ದಿನದ ಸುದ್ದಿ
ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..
~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ
ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ ಹಾಗೂ 2 ದಿನದ ಒಳಗೆ ಫಲಿತಾಂಶವನ್ನು ಪ್ರಕಟಿಸಿ ನೂತನ ದಾಖಲೆಯನ್ನು ನಿರ್ಮಿಸಿರುವ ಅನೇಕ ಪ್ರಸಂಗಗಳು ಉಂಟು. ಆದ್ಯಾಗ್ಯ್ಯು ಇದರಲ್ಲಿ ಅಷ್ಟೇ ಲೋಪದೋಷಗಳಿವೆ. ಇದರಿಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳಿಗೆ ಮೋಸ ಹಾಗೂ ನಷ್ಟ ಉಂಟಾಗಿದೆ ಎಂದರೆ ತಪ್ಪಾಗಲಾರದು.
ವಿಶ್ವವಿದ್ಯಾಲಯದಲ್ಲಿದ್ದಾರಾ ಕಳಪೆ ಮೌಲ್ಯಮಾಪಕರು?
ವಿಶ್ವವಿದ್ಯಾಲಯ ನಡೆಸುವ ಪ್ರತಿ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಹೀಗೊಂದು ಪವಾಡ ಆಗುವುದುoಟು ಏನು ಓದದೇ ಇರುವ ವಿದ್ಯಾರ್ಥಿ 35-40 ಅಂಕ ಗಳಿಸುವ ಪರಿಯನ್ನು ನೋಡಿದ್ದೇವೆ. ಚೆನ್ನಾಗಿ ಓದಿಕೊಂಡು ತರಗತಿಗೆ ಚಾಚು ತಪ್ಪದೆ ಬಂದು ಚೆನ್ನಾಗಿ ಬರೆದರು ವಿದ್ಯಾರ್ಥಿಗಳು ಫೇಲ್ ಆಗುತ್ತಿರುವುದು ನಿಜಕ್ಕೂ ದುರಾದುಷ್ಟಕರ .ಇಲ್ಲಿ ಮೌಲ್ಯ ಮಾಪನದಲ್ಲಿ ಇರುವ ಕಳಪೆಯನ್ನು ಮತ್ತು ಗುಣ ಮಟ್ಟವನ್ನು ಕಾಣಬಹುದು.
ರೀಪಿಟರ್ಸ್ ಗೋಳೇನು?
ರಿಪೀಟರ್ಸ್ ವಿದ್ಯಾರ್ಥಿಗಳು ಬ್ಯಾಕ್ ಲಾಗ್ ಗಳನ್ನು ಮಾಡಿ ಕೊಂಡಿರುವುದೇ ಅವರ ಪಾಲಿನ ದುರದೃಷ್ಟ ಎನ್ನಬಹುದು. ಏಕೆಂದರೆ ಒಂದು ಬಾರಿ ಫೇಲ್ ಆದರೆ ಅದನ್ನು ಮತ್ತೆ – ಮತ್ತೆ ಬರೆದರೂ ಸಹ ಅದನ್ನು ಪಾಸ್ ಆಗಲು ಸೆಣ ಸಾಡಬೇಕಾಗುತ್ತದೆ. ಇದರಿಂದಾಗಿ ತಮ್ಮ ಡಿಗ್ರಿ ಯನ್ನು ಅರ್ಧಕ್ಕೆ ನಿಲ್ಲಿಸಿ ಕೆಲಸದ ಮೊರೆ ಹೋಗುವಂತಾಗಿದೆ. ಒಬ್ಬ ವಿದ್ಯಾರ್ಥಿ ಎಷ್ಟು ಬಾರಿ ಫೇಲ್ ಆಗಲು ಸಾಧ್ಯ, ಮತ್ತೊಮ್ಮೆ ಆತ ಪರೀಕ್ಷೆ ಎದುರಿಸುವಾಗ ತನ್ನ ತಪ್ಪನ್ನೆಲ್ಲ ತಿದ್ದಿಕೊಂಡು ಪ್ರಯತ್ನಿಸುತ್ತಾನೆ. ಆದರೆ ಹತ್ತು ಬಾರಿ ಹೇಗೆ ಫೇಲ್ ಆಗಲು ಸಾಧ್ಯ.
ಸಕಾಲಕ್ಕೆ ಸಿಗದ ಮೂಲ ಅಂಕಪಟ್ಟಿಗಳು
ವಿಶ್ವವಿದ್ಯಾಲಯವು ಈ ಹಿಂದೆ ನಡೆಸಿದ ಒಂದು ಮತ್ತು ನಾಲ್ಕನೇ ಸೆಮಿಸ್ಟರ್ ನವರೆಗೂ ಮಾತ್ರ ಮೂಲ ಅಂಕಪಟ್ಟಿಗಳನ್ನು ವಿತರಿಸಿದೆ. ಐದು ಮತ್ತು ಆರನೇ ಸೆಮಿಸ್ಟರ್ ನ ಅಂಕಪಟ್ಟಿಗಳಿಲ್ಲದೆ ವಿದ್ಯಾರ್ಥಿಗಳು ( ಕಾನೂನು ಕಾಲೇಜು ಮತ್ತು BED ಅಭ್ಯರ್ಥಿಗಳು) ತಮ್ಮ ಪ್ರವೇಶವನ್ನು ರದ್ದು ಮಾಡುವ ಭೀತಿಯನ್ನು ಎದುರಿಸುವಂತಹ ಪರಿಸ್ಥಿತಿ ಉಂಟಾಗಿತ್ತು. ಇದಕ್ಕೆ ಮುಲಾಮು ಎಂಬಂತೆ ರಿಜಿಸ್ಟರ್ ರವರ ಸಹಿಯನ್ನು 5 ಮತ್ತು 6 ನೇ ಸೆಮಿಸ್ಟರ್ ಅಂಕಪಟ್ಟಿಗಳಿಗೆ ಹಾಕಲಾಯಿತು. ಇದಕ್ಕೆ ವಿಶ್ವವಿದ್ಯಾಲಯು ವೇಗವಾಗಿ ಮರುಮೌಲ್ಯ ಮಾಪನದ ನಂತರ ವೇಗವಾಗಿ ಈ ಪ್ರಕ್ರಿಯೆಯನ್ನು ಮುಗಿಸಬಹುದಿತ್ತು. ಸುಪ್ರೀಂಕೋರ್ಟ್ ನ ಆದೇಶದಂತೆ ಒಂದು ವಿಶ್ವವಿದ್ಯಾನಿಲಯವು ನಿಗದಿತ ಅವಧಿಯೊಳಗೆ ಮೂಲ ಅಂಕಪಟ್ಟಿ ಯನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂಬ ನಿರ್ದೇಶನವನ್ನು UGC ಗೆ ನೀಡಿದೆ.
ರಿಪೀಟರ್ಸ್ ಬಂಡೆಲ್ ಗಳನ್ನು ಬೇಕಾ ಬಿಟ್ಟಿ ಮೌಲ್ಯಮಾಪನ ಮಾಡಲಾಗುತ್ತಿದೆಯೇ?
ಮೌಲ್ಯಮಾಪಕರು ಪುನರಾ ವರ್ತಿತ ವಿದ್ಯಾರ್ಥಿಗಳ ಬುಕ್ಲೆಟ್ ಗಳನ್ನು ಸೂಕ್ತ ಉತ್ತರವಿದ್ದರೂ ಸಹ ಸುಮ್ಮನೆ ಗೀಟ್ ಎಳೆದು ಅವರನ್ನು ಫೇಲ್ ಮಾಡುತ್ತಿದ್ದಾರೆ. ಇಂತಹ ಕಳಪೆ ಮೌಲ್ಯಮಾಪಕರಿಂದ ಮೌಲ್ಯಮಾಪನಕ್ಕೆ ಇರುವ ಘನತೆ ಮತ್ತು ಗುಣಮಟ್ಟ ವನ್ನು ಕಳೆದುಕೊಳ್ಳುವoತಾಗಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಕಳಪೆ ಮೌಲ್ಯಮಾಪಕರನ್ನು ಗುರುತಿಸಿ ಅವರನ್ನು ಈ ಪ್ರಕ್ರಿಯೆಯಿಂದ ಕೈಬಿಡಬೇಕು.
ಗುಣಮುಟ್ಟದ ಪರೀಕ್ಷೆಗಳು ಈಗಿಲ್ಲ…
ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗೆ ಇದ್ದಂತಹ ಮೌಲ್ಯ, ಗುಣಮಟ್ಟವು ಮರೆಯಾಗಿವೆ. ನ್ಯಾಯಯುತವಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ, ಕೆಲವು ಖಾಸಗಿ ಕಾಲೇಜುಗಳು ತಮ್ಮ ಫಲಿತಾಂಶವನ್ನು ಸುಧಾರಿಸುದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುತ್ತಿವೆ.. ಇದರಿಂದಾಗಿ ವಿದ್ಯಾರ್ಥಿಗಳು ನಕಲು ಮಾಡಲು ಅವಕಾಶ ಇರುವ ಕಾಲೇಜುಗಳಿಗೆ ಪ್ರವೇಶವನ್ನು ತೆಗೆದುಕೊಳ್ಳುತ್ತಿದ್ದಾರೆ.
ಇವುಗಳನ್ನೆಲ್ಲ ನೋಡಿದರೆ ಪರೀಕ್ಷೆಗಳನ್ನು ನಡೆಸಿದರು ಪ್ರಯೋಜನವಿಲ್ಲ, ಕಾಲೇಜಿಗೆ ರೆಗ್ಯುಲರ್ ಆಗಿ ಹೋಗುವ ಅವಶ್ಯಕತೆ ಇಲ್ಲ, ಕೇವಲ ಜೆರಾಕ್ಸ್ ಅಂಗಡಿಗಳಲ್ಲಿ ಮೈಕ್ರೋ ಜೆರಾಕ್ಸ್ ಮಾಡಿಸಿಕೊಂಡರೆ ಸಾಕು ಪಾಸಾಗಬಹುದು ಎಂಬಂತಹ ಅಲಕ್ಷ್ಯ ವಿದ್ಯಾರ್ಥಿಗಳಿಗೆ ಅವರಿಸಿಕೊಂಡಿದೆ. ಈ ಮಾರ್ಗದ ಮೂಲಕ ಕಲಿತು ಪದವಿ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಹಾಗೂ ಪೋಷಕರಿಗೆ ಏನು ಒಳಿತು ಮಾಡಿಯಾರು?. ನಾವು ಸುಮ್ಮನೆ ಗಣ್ಯರ ಕಾರ್ಯಕ್ರಮಗಳಲ್ಲಿ ನೀತಿ ಭೋದನೆ ಮಾಡುತ್ತೇವೆ ವಿನಃ ಅದನ್ನು ಕಾರ್ಯಗತ ಗೊಳಿಸುವಲ್ಲಿ ಹಾಗೂ ತಪ್ಪು ನಡೆದರು ಸಹ ಪ್ರಶ್ನಿಸದ ಬುದ್ದಿ ಜೀವಿ ಯಂತಿರುವ ಮೌನಿಗಳಾಗಿದ್ದೇವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಇವುಗಳಿಗೆ ನಾಂದಿ ಹಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ…
ಮರುಮೌಲ್ಯಮಾಪನ ಹೆಸರಿಗಷ್ಟೇ
ಪದವಿ ಪರೀಕ್ಷೆ ಗಳಲ್ಲಿ ಕಡಿಮೆ ಅಂಕ ದೊರೆತ ವಿದ್ಯಾರ್ಥಿಗಳು ಮರು ಮೌಲ್ಯಮಾಪನದ ಮೊರೆ ಹೋಗುವುದುoಟು. ಅಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುತ್ತಿದೆ, ಸುಮ್ಮನ್ನೆ ಬಡ ವಿದ್ಯಾರ್ಥಿಗಳು 350 ರೂಪಾಯಿ ಗಳನ್ನು ವ್ಯರ್ಥಮಾಡಿಕೊಳ್ಳುವಂತಹ ಸ್ಥಿತಿ ಏರ್ಪಟ್ಟಿದೆ. ಮೊದಲಿದ್ದ ಅಂಕಗಳನ್ನೇ ಪುನಃ ನಮೂದಿಸುರುತ್ತಾರೆ ಹೊರತು ಅದನ್ನು ನ್ಯಾಯಯು ತವಾಗಿ ಅಂಕಗಳನ್ನು ನೀಡುತ್ತಿಲ್ಲ ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜು ಬಿಡುವಂತಹ ಸ್ಥಿತಿ ಏರ್ಪಟ್ಟಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿಗಳು ಪದವಿ ತ್ಯಜಿಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಕಾಲೇಜುಗಳಿಗೆ ಸೇರುವವರ ಸಂಖ್ಯೆ ಕಡಿಮೆಯಾಗಿ ದಾಖಲಾತಿ ಅಂಕಿ ಅಂಶ ಗಳು ಬದಲಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ2 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ22 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

