Connect with us

ದಿನದ ಸುದ್ದಿ

ದೊಡ್ಡಘಟ್ಟ | ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ವಸತಿ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

Published

on

ಸುದ್ದಿದಿನ, ಚನ್ನಗಿರಿ: ತಾಲೂಕಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ವಸತಿ ಪ್ರೌಢಶಾಲೆ ದೊಡ್ಡಘಟ್ಟ. 1998-99 ನೇ ಸಾಲಿನ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳ ಬಳಗದಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ.5 ರಂದು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,

ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ದಿವಂಗತರಾಗಿದ್ದ ಸಿ.ತಿಪ್ಪಣ್ಣ, ಮರಿಸ್ವಾಮಿ, ವೀರಾಂಜನೇಯ.ರಾಮಣ್ಣ.ಹಾಗೂ ವಿದ್ಯಾರ್ಥಿ
ಡಿ.ಆರ್.ಮಂಜುನಾಥ್ ಇವರಿಗೆ ಮೌನಾಚರಣೆ ಮಾಡಿ ನಮನ ಸಲ್ಲಿಸಲಾಯಿತು.

ನಂತರ ಕಾರ್ಯಪ್ರಮವನ್ನು ನಿವೃತ್ತ ಮೂಖೋಪಧ್ಯಾಯರಾದ ಎಲ್,ಈ.ಸಿದ್ದಯ್ಯ ಉದ್ಘಾಟಿಸಿ ಮಾತನಾಡಿ ಚವರ್ಷಗಳ ನಂತರ ವಿದ್ಯಾರ್ಥಿಗಳು ನಮ್ಮನ್ನ ಗೌರವಿಸುತ್ತಿರುವುದು ಸಂತೋಷ ತಂದಿದೆ.ಒಬ್ಬ ಶಿಕ್ಷಕನಿಗೆ ಇದಕ್ಕಿಂತ ಹೆಚ್ಚು ಸಾರ್ಥಕ ಎನಿಸುವ ವಿಷಯ ಇನ್ನೊಂದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ನಿವೃತ್ತ ಪ್ರಾದ್ಯಾಪಕ ಹಾಗೂ ಸಾಹಿತಿ ಡಾ. ಎ.ಬಿ.ರಾಮಚಂದ್ರಪ್ಪ ಅವರು ಮಾತನಾಡಿ ಶೈಕ್ಷಣಿಕ ಸಾರ್ಥಕತೆ ನಗರಗಳಿಗಿಂತ ಹಳ್ಳಿಗಳಲ್ಲೇ ಹೆಚ್ಚು, ಈ ದೇಶವನ್ನು ಕಟ್ಟುವಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಹಳ್ಳಿಗಳಲ್ಲಿ ಬಡತನ ಹಸಿವು ದಾರಿದ್ರತೆ, ಅನಕ್ಷರತೆಗಳ ನಡುವಿನಿಂದ ಅಕ್ಷರ ಕಲಿತು ಮೇಲೆ ಬಂದವರಿಂದ ಅತ್ಯಂತ ಭೂನವೀಕರಣದ ದೇಶ ಕಟ್ಟಲು ಸಾರ್ಥಕವೆಂದು ಅಂಬೇಡ್ಕರ್ ಕನಸು ಕಂಡಿದ್ದರು, ಈ ಸಾಧ್ಯತೆಯನ್ನು ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ವಸತಿ ಪ್ರೌಢಶಾಲೆ ಸಾರ್ಥಕ ಗೊಳಿಸಿದೆ ಎಂದರು.

ಸಾಹಿತಿ ಶಾಂತಗಂಗಾಧರ್ ಮಾತಾನಾಡಿ ವಿದ್ಯಾರ್ಥಿಗಳು ಮಾಡುತ್ತಿರುವ ಈ ಕಾರ್ಯಕ್ರಮ ಮಾದರಿಯಾಗಿದೆ.ಇಷ್ಟು ರ್ವಗಳ ನಂತರ ಎಲ್ಲರೂ ಸೇರಿ ತಮ್ಮ ಶಿಕ್ಷಕರನ್ನ ಗೌರವಿಸುತ್ತಿರುವುದು ಶ್ಲಾಗನೀಯ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಎಲ್.ಈ.ಸಿದ್ದಯ್ಯ, ಎಂ.ವಿ.ಈಶ್ವರಯ್ಯ, ಕೆ.ಗಂಗಪ್ಪಸಿ.ಬಿ.ಬೂದಿ ಬಸಪ್ಪ.ಕೆ.ಎಸ್.ಹಾಲಪ್ಪ, ಕೆ.ಸುರೇಶ್‌, ಎಸ್.ತಿಮ್ಮಯ್ಯ ಕೃಷ್ಣಮೂರ್ತಿ.ಎಸ್.ಪಿ. ಇವರಿಗೆ ಗುರುವಂದನೆ ಸಲ್ಲಿಸಲಾಯಿತು ಹಾಗೂ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

1998-99 ನೇ ಸಾಲಿನ ವಿದ್ಯಾರ್ಥಿಗಳು

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮುಖೋಪದ್ಯಾಯರಾದ ಸಿ.ಬಿ,ಬೂದಿ ಬಸಪ್ಪ ವಹಿಸಿಕೊಂಡಿದ್ದರು.ಮುಖ್ಯ ಅತಿಥಿಗಳಾಗಿ ಗ್ರಾಮದ ಜಯ್ಯಪ್ಪ.ಡಿ.ಎಂ. ಶಿವಮೂರ್ತೃಪ್ಪ ಡಿ.ಆರ್. ಬಿ.ವಿ. ಶ್ರೀನಿವಾಸ್ ಶೇಖರಪ್ಪ ಆರ್. ಇದ್ದರು.

1998-99ನೇ ಸಾಲಿನವಿದ್ಯಾರ್ಥಿ ಬಳಗದವರು ನಾಡಗೀತೆ ಹಾಡಿದರು. ಮಲ್ಲಿಕಾರ್ಜುನ.ಎಂ.ಸ್ವಾಗತಿಸಿದರು. ಮಂಜುನಾಥ.ಹೆಚ್,ವಂದಿಸಿದರು.ಸನಾವುಲ್ಲ.ಡಿ, ಕಾರ್ಯಕ್ರಮ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending