Connect with us

ದಿನದ ಸುದ್ದಿ

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

Published

on

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ

ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ ಹಾಗೂ 2 ದಿನದ ಒಳಗೆ ಫಲಿತಾಂಶವನ್ನು ಪ್ರಕಟಿಸಿ ನೂತನ ದಾಖಲೆಯನ್ನು ನಿರ್ಮಿಸಿರುವ ಅನೇಕ ಪ್ರಸಂಗಗಳು ಉಂಟು. ಆದ್ಯಾಗ್ಯ್ಯು ಇದರಲ್ಲಿ ಅಷ್ಟೇ ಲೋಪದೋಷಗಳಿವೆ. ಇದರಿಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳಿಗೆ ಮೋಸ ಹಾಗೂ ನಷ್ಟ ಉಂಟಾಗಿದೆ ಎಂದರೆ ತಪ್ಪಾಗಲಾರದು.

ವಿಶ್ವವಿದ್ಯಾಲಯದಲ್ಲಿದ್ದಾರಾ ಕಳಪೆ ಮೌಲ್ಯಮಾಪಕರು?

ವಿಶ್ವವಿದ್ಯಾಲಯ ನಡೆಸುವ ಪ್ರತಿ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಹೀಗೊಂದು ಪವಾಡ ಆಗುವುದುoಟು ಏನು ಓದದೇ ಇರುವ ವಿದ್ಯಾರ್ಥಿ 35-40 ಅಂಕ ಗಳಿಸುವ ಪರಿಯನ್ನು ನೋಡಿದ್ದೇವೆ. ಚೆನ್ನಾಗಿ ಓದಿಕೊಂಡು ತರಗತಿಗೆ ಚಾಚು ತಪ್ಪದೆ ಬಂದು ಚೆನ್ನಾಗಿ ಬರೆದರು ವಿದ್ಯಾರ್ಥಿಗಳು ಫೇಲ್ ಆಗುತ್ತಿರುವುದು ನಿಜಕ್ಕೂ ದುರಾದುಷ್ಟಕರ .ಇಲ್ಲಿ ಮೌಲ್ಯ ಮಾಪನದಲ್ಲಿ ಇರುವ ಕಳಪೆಯನ್ನು ಮತ್ತು ಗುಣ ಮಟ್ಟವನ್ನು ಕಾಣಬಹುದು.

ರೀಪಿಟರ್ಸ್ ಗೋಳೇನು?

ರಿಪೀಟರ್ಸ್ ವಿದ್ಯಾರ್ಥಿಗಳು ಬ್ಯಾಕ್ ಲಾಗ್ ಗಳನ್ನು ಮಾಡಿ ಕೊಂಡಿರುವುದೇ ಅವರ ಪಾಲಿನ ದುರದೃಷ್ಟ ಎನ್ನಬಹುದು. ಏಕೆಂದರೆ ಒಂದು ಬಾರಿ ಫೇಲ್ ಆದರೆ ಅದನ್ನು ಮತ್ತೆ – ಮತ್ತೆ ಬರೆದರೂ ಸಹ ಅದನ್ನು ಪಾಸ್ ಆಗಲು ಸೆಣ ಸಾಡಬೇಕಾಗುತ್ತದೆ. ಇದರಿಂದಾಗಿ ತಮ್ಮ ಡಿಗ್ರಿ ಯನ್ನು ಅರ್ಧಕ್ಕೆ ನಿಲ್ಲಿಸಿ ಕೆಲಸದ ಮೊರೆ ಹೋಗುವಂತಾಗಿದೆ. ಒಬ್ಬ ವಿದ್ಯಾರ್ಥಿ ಎಷ್ಟು ಬಾರಿ ಫೇಲ್ ಆಗಲು ಸಾಧ್ಯ, ಮತ್ತೊಮ್ಮೆ ಆತ ಪರೀಕ್ಷೆ ಎದುರಿಸುವಾಗ ತನ್ನ ತಪ್ಪನ್ನೆಲ್ಲ ತಿದ್ದಿಕೊಂಡು ಪ್ರಯತ್ನಿಸುತ್ತಾನೆ. ಆದರೆ ಹತ್ತು ಬಾರಿ ಹೇಗೆ ಫೇಲ್ ಆಗಲು ಸಾಧ್ಯ.

ಸಕಾಲಕ್ಕೆ ಸಿಗದ ಮೂಲ ಅಂಕಪಟ್ಟಿಗಳು

ವಿಶ್ವವಿದ್ಯಾಲಯವು ಈ ಹಿಂದೆ ನಡೆಸಿದ ಒಂದು ಮತ್ತು ನಾಲ್ಕನೇ ಸೆಮಿಸ್ಟರ್ ನವರೆಗೂ ಮಾತ್ರ ಮೂಲ ಅಂಕಪಟ್ಟಿಗಳನ್ನು ವಿತರಿಸಿದೆ. ಐದು ಮತ್ತು ಆರನೇ ಸೆಮಿಸ್ಟರ್ ನ ಅಂಕಪಟ್ಟಿಗಳಿಲ್ಲದೆ ವಿದ್ಯಾರ್ಥಿಗಳು ( ಕಾನೂನು ಕಾಲೇಜು ಮತ್ತು BED ಅಭ್ಯರ್ಥಿಗಳು) ತಮ್ಮ ಪ್ರವೇಶವನ್ನು ರದ್ದು ಮಾಡುವ ಭೀತಿಯನ್ನು ಎದುರಿಸುವಂತಹ ಪರಿಸ್ಥಿತಿ ಉಂಟಾಗಿತ್ತು. ಇದಕ್ಕೆ ಮುಲಾಮು ಎಂಬಂತೆ ರಿಜಿಸ್ಟರ್ ರವರ ಸಹಿಯನ್ನು 5 ಮತ್ತು 6 ನೇ ಸೆಮಿಸ್ಟರ್ ಅಂಕಪಟ್ಟಿಗಳಿಗೆ ಹಾಕಲಾಯಿತು. ಇದಕ್ಕೆ ವಿಶ್ವವಿದ್ಯಾಲಯು ವೇಗವಾಗಿ ಮರುಮೌಲ್ಯ ಮಾಪನದ ನಂತರ ವೇಗವಾಗಿ ಈ ಪ್ರಕ್ರಿಯೆಯನ್ನು ಮುಗಿಸಬಹುದಿತ್ತು. ಸುಪ್ರೀಂಕೋರ್ಟ್ ನ ಆದೇಶದಂತೆ ಒಂದು ವಿಶ್ವವಿದ್ಯಾನಿಲಯವು ನಿಗದಿತ ಅವಧಿಯೊಳಗೆ ಮೂಲ ಅಂಕಪಟ್ಟಿ ಯನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂಬ ನಿರ್ದೇಶನವನ್ನು UGC ಗೆ ನೀಡಿದೆ.

ರಿಪೀಟರ್ಸ್ ಬಂಡೆಲ್ ಗಳನ್ನು ಬೇಕಾ ಬಿಟ್ಟಿ ಮೌಲ್ಯಮಾಪನ ಮಾಡಲಾಗುತ್ತಿದೆಯೇ?

ಮೌಲ್ಯಮಾಪಕರು ಪುನರಾ ವರ್ತಿತ ವಿದ್ಯಾರ್ಥಿಗಳ ಬುಕ್ಲೆಟ್ ಗಳನ್ನು ಸೂಕ್ತ ಉತ್ತರವಿದ್ದರೂ ಸಹ ಸುಮ್ಮನೆ ಗೀಟ್ ಎಳೆದು ಅವರನ್ನು ಫೇಲ್ ಮಾಡುತ್ತಿದ್ದಾರೆ. ಇಂತಹ ಕಳಪೆ ಮೌಲ್ಯಮಾಪಕರಿಂದ ಮೌಲ್ಯಮಾಪನಕ್ಕೆ ಇರುವ ಘನತೆ ಮತ್ತು ಗುಣಮಟ್ಟ ವನ್ನು ಕಳೆದುಕೊಳ್ಳುವoತಾಗಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಕಳಪೆ ಮೌಲ್ಯಮಾಪಕರನ್ನು ಗುರುತಿಸಿ ಅವರನ್ನು ಈ ಪ್ರಕ್ರಿಯೆಯಿಂದ ಕೈಬಿಡಬೇಕು.

ಗುಣಮುಟ್ಟದ ಪರೀಕ್ಷೆಗಳು ಈಗಿಲ್ಲ…

ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗೆ ಇದ್ದಂತಹ ಮೌಲ್ಯ, ಗುಣಮಟ್ಟವು ಮರೆಯಾಗಿವೆ. ನ್ಯಾಯಯುತವಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ, ಕೆಲವು ಖಾಸಗಿ ಕಾಲೇಜುಗಳು ತಮ್ಮ ಫಲಿತಾಂಶವನ್ನು ಸುಧಾರಿಸುದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುತ್ತಿವೆ.. ಇದರಿಂದಾಗಿ ವಿದ್ಯಾರ್ಥಿಗಳು ನಕಲು ಮಾಡಲು ಅವಕಾಶ ಇರುವ ಕಾಲೇಜುಗಳಿಗೆ ಪ್ರವೇಶವನ್ನು ತೆಗೆದುಕೊಳ್ಳುತ್ತಿದ್ದಾರೆ.

ಇವುಗಳನ್ನೆಲ್ಲ ನೋಡಿದರೆ ಪರೀಕ್ಷೆಗಳನ್ನು ನಡೆಸಿದರು ಪ್ರಯೋಜನವಿಲ್ಲ, ಕಾಲೇಜಿಗೆ ರೆಗ್ಯುಲರ್ ಆಗಿ ಹೋಗುವ ಅವಶ್ಯಕತೆ ಇಲ್ಲ, ಕೇವಲ ಜೆರಾಕ್ಸ್ ಅಂಗಡಿಗಳಲ್ಲಿ ಮೈಕ್ರೋ ಜೆರಾಕ್ಸ್ ಮಾಡಿಸಿಕೊಂಡರೆ ಸಾಕು ಪಾಸಾಗಬಹುದು ಎಂಬಂತಹ ಅಲಕ್ಷ್ಯ ವಿದ್ಯಾರ್ಥಿಗಳಿಗೆ ಅವರಿಸಿಕೊಂಡಿದೆ. ಈ ಮಾರ್ಗದ ಮೂಲಕ ಕಲಿತು ಪದವಿ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಹಾಗೂ ಪೋಷಕರಿಗೆ ಏನು ಒಳಿತು ಮಾಡಿಯಾರು?. ನಾವು ಸುಮ್ಮನೆ ಗಣ್ಯರ ಕಾರ್ಯಕ್ರಮಗಳಲ್ಲಿ ನೀತಿ ಭೋದನೆ ಮಾಡುತ್ತೇವೆ ವಿನಃ ಅದನ್ನು ಕಾರ್ಯಗತ ಗೊಳಿಸುವಲ್ಲಿ ಹಾಗೂ ತಪ್ಪು ನಡೆದರು ಸಹ ಪ್ರಶ್ನಿಸದ ಬುದ್ದಿ ಜೀವಿ ಯಂತಿರುವ ಮೌನಿಗಳಾಗಿದ್ದೇವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಇವುಗಳಿಗೆ ನಾಂದಿ ಹಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ…

ಮರುಮೌಲ್ಯಮಾಪನ ಹೆಸರಿಗಷ್ಟೇ

ಪದವಿ ಪರೀಕ್ಷೆ ಗಳಲ್ಲಿ ಕಡಿಮೆ ಅಂಕ ದೊರೆತ ವಿದ್ಯಾರ್ಥಿಗಳು ಮರು ಮೌಲ್ಯಮಾಪನದ ಮೊರೆ ಹೋಗುವುದುoಟು. ಅಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುತ್ತಿದೆ, ಸುಮ್ಮನ್ನೆ ಬಡ ವಿದ್ಯಾರ್ಥಿಗಳು 350 ರೂಪಾಯಿ ಗಳನ್ನು ವ್ಯರ್ಥಮಾಡಿಕೊಳ್ಳುವಂತಹ ಸ್ಥಿತಿ ಏರ್ಪಟ್ಟಿದೆ. ಮೊದಲಿದ್ದ ಅಂಕಗಳನ್ನೇ ಪುನಃ ನಮೂದಿಸುರುತ್ತಾರೆ ಹೊರತು ಅದನ್ನು ನ್ಯಾಯಯು ತವಾಗಿ ಅಂಕಗಳನ್ನು ನೀಡುತ್ತಿಲ್ಲ ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜು ಬಿಡುವಂತಹ ಸ್ಥಿತಿ ಏರ್ಪಟ್ಟಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿಗಳು ಪದವಿ ತ್ಯಜಿಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಕಾಲೇಜುಗಳಿಗೆ ಸೇರುವವರ ಸಂಖ್ಯೆ ಕಡಿಮೆಯಾಗಿ ದಾಖಲಾತಿ ಅಂಕಿ ಅಂಶ ಗಳು ಬದಲಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending