Connect with us

ಬಹಿರಂಗ

ತಮ್ಮ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಂಬೇಡ್ಕರರು ಹೇಳಿದ್ದ ಒಂದು ಕಥೆ..! : ಮಿಸ್ ಮಾಡ್ದೆ ಓದಿ

Published

on

  • ರಘೋತ್ತಮ ಹೊ.ಬ

1947 ರ ಏಪ್ರಿಲ್ 14 ಅಂಬೇಡ್ಕರರ 55ನೇ ಹುಟ್ಟುಹಬ್ಬದ ಸಂದರ್ಭವದು. ಆ ಸಂದರ್ಭದಲ್ಲಿ ಮದ್ರಾಸಿನ ‘ಜೈಭೀಮ್’ ಮಾಸಿಕಕ್ಕೆ ತಮ್ಮ ಜನ್ಮದಿನಾಚರಣೆಯ ಪ್ರಯುಕ್ತ ನೀಡಿದ ಸಂದೇಶದಲ್ಲಿ ಗ್ರೀಕ್ ನ ಹೋಮರನ ಕಾವ್ಯದಲ್ಲಿ ಕಂಡುಬರುವ ಗ್ರೀಕ್ ದೇವತೆ ಡಿಮಿಟ್ರಿಯನ್ನು ಉದ್ದೇಶಿಸಿ ಬರೆದಿರುವ ಒಂದು ಕಥೆಯನ್ನು ಅಂಬೇಡ್ಕರರು ಹೇಳುತ್ತಾರೆ.

ಅಂಬೇಡ್ಕರರು ಹೇಳಿದ ಆ ಕಥೆ ಹೀಗಿದೆ:-
“ಒಮ್ಮೆ ಗ್ರೀಕ್ ದೇವತೆ ಡಿಮಿಟ್ರಿ ತನ್ನ ಮಗಳಿಗಾಗಿ ಹುಡುಕುತ್ತಾ ರಾಜ ಕೇಲಿಯೋಸನ ಆಸ್ಥಾನಕ್ಕೆ ಬರುತ್ತಾಳೆ. ಕರುಣಾಭರಿತ ಓರ್ವ ದಾದಿಯ ರೂಪದಲ್ಲಿ ಆಕೆ ಬಂದಿದ್ದರಿಂದ ಯಾರಿಗೂ ಕೂಡ ಆಕೆಯನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಹಾಗೆಯೇ ರಾಣಿ ಮೆಟೊನೀರಾ ಆಗ ತಾನೆ ಹುಟ್ಟಿದ ತನ್ನ ಅಸುಕಂದ ಡೆಮೋಫೋನ್‌ನನ್ನು (ನಂತರ ಆತ ಟ್ರಿಪ್ಟೊಲೊಮೊಸ್ ಎಂದು ಕರೆಯಲ್ಪಡುತ್ತಾನೆ) ದಾದಿಯ ರೂಪದಲ್ಲಿದ್ದ ದೇವತೆ ಡಿಮಿಟ್ರಿಗೆ (ಆರೈಕೆಮಾಡಲು) ಒಪ್ಪಿಸುತ್ತಾಳೆ.

ಆಶ್ಚರ್ಯಕರವೆಂದರೆ ಪ್ರತಿಸಂಜೆ ಮುಚ್ಚಿದ ಬಾಗಿಲುಗಳ ಹಿಂದೆ ಮನೆಯವರೆಲ್ಲ ಮಲಗಿದ ನಂತರ ದೇವತೆ ಡಿಮಿಟ್ರಿ ಪುಟ್ಟ ಆ ಡೆಮೋಫೋನ್‌ನನ್ನು ತೊಟ್ಟಿಲಿನಿಂದ ಕ್ರೂರವಾಗಿ, ಹಾಗೆ ಅಷ್ಟೇ ಪ್ರೀತಿಯಿಂದ ತೆಗೆದುಕೊಂಡು ಹೋಗುತ್ತಾ ಆತನಲ್ಲಿ ದೈವತ್ವವನ್ನು ತರುವ ಆಸೆ ಹೊತ್ತು ಆ ಮಗುವನ್ನು ನಗ್ನವಾಗಿ ನಿಗಿನಿಗಿ ಕೆಂಡದ ಮೇಲೆ ಮಲಗಿಸುತ್ತಿರುತ್ತಾಳೆ. ಆ ಮಗು ಡೆಮೋಫೋನ್ ಕೂಡ ಅಷ್ಟೆ ಉರಿಯುತ್ತಿರುವ ಆ ಇದ್ದಿಲಿನ ಅಗಾಧವಾದ ಶಾಖವನ್ನು ಸಹಿಸಿಕೊಳ್ಳುತ್ತಿರುತ್ತದೆ, ಕಷ್ಟವನ್ನು ಸಹಿಸಿಕೊಳ್ಳುತ್ತಾ ಅಗಾಧವಾದ ಶಕ್ತಿಯನ್ನು ಅದು ಪಡೆದುಕೊಳ್ಳುತ್ತಿರುತ್ತದೆ. ಒಟ್ಟಾರೆ ಎಲ್ಲವನ್ನು ಮೀರಿದ ಅದ್ಭುತ ಚೈತನ್ಯವನ್ನು, ಅತ್ಯುತ್ತಮ ಆರೋಗ್ಯವನ್ನು, ಅತಿಮಾನುಷ ಶಕ್ತಿಯನ್ನು ಆ ಮಗುವಿಗೆ ಹೀಗೆ ದೇವತೆ ಡಿಮಿಟ್ರಿ ಪ್ರತಿದಿನ ತುಂಬುತ್ತಿರುತ್ತಾಳೆ”.

“ಆದರೆ ರಾಣಿ ಮೆಟೋನಿರಾ ಒಮ್ಮೆ ಕುತುಹಲಗೊಂಡು ಇದ್ದಕ್ಕಿದ್ದಂತೆ ಅಂತಹ ಪ್ರಯೋಗ ನಡೆಯುತ್ತಿದ್ದ ಆ ಕೊಠಡಿಗೆ ನುಗ್ಗುತ್ತಾಳೆ. ತನ್ನ ಮಗುವಿನ ಮೇಲೆ ಇಂತಹ ಪ್ರಯೋಗವಾಗುತ್ತಿರುವುದನ್ನು ನೋಡಿ ಭಯಗೊಂಡ ಆಕೆ ತನ್ನ ಮಗನ ಮೇಲೆ ಅತಿಮಾನುಷ ಶಕ್ತಿ ತುಂಬುವ ಕ್ರಿಯೆ ನಡೆಸುತ್ತಿದ್ದ ಆ ದೇವತೆಯನ್ನು ಪಕ್ಕಕ್ಕೆ ನೂಕಿ, ನಿಗಿನಿಗಿ ಕೆಂಡವನ್ನು ದೂರ ತಳ್ಳಿ ಮಗುವನ್ನು ತೆಗೆದುಕೊಂಡು ಹೋಗುತ್ತಾಳೆ. ಪರಿಣಾಮ? ಆಕೆ (ರಾಣಿ ಮೆಟೋನೀರಾ) ತನ್ನ ಮಗುವನ್ನು ರಕ್ಷಿಸಿಕೊಳ್ಳುತ್ತಾಳೆ. ಆದರೆ ಅದನ್ನು ದೈವತ್ವದ ಮಟ್ಟಕ್ಕೆ ಏರಿಸುವ, ಅತಿಮಾನುಷ ಶಕ್ತಿಯನ್ನು ಅದರಲ್ಲಿ ತುಂಬುವ ಅವಕಾಶದಿಂದ ಅದನ್ನು ಆಕೆ ವಂಚಿಸುತ್ತಾಳೆ”!
ಅಂಬೇಡ್ಕರರು ಕಥೆಯನ್ನು ನಿಲ್ಲಿಸುತ್ತಾರೆ.

ಹಾಗೆಯೇ ಅದರ ನೀತಿಯನ್ನು ಹೀಗೆ ವಿವರಿಸುತ್ತಾರೆ. “ಶೋಷಿತ ಸಮುದಾಯದ ಯಾರೇ ಆಗಲೀ ಹೋರಾಟ ಮಾಡದೆ, ಕಷ್ಟವನ್ನು ಅನುಭವಿಸದೆ ಉನ್ನತವಾದದ್ದನ್ನು ಸಾಧಿಸಲು ಸಾಧ್ಯವಿಲ್ಲ. ಬೆಂಕಿಯ ಪರೀಕ್ಷೆಯನ್ನು ಎದುರಿಸದೆ ಮನುಷ್ಯತ್ವವನ್ನಾಗಲೀ, ದೈವತ್ವವನ್ನಾಗಲೀ ಪಡೆಯುವುದು ಖಂಡಿತ ಸಾಧ್ಯವಿಲ್ಲ. ಉತ್ಕೃಷ್ಟವಾದುದ್ದನ್ನು ಹೋರಾಟ ಮತ್ತು ತ್ಯಾಗದಿಂದ ಮಾತ್ರ ಸಾಧಿಸಬಹುದು. ಹೋರಾಟ ಮತ್ತು ನೋವನ್ನು ಅನುಭವಿಸುವುದೆಂದರೆ ಹೀಗೆಯೇ. ಬೈಬಲ್‌ನ ಭಾಷೆಯನ್ನೇ ಬಳಸುವುದಾದರೆ ‘ಎಲ್ಲ ವರ್ಗಗಳ ಜನರನ್ನು ಕರೆಯಲಾಗುತ್ತದೆ. ಆದರೆ ಅವರಲ್ಲಿ ಕೆಲವರನ್ನು ಮಾತ್ರ ಆರಿಸಲಾಗುತ್ತದೆ’. ಯಾಕೆ? ಕಾರಣ ಸ್ಪಷ್ಟ. ಅದೆಂದರೆ ಆರಿಸಲಾದ ಆತ (ಶೋಷಿತ ಸಮುದಾಯದ ವ್ಯಕ್ತಿ) ತನ್ನ ಜನರ ಭವಿಷ್ಯವನ್ನು ಭವ್ಯವಾಗಿ ಕಟ್ಟಲು, ತನ್ನ ವೈಭೋಗಗಳನ್ನು ಪ್ರಸ್ತುತದ ಅಗತ್ಯತೆಗಳನ್ನು ತ್ಯಾಗಮಾಡಲು ಸಿದ್ಧನಿರಬೇಕು. ಈ ದಿಸೆಯಲ್ಲಿ ಭವಿಷ್ಯದ ಅವಶ್ಯಕತೆಗಳಿಗಾಗಿ ಪ್ರಸ್ತುತದ ಆಸೆಗಳನ್ನು ತ್ಯಾಗಮಾಡುವ ಧೈರ್ಯವಿಲ್ಲದ್ದರಿಂದಾಗಿ, ದೃಢ ನಿರ್ಧಾರವಿಲ್ಲದ್ದರಿಂದಾಗಿ, ಶೋಷಿತ ಸಮುದಾಯದ ಬಹುತೇಕ ಮಂದಿ ಉನ್ನತವಾದದ್ದನ್ನು ಸಾಧಿಸಲು ವಿಫಲರಾಗುತ್ತಿದ್ದಾರೆ”.
ಅಂಬೇಡ್ಕರ್ ಹೇಳುತ್ತಾ ಹೋಗುತ್ತಾರೆ…

ಅವರ ಪ್ರಕಾರ ಆ ಕಥೆಯಲ್ಲಿ ಮಗು ಡೆಮೊಫೋನ್ ಇನ್ನಷ್ಟು ಕಾಲ ಆ ನಿಗಿನಿಗಿ ಕೆಂಡದ ಕಷ್ಟ ಸಹಿಸಿಕೊಂಡಿದ್ದರೆ ಆತ ದೈವತ್ವ ಪಡೆಯುತ್ತಿದ್ದ, ಅತಿಮಾನುಷ ಶಕ್ತಿ ಪಡೆಯುತ್ತಿದ್ದ. ಆದರೆ ಆತನ ತಾಯಿ ಅದನ್ನು ಅರಿಯದೇ ಹೋದದ್ದರಿಂದ ಆತ ಅಂತಹ ಅವಕಾಶ ಕಳೆದುಕೊಂಡ. ಮುಂದುವರಿದು ಅಂಬೇಡ್ಕರರು ಹೇಳುವುದು “ಶೋಷಿತ ಸಮುದಾಯದ ಜನರು ಆ ಮಗುವಿನ ಹಾಗೆ ಬೆಂಕಿಯಂತಹ ಹೋರಾಟ ಮಾಡದೆ, ನಿಗಿನಿಗಿ ಕೆಂಡದ ಕಷ್ಟ ಅನುಭವಿಸದೆ ದೈವತ್ವದ ರೀತಿ ಉನ್ನತವಾದದ್ದನ್ನು ಸಾಧಿಸಲು ಸಾಧ್ಯವಿಲ್ಲ. ಹಾಗೆಯೇ ಇವರಿಗೆ ಈ ದಂತಕಥೆಗಿಂತ ಉತ್ತಮವಾದ, ಶ್ರೇಷ್ಠವಾದ ಸಂದೇಶ ಬೇಕೆ? ಖಂಡಿತ, ನನಗೆ ಬೇರಾವುದು ಹೊಳೆಯುತ್ತಿಲ್ಲ. ಯಾಕೆಂದರೆ ಅಸ್ಪೃಶ್ಯರಿಗೆ (ಈ ಕಥೆಯೇ) ಶ್ರೇಷ್ಠ ಮತ್ತು ಅತಿ ಸೂಕ್ತವಾದ ಸಂದೇಶ. ಅವರ ಹೋರಾಟ ಮತ್ತು ಕಷ್ಟ ನನಗೆ ತಿಳಿದಿದೆ.

ಅಲ್ಲದೆ (ಹಿಂದೂಗಳಿಂದ) ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ಅವರು ನನಗಿಂತ ಹೆಚ್ಚಿನ ಕಷ್ಟ ಅನುಭವಿಸುತ್ತಿದ್ದಾರೆ. ಅದೂ ಸಹ ನನಗೆ ತಿಳಿದಿದೆ. ಹೀಗಿದ್ದರೂ ಇದೆಲ್ಲಕ್ಕೂ ಮೀರಿ ನಾನು ಅವರಿಗೆ ಮತ್ಯಾವ ಸಂದೇಶವನ್ನು ನೀಡಲಾರೆ. ಈ ದಿಸೆಯಲ್ಲೇ ನನ್ನ ಸಂದೇಶವೆಂದರೆ ಹೋರಾಡಿ, ಮತ್ತೂ ಹೋರಾಡಿ. ತ್ಯಾಗ ಮಾಡಿ, ಇನ್ನೂ ಹೆಚ್ಚಿನ ತ್ಯಾಗ ಮಾಡಿ. ಯಾಕೆಂದರೆ ತ್ಯಾಗ ಮತ್ತು ಸಂಕಷ್ಟವನ್ನು ಲೆಕ್ಕಕ್ಕಿಡದ ಅಂತಹ ಹೋರಾಟ, ಹಾಗೆಯೇ ಅಂತಹ ಹೋರಾಟ ಮಾತ್ರ ನಿಮಗೆ ವಿಮೋಚನೆ ತರಬಲ್ಲದು. ಅದು ಬಿಟ್ಟು ಬೇರಾವುದರಿಂದಲೂ (ವಿಮೋಚನೆ) ಸಾಧ್ಯವಿಲ್ಲ” ಅಂಬೇಡ್ಕರರು ಹೇಳುತ್ತಾ ಹೋಗುತ್ತಾರೆ.

ಈ ಸಂದರ್ಭದಲ್ಲಿ ಅವರು ಶೋಷಿತರಿಗೆ ಒಂದು ಪ್ರಾರ್ಥನೆಯನ್ನು ಬೋಧಿಸುತ್ತಾರೆ. ಅದೆಂದರೆ “ತನಗೆ ಜನುಮ ನೀಡಿದ ಜನಾಂಗದ ಏಳಿಗೆಗೆ ಬದ್ಧರಾದ ಕರ್ತವ್ಯಶೀಲರೇ ಧನ್ಯರು. ಗುಲಾಮಗಿರಿಯ ವಿರುದ್ಧ ಹೋರಾಟವನ್ನು ಮುಂದುವರೆಸಲು ತಮ್ಮ ದೈಹಿಕ ಶಕ್ತಿ, ಆಧ್ಯಾತ್ಮಿಕ ಶಕ್ತಿ, ತಮ್ಮ ಭವಿಷ್ಯ, ತಮ್ಮ ಬದುಕಿನ ಸುಂದರ ಘಳಿಗೆಗಳನ್ನು ನೀಡಲು ಬದ್ಧರಾದವರೇ ಧನ್ಯರು. ಅಸ್ಪೃಶ್ಯರು ತಮ್ಮ ಮಾನವ ಗೌರವವನ್ನು ಸಂಪೂರ್ಣ ಪಡೆಯುವ ತನಕ ಬಿಸಿಲೇ ಇರಲಿ, ಬಿರುಗಾಳಿಯೇ ಬರಲಿ, ಒಳ್ಳೆಯದೇ ಆಗಲಿ, ಕೆಟ್ಟದ್ದೇ ಆಗಲಿ, ಗೌರವವೇ ಬರಲಿ ಅಥವಾ ಅಗೌರವವೇ ಬರಲಿ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಮ್ಮ ಈ ಹೋರಾಟವನ್ನು ಮುಂದುವರೆಸುವ ನಿರ್ಧಾರ ಕೈಗೊಳ್ಳುವವರೇ ಧನ್ಯರು”.

ಹೀಗೆ ಪ್ರಾರ್ಥನೆ ಬೋಧಿಸಿ ಅಂಬೇಡ್ಕರರು ಸಂತಸ ಸಂಭ್ರಮದ ನಡುವೆ ತಮ್ಮ 55ನೇ ಹುಟ್ಟುಹಬ್ಬವನ್ನು ದೆಹಲಿಯಲ್ಲಿ ಅಂದು ಆಚರಿಸಿಕೊಳ್ಳುತ್ತಾರೆ.1947 ಏಪ್ರಿಲ್ 14ರ ಆ ದಿನ ಬ್ರಿಟಿಷ್ ಆಳ್ವಿಕೆಯ ಆ ಕಾಲದಲ್ಲಿ ದೆಹಲಿಯಲ್ಲಿ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿಷೇಧವಿರುತ್ತದೆ. ಆ ಕಾರಣಕ್ಕಾಗಿ ಅಂಬೇಡ್ಕರರ ಅದ್ದೂರಿ ಹುಟ್ಟುಹಬ್ಬ ಆಚರಣೆಯನ್ನು ಆ ವರ್ಷ ಕೈಬಿಡಲಾಗಿರುತ್ತದೆ. ಹಾಗಿದ್ದರೂ “ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟ(ಎಐಎಸ್‌ಎಫ್)”(ಅಂಬೇಡ್ಕರರು ಸ್ಥಾಪಿಸಿದ್ದ ರಾಜಕೀಯ ಪಕ್ಷ)ದ ಪ್ರಧಾನ ಕಾರ್ಯದರ್ಶಿಗಳ ಆದೇಶದ ಮೇರೆಗೆ ದೆಹಲಿಯ ಮೂಲೆ ಮೂಲೆಯಲ್ಲೂ ಅಂದು ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ನೀಲಿ ಬಾವುಟವನ್ನು ಹಾರಿಸಲಾಗುತ್ತದೆ. ಅಂಬೇಡ್ಕರರಿಗೆ ದೀರ್ಘಾಯುಷ್ಯ ದೊರಕಲಿ ಎಂದು ದೇಶದ ಉದ್ದಗಲಕ್ಕೂ ಅಂದು ಪ್ರಾರ್ಥಿಸಲಾಗುತ್ತದೆ. ಪರಿಶಿಷ್ಟರ ಮನೆಗಳು ಅಂದು ರಾತ್ರಿ ಪೂರಾ (ಏಪ್ರಿಲ್ 13) ವಿದ್ಯುದ್ದೀಪಗಳಿಂದ ಬೆಳಗುತ್ತವೆ. ಒಟ್ಟಾರೆ ಇಡೀ ದೇಶ ಅಂದು ಅಂಬೇಡ್ಕರರ 55ನೇ ಜನ್ಮದಿನದ ಸಂದರ್ಭವನ್ನು ಸಂತಸ ಸಂಭ್ರಮದಿಂದ ಆಚರಿಸುತ್ತದೆ.

ಅಂಬೇಡ್ಕರರು ಬದುಕಿದ್ದಾಗಲೇ ಆರಂಭಗೊಂಡ ಅವರ ಜನ್ಮದಿನದ ಅಂತಹ ಸಂತಸ, ಸಂಭ್ರಮ ಇನ್ನೂ ನಿಂತಿಲ್ಲ. ಅದು ನಿಲ್ಲುವುದೂ ಇಲ್ಲ. ಆದರೆ ಮರೆಯಬಾದ್ದೆಂದರೆ ಶೋಷಿತರಿಗೆ ಅವರು ನೀಡಿರುವ ‘ತ್ಯಾಗದ ಕಥೆ’ಯ ಆ ಅಮರ ಸಂದೇಶ. ಹಾಗೆಯೇ ಶೋಷಿತರಲ್ಲಿ ಹೋರಾಟದ ಕೆಚ್ಚನ್ನು ತುಂಬುವ ಅವರ ಆ ಧನ್ಯತೆಯ ಪ್ರಾರ್ಥನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending