ದಿನದ ಸುದ್ದಿ
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ನಾಲ್ಕು ವರ್ಷ : 1059.92 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಪ್ರಗತಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ಸಿಟಿ ಯೋಜನೆ ಪ್ರಾರಂಭವಾದಾಗಿನಿಂದ ಇಂದಿನವರೆಗೆ ನಗರದಲ್ಲಿ ರೂ.1059.92 ಕೋಟಿ ವೆಚ್ಚದಲ್ಲಿ 74 ಕಾಮಗಾರಿಗಳನ್ನು ರೂಪಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಶರೀಫ್ ತಿಳಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗಿ ಜೂ.25 ಕ್ಕೆ 4 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಸ್ಮಾರ್ಟ್ಸಿಟಿ ಲಿ, ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೂ.5.88 ಕೋಟಿಯಲ್ಲಿ 12 ಕಾಮಗಾರಿಗಳು ಮುಕ್ತಾಯಗೊಂಡಿವೆ. ರೂ. 549.06 ಕೋಟಿಯಲ್ಲಿ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.161.73 ಕೋಟಿಯಲ್ಲಿ 09 ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಡಿ.ಪಿ.ಆರ್ ಹಂತದಲ್ಲಿ ರೂ.353.25 ಕೋಟಿ ವೆಚ್ಚದಲ್ಲಿ 12 ಕಾಮಗಾರಿಗಳಿವೆ.ದಾವಣಗೆರೆ ಜಿಲ್ಲೆಯು ಸ್ಮಾರ್ಟ್ಸಿಟಿ ಯೋಜನೆಯಡಿ ಮೊದಲ ಹಂತದಲ್ಲೇ ಆಯ್ಕೆಯಾಗಿದ್ದು, ಈ ಯೋಜನೆಯಲ್ಲಿ ಎಬಿಡಿ ಹಾಗೂ ಪಾನ್ಸಿಟಿ ಎಂದು ಎರಡು ವಿಭಾಗ ಮಾಡಿ ನಗರದಾದ್ಯಂತ ಹಲವಾರು ಕಾಮಗಾರಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.
ಮೊದಲ ಹಂತದಲ್ಲಿ ರೂ.1.39 ಕೋಟಿಯಲ್ಲಿ 9 ಪಾರ್ಕ್ಗಳು ಹಾಗೂ ಎರಡನೇ ಹಂತದಲ್ಲಿ 37 ಪಾರ್ಕ್ಗಳನ್ನು ಆಯ್ಕೆ ಮಾಡಿಕೊಂಡು ಪಾರ್ಕ್ನಲ್ಲಿ ಇ-ಶೌಚಾಲಯಗಳನ್ನು ಒಂದು ಯುರೋಪಿಯನ್ ಶೈಲಿ ಹಾಗೂ ಇನ್ನೊಂದು ಭಾರತೀಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. 1 ರಿಂದ 10 ರ ವರೆಗಿನ ನಾಣ್ಯ ಹಾಕಿದರೆ ಇ-ಶೌಚಾಲಯ ಬಾಗಿಲು ತೆರಯುತ್ತದೆ. ಪ್ರತಿ 5 ಜನರ ಉಪಯೋಗದ ನಂತರ ಸ್ವಯಂ ಚಾಲಿತವಾಗಿ ಒಳಗಡೆ ಫ್ಲೋರ್ನ್ನು ಸ್ವಚ್ಛಗೊಳಿಸುತ್ತದೆ ಎಂದರು.
ರೂ. 3.58 ಕೋಟಿಯಲ್ಲಿ ನಗರದ 52 ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಬಸ್ ಶೆಲ್ಟರ್ಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಬಸ್ಗಳಿಗೆ ಜಿಪಿಎಸ್ ಅಳವಡಿಸಿ ಬಸ್ ಬರುವ ಸಮಯನ್ನು ಪ್ರದರ್ಶಿಸುವಂತೆ ಎಲ್ಇಡಿ ಫಲಕಗಳನ್ನು ಅಳವಡಿಸಲಾಗುವುದು. ರೂ. 25.41 ಕೋಟಿ ವೆಚ್ಚದಲ್ಲಿ ಹಳೇ ಬಸ್ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯನ್ನು ರೂಪಿಸಲಾಗಿದ್ದು, 21420.74 ಚ.ಮೀ. ವಿಸ್ತೀರ್ಣದಲ್ಲಿ ಕೆಳ ಮಹಡಿಯಲ್ಲಿ 92 ನಾಲ್ಕು ಚಕ್ರದ ವಾಹನ ಮತ್ತು 122 ದ್ವಿಚಕ್ರ ವಾಹನ ನಿಲುಗಡೆ ಹಾಗೂ ನೆಲ ಮಹಡಿಯಲ್ಲಿ 12 ಬಸ್ ನಿಲ್ಲುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಿಲ್ದಾಣದಲ್ಲಿ ಅಂಗಡಿಗಳು, ನಿರ್ವಹಣಾ ಕೊಠಡಿ, ಶೌಚಾಲಯ, ಸ್ನಾನದ ಕೊಠಡಿ, ರ್ಯಾಂಪ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು, ಲಿಫ್ಟ್, ಬಸ್ ಸಂಚಾರದ ಫಲಕಗಳು ಹಾಗೂ ಭದ್ರತೆಗಾಗಿ ಸಿ.ಸಿ ಟಿವಿ ಅಳವಡಿಸಲಾಗುವುದು ಎಂದರು.
ಬೈಸಿಕಲ್ ಷೇರಿಂಗ್ ಸಿಸ್ಟಮ್ ಹಾಗೂ ಇ-ರಿಕ್ಷಾ: ನಗರದಲ್ಲಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮತ್ತು ಸುರಕ್ಷತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರೂ.9.90 ಕೋಟಿಗಳಲ್ಲಿ ಸಾರ್ವಜನಿಕ ಬೈಸಿಕಲ್ ಷೇರಿಂಗ್ ಸಿಸ್ಟಮ್ ಅಳವಡಿಸಲಾಗುವುದು. 20 ಡಾಕಿಂಗ್ ಸ್ಟೇಷನ್ಸ್ಗಳಿದ್ದು, 100 ವಿದ್ಯುತ್ ಚಾಲಿತ ಮತ್ತು 100 ಸಾಮಾನ್ಯ ಬೈಸಿಕಲ್ ವ್ಯವಸ್ಥೆ ಮಾಡಲಾಗುವುದು. ಈ ಕಾಮಗಾರಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದ್ದು, ಮುಂದಿನ 15 ರಿಂದ 20 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಪರಿಸರ ಮಾಲಿನ್ಯ ಕಡಿಮೆ ಮಾಡುವ ದೃಷ್ಠಿಯಿಂದ ಹಾಗೂ ಉದ್ಯೋಗ ನೀಡುವ ಸಲುವಾಗಿ ಆಧುನಿಕ ತಂತ್ರಜ್ಞಾನವುಳ್ಳ ಬ್ಯಾಟರಿ ಚಾಲಿತ 80 ಆಟೋಗಳನ್ನು ಸ್ಥಳೀಯರಿಗೆ (60:40) ಸಬ್ಸಿಡಿ ಆಧಾರದಲ್ಲಿ ನೀಡಲಾಗುವುದು. ಈಗಾಗಲೇ ನಾಲ್ವರು ಮುಂದೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಟೋಗಳನ್ನು ವಿತರಿಸಲಾಗುವುದು. ಮಹಿಳೆಯರಿಗೆ ಶೇ.75 ರಷ್ಟು ಸಬ್ಸಿಯಡಿಯಲ್ಲಿ ನೀಡಲಿದ್ದೇವೆ ಎಂದರು.
ಜಿಲ್ಲೆಯ ಸಾರ್ವಜನಿಕರ ಹಿತದೃಷ್ಠಿಯಿಂದ ರೂ.2.85 ಕೋಟಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಚಿಂತಿಸಲಾಗಿದ್ದು, ಈ ಕುರಿತು ಸರ್ವೆ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಜನರ ಆರೋಗ್ಯಾಭಿವೃದ್ಧಿ ಮತ್ತು ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ವ್ಯಾಯಾಮ ಶಾಲೆ ಮತ್ತು ಮಕ್ಕಳ ಆಟಿಕೆ ಉಪಕರಣಗಳನ್ನು ನಗರದ 16 ಉದ್ಯಾನವನಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೈಸಿಕಲ್, ಸೀಟೆಡ್ ಚೆಸ್ಟ್ ಪ್ರಸ್, ಎಚ್ಡಿ ಸಿಟ್ ಆಫ್, ಎಚ್.ಡಿ. ಸ್ಕಾಟ್ ಪುಶಿಂಗ್, ಹೆಲ್ತ್ ವಾಕರ್ ಸೇರಿದಂತೆ ಮಕ್ಕಳ ಆಟಿಕೆ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ತುಂಗಾಭದ್ರ ನದಿಗೆ ಅಣೆಕಟ್ಟು ನಿರ್ಮಾಣ: ದಾವಣಗೆರೆ ನಗರಕ್ಕೆ 24*7 ಕುಡಿಯುವ ನೀರು ಒದಗಿಸಲು ತುಂಗಾಭದ್ರ ನದಿಗೆ 550 ಮೀ ಉದ್ದದ ಹಾಗೂ 2.5 ಮೀ ಅಗಲದ ಅಣೆಕಟ್ಟನ್ನು ರಾಜನಹಳ್ಳಿ ಜಾಕ್ವಲ್ ಬಳಿ ರೂ.76.11 ಕೋಟಿಯಲ್ಲಿ ನಿರ್ಮಿಸಲಾಗುವುದು. ಈ ಅಣೆಕಟ್ಟಿನಲ್ಲಿ 0.2 ಟಿಎಂಸಿ ನೀರು ಶೇಖರಣೆ ಮತ್ತು 50+5 ಸ್ವಯಂ ಚಾಲಿತ ಗೇಟ್ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಯನ್ನು ಒಂದರೆಡು ತಿಂಗಳಿನಲ್ಲಿ ಪಾರಂಭಿಸಲಾಗುವುದು ಎಂದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ರೂ.120 ಕೋಟಿಯಲ್ಲಿ ಅಭಿವೃದ್ಧಿಪಡಿಸಿ ಅದರಲ್ಲಿ ಮೂರು ಘಟಕಗಾಳಾಗಿ ಬಸ್ ಟರ್ಮಿನಲ್, ಕೆಎಸ್ಆರಟಿಸಿ ಕಚೇರಿ ಹಾಗೂ ಶಾಪಿಂಗ್ ಮಾಲ್ ಮತ್ತು ಚಿತ್ರ ಮಂದಿರ ನಿರ್ಮಿಸಲಾಗುವುದು. ಒಂದು ನೆಲಮಹಡಿ ಸೇರಿದಂತೆ 4 ಮಹಡಿಯ ಕಟ್ಟಡವನ್ನು ನಿರ್ಮಿಸಲಾಗುವುದು. 45 ಬಸ್ಗಳ ನಿಲುಗಡೆ ಹಾಗೂ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿ ಭದ್ರತೆಯ ದೃಷ್ಟಿಯಿಂದ ಸಿ,ಸಿ.ಕ್ಯಾಮಾರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ನಗರದ ಎಂಟು ಸರ್ಕಾರಿ ಕಚೇರಿಗಳ ಮೇಲ್ಚಾವಣಿಯಲ್ಲಿ ರೂ.2.21 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ಸ್ ಅಳವಡಿಕೆ ಮಾಡಿ ಸೌರ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಳಿತಾಯ ಮತ್ತು ಬೆಸ್ಕಾಂ ಇಲಾಖೆಗೆ ಪ್ರತಿ ಯೂನಿಟ್ಗೆ ಪಾವತಿಸುತ್ತಿದ್ದ ರೂ. 8.50 ಬದಲಿಗೆ ಪ್ರತಿ ಯೂನಿಟ್ಗೆ ರೂ. 5.90 ಗಳನ್ನು 25 ವರ್ಷಗಳವರೆಗೆ ಪಾವತಿಸಲು ನಿಗದಿಯಾಗಿರುತ್ತದೆ. ಹೆಚ್ಚುವರಿಯಾಗಿರುವ ವಿದ್ಯುಚ್ಛಕ್ತಿಯನ್ನು ಬೆಸ್ಕಾಂ ಇಲಾಖೆಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಅಪರಾಧ ನಿಯಂತ್ರಿಸಲು, ಸ್ವಚ್ಚತೆ ಬಗ್ಗೆ ಮಾಹಿತಿ ಪಡೆಯಲು ಮತ್ತು ಸುರಕ್ಷತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮರಾಗಳನ್ನು ರೂ.74.84 ಕೋಟಿ ವೆಚ್ಚದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್, ಇಂಟಲಿಜೆಂಟ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ, ಈ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ನಿಂದ ಸಾರ್ವಜನಿಕರಿಗೆ ಸಾರಿಗೆ ಮತ್ತು ತುರ್ತು ಸೇವೆಗಳ ಮಾಹಿತಿ ನೀಡುವುದು, ಆನ್ಲೈನ್ ಅಪ್ಲಿಕೇಷನ್ಗಳನ್ನು ನಿಯಂತ್ರಣದಲ್ಲಿಡುವ ವ್ಯವಸ್ಥೆ ಕಲ್ಪಿಸುವುದು, ವಾಯು ಮಾಲಿನ್ಯದ ಮಾಹಿತಿಗಾಗಿ ಸೆನ್ಸಾರ್ಗಳನ್ನು ಅಳವಡಿಸುವುದು ಸೇರಿದಂತೆ ಇ-ಕಲಿಕಾ ಕೇಂದ್ರದ ಮೂಲಕ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು. ಇ-ಆಡಳಿತ ಕಾರ್ಯಕ್ರಮದಲ್ಲಿ ಕಿಯೋಸ್ಕ್, ಒಂದು ನಗರ ಒಂದು ಸಂಖ್ಯೆ ಮತ್ತು ಇತರೆ ಸಾರ್ವಜನಿಕ ಸೇವೆಗಳನ್ನು ರೂಪಿಸಲಾಗಿದೆ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸಲಾಗುವುದು ಎಂದರು.
ನಗರದ 10 ಸರ್ಕಾರಿ ಕಚೇರಿಗಳ ಆವರಣಗಳಲ್ಲಿ 2.42 ಕೋಟಿ ವೆಚ್ಚದಲ್ಲಿ ಡಿಸ್ಪ್ಲೇ ಬೋರ್ಡ್ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿ, ಹವಾಮಾನ ವರದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಮಾಹಿತಿಗಳನ್ನು ನೇರ ಪ್ರಸಾರ ಮತ್ತು 19 ಸರ್ಕಾರಿ ಶಾಲೆಗಳಲ್ಲಿ 2.57 ಕೋಟಿ ವೆಚ್ಚದಲ್ಲಿ ಗಣಕಯಂತ್ರದ ಲ್ಯಾಬ್ಗಳನ್ನು ಒದಗಿಸಿ ಡಿಜಿಟಲ್ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದರು.
ನಗರದಲ್ಲಿ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ರಸ್ತೆಗಳಲ್ಲಿ ಮಳೆ ನೀರು ಪೈಪ್ ಚರಂಡಿ, ವಿದ್ಯುತ್, ದೂರವಾಣಿ ಯುಜಿಡಿ, ಗ್ಯಾಸ್ ನೀರಿನ ಪೈಪ್ಲೈನ್ಗಳನ್ನು ಭೂಗತವಾಗಿ ಸ್ಥಾಪಿಸಲಾಗುವುದು. ರಸ್ತೆಗಳ ಬದಿಯಲ್ಲಿ ಸುಂದರವಾದ ಮರಗಳನ್ನು ನೆಡುವುದರಿಂದ ಮತ್ತು ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಈ ರಸ್ತೆಗಳು ಸುಂದರವಾಗಿ ಕಾಣುತ್ತವೆ ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರ ಸತೀಶ್, ಮುಖ್ಯ ಹಣಕಾಸು ಅಧಿಕಾರಿ ಪ್ರಭಾವತಿ, ಟೀಮ್ ಲೀಡರ್ ಶ್ರೀನಾಥ್ರೆಡ್ಡಿ, ಜನರಲ್ ಮ್ಯಾನೇಜರ್ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರ ಗುರಪಾದಯ್ಯ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ಹೇಳಿಕೆ
- ಸ್ಮಾರ್ಟ್ಸಿಟಿ ಯೋಜನೆಯಲ್ಲಿ ನಗರದ ಹೊರ ವಲಯದಲ್ಲಿರುವ ಗಾಜಿನ ಮನೆಗೆ ಶೌಚಾಲಯ ನಿರ್ಮಾಣ, ರೂ. 5 ಕೋಟಿ ವೆಚ್ಚದಲ್ಲಿ ಆಕರ್ಷಕ ಅಕ್ವೇರಿಯಂ, ಲೇಸರ್ ಶೋ, ಪ್ಲಾಂಟೇನ್ ಹಾಗೂ ಟಂಗಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದಲ್ಲಿ ಪೊಲೀಸರ ನೈಟ್ ಬೀಟ್ ಬದಲಾಗಿ ದ್ರೋಣ್ಬೀಟ್ ಮಾಡಲು ಉದ್ದೇಶಿಸಿದ್ದ್ದು, ಇದು ನಿರ್ಮಾಣವಾದರೆ ಪೊಲೀಸರಿಗೆ ರಾತ್ರಿ ವೇಳೆ ಬೀಟ್ ಮಾಡವುದು ತಪ್ಪಲಿದೆ. ಈ ಯೋಜನೆ ಸಾಕಾರಗೊಂಡರೆ ಇದು ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನಗರದಲ್ಲಿ ಸಾರ್ಟ್ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಹಾಗೂ ಮುಂದೆ ನಡೆಯಲಿರುವ ಕಾಮಗಾರಿ ಬಗ್ಗೆ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಲ್ಲಾ ಕಾಮಗಾರಿಗಳು ಗುಣಮಟ್ಟ ಮತ್ತು ತ್ವರಿತ ಗತಿಯಲ್ಲಿ ನಡೆಯುವಂತೆ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಲಾಗುವುದು.
|ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ, ಶರೀಫ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
