ ಹಾಸ್ಟೆಲ್ಗಳಲ್ಲಿ ರಾತ್ರಿ 09 ಗಂಟೆಯವರೆಗೆ ಒಳಗೆ ಬರುವ ಮತ್ತು ಊಟಮಾಡುವ ಅವಕಾಶವಿದ್ದು, ವಿದ್ಯಾರ್ಥಿನಿಯರ ಹಾಸ್ಟೆಲ್ಗಳಲ್ಲಿ ರಾತ್ರಿ 08ಕ್ಕೆ ಸಮಯ ಮುಗಿಯುತ್ತದೆ. ಕಾಲೇಜು ಮುಗಿಯುವ ಸಮಯ ರಾತ್ರಿ 08 ಗಂಟೆಗೆ. ಆ ಸಮಯದಲ್ಲಿ ವಿದ್ಯಾರ್ಥಿನಿಯರು ಕಾಲೇಜಿನಿಂದ ಹಾಸ್ಟೆಲ್ಗೆ ಬರಲು ಭದ್ರತಾ ಸಮಸ್ಯೆ ಇರುವ ಕಾರಣಕ್ಕೆ ಅವಕಾಶ ನೀಡಲಾಗಿಲ್ಲ ಎನ್ನುವುದು. ಕೇಳಿ ನಿಜಕ್ಕೂ ದಂಗು ಬಡಿದಂತಾಯಿತು.

ಮಹಿಳೆಯರು ರಾತ್ರಿ ನಿರ್ಭಯದಿಂದ ಓಡಾಡುವಂತಹ ಆಡಳಿತ ವ್ಯವಸ್ಥೆ ಇರಬೇಕು ಎಂದು ಕನಸಿದ ರಾಷ್ಟ್ರದಲ್ಲಿ, ಸಮಾನ ಅವಕಾಗಳು ಮೂಲಭೂತ ಹಕ್ಕಾಗಿರುವ ದೇಶದಲ್ಲಿ, ಪುಕ್ಕಟೆಯಾಗಿ ಮಹಿಳೆಯರು ರಸ್ತೆ ಸಾರಿಗೆ ಬಸ್ಸಿನಲ್ಲಿ ದಿನದ 24 ಗಂಟೆಗಳ ಕಾಲ ಓಡಾಡುವ ಸೌಲಭ್ಯವಿರುವ ರಾಜ್ಯದಲ್ಲಿ ಸಾಮಾನ್ಯ ಪದವಿಯೊಂದನ್ನು ಆರಸಿ ಹಗಲು ದುಡಿದು ಸಂಜೆ ಒಂದಷ್ಟು ತರಗತಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಸಲ್ಲದ ಕಾರಣದಿಂದ 3 ವರ್ಷಗಳಿಂದ ಹಾಸ್ಟೆಲ್‌ ಸೌಲಭ್ಯವನ್ನು ನಿರಾಕರಿಸಲಾಗಿದೆ ಎಂದರೆ ಏನೆನ್ನಬೇಕು?

ಪ್ರಾಥಮಿಕ ಶಿಕ್ಷಣದಿಂದ ಉನ್ನತಶಿಕ್ಷಣಕ್ಕೆ ಕಾಲಿರಿಸುವ ವಿದಾರ್ಥಿಗಳ ಅನಪಾತ(ಜಿಇಆರ್) ಇವತ್ತು ಶೇ. 26ರ ಆಸುಪಾಸು ಇದ್ದು ಅದನ್ನು ಮುಂದಿನ 2035ರ ಹೊತ್ತಿಗೆ ಶೇ.50ಕ್ಕೆ ತಲುಪಿಸಬೇಕೆಂಬುದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಉದ್ದೇಶ. ಇದರ ಒಂದು ಭಾಗವಾಗಿ ಹಿಂದಿನ ಸರ್ಕಾರ ರಾಜ್ಯದ ಎಲ್ಲ ಮಹಾ ನಗರಪಾಲಿಕೆಗಳಿರುವ ನಗರಗಳ ಸಾಮಾನ್ಯ ಪದವಿ ಕಾಲೇಜುಗಳಲ್ಲಿ ಸಂಜೆ ಮಹಾ ವಿದ್ಯಾಲಯಗಳನ್ನು ಆರಂಭಿಸಿತು.

ಆರ್ಥಿಕವಾಗಿ ಅನುಕೂಲವಿರದ ಪೋಷಕರ ಮಕ್ಕಳು ಹಗಲು ಅಂಗಡಿ ಮುಂಗಟ್ಟುಗಳಲ್ಲಿ ಕೆಲಸಮಾಡಿ ಸಂಜೆ ಪದವಿ ತರಗತಿಗಳಿಗೆ ಹಾಜರಾಗಿ ಪದವಿ ಪಡೆಯುವ ಮತ್ತು ಆ ಮೂಲಕ ಉತ್ತಮ ಬದುಕನ್ನು ಕಟ್ಟಿಕೊಳ್ಳುವ ಕನಸನ್ನು ನನಸು ಮಾಡಿಕೊಳ್ಳುವ ಅವಕಾಶ ಅವರದಾಯಿತು. ಲಭ್ಯ ಮಾಹಿತಿ ಪ್ರಕಾರ ಹಾಲಿ 09 ನಗರಗಳಲ್ಲಿ ಇಂಥ ವ್ಯವಸ್ಥೆ ಇದ್ದು ಸಾವಿರಾರು ಪದವಿ ಆಕಾಂಕ್ಷಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಶೇ. 50ರಷ್ಟು ವಿದ್ಯಾರ್ಥಿನಿಯರಿದ್ದು ಅಂಥವರಲ್ಲಿ ದಾವಣಗೆರೆಯ ಸಂಜೆ ಮಹಾವಿದ್ಯಾಲಯದಲ್ಲಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯರೂ ಕೂಡ ಒಬ್ಬರು.

ಹೊಸ ಶಿಕ್ಷಣ ನೀತಿಯ ಪೂರ್ಣಾನುಷ್ಠಾನಕ್ಕೆ ಮುಂದಾದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ರಾಜ್ಯದಲ್ಲಿ, ಕ್ಲಬ್ಬು ಪಬ್ಬು, ಬಾರು, ರೆಸ್ಟೋರೆಂಟ್ಗಳಲ್ಲಿ ಹೆಣ್ಣು-ಗಂಡೆನ್ನದೆ ರಾತ್ರಿ 12ರವರೆಗೆ ಮೋಜು ಮಸ್ತಿಗೆ ಅವಕಾಶವಿರುವ ನಗರಗಳಲ್ಲಿ, ಈ ವಿದ್ಯಾರ್ಥಿನಿಯರಿಗೇಕೆ ಈ ದುಃಸ್ಥಿತಿ? ಹಾಸ್ಟೆಲ್ಗಳಿಂದಾಗಿ ಕಾಲೇಜುಗಳಿವೆಯೋ ಕಾಲೇಜುಗಳಿಗಾಗಿ ಹಾಸ್ಟೆಲುಗಳಿವೆಯೋ ತಿಳಿಯಲಾಗದಾಗಿದೆ. ಇದೇ ಪರಿಸ್ಥಿತಿ ಉಳಿದ 08 ನಗರಗಳಲ್ಲಿಯೂ ಇರಬಹುದೇನೋ. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಚಾಟಿ ಬೀಸುವವರಾರು.

ಚಾಟಿ ಬೀಸಿ ಕೆಲಸ ಮಾಡಿಸುವುದೇ ಕಾರ್ಯಕ್ಷಮತೆಯೇ? ಹೀಗಾದರೆ ಓದಿದ ವಿದ್ಯೆಗೆ, ಪಡೆದ ಸರ್ಕಾರಿ ಹುದ್ದೆಗೆ ಸಂದ ಬೆಲೆಯೇನು? ಕೊನೇ ಪಕ್ಷ ತಮ್ಮ ಮಕ್ಕಳೇ ಈ ದುಃಸ್ಥಿತಿಗೊಳಗಾಗಿದ್ದಿದ್ದರೆ ಇವರಿಗೇನೆನ್ನಿಸುತ್ತಿತ್ತು? ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇಂಥ ವಿಪರ್ಯಾಸಗಳತ್ತ ಗಮನಕೊಡಬೇಕಿದೆ.

ಕಾಲೇಜಿನ ವೇಳಾಪಟ್ಟಿಯಲ್ಲಿ ಹೊಂದಾಣಿಕೆ ಮಾಡಿಯೋ, ರಜಾದಿನಗಳಂದು ತರಗತಿ ನಡೆಸಿಯೋ, ಕೊನೆಯ ಪಾಳಿಯಾಗಿ ರಾತ್ರಿ 09 ಗಂಟೆಗೆ ಕಾಲೇಜಿನಿಂದ ಹಾಸ್ಟೆಲ್ಗಳ ಮಾರ್ಗದಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ವ್ಯವಸ್ಥೆ ಮಾಡಿಯೋ ಈ ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಬೇಕಿದೆ. ಸಂವಿಧಾನದತ್ತ ಅವರ ಮೂಲಭೂತ ಹಕ್ಕುಗಳಿಗೆ ನ್ಯಾಯ ಒದಗಿಸಬೇಕಿದೆ.

ಡಾ ಜಿ. ಎನ್. ಮಲ್ಲಿಕಾರ್ಜುನಪ್ಪ, ವಿಶ್ರಾಂತ ಗ್ರೇಡ್-1 ಪ್ರಾಂಶುಪಾಲರು, ಕಾಲೇಜು ಶಿಕ್ಷಣ ಇಲಾಖೆ.
ಮೊ: 9449077003

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending