Connect with us

ದಿನದ ಸುದ್ದಿ

ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!

Published

on

  • ನವೀನ್ ಸೂರಿಂಜೆ

ದಿಶಾ ಯಾರೊಂದಿಗೋ ಸಂಪರ್ಕದಲ್ಲಿದ್ದರು ಎಂಬ ಕಾರಣಕ್ಕಾಗಿ ಅಪರಾಧಿ ಹೇಗಾಗುತ್ತಾರೆ ? ನಾನು ದೇವಸ್ಥಾನಕ್ಕೆ ದಾನ ಕೊಡಿ ಎಂದು ದರೋಡೆಕೋರನನ್ನು ಸಂಪರ್ಕಿಸುತ್ತೇನೆ. ಆಗ ನಾನು ದರೋಡೆಯ ಭಾಗವಾಗುತ್ತೇನೆಯೇ ?” ಎಂದು ನ್ಯಾಯಾಧೀಶರು ದಿಶಾ ಜಾಮೀನು ಅರ್ಜಿ ವಿಚಾರಣೆಯ ವೇಳೆ ಸರ್ಕಾರವನ್ನು ಪ್ರಶ್ನಿಸಿದರು.

ನಾನು ಪರಿಸರ, ರೈತ ಕಾರ್ಯಕರ್ತೆಯೇ ಹೊರತು ದೇಶದ ವಿರುದ್ದ ಅಸಮಾದಾನವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತಲಿಲ್ಲ. ಟೂಲ್ ಕಿಟ್ ಎಂಬುದು ಕೇವಲ ಕಾರ್ಯಕ್ರಮದ ರೂಪುರೇಷೆಯ ದಾಖಲೆಗಳಷ್ಟೆ ಎಂದು ಪೊಲೀಸ್ ಬಂಧನದಲ್ಲಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆಯ ವೇಳೆ ಟೂಲ್ ಕಿಟ್ ಬಗ್ಗೆ ನ್ಯಾಯಾಲಯಕ್ಕೆ ಸ್ಪಷ್ಟ ಮಾಹಿತಿ ನೀಡಿರುವ ದಿಶಾ ರವಿ, ರೈತರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕ್ರಮ ಆಯೋಜಿಸುವುದಷ್ಟೇ ನಮ್ಮ ಉದ್ದೇಶವಾಗಿತ್ತು. ದೇಶ ಮತ್ತು ಸೈನ್ಯಕ್ಕೂ ಟೂಲ್ ಕಿಟ್ ಗೈ ಸಂಬಂಧವಿಲ್ಲ. ನಮಗೂ ಖಲಿಸ್ತಾನ್ ಬಮಬಲಿತ ಪೊಯೆಟಿಕ್ ಜಸ್ಟಿಸ್ ಫೌಂಡೇಶನ್ ಗೂ ಸಂಬಂಧ ಇಲ್ಲ ಎಂದು ದಿಶಾ ಪರ ವಕೀಲರು ವಾದ ಮಂಡಿಸಿದ್ದಾರೆ.

ಭಾರತದ ರೈತ ಹೋರಾಟವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ 21 ವರ್ಷದ ಯುವ ಹೋರಾಟಗಾರ್ತಿ ದಿಶಾರನ್ನು ದೆಹಲಿ ಪೊಲೀಸರು ಇತಿಚ್ಚೆಗೆ ಬಂಧಿಸಿದ್ದರು. ಇಂದು ಜಾಮೀನು ಅರ್ಜಿ ವಿಚಾರಣೆ ವೇಳೆ ಖಲಿಸ್ತಾನ್ ಆರೋಪ, ದೇಶದ್ರೋಹ ಆರೋಪಕ್ಕೆ ಪೂರಕವಾಗಿ ಪ್ರಾಥಮಿಕ ಸಾಕ್ಷ್ಯ ನೀಡಲು ಪೊಲೀಸರು ವಿಫಲರಾದರು.

“ನಾನು ಕರ್ನಾಟಕ ಮೂಲದ 21 ವರ್ಷ ವಯಸ್ಸಿನ ಹೋರಾಟಗಾರ್ತಿ. ಖಲಿಸ್ತಾನ್ ಚಳವಳಿಯೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ದೆಹಲಿ ಪೊಲೀಸರು ಆರೋಪಿಸಿದಂತೆ ನಿಷೇಧಿತ ಸಂಸ್ಥೆಯಾಗಿರುವ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ಜೊತೆ ನಾನು ಮಾಡಿರುವ ಒಂದೇ ಒಂದು ಸಂಪರ್ಕ ಅಥವಾ ಸಂಭಾಷಣೆ ಇಲ್ಲ. ಅಂತಹ ದಾಖಲೆಗಳನ್ನು ಪೊಲೀಸರು ನ್ಯಾಯಾಲಯಕ್ಕೂ ಒದಗಿಸಿಲ್ಲ” ಎಂದು ದಿಶಾ ಪರ ವಕೀಲರು ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರಿಗೆ ಮನವಿ ಮಾಡಿದರು.

“ಭಾರತದ ಯೋಗವನ್ನು ಕೂಡಾ ದಿಶಾ ಗುರಿಯಾಗಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ನಾನು ಕುಂಗ್ ಫೂಗೆ ಆದ್ಯತೆ ನೀಡಿದರೆ, ನಾನು ಚೀನಾದೊಂದಿಗೆ ಸೇರಿ ಭಾರತದ ವಿರುದ್ದ ಪಿತೂರಿ ನಡೆಸುತ್ತಿದ್ದೇನೆ ಎಂದು ಅರ್ಥವೇ? ಅದು ದೇಶದ್ರೋಹವೇ?” ದಿಶಾ ರವಿ ಅವರ ವಕೀಲಸಿದ್ಧಾರ್ಥ್ ಅಗರ್ವಾಲ್ ಕೇಳಿದರು.

ಜನವರಿ 26 ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಿಶಾ ರವಿ ಝೂಮ್ ಕಾಲ್ ಮೂಲಕ ಮಾತನಾಡಿದ್ದಾರಾ ? ಎಂದು ನ್ಯಾಯಾಧೀಶರು ಕೇಳಿದರು. “ಹಿಂಸಾಚಾರ ಅಥವಾ ಹಿಂಸಾಚಾರದ ಪ್ರಚೋದನೆ ಇದ್ದರೆ ಅದು ಅಪರಾಧ. ಆದರೆ ದಿಶಾ ವಿರುದ್ಧದ ಆರೋಪವೇನು? ದಿಶಾ ಜೂಮ್ ಕಾಲ್ ನ ಭಾಗವಾಗಿದ್ದರೇ ? ಜೂಮ್ ಕಾಲ್ ನಲ್ಲಿ ದಿಶಾ ಮಾತನಾಡಿದ್ದರೆ?” ಎಂದು ದಿಶಾ ವಕೀಲರು ಪ್ರಶ್ನಿಸಿದರು.

ಖಾಲಿಸ್ತಾನ್ ಗ್ರೂಪ್ ನ ಎಂಒ ದಲೀವಾಲ್ ಜೊತೆ ಝೂಮ್ ಕಾಲ್ ನಲ್ಲಿ ದಿಶಾ ಮಾತಾಡಿದ್ದಾರೆ ಎಂದು ಹೇಳುತ್ತೀರಿ. ಕೆಟ್ಟ ವ್ಯಕ್ತಿಯ ಜೊತೆ ಮಾತಾಡುವುದು ಅಪರಾಧ ಹೇಗಾಗುತ್ತದೆ ? ಎಂದು ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಪ್ರಶ್ನಿಸಿದರು. “ಎಂಒ ದಲೀವಾಲ್ ಯಾರು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಿದ್ದರೂ ದಿಶಾ ಅವನ ಜೊತೆ ಯಾಕೆ ಮಾತನಾಡಬೇಕಿತ್ತು ?” ಎಂದು ಪೊಲೀಸ್ ಪರ ವಕೀಲರು ಮರಳಿ ಪ್ರಶ್ನಿಸಿದರು. “ಹಾಗೇನೂ ಇಲ್ಲ. ಎಂಒ ದಲೀವಾಲ್ ಯಾರು ಎಂಬುದು ನನಗೆ ಈತನಕ ನಿಜಕ್ಕೂ ಗೊತ್ತಿಲ್ಲ” ಎಂದು ನ್ಯಾಯಾಧೀಶರು‌ ಹೇಳಿದರು.

ಜನವರಿ 26 ರ ಹಿಂಸಾಚಾರಕ್ಕೂ ದಿಶಾಗೂ ಇರುವ ಸಂಪರ್ಕ, ಸಂಬಂಧಗಳ ಚಿಕ್ಕ ಸಾಕ್ಷ್ಯ ಕೊಡಿ ಎಂದಿ ಸಂಪರ್ಕಿಸಲು ನ್ಯಾಯಾಧೀಶರು ಕೇಳಿದರು. ಇದಕ್ಕೆ ಪೊಲೀಸರು ಪ್ರತಿಕ್ರಿಯಿಸಿ, “ಪಿತೂರಿಯಲ್ಲಿ, ಎಲ್ಲರೂ ಒಂದೇ ಪಾತ್ರವನ್ನು ಹೊಂದಿರುವುದಿಲ್ಲ. ಯಾರಾದರೂ ದಿಶಾ ಟೂಲ್ ಕಿಟ್ ನಿಂದ ಪ್ರಭಾವಿತರಾಗಿರಬಹುದು ಮತ್ತು ಹಿಂಸಾಚಾರದಲ್ಲಿ ಪಾಲ್ಗೊಂಡಿರಬಹುದು” ಎಂದಷ್ಟೆ ಉತ್ತರಿಸಿದರು. “ಈ ರೀತಿಯ ಉತ್ತರ ನ್ಯಾಯಾಲಯಕ್ಕೆ ತೃಪ್ತಿ ತಂದಿಲ್ಲ.

ಟೂಲ್ ಕಿಟ್ ಗೂ ಗಲಭೆಗೂ ನೇರ ಸಂಬಂಧವನ್ನು ತೋರಿಸಿ” ಎಂದು ನ್ಯಾಯಾಧೀಶರು ಪೊಲೀಸರ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜುರವರನ್ನು ಕೇಳಿದರು. ದಿಶಾ ಟೂಲ್ ಕಿಟ್ ಗೂ ದೆಹಲಿ ಗಲಭೆಗೂ ನೇರ ಸಂಪರ್ಕ ಇದೆಯೋ ಅಥವಾ ನಾವು ಊಹೆಗಳನ್ನು ಮಾಡಿಕೊಳ್ಳಬೇಕೋ ಎಂದು ನ್ಯಾಯಾಧೀಶರು ಹೆಚ್ಚುವರಿ ಸಾಲಿಸಿಟರ್ ಜನರಲ್ ರನ್ನು ಪ್ರಶ್ನಿಸಿದರು.

ದಿಶಾ ರವಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಯಾವ ಸಾಕ್ಷ್ಯ ಎಂಬುದನ್ನು ಹೇಳಿ ಎಂದಾಗ “ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಸಾಂಧರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ದಿಶಾಳ ಪಿತೂರಿಯನ್ನು ನೋಡಬೇಕು” ಎಂದು ಪೊಲೀಸ್ ಪರ ವಕೀಲರು ಹೇಳಿದರು. “ಹಾಗಾದರೆ ನೀವು ನೇರ ಸಾಕ್ಷ್ಯ ನೀಡುವುದಿಲ್ಲ. ದಿಶಾಗೂ ಈ ಗಲಭೆಗೂ ನೇರ ಸಂಪರ್ಕ ಇಲ್ಲ ಎಂದು ಭಾವಿಸಲೇ ? ಎಂದು ನ್ಯಾಯಾಲಯ ಪ್ರಶ್ನಿಸಿತು.

ಪೊಲೀಸ್ ಪರ ವಕೀಲರು ಇನ್ನೂ ಉತ್ತರವನ್ನು ನೀಡಲು ಸಾಧ್ಯವಾಗದಿದ್ದಾಗ, “ನಾನು ನನ್ನ ಆತ್ಮಸಾಕ್ಷಿಯನ್ನು ತೃಪ್ತಿಪಡಿಸದಿದ್ದರೆ, ನಾನು ಆದೇಶ ನೀಡಲಾಗುವುದಿಲ್ಲ” ಎಂದು ನ್ಯಾಯಾಧೀಶರು ಹೇಳಿದರು.

” ಜನವರಿ 26 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ 140 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟೂ ಜನ ಬಂಧಿತರಲ್ಲಿ ಒಬ್ಬ ಯಾರಾದರೂ ದಿಶಾ ಜೊತೆ ಸಂಪರ್ಕ ಹೊಂದಿದ್ದರೆ ? ಪೊಲೀಸರು ಅದಕ್ಕೇನಾದರೂ ಸಾಕ್ಷ್ಯ ನೀಡುತ್ತಾರೆಯೇ ? ಗಲಭೆಯಲ್ಲಿ ಬಂಧಿತ ಯಾವ ಆರೋಪಿ ಜೊತೆಯೂ ದಿಶಾ ಸಂಪರ್ಕದಲ್ಲಿ ಇಲ್ಲ” ಎಂದು ದಿಶಾ ಪರ ವಕೀಲರು ವಾದ ಮಂಡಿಸಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ, “ಟೂಲ್ ಕಿಟ್ ಎಂದರೇನು? ಬೆಂಗಳೂರಿನ ಈ ಹುಡುಗಿಗೆ ಜಾಮೀನು ನೀಡುವುದನ್ನು ತಡೆಯುವ ಕಾನೂನು ಯಾವುದು? ದಿಶಾ ರವಿ ವಿರುದ್ಧದ ಸ್ಪಷ್ಟವಾದ ಆರೋಪಗಳು ಯಾವುವು? ಅವಳ ವಿರುದ್ಧದ ಸಾಕ್ಷ್ಯಗಳು ಯಾವುವು?” ಎಂಬ ಮೂರು ಪ್ರಶ್ನೆಗಳನ್ನು ಮುಂದಿಟ್ಟಿತು.

“ಪ್ರತ್ಯೇಕತಾವಾದಿ ಸಂಘಟನೆಗಳು ರೈತರ ಪ್ರತಿಭಟನೆಯ ಲಾಭವನ್ನು ಪಡೆಯಲು ಬಯಸಿದ್ದರು. ಅವರಿಗೆ ಭಾರತೀಯ ಮುಖ ಬೇಕಿತ್ತು. ಅವರು ದಿಶಾ ರವಿ ಸೇರಿದಂತೆ ಕೆಲವೇ ಜನರೊಂದಿಗೆ ಸಂಪರ್ಕ ಹೊಂದಿದ್ದರು. ಈ ಟೂಲ್ಕಿಟ್ ತಯಾರಿಸುವ ಸಂಪೂರ್ಣ ಉದ್ದೇಶ ಆರೋಪಿಗಳ ನಡುವಿನ ಪಿತೂರಿಯಾಗಿದೆ” ಎಂದು ಪೊಲೀಸರು ವಾದಿಸಿದರು.

“ಯಾರೊ ಯಾರನ್ನೋ ಸಂಪರ್ಕಿಸಿದರು ಎಂದರೆ ಅಪರಾಧ ಹೇಗಾಗುತ್ತೆ. ನಾನು ದೇವಸ್ಥಾನಕ್ಕೆ ದಾನ ಕೊಡಿ ಎಂದು ದರೋಡೆಕೋರನನ್ನು ಸಂಪರ್ಕಿಸುತ್ತೇನೆ. ಆಗ ನಾನು ದರೋಡೆಯ ಭಾಗವಾಗುತ್ತೇನೆಯೇ ?” ಎಂದು ನ್ಯಾಯಾಧೀಶರು ಸರ್ಕಾರವನ್ನು ಪ್ರಶ್ನಿಸಿದರು.

ದಿಶಾ ಟೂಲ್ಕಿಟ್ ತಯಾರಿಸಲಿಲ್ಲ. ದಿಶಾ ರೈತರನ್ನು ಬೆಂಬಲಿಸಲು ಬಯಸಿದ್ದರು. ಫೆಬ್ರವರಿ 3 ರಂದು ದಿಶಾ ಎರಡು ಸಾಲುಗಳನ್ನು ಎಡಿಟ್ ಮಾಡಿದ್ದಾರೆ. ದಿಶಾ ಟೂಲ್ ಕಿಟ್ ಅನ್ನು ಕೇವಲ ರೈತರಿಗಾಗಿ ಬಳಸಿ, ರೈತರಿಗಾಗಿ ಎಡಿಟ್ ಮಾಡಿದ್ದಾರೆ ಎಂದು ದಿಶಾ ಪರ ವಕೀಲರು ಹೇಳಿದರು.

ಮಂಗಳವಾರಕ್ಕೆ ಮುಂದಿನ ಕಲಾಪವನ್ನು ಮುಂದೂಡಿರುವ ನ್ಯಾಯಾಲಯವು, ಈ ಪ್ರಕರಣಲ್ಲಿ ಮಾಧ್ಯಮಗಳು ಸಂವೇದನಾಶೀಲತೆಯಿಂದ ವರ್ತಿಸಬೇಕು ಎಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿತು.

(ಮಾಹಿತಿ – ಎನ್ ಡಿಟಿವಿ ಮತ್ತು ಬಾರ್ ಅ್ಯಂಡ್ ಬೆಂಚ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending