Connect with us

ದಿನದ ಸುದ್ದಿ

ದಿವ್ಯ ಜ್ಯೋತಿ ಬಸವಣ್ಣ..!

Published

on

  • ನೇತ್ರಾವತಿ ಸಿ ಎಂ .ನೆಲ್ಲಿಕಟ್ಟೆ

ನಾ ಕಂಡಂತೆ ನನ್ನ ದೃಷ್ಠಿ ಕೋನದಲ್ಲಿ ಆಗಿನ 12 ನೇ ಶತಮಾನದಲ್ಲಿ ಆಲದ ಮರವಂತೆ ಆಳವಾಗಿ ಬೇರೂರಿದ್ದ ಜಾತಿಯನ್ನು ತೊಲಗಿಸಲು ಪ್ರಕಾಶಮಾನವಾಗಿ
ಬಂದವರು ಬಸವಣ್ಣ. ಅವರು ಮಾಡಿದ ಕಾಯಕಗಳು ಇಂದಿಗೂ ಜೀವಂತವಾಗಿವೆ.

ಬ – ಬಲವಾಗಿ
ಸ- ಸಮಾನತೆ
ವ- ವರ್ಣಾತೀತ
ಣ್ಣ- ನಾಯಕನಾಗಿ

ಹೆಸರಿನಲ್ಲಿ ಸೂಚಿಸಿದಂತೆ ನಿಜವಾದ ಜಾತಿ ನಿರ್ಮೂಲನ ನಾಯಕನಾಗಿ ಹೊರ ಹೊಮ್ಮಿದವರು ನಮ್ಮ ಬಸವಣ್ಣನವರು. ಜಾತಿ ಎನ್ನುವ ಪದ 12ನೇ ಶತಮಾನದಲ್ಲಿ ಮೈಗಂಟಿದ ಚರ್ಮದಂತಿತ್ತು,ಅಂತಹ ಕೆಟ್ಟ ಜಾತಿಯ ಚರ್ಮವನ್ನು ಹೊಡೆದೋಡಿಸಲು ಬಲವಾಗಿ ಎಲ್ಲಾರ ಸಮಾನತೆಗಾಗಿ, ವರ್ಣಾತೀತ ನಿರ್ಮೂಲನೆಗಾಗಿ ನಮ್ಮೆಲ್ಲರ ಗಟ್ಟಿ ನಾಯಕರಾಗಿ ಬಂದವರೆ ನಮ್ಮ ಬಸವಣ್ಣನವರು.

ಅಂದಿನ ಕಾಲದಲ್ಲಿ ಶಿಕ್ಷಣವು ಮೇಲು ವರ್ಗದವರಿಗೆ ಮಾತ್ರ ಮೀಸಲಾಗಿತ್ತು. ಅದಲ್ಲದೆ ಕೆಳ ಜಾತಿಯವರು ಕೇವಲ ಶಿಕ್ಷಣ ಮಾತ್ರವಲ್ಲದೆ ಆರ್ಥಿಕ, ಸಾಮಾಜಿಕ, ರಾಜಕೀಯ, ಸಮಾಜದ ಎಲ್ಲಾ ಸೌಲಭ್ಯಗಳಿಂದ ವಂಚಿತರಾದ ಸಮಾಜದ ಧ್ವನಿಯಾಗಿ
ಬಂದವರೆ ನಮ್ಮ ಬಸವಣ್ಣ.

” ಶರಣರ ಕೂಡ ಸರಸವ ಹಾಡುತ್ತ
ನಡೆದಾನೆ ಬಸವಣ್ಣ ,
ದಾಸೋಹ ಇಟ್ಟು ಊಟ ಮಾಡಿಸಿ
ಕೊಡುತ್ತಿದ್ದ ದಕ್ಷಿಣೆ ”

ಇಂತಹ ತತ್ವ ಪದಗಳ ಮೂಲಕ ದಲಿತರಿಗೆ.”ಕಾಯಕವೇ_ ಕೈಲಾಸ ” ಎಂಬ ತತ್ವದಡಿಯಲ್ಲಿ ಬೋಧಿಸಿ ಗುಡಿ ಗುಂಡಾರಗಳಿಗೆ ಹೋಗುವ ಬದಲು ತನ್ನ ಕಾಯಕದಲ್ಲಿ ನಿಷ್ಠೆಯ ಮೂಲಕ ಕೆಲಸ ಮಾಡಿದರೆ ಅದರಲ್ಲಿ ದೇವರ ಕಾಣಬೇಕು ಎಂದು ಬಸವಣ್ಣ ಹೇಳುವುದರ ಮೂಲಕ ನಿರಾಕಾರ ದೇವರುಗಳನ್ನು ಆರಾಧಿಸಿ ಆದರೆ ಅವನು ಸೃಷ್ಠಿಸಿದ ಸೃಷ್ಠಿಗಳನ್ನು ಆರಾಧಿಸಬೇಡಿ.

“ಎನ್ನ ಕಾಲೆ ಕಂಬ ಎನ್ನದೇಹವೇ ದೇಗುಲ
ಎನ್ನ ಶಿರವೇ ಹೊನ್ನ ಕಲಶವಯ್ಯ! ಕೂಡಲಸಂಗಮದೇವ.”

ಎಂಬ ವಚನಗಳ ಮೂಲಕ ಮೂರ್ತಿ ಪೂಜೆಯನ್ನು ಖಂಡಿಸುತ್ತಾರೆ.ತಾವು ಮಾಡುವ ಕೆಲಸದಲ್ಲಿ ದೇವನನ್ನು ಕಾಣಿರಿ ಎಂದು ಹೇಳುತ್ತ ಅಂತರ್ಜಾತೀಯ
ಮೇಲ್ಜಾತಿಯ ವಿವಾಹಕ್ಕೆ ಪ್ರೋತ್ಸಾಹಿಸುತ್ತಾ , ಅಂತಹ ಕಠಿಣ ಶಿಕ್ಷೆಗಳಿದ್ದರೂ ಎದೆಗುಂದದೆ ಧೈರ್ಯವಾಗಿ ಸಮರ್ಥವಾಗಿ ಜಾತಿಯನ್ನು ಖಂಡಿಸಿದ ಮಹಾನ್ ಚೇತನ ಭಕ್ತಿ ಭಂಡಾರಿ ಬಸವಣ್ಣವರು ಅನುಭವ ಮಂಟಪದ ಮೂಲಕ ಸರ್ವರಿಗೂ ತಮ್ಮ ವಚನಗಳ ಮೂಲಕ ಎಲ್ಲಾ ಶರಣರಲ್ಲಿಯು ಸಮಾನತೆ ಉರಿದುಂಬಿಸುವಂತೆ ತಮ್ಮ ವಚನಗಳ ಮೂಲಕ ಜಾತಿಯ ಕೊಳೆಯನ್ನು ತೊಲಗಿಸಲು ಶ್ರಮಿಸಿದರು.

ಇದನ್ನೂ ಓದಿ | ಕೊರೋನ ರೋಗವನ್ನೆದುರಿಸಲು ಆಹಾರ ನಿಯಂತ್ರಣ

ಮೇಲ್ಜಾತಿಯ ಮಹಿಳೆಯನ್ನು ಕೆಳ ಜಾತಿಯ ಪುರುಷನೊಂದಿಗೆ ವಿವಾಹ ಮಾಡುವುದರ ಮೂಲಕ ಜಾತಿ ಎಂಬ ವಿಷ ಬೀಜದ ಕಳಂಕಕ್ಕೆ ಅಂತರ್ಜಾತೀಯ ವಿವಾಹ ಮಾಡುವುದರ ಮೂಲಕ ನಾವೆಲ್ಲರೂ ಒಂದೇ ಸಮಾನತೆಯ ತತ್ವವನ್ನು ಎತ್ತಿ ಹಿಡಿದ ಮಹನೀಯ, ಎಳೆ ಎಳೆಯಾಗಿ ಬಸವಣ್ಣನವರ ಬಗ್ಗೆ ಕೂಲಂಕುಷವಾಗಿ ಅವಲೋಕಿಸಿದಾಗ ಬಸವಣ್ಣನವರ ವಚನಗಳಲ್ಲಿ ವಿಶ್ವ ಸಂಸ್ಥೆ ಘೋಷಿಸಿದ ಎಲ್ಲಾ ಮಾನವ ಹಕ್ಕುಗಳ ವಿಚಾರಗಳೆಲ್ಲವೂ ಸೇರಿದೆ.

ಬಸವಣ್ಣನವರು ಪ್ರಜಾಪ್ರಭುತ್ವ,ಮೌಲ್ಯವನ್ನು ಎತ್ತಿ ಹಿಡಿದುಕೊಳ್ಳುವ ಮೂಲಕ ಬದುಕಿನುದ್ದಕ್ಕೂ ಸಮಾನತೆಯನ್ನು ಕಾಪಾಡಿಕೊಂಡಿದ್ದಾರೆ. ಜಾತಿ ಎಂಬ ಸಂಕೋಲೆಗಳಿಂದ ಬಿಡಿಸಿಕೊಳ್ಳಲು ಹಲವಾರು ವಚನಗಳ ಮೂಲಕ ನಾವೆಲ್ಲರೂ ಸಮಾನರು ಎಂದು ಹೇಳುತ್ತ ಬಂದಿದ್ದಾರೆ. ಇದನ್ನು ಪ್ರಸ್ತುತ ನಾವೆಲ್ಲರೂ ಪ್ರತಿಯೊಬ್ಬರು ಬಸವಣ್ಣನವರ ನಿಯಮಗಳಿಗೆ ಬದ್ಧರಾಗಿ ಹೋಗುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending