ದಿನದ ಸುದ್ದಿ
ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಮೇಲೆ ಕಲ್ಲು ತೂರಾಟ ; ಗಂಭೀರ ಗಾಯ
ಸುದ್ದಿದಿನ, ತುಮಕೂರು : ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಂಎಲ್ಎ ಅಭ್ಯರ್ಥಿ, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಮೇಲೆ ಕಲ್ಲುತೂರಾಟ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ಪ್ರಚಾರದ ಕೈಗೊಂಡಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಪರಮೇಶ್ವರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ರಕ್ತ ಸೋರಿಕೆಯಾಗಿದೆ. ಕೂಡಲೇ ಅವರನ್ನು ಹತ್ತಿರದ ಆರೋಗ್ಯದಲ್ಲಿ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಸಿದ್ದಾರ್ಥ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243