ದಿನದ ಸುದ್ದಿ
ದೀಪಗಳ ಹಬ್ಬ; ಬಾಳ್ವೆಯನು ಬೆಳಗಲಿ ಈ ಬೆಳಕು
- ಮೀನಾ ಆರ್, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ
ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ. ದೀಪಾವಳಿಯು ದೀಪದ ಹಬ್ಬವಾಗಿದ್ದು, ಇದನ್ನು ಬೆಳಕಿನ ಹಬ್ಬ ಎಂದು ಕೂಡ ಕರೆಯಲಾಗಿದೆ. ಹಾಗೂ ಜನರು ಇದನ್ನು ಯಾವುದೇ ಧರ್ಮ ಮತ್ತು ನಂಬಿಕೆಗಳನ್ನು ಲೆಕ್ಕಿಸದೆ ಆಚರಿಸುತ್ತಾರೆ. ಇಲ್ಲಿ ಮಕ್ಕಳ ಉತ್ಸಾಹವೇ ಹೆಚ್ಚಾಗಿರುತ್ತದೆ ಹಾಗಾಗಿ ಈ ಹಬ್ಬವು ಜನರಲ್ಲಿ ಸಂತೋಷ ಶಾಂತಿ ಮತ್ತು ಪ್ರೀತಿಯನ್ನು ಹೆಚ್ಚಿಸುತ್ತದೆ. ನಮ್ಮ ಜೀವನದ ಕಷ್ಟಗಳನ್ನು ಕಳಿಸಿ ಬೆಳಕನ್ನು ತರಿಸುವ ಸಂಭ್ರಮವೇ ದೀಪಾವಳಿ ಮನೆಯ ಹಾಗೂ ಮನದ ಋಣಾತ್ಮಕ ಅಂಶಗಳನ್ನು ಹೋಗಲಾಡಿಸಲು ನಾವು ದೀಪಗಳನ್ನು ಹಚ್ಚುತ್ತೇವೆ.
ದೀಪಾವಳಿ ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಬರುತ್ತದೆ. ಹಬ್ಬದ ದಿನದಂದು ಎಲ್ಲೆಲ್ಲೂ ದೀಪಗಳ ಸಾಲುಗಳಿಂದ ಶೃಂಗಾರ ಗುಂಡ ಮನೆಗಳು ವಾತಾವರಣದ ಅಂದವನ್ನು ಹೆಚ್ಚಿಸುವಂತೆ ಅಲ್ಲಲ್ಲಿ ರಂಗೋಲಿಗಳು ಎಲ್ಲಾ ಕಡೆಗಳಿಂದಲೂ ಪಟಾಕಿಗಳ ಶಬ್ದ ಜನರು ತಮ್ಮ ಮನೆಗಳನ್ನು ದೀಪಗಳು, ಹೂಗಳು, ಮೇಣದ ಬತ್ತಿಗಳು ಮುಂತಾದವುಗಳಿಂದ ಅಲಂಕರಿಸುತ್ತಾರೆ.
ದೀಪಾವಳಿ ತಯಾರಿಯನ್ನು ಹಲವು ದಿನಗಳ ಮುಂಚಿತವಾಗಿಯೇ ಪ್ರಾರಂಭಿಸುತ್ತೇವೆ. ಹಬ್ಬದ ಮುಂಚೆ ಸಿಹಿ ತಿಂಡಿಗಳನ್ನು ತಯಾರಿಸುವುದು, ಹೊಸ ಬಟ್ಟೆಗಳನ್ನು ತಂದು ದೇವರ ಮುಂದಿಟ್ಟು ಪೂಜೆ ಮಾಡಿ ನಂತರ ಧರಿಸುವುದು ಕೆಲವು ಕಡೆ ವಾಡಿಕೆಯಾಗಿದೆ. ಲಕ್ಷ್ಮಿ ದೇವಿಯನ್ನು ಪೂಜಿಸುವ ಮೂಲಕ ದೀಪಾವಳಿಯನ್ನು ಆಚರಿಸುತ್ತಾರೆ.
ಲಕ್ಷ್ಮಿ ದೇವಿಯ ಪೂಜೆ ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ ಎಂಬ ನಂಬಿಕೆ ಹಾಗೂ ದೀಪಾವಳಿಯಂದು ಗೋ ಪೂಜಾ ಅಂದರೆ, ಗೋವುಗಳನ್ನು ಅಲಂಕರಿಸಿ ಪೂಜೆಗಳನ್ನು ಅರ್ಪಿಸುತ್ತಾರೆ. ಇನ್ನು ದೀಪಾವಳಿಯನ್ನು ಬಹಳ ಪುರಾತನ ಕಾಲಗಳಿಂದಲೂ ಆಚರಿಸುತ್ತಾ ಬಂದಿದ್ದಾರೆ. ಐತಿಹಾಸಿಕವಾಗಿ ಹೇಳುವುದಾದರೆ ಹಿಂದೂ ಪುರಾಣಗಳ ಪ್ರಕಾರ ಸಮಗ್ರವಾದ ಅಯೋಧ್ಯೆಯ ಬಗ್ಗೆ ಇಲ್ಲಿ ವಿವರಗಳು ಕಂಡುಬರಲಿದೆ. ಎಂಬುದು ಇಲ್ಲಿನ ನಿವಾಸಿಗಳು ಅದನ್ನು ಆಚರಿಸಲು ಬೀದಿಗಳಲ್ಲಿ ಹಾಗೂ ಮನೆಗಳಲ್ಲಿ ಎಣ್ಣೆಯ ದೀಪಗಳನ್ನು ಬೆಳಗಿಸಿದರು. ಅಂದು ಪ್ರಾರಂಭವಾದ ದೀಪಾವಳಿಯು ಇಂದಿಗೂ ವಿಜೃಂಭಣೆಯಿಂದ ಮುಂದುವರೆದಿದೆ ಎಂಬುದು ನಂಬಿಕೆ.
ದೀಪಾವಳಿವೆಂದು ಪಟಾಕಿಗಳನ್ನು ಹಚ್ಚುವುದರಿಂದ ಪರಿಸರ ಮಾಲಿನ್ಯವಾಗುತ್ತದೆ. ಇದರಿಂದ ಹಾನಿಕಾರಕ ಅನಿಲಗಳು (CFC) ಬಿಡುಗಡೆಯಾಗುತ್ತದೆ. ಇದು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ ಹಾಗೂ ನಮ್ಮ ಸುತ್ತಮುತ್ತಲಿನ ಪ್ರಾಣಿ-ಪಕ್ಷಿಗಳಿಗೆ ಹಾನಿ ಉಂಟುಮಾಡುತ್ತದೆ. ಆದ್ದರಿಂದ ಆಚರಣೆಯ ಹೆಸರಿನಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಆಶಾ ಮಾಡೋದೇ ಮತ್ತು ಹೆಚ್ಚು ಪಟಾಕಿಗಳನ್ನು ಹಚ್ಚದೆ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಬೇಕು.
ನಮ್ಮೊಳಗಿನ ಕತ್ತಲೆಯನ್ನು ಹೋಗಲಾಡಿಸಿ ಇಡೀ ಜಗತ್ತನ್ನು ಬೆಳಗಿಸುವ ಹಬ್ಬವೇ ದೀಪಾವಳಿ ಹೀಗೆ ಎಲ್ಲರ ಜೀವನದಲ್ಲಿಯೂ ಕತ್ತಲೆಯು ಮರೆಯಾಗಿ ಬೆಳಕು ಮೂಡಲಿ ಎಂದು ಹೇಳುತ್ತಾ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.



