Connect with us

ದಿನದ ಸುದ್ದಿ

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

Published

on

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ

ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ ಹಾಗೂ 2 ದಿನದ ಒಳಗೆ ಫಲಿತಾಂಶವನ್ನು ಪ್ರಕಟಿಸಿ ನೂತನ ದಾಖಲೆಯನ್ನು ನಿರ್ಮಿಸಿರುವ ಅನೇಕ ಪ್ರಸಂಗಗಳು ಉಂಟು. ಆದ್ಯಾಗ್ಯ್ಯು ಇದರಲ್ಲಿ ಅಷ್ಟೇ ಲೋಪದೋಷಗಳಿವೆ. ಇದರಿಂದಾಗಿ ಪ್ರಾಮಾಣಿಕವಾಗಿ ಓದುವ ವಿದ್ಯಾರ್ಥಿಗಳಿಗೆ ಮೋಸ ಹಾಗೂ ನಷ್ಟ ಉಂಟಾಗಿದೆ ಎಂದರೆ ತಪ್ಪಾಗಲಾರದು.

ವಿಶ್ವವಿದ್ಯಾಲಯದಲ್ಲಿದ್ದಾರಾ ಕಳಪೆ ಮೌಲ್ಯಮಾಪಕರು?

ವಿಶ್ವವಿದ್ಯಾಲಯ ನಡೆಸುವ ಪ್ರತಿ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಹೀಗೊಂದು ಪವಾಡ ಆಗುವುದುoಟು ಏನು ಓದದೇ ಇರುವ ವಿದ್ಯಾರ್ಥಿ 35-40 ಅಂಕ ಗಳಿಸುವ ಪರಿಯನ್ನು ನೋಡಿದ್ದೇವೆ. ಚೆನ್ನಾಗಿ ಓದಿಕೊಂಡು ತರಗತಿಗೆ ಚಾಚು ತಪ್ಪದೆ ಬಂದು ಚೆನ್ನಾಗಿ ಬರೆದರು ವಿದ್ಯಾರ್ಥಿಗಳು ಫೇಲ್ ಆಗುತ್ತಿರುವುದು ನಿಜಕ್ಕೂ ದುರಾದುಷ್ಟಕರ .ಇಲ್ಲಿ ಮೌಲ್ಯ ಮಾಪನದಲ್ಲಿ ಇರುವ ಕಳಪೆಯನ್ನು ಮತ್ತು ಗುಣ ಮಟ್ಟವನ್ನು ಕಾಣಬಹುದು.

ರೀಪಿಟರ್ಸ್ ಗೋಳೇನು?

ರಿಪೀಟರ್ಸ್ ವಿದ್ಯಾರ್ಥಿಗಳು ಬ್ಯಾಕ್ ಲಾಗ್ ಗಳನ್ನು ಮಾಡಿ ಕೊಂಡಿರುವುದೇ ಅವರ ಪಾಲಿನ ದುರದೃಷ್ಟ ಎನ್ನಬಹುದು. ಏಕೆಂದರೆ ಒಂದು ಬಾರಿ ಫೇಲ್ ಆದರೆ ಅದನ್ನು ಮತ್ತೆ – ಮತ್ತೆ ಬರೆದರೂ ಸಹ ಅದನ್ನು ಪಾಸ್ ಆಗಲು ಸೆಣ ಸಾಡಬೇಕಾಗುತ್ತದೆ. ಇದರಿಂದಾಗಿ ತಮ್ಮ ಡಿಗ್ರಿ ಯನ್ನು ಅರ್ಧಕ್ಕೆ ನಿಲ್ಲಿಸಿ ಕೆಲಸದ ಮೊರೆ ಹೋಗುವಂತಾಗಿದೆ. ಒಬ್ಬ ವಿದ್ಯಾರ್ಥಿ ಎಷ್ಟು ಬಾರಿ ಫೇಲ್ ಆಗಲು ಸಾಧ್ಯ, ಮತ್ತೊಮ್ಮೆ ಆತ ಪರೀಕ್ಷೆ ಎದುರಿಸುವಾಗ ತನ್ನ ತಪ್ಪನ್ನೆಲ್ಲ ತಿದ್ದಿಕೊಂಡು ಪ್ರಯತ್ನಿಸುತ್ತಾನೆ. ಆದರೆ ಹತ್ತು ಬಾರಿ ಹೇಗೆ ಫೇಲ್ ಆಗಲು ಸಾಧ್ಯ.

ಸಕಾಲಕ್ಕೆ ಸಿಗದ ಮೂಲ ಅಂಕಪಟ್ಟಿಗಳು

ವಿಶ್ವವಿದ್ಯಾಲಯವು ಈ ಹಿಂದೆ ನಡೆಸಿದ ಒಂದು ಮತ್ತು ನಾಲ್ಕನೇ ಸೆಮಿಸ್ಟರ್ ನವರೆಗೂ ಮಾತ್ರ ಮೂಲ ಅಂಕಪಟ್ಟಿಗಳನ್ನು ವಿತರಿಸಿದೆ. ಐದು ಮತ್ತು ಆರನೇ ಸೆಮಿಸ್ಟರ್ ನ ಅಂಕಪಟ್ಟಿಗಳಿಲ್ಲದೆ ವಿದ್ಯಾರ್ಥಿಗಳು ( ಕಾನೂನು ಕಾಲೇಜು ಮತ್ತು BED ಅಭ್ಯರ್ಥಿಗಳು) ತಮ್ಮ ಪ್ರವೇಶವನ್ನು ರದ್ದು ಮಾಡುವ ಭೀತಿಯನ್ನು ಎದುರಿಸುವಂತಹ ಪರಿಸ್ಥಿತಿ ಉಂಟಾಗಿತ್ತು. ಇದಕ್ಕೆ ಮುಲಾಮು ಎಂಬಂತೆ ರಿಜಿಸ್ಟರ್ ರವರ ಸಹಿಯನ್ನು 5 ಮತ್ತು 6 ನೇ ಸೆಮಿಸ್ಟರ್ ಅಂಕಪಟ್ಟಿಗಳಿಗೆ ಹಾಕಲಾಯಿತು. ಇದಕ್ಕೆ ವಿಶ್ವವಿದ್ಯಾಲಯು ವೇಗವಾಗಿ ಮರುಮೌಲ್ಯ ಮಾಪನದ ನಂತರ ವೇಗವಾಗಿ ಈ ಪ್ರಕ್ರಿಯೆಯನ್ನು ಮುಗಿಸಬಹುದಿತ್ತು. ಸುಪ್ರೀಂಕೋರ್ಟ್ ನ ಆದೇಶದಂತೆ ಒಂದು ವಿಶ್ವವಿದ್ಯಾನಿಲಯವು ನಿಗದಿತ ಅವಧಿಯೊಳಗೆ ಮೂಲ ಅಂಕಪಟ್ಟಿ ಯನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂಬ ನಿರ್ದೇಶನವನ್ನು UGC ಗೆ ನೀಡಿದೆ.

ರಿಪೀಟರ್ಸ್ ಬಂಡೆಲ್ ಗಳನ್ನು ಬೇಕಾ ಬಿಟ್ಟಿ ಮೌಲ್ಯಮಾಪನ ಮಾಡಲಾಗುತ್ತಿದೆಯೇ?

ಮೌಲ್ಯಮಾಪಕರು ಪುನರಾ ವರ್ತಿತ ವಿದ್ಯಾರ್ಥಿಗಳ ಬುಕ್ಲೆಟ್ ಗಳನ್ನು ಸೂಕ್ತ ಉತ್ತರವಿದ್ದರೂ ಸಹ ಸುಮ್ಮನೆ ಗೀಟ್ ಎಳೆದು ಅವರನ್ನು ಫೇಲ್ ಮಾಡುತ್ತಿದ್ದಾರೆ. ಇಂತಹ ಕಳಪೆ ಮೌಲ್ಯಮಾಪಕರಿಂದ ಮೌಲ್ಯಮಾಪನಕ್ಕೆ ಇರುವ ಘನತೆ ಮತ್ತು ಗುಣಮಟ್ಟ ವನ್ನು ಕಳೆದುಕೊಳ್ಳುವoತಾಗಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಕಳಪೆ ಮೌಲ್ಯಮಾಪಕರನ್ನು ಗುರುತಿಸಿ ಅವರನ್ನು ಈ ಪ್ರಕ್ರಿಯೆಯಿಂದ ಕೈಬಿಡಬೇಕು.

ಗುಣಮುಟ್ಟದ ಪರೀಕ್ಷೆಗಳು ಈಗಿಲ್ಲ…

ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗೆ ಇದ್ದಂತಹ ಮೌಲ್ಯ, ಗುಣಮಟ್ಟವು ಮರೆಯಾಗಿವೆ. ನ್ಯಾಯಯುತವಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ, ಕೆಲವು ಖಾಸಗಿ ಕಾಲೇಜುಗಳು ತಮ್ಮ ಫಲಿತಾಂಶವನ್ನು ಸುಧಾರಿಸುದಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುತ್ತಿವೆ.. ಇದರಿಂದಾಗಿ ವಿದ್ಯಾರ್ಥಿಗಳು ನಕಲು ಮಾಡಲು ಅವಕಾಶ ಇರುವ ಕಾಲೇಜುಗಳಿಗೆ ಪ್ರವೇಶವನ್ನು ತೆಗೆದುಕೊಳ್ಳುತ್ತಿದ್ದಾರೆ.

ಇವುಗಳನ್ನೆಲ್ಲ ನೋಡಿದರೆ ಪರೀಕ್ಷೆಗಳನ್ನು ನಡೆಸಿದರು ಪ್ರಯೋಜನವಿಲ್ಲ, ಕಾಲೇಜಿಗೆ ರೆಗ್ಯುಲರ್ ಆಗಿ ಹೋಗುವ ಅವಶ್ಯಕತೆ ಇಲ್ಲ, ಕೇವಲ ಜೆರಾಕ್ಸ್ ಅಂಗಡಿಗಳಲ್ಲಿ ಮೈಕ್ರೋ ಜೆರಾಕ್ಸ್ ಮಾಡಿಸಿಕೊಂಡರೆ ಸಾಕು ಪಾಸಾಗಬಹುದು ಎಂಬಂತಹ ಅಲಕ್ಷ್ಯ ವಿದ್ಯಾರ್ಥಿಗಳಿಗೆ ಅವರಿಸಿಕೊಂಡಿದೆ. ಈ ಮಾರ್ಗದ ಮೂಲಕ ಕಲಿತು ಪದವಿ ಪಡೆದ ವಿದ್ಯಾರ್ಥಿಗಳು ಸಮಾಜಕ್ಕೆ ಹಾಗೂ ಪೋಷಕರಿಗೆ ಏನು ಒಳಿತು ಮಾಡಿಯಾರು?. ನಾವು ಸುಮ್ಮನೆ ಗಣ್ಯರ ಕಾರ್ಯಕ್ರಮಗಳಲ್ಲಿ ನೀತಿ ಭೋದನೆ ಮಾಡುತ್ತೇವೆ ವಿನಃ ಅದನ್ನು ಕಾರ್ಯಗತ ಗೊಳಿಸುವಲ್ಲಿ ಹಾಗೂ ತಪ್ಪು ನಡೆದರು ಸಹ ಪ್ರಶ್ನಿಸದ ಬುದ್ದಿ ಜೀವಿ ಯಂತಿರುವ ಮೌನಿಗಳಾಗಿದ್ದೇವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಇವುಗಳಿಗೆ ನಾಂದಿ ಹಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ…

ಮರುಮೌಲ್ಯಮಾಪನ ಹೆಸರಿಗಷ್ಟೇ

ಪದವಿ ಪರೀಕ್ಷೆ ಗಳಲ್ಲಿ ಕಡಿಮೆ ಅಂಕ ದೊರೆತ ವಿದ್ಯಾರ್ಥಿಗಳು ಮರು ಮೌಲ್ಯಮಾಪನದ ಮೊರೆ ಹೋಗುವುದುoಟು. ಅಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗುತ್ತಿದೆ, ಸುಮ್ಮನ್ನೆ ಬಡ ವಿದ್ಯಾರ್ಥಿಗಳು 350 ರೂಪಾಯಿ ಗಳನ್ನು ವ್ಯರ್ಥಮಾಡಿಕೊಳ್ಳುವಂತಹ ಸ್ಥಿತಿ ಏರ್ಪಟ್ಟಿದೆ. ಮೊದಲಿದ್ದ ಅಂಕಗಳನ್ನೇ ಪುನಃ ನಮೂದಿಸುರುತ್ತಾರೆ ಹೊರತು ಅದನ್ನು ನ್ಯಾಯಯು ತವಾಗಿ ಅಂಕಗಳನ್ನು ನೀಡುತ್ತಿಲ್ಲ ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜು ಬಿಡುವಂತಹ ಸ್ಥಿತಿ ಏರ್ಪಟ್ಟಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿಗಳು ಪದವಿ ತ್ಯಜಿಸುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಕಾಲೇಜುಗಳಿಗೆ ಸೇರುವವರ ಸಂಖ್ಯೆ ಕಡಿಮೆಯಾಗಿ ದಾಖಲಾತಿ ಅಂಕಿ ಅಂಶ ಗಳು ಬದಲಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್‌ ಶೇ. 97 ದ್ವಿತೀಯ ಹಾಗೂ ಸಮರ್ಥ್‌ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.

ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.

ಯಶಸ್ಸಿನ ಹಿಂದಿನ ಶಕ್ತಿ:

ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್‌, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending