Connect with us

ದಿನದ ಸುದ್ದಿ

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ನಾಲ್ಕು ವರ್ಷ : 1059.92 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಪ್ರಗತಿ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆ ಪ್ರಾರಂಭವಾದಾಗಿನಿಂದ ಇಂದಿನವರೆಗೆ ನಗರದಲ್ಲಿ ರೂ.1059.92 ಕೋಟಿ ವೆಚ್ಚದಲ್ಲಿ 74 ಕಾಮಗಾರಿಗಳನ್ನು ರೂಪಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಶರೀಫ್ ತಿಳಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾಗಿ ಜೂ.25 ಕ್ಕೆ 4 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಸ್ಮಾರ್ಟ್‌ಸಿಟಿ ಲಿ, ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೂ.5.88 ಕೋಟಿಯಲ್ಲಿ 12 ಕಾಮಗಾರಿಗಳು ಮುಕ್ತಾಯಗೊಂಡಿವೆ. ರೂ. 549.06 ಕೋಟಿಯಲ್ಲಿ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.161.73 ಕೋಟಿಯಲ್ಲಿ 09 ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಡಿ.ಪಿ.ಆರ್ ಹಂತದಲ್ಲಿ ರೂ.353.25 ಕೋಟಿ ವೆಚ್ಚದಲ್ಲಿ 12 ಕಾಮಗಾರಿಗಳಿವೆ.ದಾವಣಗೆರೆ ಜಿಲ್ಲೆಯು ಸ್ಮಾರ್ಟ್‌ಸಿಟಿ ಯೋಜನೆಯಡಿ ಮೊದಲ ಹಂತದಲ್ಲೇ ಆಯ್ಕೆಯಾಗಿದ್ದು, ಈ ಯೋಜನೆಯಲ್ಲಿ ಎಬಿಡಿ ಹಾಗೂ ಪಾನ್‌ಸಿಟಿ ಎಂದು ಎರಡು ವಿಭಾಗ ಮಾಡಿ ನಗರದಾದ್ಯಂತ ಹಲವಾರು ಕಾಮಗಾರಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.

ಮೊದಲ ಹಂತದಲ್ಲಿ ರೂ.1.39 ಕೋಟಿಯಲ್ಲಿ 9 ಪಾರ್ಕ್‌ಗಳು ಹಾಗೂ ಎರಡನೇ ಹಂತದಲ್ಲಿ 37 ಪಾರ್ಕ್‌ಗಳನ್ನು ಆಯ್ಕೆ ಮಾಡಿಕೊಂಡು ಪಾರ್ಕ್‌ನಲ್ಲಿ ಇ-ಶೌಚಾಲಯಗಳನ್ನು ಒಂದು ಯುರೋಪಿಯನ್ ಶೈಲಿ ಹಾಗೂ ಇನ್ನೊಂದು ಭಾರತೀಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. 1 ರಿಂದ 10 ರ ವರೆಗಿನ ನಾಣ್ಯ ಹಾಕಿದರೆ ಇ-ಶೌಚಾಲಯ ಬಾಗಿಲು ತೆರಯುತ್ತದೆ. ಪ್ರತಿ 5 ಜನರ ಉಪಯೋಗದ ನಂತರ ಸ್ವಯಂ ಚಾಲಿತವಾಗಿ ಒಳಗಡೆ ಫ್ಲೋರ್‌ನ್ನು ಸ್ವಚ್ಛಗೊಳಿಸುತ್ತದೆ ಎಂದರು.

ರೂ. 3.58 ಕೋಟಿಯಲ್ಲಿ ನಗರದ 52 ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಬಸ್ ಶೆಲ್ಟರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಬಸ್‌ಗಳಿಗೆ ಜಿಪಿಎಸ್ ಅಳವಡಿಸಿ ಬಸ್ ಬರುವ ಸಮಯನ್ನು ಪ್ರದರ್ಶಿಸುವಂತೆ ಎಲ್‌ಇಡಿ ಫಲಕಗಳನ್ನು ಅಳವಡಿಸಲಾಗುವುದು. ರೂ. 25.41 ಕೋಟಿ ವೆಚ್ಚದಲ್ಲಿ ಹಳೇ ಬಸ್ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯನ್ನು ರೂಪಿಸಲಾಗಿದ್ದು, 21420.74 ಚ.ಮೀ. ವಿಸ್ತೀರ್ಣದಲ್ಲಿ ಕೆಳ ಮಹಡಿಯಲ್ಲಿ 92 ನಾಲ್ಕು ಚಕ್ರದ ವಾಹನ ಮತ್ತು 122 ದ್ವಿಚಕ್ರ ವಾಹನ ನಿಲುಗಡೆ ಹಾಗೂ ನೆಲ ಮಹಡಿಯಲ್ಲಿ 12 ಬಸ್ ನಿಲ್ಲುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಿಲ್ದಾಣದಲ್ಲಿ ಅಂಗಡಿಗಳು, ನಿರ್ವಹಣಾ ಕೊಠಡಿ, ಶೌಚಾಲಯ, ಸ್ನಾನದ ಕೊಠಡಿ, ರ‌್ಯಾಂಪ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು, ಲಿಫ್ಟ್, ಬಸ್ ಸಂಚಾರದ ಫಲಕಗಳು ಹಾಗೂ ಭದ್ರತೆಗಾಗಿ ಸಿ.ಸಿ ಟಿವಿ ಅಳವಡಿಸಲಾಗುವುದು ಎಂದರು.

ಬೈಸಿಕಲ್ ಷೇರಿಂಗ್ ಸಿಸ್ಟಮ್ ಹಾಗೂ ಇ-ರಿಕ್ಷಾ: ನಗರದಲ್ಲಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮತ್ತು ಸುರಕ್ಷತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರೂ.9.90 ಕೋಟಿಗಳಲ್ಲಿ ಸಾರ್ವಜನಿಕ ಬೈಸಿಕಲ್ ಷೇರಿಂಗ್ ಸಿಸ್ಟಮ್ ಅಳವಡಿಸಲಾಗುವುದು. 20 ಡಾಕಿಂಗ್ ಸ್ಟೇಷನ್ಸ್‌ಗಳಿದ್ದು, 100 ವಿದ್ಯುತ್ ಚಾಲಿತ ಮತ್ತು 100 ಸಾಮಾನ್ಯ ಬೈಸಿಕಲ್ ವ್ಯವಸ್ಥೆ ಮಾಡಲಾಗುವುದು. ಈ ಕಾಮಗಾರಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದ್ದು, ಮುಂದಿನ 15 ರಿಂದ 20 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಪರಿಸರ ಮಾಲಿನ್ಯ ಕಡಿಮೆ ಮಾಡುವ ದೃಷ್ಠಿಯಿಂದ ಹಾಗೂ ಉದ್ಯೋಗ ನೀಡುವ ಸಲುವಾಗಿ ಆಧುನಿಕ ತಂತ್ರಜ್ಞಾನವುಳ್ಳ ಬ್ಯಾಟರಿ ಚಾಲಿತ 80 ಆಟೋಗಳನ್ನು ಸ್ಥಳೀಯರಿಗೆ (60:40) ಸಬ್ಸಿಡಿ ಆಧಾರದಲ್ಲಿ ನೀಡಲಾಗುವುದು. ಈಗಾಗಲೇ ನಾಲ್ವರು ಮುಂದೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಟೋಗಳನ್ನು ವಿತರಿಸಲಾಗುವುದು. ಮಹಿಳೆಯರಿಗೆ ಶೇ.75 ರಷ್ಟು ಸಬ್ಸಿಯಡಿಯಲ್ಲಿ ನೀಡಲಿದ್ದೇವೆ ಎಂದರು.

ಜಿಲ್ಲೆಯ ಸಾರ್ವಜನಿಕರ ಹಿತದೃಷ್ಠಿಯಿಂದ ರೂ.2.85 ಕೋಟಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಚಿಂತಿಸಲಾಗಿದ್ದು, ಈ ಕುರಿತು ಸರ್ವೆ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಜನರ ಆರೋಗ್ಯಾಭಿವೃದ್ಧಿ ಮತ್ತು ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ವ್ಯಾಯಾಮ ಶಾಲೆ ಮತ್ತು ಮಕ್ಕಳ ಆಟಿಕೆ ಉಪಕರಣಗಳನ್ನು ನಗರದ 16 ಉದ್ಯಾನವನಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೈಸಿಕಲ್, ಸೀಟೆಡ್ ಚೆಸ್ಟ್ ಪ್ರಸ್, ಎಚ್‌ಡಿ ಸಿಟ್ ಆಫ್, ಎಚ್.ಡಿ. ಸ್ಕಾಟ್ ಪುಶಿಂಗ್, ಹೆಲ್ತ್ ವಾಕರ್ ಸೇರಿದಂತೆ ಮಕ್ಕಳ ಆಟಿಕೆ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ತುಂಗಾಭದ್ರ ನದಿಗೆ ಅಣೆಕಟ್ಟು ನಿರ್ಮಾಣ: ದಾವಣಗೆರೆ ನಗರಕ್ಕೆ 24*7 ಕುಡಿಯುವ ನೀರು ಒದಗಿಸಲು ತುಂಗಾಭದ್ರ ನದಿಗೆ 550 ಮೀ ಉದ್ದದ ಹಾಗೂ 2.5 ಮೀ ಅಗಲದ ಅಣೆಕಟ್ಟನ್ನು ರಾಜನಹಳ್ಳಿ ಜಾಕ್‌ವಲ್ ಬಳಿ ರೂ.76.11 ಕೋಟಿಯಲ್ಲಿ ನಿರ್ಮಿಸಲಾಗುವುದು. ಈ ಅಣೆಕಟ್ಟಿನಲ್ಲಿ 0.2 ಟಿಎಂಸಿ ನೀರು ಶೇಖರಣೆ ಮತ್ತು 50+5 ಸ್ವಯಂ ಚಾಲಿತ ಗೇಟ್ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಯನ್ನು ಒಂದರೆಡು ತಿಂಗಳಿನಲ್ಲಿ ಪಾರಂಭಿಸಲಾಗುವುದು ಎಂದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ರೂ.120 ಕೋಟಿಯಲ್ಲಿ ಅಭಿವೃದ್ಧಿಪಡಿಸಿ ಅದರಲ್ಲಿ ಮೂರು ಘಟಕಗಾಳಾಗಿ ಬಸ್ ಟರ್ಮಿನಲ್, ಕೆಎಸ್‌ಆರಟಿಸಿ ಕಚೇರಿ ಹಾಗೂ ಶಾಪಿಂಗ್ ಮಾಲ್ ಮತ್ತು ಚಿತ್ರ ಮಂದಿರ ನಿರ್ಮಿಸಲಾಗುವುದು. ಒಂದು ನೆಲಮಹಡಿ ಸೇರಿದಂತೆ 4 ಮಹಡಿಯ ಕಟ್ಟಡವನ್ನು ನಿರ್ಮಿಸಲಾಗುವುದು. 45 ಬಸ್‌ಗಳ ನಿಲುಗಡೆ ಹಾಗೂ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿ ಭದ್ರತೆಯ ದೃಷ್ಟಿಯಿಂದ ಸಿ,ಸಿ.ಕ್ಯಾಮಾರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ನಗರದ ಎಂಟು ಸರ್ಕಾರಿ ಕಚೇರಿಗಳ ಮೇಲ್ಚಾವಣಿಯಲ್ಲಿ ರೂ.2.21 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ಸ್ ಅಳವಡಿಕೆ ಮಾಡಿ ಸೌರ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಳಿತಾಯ ಮತ್ತು ಬೆಸ್ಕಾಂ ಇಲಾಖೆಗೆ ಪ್ರತಿ ಯೂನಿಟ್‌ಗೆ ಪಾವತಿಸುತ್ತಿದ್ದ ರೂ. 8.50 ಬದಲಿಗೆ ಪ್ರತಿ ಯೂನಿಟ್‌ಗೆ ರೂ. 5.90 ಗಳನ್ನು 25 ವರ್ಷಗಳವರೆಗೆ ಪಾವತಿಸಲು ನಿಗದಿಯಾಗಿರುತ್ತದೆ. ಹೆಚ್ಚುವರಿಯಾಗಿರುವ ವಿದ್ಯುಚ್ಛಕ್ತಿಯನ್ನು ಬೆಸ್ಕಾಂ ಇಲಾಖೆಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಅಪರಾಧ ನಿಯಂತ್ರಿಸಲು, ಸ್ವಚ್ಚತೆ ಬಗ್ಗೆ ಮಾಹಿತಿ ಪಡೆಯಲು ಮತ್ತು ಸುರಕ್ಷತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮರಾಗಳನ್ನು ರೂ.74.84 ಕೋಟಿ ವೆಚ್ಚದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಇಂಟಲಿಜೆಂಟ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ, ಈ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್‌ನಿಂದ ಸಾರ್ವಜನಿಕರಿಗೆ ಸಾರಿಗೆ ಮತ್ತು ತುರ್ತು ಸೇವೆಗಳ ಮಾಹಿತಿ ನೀಡುವುದು, ಆನ್‌ಲೈನ್ ಅಪ್ಲಿಕೇಷನ್‌ಗಳನ್ನು ನಿಯಂತ್ರಣದಲ್ಲಿಡುವ ವ್ಯವಸ್ಥೆ ಕಲ್ಪಿಸುವುದು, ವಾಯು ಮಾಲಿನ್ಯದ ಮಾಹಿತಿಗಾಗಿ ಸೆನ್ಸಾರ್‌ಗಳನ್ನು ಅಳವಡಿಸುವುದು ಸೇರಿದಂತೆ ಇ-ಕಲಿಕಾ ಕೇಂದ್ರದ ಮೂಲಕ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು. ಇ-ಆಡಳಿತ ಕಾರ್ಯಕ್ರಮದಲ್ಲಿ ಕಿಯೋಸ್ಕ್, ಒಂದು ನಗರ ಒಂದು ಸಂಖ್ಯೆ ಮತ್ತು ಇತರೆ ಸಾರ್ವಜನಿಕ ಸೇವೆಗಳನ್ನು ರೂಪಿಸಲಾಗಿದೆ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸಲಾಗುವುದು ಎಂದರು.

ನಗರದ 10 ಸರ್ಕಾರಿ ಕಚೇರಿಗಳ ಆವರಣಗಳಲ್ಲಿ 2.42 ಕೋಟಿ ವೆಚ್ಚದಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿ, ಹವಾಮಾನ ವರದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಮಾಹಿತಿಗಳನ್ನು ನೇರ ಪ್ರಸಾರ ಮತ್ತು 19 ಸರ್ಕಾರಿ ಶಾಲೆಗಳಲ್ಲಿ 2.57 ಕೋಟಿ ವೆಚ್ಚದಲ್ಲಿ ಗಣಕಯಂತ್ರದ ಲ್ಯಾಬ್‌ಗಳನ್ನು ಒದಗಿಸಿ ಡಿಜಿಟಲ್ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದರು.

ನಗರದಲ್ಲಿ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ರಸ್ತೆಗಳಲ್ಲಿ ಮಳೆ ನೀರು ಪೈಪ್ ಚರಂಡಿ, ವಿದ್ಯುತ್, ದೂರವಾಣಿ ಯುಜಿಡಿ, ಗ್ಯಾಸ್ ನೀರಿನ ಪೈಪ್‌ಲೈನ್‌ಗಳನ್ನು ಭೂಗತವಾಗಿ ಸ್ಥಾಪಿಸಲಾಗುವುದು. ರಸ್ತೆಗಳ ಬದಿಯಲ್ಲಿ ಸುಂದರವಾದ ಮರಗಳನ್ನು ನೆಡುವುದರಿಂದ ಮತ್ತು ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಈ ರಸ್ತೆಗಳು ಸುಂದರವಾಗಿ ಕಾಣುತ್ತವೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರ ಸತೀಶ್, ಮುಖ್ಯ ಹಣಕಾಸು ಅಧಿಕಾರಿ ಪ್ರಭಾವತಿ, ಟೀಮ್ ಲೀಡರ್ ಶ್ರೀನಾಥ್‌ರೆಡ್ಡಿ, ಜನರಲ್ ಮ್ಯಾನೇಜರ್ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರ ಗುರಪಾದಯ್ಯ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಹೇಳಿಕೆ

  • ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಗರದ ಹೊರ ವಲಯದಲ್ಲಿರುವ ಗಾಜಿನ ಮನೆಗೆ ಶೌಚಾಲಯ ನಿರ್ಮಾಣ, ರೂ. 5 ಕೋಟಿ ವೆಚ್ಚದಲ್ಲಿ ಆಕರ್ಷಕ ಅಕ್ವೇರಿಯಂ, ಲೇಸರ್ ಶೋ, ಪ್ಲಾಂಟೇನ್ ಹಾಗೂ ಟಂಗಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದಲ್ಲಿ ಪೊಲೀಸರ ನೈಟ್ ಬೀಟ್ ಬದಲಾಗಿ ದ್ರೋಣ್‌ಬೀಟ್ ಮಾಡಲು ಉದ್ದೇಶಿಸಿದ್ದ್ದು, ಇದು ನಿರ್ಮಾಣವಾದರೆ ಪೊಲೀಸರಿಗೆ ರಾತ್ರಿ ವೇಳೆ ಬೀಟ್ ಮಾಡವುದು ತಪ್ಪಲಿದೆ. ಈ ಯೋಜನೆ ಸಾಕಾರಗೊಂಡರೆ ಇದು ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನಗರದಲ್ಲಿ ಸಾರ್ಟ್‌ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಹಾಗೂ ಮುಂದೆ ನಡೆಯಲಿರುವ ಕಾಮಗಾರಿ ಬಗ್ಗೆ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಲ್ಲಾ ಕಾಮಗಾರಿಗಳು ಗುಣಮಟ್ಟ ಮತ್ತು ತ್ವರಿತ ಗತಿಯಲ್ಲಿ ನಡೆಯುವಂತೆ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಲಾಗುವುದು.

|ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ, ಶರೀಫ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ1 week ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending