ದಿನದ ಸುದ್ದಿ
ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಗೆ ಹೆಗಲಾದವರನ್ನು ನೆನೆಯೋಣ
- ರಂಗನಾಥ ಕ ನಾ ದೇವರಹಳ್ಳಿ ಶಿಕ್ಷಕರು ವಿಶ್ವನಗರ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶ್ವನಗರ, ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ನಮ್ಮ ವಿಶ್ವನಗರ ಶಾಲೆಯ ಮಕ್ಕಳು ಅತೀ ಹೆಚ್ಚು ಪ್ರಥಮ ಬಹುಮಾನಗಳನ್ನು ಪಡೆಯುವ ಮೂಲಕ ಕ್ಲಸ್ಟರ್ ನಲ್ಲಿ ಬೆಸ್ಟ್ ಸ್ಕೂಲ್ ಆಗಿ ಹೊರಹೊಮ್ಮಿದ್ದಾರೆ.
ಎಲ್ಲಾ ಮಕ್ಕಳಿಗೂ ಹಾಗೂ ಸಹಕರಿಸಿದ ಪೋಷಕರಿಗೂ ಶಾಲೆಯ ಪರವಾಗಿ ಆತ್ಮೀಯ ಅಭಿನಂದನೆಗಳು ಶುಭವಾಗಲಿ….ಹಾಗೂ ಇಂದು ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ. ಇದರಲ್ಲಿ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಸಹ ಶಿಕ್ಷಕರ ಸಹಕಾರವು ತುಂಬಾ ಚೆನ್ನಾಗಿತ್ತು.
ಊಟದ ವ್ಯವಸ್ಥೆ ಹಾಗೂ ನಿರ್ವಹಣೆ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಶ್ರೀಮತಿ ಪದ್ಮಾವತಿ ಬಿ, ಎಲ್ಲಾ ಮಕ್ಕಳಿಗೂ ಸ್ಪರ್ಧೆಗಳಲ್ಲಿ ಅತ್ಯುತ್ತಮವಾಗಿ ಅಭ್ಯಾಸ ನಡೆಸಿ ಮಕ್ಕಳಿಗೆ ಇಷ್ಟೊಂದು ಬಹುಮಾನ ಬರಲು ಸಹಕರಿಸುವುದಲ್ಲದೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಶ್ರೀಮತಿ ಮಂಜುಳಾ ಮೇಡಂ, ಶ್ರೀಮತಿ ನಾಗಲಕ್ಷ್ಮಿ ಮೇಡಂ ಶ್ರೀಮತಿ ರಾಜೇಶ್ವರಿ ಮೇಡಂ ಹಾಗೂ ಶ್ರೀ ವಿಜಯ್ ಇವರಿಗೂ ತುಂಬು ಹೃದಯದ ಧನ್ಯವಾದಗಳು.
ನಮ್ಮ ಕಾರ್ಯಕ್ರಮಕ್ಕೆ ನಮ್ಮ ಎಸ್. ಡಿ. ಎಂ. ಸಿ. ಅಧ್ಯಕ್ಷರು ಹಾಗೂ ಸದಸ್ಯರ ಕೊಡುಗೆ ಅಪಾರವಾಗಿತ್ತು.. ತಾವೇ ಜವಾಬ್ದಾರಿ ವಹಿಸಿಕೊಂಡು ಪೋಷಕರು ನಿರ್ವಹಣೆ ಮಾಡಿದ್ದು ತುಂಬಾ ಉತ್ತಮವಾಗಿತ್ತು. ನಮ್ಮ ಅಧ್ಯಕ್ಷರು ನಮ್ಮನ್ನು ಪ್ರೋತ್ಸಾಹಿಸುವ ರೀತಿ ನಮಗೆ ತುಂಬಾ ಸಂತೋಷವಾಯಿತು.
ನಮ್ಮ ಕಾರ್ಯಕ್ರಮಕ್ಕೆ ನಮ್ಮ ದಾನಿಗಳ ಕೊಡುಗೆ ಅಪಾರವಾದದ್ದು, ಶ್ರೀಯುತ ಶಭರೀಶ್. ಗ್ರಾಮ ಪಂಚಾಯಿತಿ ಅಧ್ಯಕ್ಷರು ಅರಬಿಳಚಿ. ಇವರು ನಮ್ಮ ಕ್ಲಸ್ಟರ್ ನ ಎಲ್ಲಾ ವಿಜೇತ ಮಕ್ಕಳಿಗೆ ಬಹುಮಾನದ ಕೊಡುಗೆ ನೀಡಿದರು.
ಶ್ರೀ ಮಧುಕುಮಾರ್. ಮಾಜಿ ತಾಲೂಕು ಪಂಚಾಯಿತಿ ಸದಸ್ಯರು. ನಮ್ಮ ಶಾಲೆಗೆ ಡಕ್ ಹಾಗೂ ಸ್ಪೀಕರ್ ಬಾಕ್ಸ್ ಕೊಡಿಸಿದ್ದಾರೆ. ಶ್ರೀ ಅಕ್ಬರ್ ಹಾಗೂ ಅವರ ಪುತ್ರರಾದ ಖಲೀಂ ರವರು ನಮ್ಮ ಕಾರ್ಯಕ್ರಮಕ್ಕೆ ವೇದಿಕೆಗೆ ಬೇಕಾಗುವ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಶ್ರೀ ರಾಜಣ್ಣನವರು ಮಕ್ಕಳಿಗೆ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶ್ರೀ ಪಳನಿಯವರು ಮಕ್ಕಳಿಗೆ ತಿಂಡಿಗೆ ಅಡಿಕೆ ಪ್ಲೇಟ್ ಗಳನ್ನು ಉಚಿತವಾಗಿ ನೀಡಿದ್ದಾರೆ. ಶ್ರೀ ಚಲುವರಾಜುರವರು,ಕಾರ್ಯಕ್ರಮಕ್ಕೆ ಧನಸಹಾಯ ಮಾಡಿರುತ್ತಾರೆ, ಶ್ರೀ ಅಂಗಡಿ ಕುಮಾರ್ ರವರು, ಹಾಗೂ ಶ್ರೀ ದಯಾನಂದ್ ರವರು ತಲಾ ಒಂದು ಮೂಟೆ ಅಕ್ಕಿಯನ್ನು ಕೊಟ್ಟಿರುತ್ತಾರೆ.
ಶ್ರೀ ಮುನಿವೇಲುರವರು ತೆಂಗಿನಕಾಯಿಗಳನ್ನು ನೀಡಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಗೆ ಸಹಕರಿಸಿರುತ್ತಾರೆ. ನಮ್ಮ ಅಡುಗೆಯವರ ಕಾರ್ಯವನ್ನು ನೆನೆಯಲೇಬೇಕು.. ತುಂಬಾ ಶ್ರಮವಹಿಸಿದ್ದಾರೆ ಅವರಿಗೂ ಧನ್ಯವಾದಗಳು.
ಪೋಷಕರು ಹಾಗೂ ನಮ್ಮ ಗ್ರಾಮದ ಮುಖಂಡರುಗಳು ಕಾರ್ಯಕ್ರಮದ ಯಶಸ್ಸಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿರುತ್ತಾರೆ ಅವರಿಗೂ ಧನ್ಯವಾದಗಳು.
ತಮಿಳು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಪೆರಿಸ್ವಾಮಿಯವರು ಹಾಗೂ ಸಿಬ್ಬಂದಿ ವರ್ಗದವರು ಅವರ ಶಾಲೆಯಿಂದ ಕೊಠಡಿ, ಹಾಗೂ ಎಲ್ಲಾ ಪರಿಕರಗಳನ್ನು ನೀಡುವುದರ ಮೂಲಕ ಸಹಕರಿಸಿದ್ದಾರೆ ಅವರಿಗೂ ಧನ್ಯವಾದಗಳು… ನಮ್ಮ ಅಂಗನವಾಡಿ ಸಿಬ್ಬಂದಿ ವರ್ಗದವರಿಗೂ ಹಾಗೂ ತಮ್ಮ ಮಕ್ಕಳನ್ನು ಅತ್ಯುತ್ತಮವಾಗಿ ತಯಾರು ಮಾಡಿ ಬಹುಮಾನಗಳನ್ನು ಪಡೆದ ಎಲ್ಲಾ ಪೋಷಕರಿಗೂ, ಮುಖ್ಯವಾಗಿ ನಮ್ಮ ಮಕ್ಕಳಿಗೆ ಅನಂತ ಅನಂತ ಧನ್ಯವಾದಗಳು.
ಬಾಳೆಕಂದು ಮಾವಿನಸೊಪ್ಪು ಕಟ್ಟಿದ ಹಾಗೂ ಊಟದ ವ್ಯವಸ್ಥೆ ಮಾಡಿದ ಪ್ರಜ್ವಲ್ ಮತ್ತು ತಂಡದವರಿಗೆ, ಉತ್ತಮವಾಗಿ ರಂಗೋಲಿ ಹಾಕಿ,,,ಎಲ್ಲರನ್ನೂ ಸ್ವಾಗತಿಸಿದ ಅರ್ಚನಾ ಮತ್ತು ತಂಡದವರ ಸ್ವಾಗತ ಕಮಿಟಿಗೂ, ಬೆಳಿಗ್ಗೆಯಿಂದ ಸಂಜೆಯವರೆಗೂ ಎಲ್ಲೂ ಕಸ ಇರದಂತೆ ನೋಡಿಕೊಂಡ ಮನೋಜ್ ಮತ್ತು ತಂಡದ ಸ್ವಚ್ಛತಾ ಕಮಿಟಿಯವರಿಗೂ ನಮ್ಮ ಶಾಲೆಯ ಪರವಾಗಿ ಆತ್ಮೀಯ ಅಭಿನಂದನೆಗಳು.
ಇಂದು ಕಾರ್ಯಕ್ರಮಕ್ಕೆ ಆಗಮಿಸಿದ ಅರಬಿಳಚಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಬೀಬಿಆಯಿಷಾರವರಿಗೂ, ಸದಸ್ಯರಾದ ಶ್ರೀಮತಿ ಸುಶೀಲಮ್ಮನವರಿಗೂ,ಶ್ರೀ ಗುಣಶೇಖರ್ ರವರಿಗೆ ,ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಾರವರಿಗೂ ಉಪಾಧ್ಯಕ್ಷರಾದ ಶ್ರೀಮತಿ ಮೀನಾರವರಿಗೂ ಹಾಗೂ ಎಲ್ಲಾ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳು.
ಇಂದಿನ ಕಾರ್ಯಕ್ರಮದಲ್ಲಿ ನಮ್ಮ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಮ್ಮನವರು ಹಾಗೂ ಸಿ ಆರ್ ಪಿ ಯವರಾದ ಶ್ರೀ ಜಾಪರ್ ರವರಿಗೆ* *ಹೃದಯಾಂತರಾಳದ ನಮನಗಳು..ಇವರು ಜಂಟಿ ಯಾಗಿ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣೀಕರ್ತರಾಗಿದ್ದಾರೆ ಅವರಿಗೆ ಆತ್ಮೀಯವಾಗಿ ವಂದಿಸುತ್ತಾ….ನಮ್ಮ ಕ್ಲಸ್ಟರಿನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರಿಗೂ ಹಾಗೂ ಸಿಬ್ಬಂದಿಯವರಿಗೂ ನಮ್ಮ ಶಾಲೆಯ ವತಿಯಿಂದ ಕೃತಜ್ಞತಾಪೂರ್ವಕ ಧನ್ಯವಾದಗಳು….ನಿಮ್ಮೆಲ್ಲರ ಸಹಕಾರದಿಂದ ಇಂದು ಕಾರ್ಯಕ್ರಮ ಯಶಸ್ವಿಯಾಗಿದೆ ಎಲ್ಲರಿಗೂ ಧನ್ಯವಾದಗಳು.
ನಾನು ಎನ್ನುವುದು ಅಜ್ಞಾನ
ನನ್ನದು ಎನ್ನುವುದು ಅವಿವೇಕ
ನನ್ನಿಂದಲೇ ಎನ್ನುವುದು ಅಹಂಕಾರ
ಇಲ್ಲಿ ಸೇವೆಯೊಂದೇ ಆ ದೇವರಿಗೆ ಸಲ್ಲುವುದು ಸತ್ಯ
ಎಲ್ಲಾ ನೀನೇ ಕಾಣೋ ಉಡುಗಿರಿ ಶ್ರೀ ರಂಗನಾಥ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್ ಮಾಡಿರೋ ಬಾಲಿವುಡ್ ಚೆಲುವೆ ಶಿಲ್ಪಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.
ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್ ಶಿಲ್ಪಾ ಶೆಟ್ಟಿ ಪೋರ್ಷನ್ ಶೂಟಿಂಗ್ ಕಂಪ್ಲೀಟ್ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್ ಪ್ಯಾಕಪ್ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್ ಬ್ರೇಕ್ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.
ಜೋಗಿ ಪ್ರೇಮ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್ ಸೆಟ್ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್ ಸೈಟ್ನಲ್ಲಿ ಹಂಚಿಕೊಂಡಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ
https://www.instagram.com/reel/C7l1UEfNIvA/?igsh=bDQ5NDVhMHpxYWc3
ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.
ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್ವುಡ್ಗೆ ರೀಎಂಟ್ರಿ ಕೊಟ್ಟಿದ್ದಾರೆ.
19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್ ನಂತರ ಅಧೀರ ಸಂಜಯ್ ದತ್ತ್ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.
ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.
ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.
ಪೂರಕ ದಾಖಲಾತಿ
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಕ್ರೀಡೆ7 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
-
ದಿನದ ಸುದ್ದಿ6 days ago
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
-
ದಿನದ ಸುದ್ದಿ7 days ago
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
-
ದಿನದ ಸುದ್ದಿ6 days ago
ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು
-
ದಿನದ ಸುದ್ದಿ6 days ago
ಕವಿತೆ | ಒಂದು ಕಪ್ ಕಾಫಿ
-
ದಿನದ ಸುದ್ದಿ6 days ago
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
-
ದಿನದ ಸುದ್ದಿ6 days ago
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ