Connect with us

ದಿನದ ಸುದ್ದಿ

ದಾವಣಗೆರೆ ವಿವಿ 7ನೇ ವಾರ್ಷಿಕ ಘಟಿಕೋತ್ಸವ :56 ಪಿಹೆಚ್‍ಡಿ-62 ಚಿನ್ನದ ಪದಕ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ 7ನೇ ವಾರ್ಷಿಕ ಘಟಿಕೋತ್ಸವ ಬುಧವಾರ ಇಲ್ಲಿನ ವಿವಿ ಕ್ಯಾಂಪಸ್‍ನ ಶಿವಗೊಂಗೋತ್ರಿ ಆವರಣದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ವಯ ಸರಳವಾಗಿ ನಡೆಯಿತು.

ಸಮಾರಂಭದಲ್ಲಿ 56 ಜನರಿಗೆ ಪಿಹೆಚ್‍ಡಿ ಪ್ರದಾನ ಮಾಡಲಾಯಿತು. 62 ಚಿನ್ನದ ಪದಕ ನೀಡಲಾಯಿತು. 8441 ವಿದ್ಯಾರ್ಥಿಗಳು ಸ್ನಾತಕ ಪದವಿ ಹಾಗೂ 1592 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದರು.

ಗೌರವ ಡಾಕ್ಟರೇಟ್

ಈ ಬಾರಿ ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು ಕಲಬುರ್ಗಿಯ ಶರಣಬಸವೇಶ್ವರ ಅಪ್ಪ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷರಾಗಿರುವ ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಅವರಿಗೆ ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 30 ವರ್ಷದ ಸಾಮಾಜಿಕ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಯಿತು.

ವರ್ಚುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಮುಖ್ಯ ಭಾಷಣ ನೆರವೇರಿಸಿದ ವಿಕ್ರಮ್ ಸಾರಾಭಾಯಿ ಪ್ರೊಫೆಸರ್ ಹಾಗೂ ಇಸ್ರೋದ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್. ಕಿರಣ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ಕೇವಲ ಕಾಲೇಜು ಶಿಕ್ಷಣಕ್ಕೆ ಸೀಮಿತವಾಗಬಾರದು. ಕಲಿಕೆ ಎಂದಿಗೂ ಅಂತ್ಯವಾಗಿವುದಿಲ್ಲ. ಬದಲಾಗಿ ಅದೊಂದು ನಿರಂತರ ಪ್ರಕ್ರಿಯೆಯಾಗಿದ್ದು, ನಿರಂತರ ಕಲಿಕೆÀ ಸ್ಪರ್ಧಾತ್ಮಕ ಹಾಗೂ ವೇಗವಾಗಿ ಬದಲಾಗುವ ಪರಿಸ್ಥಿತಿಯಲ್ಲಿ ಮುನ್ನಡೆ ಸಾಧಿಸಲು ಸಹಕರಿಸುತ್ತದೆ ಎಂದು ಹೇಳಿದರು.

ಪ್ರತಿಭಾ ಕುಲವನ್ನು ರೂಪಿಸುವಲ್ಲಿ ಶೈಕ್ಷಣಿಕ ವಲಯದ ಪಾತ್ರ ತುಂಬಾ ದೊಡ್ಡದಿದೆ. ಇದರಿಂದಾಗಿ ದೇಶ ಎಲ್ಲಾ ವಲಯಗಳಲ್ಲಿ ಬೆಳೆಯಲು, ಸ್ಪರ್ಧಿಸಲು ಹಾಗೂ ಯಶಸ್ಸು ಗಳಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಳೆಯ ದಾರಿಯಲ್ಲಿ ಹೆಜ್ಜೆ ಹಾಕದೇ,ತಮ್ಮದೇ ಆದ ಹೊಸ ಪಥದಲ್ಲಿ ವೇಗವಾಗಿ ರೂಪಿಸಿಕೊಳ್ಳಬೇಕು. ಆ ಮೂಲಕ ತಂತ್ರಜ್ಞಾನವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕೋವಿಡ್ ನಿರ್ವಹಣೆಯಲ್ಲಿ ತಂತ್ರಜ್ಞಾನ ಮಹತ್ವಪೂರ್ಣವಾಗಿ ನೆರವಾಗಿದ್ದು, ಕೇವಲ ಆರೋಗ್ಯವಷ್ಟೇ ಅಲ್ಲದೆ, ದೈನಂದಿನ ಜೀವನಕ್ಕೂ ತಂತ್ರಜ್ಞಾನ ನೆರವಾಗಿರುವುದು ವಿಶೇಷವಾಗಿದೆ. ಕೊರೊನಾ ಹರಡುತ್ತಿರುವಂತೆಯೇ ತಂತ್ರಜ್ಞಾನ ಪರಿಹಾರಗಳು ಸೋಂಕು ನಿಗಾ ಹಾಗೂ ನಿಯಂತ್ರಣಕ್ಕೆ ನೆರವಾಗಿದೆ. ಇದರಿಂದಾಗಿ ಆರೋಗ್ಯ ವ್ಯವಸ್ಥೆ ಮೇಲಿನ ಹೊರೆ ಹಾಗೂ ಆರೋಗ್ಯ ವೃತ್ತಿಪರರ ಕಾರ್ಯ ನಿರ್ವಹಣೆಯ ಭಾರ ಕಡಿಮೆಯಾಗಿರುವುದು ವಿಶೇಷ ಎಂದು ಬಣ್ಣಿಸಿದರು.

ದೈಹಿಕ ಅಂತರ ಕಾಯ್ದುಕೊಳ್ಳಬೇಕಾದ ಈ ಸಂದರ್ಭದಲ್ಲಿ ವರ್ಚುಯಲ್ ಪ್ಲಾಟ್‍ಫಾರಂಗಳು, ವಿಡಿಯೋ ಕಾನ್ಫರೆನ್ಸ್ ಹಾಗೂ ಡಿಜಿಟಲ್ ನಿಗಾ ಅತ್ಯುಪಯುಕ್ತವಾಗಿವೆ. ವಿಶ್ವದೆಲ್ಲೆಡೆ ರೋಗಿಗಳಿಗೆ ದೂರದಿಂದಲೇ ಆರೋಗ್ಯ ಸೇವೆ ನೀಡುವುದು ಹೆಚ್ಚಾಗುತ್ತಿದೆ. ಟೆಲಿಮೆಡಿಸಿನ್ ದೂರದಲ್ಲಿರುವ ರೋಗಿಗಳ ನಿರ್ವಹಣೆ ಹಾಗೂ ಅವರ ಜೊತೆಗಿನ ಸಂವಾದಕ್ಕೆ ವೈದ್ಯರಿಗೆ ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.

ಮೊಬೈಲ್ ಪಾವತಿ ತಂತ್ರಾಂಶಗಳು ಹಾಗೂ ಸಾಮಾಜಿಕ ಮಾಧ್ಯಮಗಳು ಕ್ಷಿಪ್ರವಾಗಿ ಜನರಿಂದ ಮಾಹಿತಿ ಪಡೆದುಕೊಳ್ಳುವ ಮೂಲಕ ಸಂವಹನಕ್ಕೆ ನೆರವಾಗುತ್ತಿವೆ. ವಿಮಾನ ನಿಲ್ದಾಣ ಹಾಗೂ ಇತರ ಪ್ರದೇಶಗಳಲ್ಲಿ ಅಳವಡಿಸಲಾಗುವ ಥರ್ಮಲ್ ಇಮೇಜಿಂಗ್ ಕ್ಯಾಮೆರಾಗಳಿಂದಾಗಿ ಜ್ವರದಿಂದ ಬಳಲುತ್ತಿರುವವರ ತ್ವರಿತ ಪತ್ತೆ ಸಾಧ್ಯವಾಗಿದೆ ಎಂದು ವಿವರಿಸಿದರು.

ಭಾರತದ ಬಾಹ್ಯಾಕಾಶ ಯೋಜನೆ ಆರಂಭದ ದಿನದಿಂದಲೂ ಉಪಗ್ರಹ ಸಂವಹನ, ಪ್ರಸಾರ, ಭೂ ಸರ್ವೇಕ್ಷಣೆ, ಬಾಹ್ಯಾಕಾಶ ವಿಜ್ಞಾನ ಅಧ್ಯಯನ, ಬಾಹ್ಯಾಕಾಶ ಸಾರಿಗೆ ವ್ಯವಸ್ಥೆಗಳು ಹಾಗೂ ಸಂಬಂಧಿತ ಯೋಜನೆಗಳು ವಿಶಿಷ್ಟತೆಗಳನ್ನು ರೂಢಿಸಿಕೊಂಡಿದೆ. ಭಾರತವು ಬಾಹ್ಯಾಕಾಶ ತಂತ್ರಜ್ಞಾನವನ್ನು ವಿಕೋಪ ನಿರ್ವಹಣೆ, ಬೆಸ್ತರಿಗೆ ನೆರವು ನೀಡುವಂತಹ ಜನ ಸಾಮಾನ್ಯರಿಗೆ ಉಪಯುಕ್ತ ಕ್ರಮಗಳಿಗೆ ಬಳಸುತ್ತಾ ಬಂದಿದೆ ಎಂದು ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ವಿವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಕೋವಿಡ್ ನಿಯಂತ್ರಣ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಸುರಕ್ಷತೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದ ಅವರು, ಕಾರ್ಯಕ್ರಮದಲ್ಲಿ ಸ್ವರ್ಣ ಪದಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

2018-19 ನೇ ಸಾಲಿನಲ್ಲಿ ಸ್ನಾತಕ ಪದವಿಯಲ್ಲಿ ಶೇ. 56.55 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ. 82.87 ರಷ್ಟು ಫಲಿತಾಂಶ ಬಂದಿದೆ. ದಾವಣಗೆರೆ ವಿವಿ ಸ್ಥಾಪನೆ ನಂತರ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿದೆ. ಕರ್ನಾಟಕದ ಕಿರಿಯ ವಿಶ್ವವಿದ್ಯಾನಿಲಯಗಳಲ್ಲಿ ದಾವಣಗೆರೆ ವಿವಿ ಕೂಡ ಒಂದಾಗಿದ್ದು, ಒಟ್ಟು 251 ಎಕರೆ ಪ್ರದೇಶದಲ್ಲಿ ಹಸಿರು ವಾತಾವರಣದಲ್ಲಿರುವುದು ವಿಶೇಷವಾಗಿದೆ. ಹಾಗೂ ಇದು ಅಸ್ತಿತ್ವಕ್ಕೆ ಬಂದ ಪ್ರಥಮ ದಶಕದಲ್ಲಿಯೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.

ವಿಜ್ಞಾನ, ಕಲಾ ಹಾಗೂ ವಾಣಿಜ್ಯ ನಿಕಾಯಗಳಡಿಯಲ್ಲಿ ಹಲವಾರು ಕೋರ್ಸ್ ಚಾಯ್ಸ್ ಬೆಸ್ಟ್ ಕ್ರೆಡಿಟ್ ಸಿಸ್ಟ್‍ಂ ಅಡಿ ಶಿಕ್ಷಣ ನೀಡಲಾಗುತ್ತಿದೆ. ಎಲ್ಲಾ ಕೋರ್ಸ್‍ಗಳಿಗೂ ಸಿಬಿಸಿಎಸ್ ಪರಿಚಯಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ನ್ಯಾಯ ಒದಗಿಸುವ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ಪ್ರತಿಯೊಂದು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

56 ಜನರಿಗೆ ಪಿಹೆಚ್‍ಡಿ ಪ್ರದಾನ

03 ಮಹಿಳಾ ಹಾಗೂ 02 ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 05 ಜನ ಮಾಸ್ಟರ್ ಆಫ್ ಫಿಲಾಸಫಿ (ಎಂ.ಫಿಲ್) ಮತ್ತು 11 ಮಹಿಳಾ ಹಾಗೂ 45 ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 56 ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿ.ಎಚ್.ಡಿ) ಪದವಿ ಪ್ರದಾನ ಮಾಡಲಾಯಿತು.

ಕನ್ನಡ ವಿಭಾಗದ ವಿನಯವತಿಗೆ 4 ಚಿನ್ನದ ಪದಕ

ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು ಸ್ವರ್ಣ ಪದಕಗಳ ಗಳಿಕೆಯಲ್ಲೂ ಪಾರಮ್ಯ ಮೆರೆದಿರುವುದು ವಿಶೇಷ. ಒಟ್ಟು 33 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿನಿಯರು ಚಿನ್ನದ ಪದಕ ಗಳಿಸಿದ್ದಾರೆ. ದಾವಣಗೆರೆ ವಿವಿಯ ಸ್ನಾತಕೋತ್ತರ ಕನ್ನಡ ವಿಭಾಗದ ವಿನಯವತಿ ಕೆ.ಬಿ. ವಿದ್ಯಾರ್ಥಿನಿ ಅತೀ ಹೆಚ್ಚು ಅಂಕ ಪಡೆದು 4 ಸ್ವರ್ಣ ಪದಕಗಳನ್ನು ಪಡೆದರು.

62 ಚಿನ್ನದ ಪದಕ

2018-19 ನೇ ಸಾಲಿನಲ್ಲಿ 62 ಚಿನ್ನದ ಪದಕಗಳನ್ನು ನೀಡಲಾಗುತ್ತಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 27 ಮಹಿಳಾ ವಿದ್ಯಾರ್ಥಿಗಳು ಹಾಗೂ 6 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 33 ವಿದ್ಯಾರ್ಥಿಗಳು 62 ಚಿನ್ನದ ಪದಕಗಳನ್ನು ಹಂಚಿಕೊಂಡರು.

10,033 ವಿದ್ಯಾರ್ಥಿಗಳಿಗೆ ಪದವಿ

ಸ್ನಾತಕ ಹಾಗೂ ಸ್ನಾತಕೋತ್ತರ ಸೇರಿದಂತೆ ಒಟ್ಟು 10,033 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಬಿಎ, ಬಿಕಾಂ, ಬಿಬಿಎಂ ಸೇರಿದಂತೆ ವಿವಿಧ ಪದವಿ ವ್ಯಾಸಂಗದಲ್ಲಿ 2018-19 ನೇ ಸಾಲಿನಲ್ಲಿ 5408 ಮಹಿಳೆ, 3033-ಪುರುಷ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8441 ವಿದ್ಯಾರ್ಥಿಗಳು ಸ್ನಾತಕ ಪದವಿ ಪಡೆದರು. ಎಂಎ, ಎಂಕಾಂ, ಎಂಎಸ್‍ಸಿ ಸೇರಿದಂತೆ ವಿವಿಧ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ 1073 ಮಹಿಳೆ, 519 ಪುರುಷ ವಿದ್ಯಾರ್ಥಿಗಳು ಸೇರಿದಂತೆ 1592 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದರು.

ದಾವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಅನುಪಸ್ಥಿತಿಯಲ್ಲಿ ಪರೀಕ್ಷಾಂಗ ಕುಲಸಚಿವೆ ಪ್ರೊ.ಎಚ್.ಎಸ್.ಅನಿತಾ ಮತ್ತು ಹಣಕಾಸು ಅಧಿಕಾರಿ ಪ್ರೊ.ಗೋಪಾಲ ಎಂ. ಅಡವಿರಾವ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ರಾಮನಾಥ್, ವಿಜಯಲಕ್ಷ್ಮಿ, ಇನಾಯತ್ ಉಲ್ಲಾ, ಡಾ.ವಿ.ಕುಮಾರ್, ಕಲಾ ನಿಕಾಯದ ಡೀನ್ ಪ್ರೊ.ಕೆ.ಬಿ.ರಂಗಪ್ಪ, ವಾಣಿಜ್ಯ ನಿಕಾಯದ ಡೀನ್ ಪ್ರೊ.ಲಕ್ಷ್ಮಣ, ಶಿಕ್ಷಣ ನಿಕಾಯದ ಡೀನ್ ಡಾ.ವೆಂಕಟೇಶ್, ವಿಜ್ಞಾನ ನಿಕಾಯದ ಡೀನ್ ವಡ್ಲಪುಡಿ ಕುಮಾರ್ ಹಾಗೂ ವಿವಿಯ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಪೋಷಕರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending