Connect with us

ಬಹಿರಂಗ

ಅಂಬೇಡ್ಕರ್ ಬರೆಹಗಳು ಮತ್ತು ವೈಚಾರಿಕೆ ಪ್ರಜ್ಞೆ

Published

on

ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕಾದರೆ ನಾವು ಯಾರನ್ನು ಓದದಿದ್ದರೂ ನಡೆದೀತು ಆದರೆ ಅಂಬೇಡ್ಕರ್ ಅವರನ್ನು ಓದದಿದ್ದರೆ ನಡೆಯುವುದಿಲ್ಲ ಅನ್ನುವಷ್ಟರ ಮಟ್ಟಿಗೆ ಈ ದೇಶದ ಇತಿಹಾಸ, ಸಮಾಜ, ದೇವರು-ಧರ್ಮ, ರಾಜಕಾರಣ, ತತ್ವಶಾಸ್ತ್ರ, ಆರ್ಥಿಕತೆ, ಹೀಗೆ ಬಹುಮುಖ್ಯವಾದ ಎಲ್ಲ ಮಗ್ಗಲುಗಳನ್ನು ಆಳವಾಗಿ ಅಧ್ಯಯನಮಾಡಿ ಕರಾರುವಕ್ಕಾಗಿ ತಮ್ಮ ವಿಚಾರಗಳನ್ನು ಪ್ರಬುದ್ಧವಾಗಿ ಮಂಡಿಸಿದ ಅಂಬೇಡ್ಕರ್ ಅವರಂಥ ಮತ್ತೊಬ್ಬ ವಿದ್ವಾಂಸ ಬಹುಶಃ ಭಾರತದಲ್ಲಿ ನಮಗೆ ದೊರೆಯಲಾರನೇನೊ.

ಜಾತಿಯ ಕಾರಣಕ್ಕೆ ಎಲ್ಲ ಬಗೆಯ ಸಾಮಾಜಿಕ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತನಾಗಿ, ಪಡಬಾರದ ಕಷ್ಟಗಳನ್ನೆಲ್ಲ ಪಟ್ಟು, ಎಲ್ಲ ಬಗೆಯ ದೌರ್ಜನ್ಯಗಳನ್ನು ಎದುರಿಸಿ ಬೆಳೆದ ದಲಿತ ಹುಡುಗನೊಬ್ಬ ಆ ಕಾಲದ ಎಲ್ಲ ಸೌಲಭ್ಯಗಳನ್ನು ಜಾತಿಯ ಕಾರಣದಿಂದಲೇ ಪಡೆಯುತ್ತಿದ್ದ ಯಾವೊಬ್ಬ ಸವರ್ಣಿಯನೂ ಬೆಳೆಯಲಾಗದಷ್ಟು ಎತ್ತರಕ್ಕೆ ಬೆಳೆದದ್ದು ಸಣ್ಣ ಸಂಗತಿಯೇನಲ್ಲ. ಆಧುನಿಕ ವಿದ್ಯಾಭ್ಯಾಸದ ಅತ್ಯುನ್ನತ ಪದವಿಗಳಾದ ಪಿಎಚ್.ಡಿ, ಡಿ.ಎಸ್ಸಿ.ಯಂಥವುಗಳನ್ನು ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ, ತಮ್ಮ ನಿಷ್ಠೆ, ಶ್ರದ್ಧೆ, ಪರಿಶ್ರಮಗಳಿಂದ ಕಷ್ಟಪಟ್ಟು, ಆಳವಾದ ಅಧ್ಯಯನ ಮತ್ತು ಮೊನಚು ವಿಶ್ಲೇಷಣೆಗಳಿಂದ ಗಳಿಸಿಕೊಂಡ ಅಪಾರವಾದ ಜ್ಞಾನವನ್ನು ಸಮಾಜೋದ್ಧಾರಕ್ಕಾಗಿ ಅವರಷ್ಟು ಬಳಸಿಕೊಂಡವರೂ ವಿರಳ. ಅಂಬೇಡ್ಕರ್ ಅವರ ವಿದ್ವತ್ತನ್ನು ಜಗತ್ತು ಇಂದು ಸರಿಯಾಗಿಯೇ ಗುರುತಿಸಿ ದೊಡ್ಡಮಟ್ಟದಲ್ಲಿ ಗೌರವಿಸುತ್ತಿದೆ. ಅವರ ಜನ್ಮದಿನವನ್ನು ವಿಶ್ವಸಂಸ್ಥೆ ‘ಜಾಗತಿಕ ಜ್ಞಾನದಿನ’ವನ್ನಾಗಿ ಘೋಷಿಸಿರುವುದು ಇದರ ಒಂದು ಉದಾಹರಣೆ ಮಾತ್ರ.

ಇಂತಹ ಮಹಾನ್ ಮೇಧಾವಿಗೆ ಭಾರತೀಯರಾದ ನಾವು ಏನು ಮಾಡಿದ್ದೇವೆ ಎಂಬುದನ್ನು ಕೇಳಿಕೊಂಡರೆ ಒಂದಿಷ್ಟು ನಾಚಿಕೆಯಾದೀತು. ಏಕೆಂದರೆ ಈಗಲೂ ಭಾರತದಲ್ಲಿ ಬಹುಪಾಲು ಜನರಿಗೆ ‘ಅಂಬೇಡ್ಕರ್’ ಅಂದ ತಕ್ಷಣಕ್ಕೆ ನೆನಪಿಗೆ ಬರುವುದು ಅವರ ‘ಜಾತಿ’ಯೇ ಹೊರತು ‘ಜ್ಣಾನ’ವಲ್ಲ! ಒಂದು ರಾಜ್ಯದ ಸೇನಾಕಾರ್ಯದರ್ಶಿ ಅಂತಹ ದೊಡ್ಡ ಹುದ್ದೆಯಲ್ಲಿದ್ದರೂ ದಲಿತನೆಂಬ ಕಾರಣಕ್ಕೆ ಅವರಿಗೆ ವಾಸಿಸಲು ಒಂದು ಬಾಡಿಗೆ ಮನೆ ನಮ್ಮ ದೇಶದಲ್ಲಿ ಸಿಗಲಿಲ್ಲ! ಅವರೇ ಬರೆದ ಸಂವಿಧಾನದ ಪ್ರಕಾರವೆ ನಡೆದ ಮೊದಲ ಚುನಾವಣೆಯಲ್ಲಿಯೇ ಅವರನ್ನು ಸೋಲಿಸಿದ ‘ಭವ್ಯಭಾರತ ನಮ್ಮದು!

ಅಂಬೇಡ್ಕರ್ ಅಂದರೆ ಏನು ಅವರ ವಿದ್ವತ್ತು ಯಾವ ಮಟ್ಟದ್ದು ಆಧುನಿಕ ಭಾರತದ ನಿರ್ಮಾಣದಲ್ಲಿ ಅವರ ಕೊಡುಗೆ ಏನು ಎಂಬುದು ಇಂದಿಗೂ ನಮ್ಮಲ್ಲಿ ಬಹುಜನಕ್ಕೆ ಗೊತ್ತಿಲ್ಲ. ಅವರನ್ನು ಸದಾ ತೆಗಳುವ ವರ್ಗವೊಂದುಕಡೆ ಇದ್ದರೆ ಅದಕ್ಕೆ ವಿರುದ್ಧವಾಗಿ ಅವರನ್ನು ಆರಾಧಿಸುವ ವರ್ಗವೊಂದು ಕಾಲದ ಅಗತ್ಯವಾಗಿ ಬೆಳೆದುಬಂತು. ಅವರನ್ನು ವಿರೋಧಿಸುವವರಿರಲಿ, ಆರಾಧಿಸುವವರಲ್ಲಿ ಕೂಡ ಬಹಳ ಜನ ಅಂಬೇಡ್ಕರ್ ಅವರನ್ನು ಸರಿಯಾಗಿ ಓದಿಕೊಳ್ಳಲಿಲ್ಲ ಎಂಬುದು ವಾಸ್ತವ ಸಂಗತಿ.

ಇದಕ್ಕೆ ಅವರ ಬರಹಗಳ ಅಲಭ್ಯತೆಯೂ ಒಂದು ದೊಡ್ಡ ಕಾರಣವಾಗಿತ್ತು. ಅಂಬೇಡ್ಕರ್ ತೀರಿಕೊಂಡ ಮೇಲೆ ಬಹಳಷ್ಟು ದೊಡ್ಡ ಲೇಖಕರ ಬೌದ್ಧಿಕ ಆಸ್ತಿಗಳಂತೆ ಅಂಬೇಡ್ಕರ್ ಅವರ ಬರೆಹಗಳು ಕೂಡ ಕುಟುಂಬದ ಆಸ್ತಿವಿವಾದಕ್ಕೆ ತುತ್ತಾದವು. ಈ ಕೊರತೆಯನ್ನು ನೀಗಿಸುವ ಪ್ರಯತ್ನವೊಂದು ಮೊಟ್ಟಮೊದಲು ಮೂವತ್ತು ವರ್ಷಗಳ ಹಿಂದೆ ಆರಂಭವಾಯಿತು. ಆದರೆ ಒಂದು ರಾಜ್ಯ ಸರ್ಕಾರದ ಸತತ ಮತ್ತು ಪ್ರಾಮಾಣಿಕ ಪ್ರಯತ್ನದ ಫಲವಾಗಿ ಕೊನೆಗೂ ಅಂಬೇಡ್ಕರ್ ಅವರ ಬಹುಮುಖ್ಯ ಬರಹಗಳು ಸಾರ್ವಜನಿಕರಿಗೆ ದೊರೆಯುವಂತಾಯಿತು.

ಅಂತಹ ಮಹತ್ವದ ಕೆಲಸವೊಂದನ್ನು ಸುಮಾರು ನಲವತ್ತೈದು ವರ್ಷಗಳ ಹಿಂದೆ ಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾದದ್ದು ಶರದ್ ಪವಾರ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ.
ಬಹುತೇಕ ಇಂಗ್ಲಿಷ್ ಮತ್ತು ಮರಾಠಿಯಲ್ಲಿ ಅಲ್ಲಲ್ಲಿ ಬಿಡಿಬಿಡಿಯಾಗಿದ್ದ ಮತ್ತು ಅಳಿವಿನ ಅಂಚಿಗೆ ಸಾಗುತ್ತಿದ್ದ ಅವರ ಬರೆಹ ಮತ್ತು ಭಾಷಣಗಳನ್ನೆಲ್ಲ ಒಟ್ಟುಮಾಡಿ ಪ್ರಕಟಿಸುವ ಯೋಜನೆಯೊಂದನ್ನು1976ರಲ್ಲಿ ಶರದ್ ಪವಾರ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಹಮ್ಮಿಕೊಂಡು ಅದಕ್ಕೆ ಸಂಬಂಧಿಸಿದ ವಾರಸುದಾರರಿಂದ ಅನುಮತಿ ಪಡೆದುಕೊಂಡು ಕಾರ್ಯಪ್ರವೃತ್ತವಾದದ್ದು ಭಾರತೀಯ ವೈಚಾರಿಕ ಸಾಹಿತ್ಯದ ಚರಿತ್ರೆಯಲ್ಲಿ ಒಂದು ಮಹತ್ವದ ಹೆಜ್ಜೆ ಎನ್ನಬೇಕು.

ಈ ಸಮಿತಿಯ ಪ್ರಾಮಾಣಿಕ ಪರಿಶ್ರಮದಿಂದಾಗಿ 1979ರಲ್ಲಿ ಅಂಬೇಡ್ಕರ್ ಅವರ ಬರೆಹ-ಭಾಷಣಗಳ ಮೊದಲ ಸಂಪುಟ ಹೊರಬರುವ ಮೂಲಕ ಈ ಯೋಜನೆಗೆ ಚಾಲನೆ ಸಿಕ್ಕು 1982ಮತ್ತು 1987ರಲ್ಲಿ ಕ್ರಮವಾಗಿ ಎರಡನೇ ಮತ್ತು ಮೂರನೇ ಸಂಪುಟಗಳು ಯಾವುದೇ ಸಮಸ್ಯೆಗಳು ಇಲ್ಲದೆ ಬಿಡುಗಡೆಯಾದವಾದರೂ ೧೯೮೭ರಲ್ಲಿಯೇ ಬಿಡುಗಡೆಯಾದ ನಾಲ್ಕನೇ ಸಂಪುಟ ವಿವಾದದ ಬಿರುಗಾಳಿಯನ್ನೆಬ್ಬಿಸಿತು!

‘The Riddles of Hinduism’ (ಈಗ ‘ಹಿಂದೂ ಧರ್ಮದ ಒಗಟುಗಳು’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಲಭ್ಯವಿರುವ) ಎಂಬ ಅವರ ಅತ್ಯಂತ ಮಹತ್ವದ ಪುಸ್ತಕವನ್ನು ಆ ಸಂಪುಟ ಒಳಗೊಂಡಿದ್ದು ಕೆಲವು ಸ್ವಯಂ ಘೋಷಿತ ಧಾರ್ಮಿಕ ನಾಯಕರು ಅನಗತ್ಯ ವಿವಾದವೆಬ್ಬಿಸಿದ್ದು ಈ ಗ್ರಂಥಗಳ ಹೊರಬರುವಿಕೆಗೆ ತಾತ್ಕಾಲಿಕ ತಡೆಯೊಡ್ಡಿತು. ಅಂಬೇಡ್ಕರ್ ಅವರ ಆ ಪುಸ್ತಕದಲ್ಲಿ ‘ಹಿಂದೂ ಧರ್ಮದ ಒಗಟುಗಳು’ ಎಂದು ಕರೆದು ಸಮಂಜಸ ವಿವರಣೆಗೆ ಆಹ್ವಾನ ನೀಡಲಾಗಿದ್ದ ಒಟ್ಟು ಇಪ್ಪತ್ನಾಲ್ಕು ಸವಾಲುಗಳಿದ್ದವು. ಇವುಗಳಲ್ಲಿ ಹದಿನೈದು ಒಗಟುಗಳು ಧಾರ್ಮಿಕ ವಿಷಯಕ್ಕೆ, ಐದು ಒಗಟುಗಳು ಸಾಮಾಜಿಕ ವಿಷಯಯಕ್ಕೆ ಸೇರಿದ್ದರೆ ಉಳಿದ ನಾಲ್ಕು ಒಗಟುಗಳು ರಾಜಕೀಯಕ್ಕೆ ಸಂಬಂಧಿಸಿದ್ದವು.

ಹಿಂದೂ ಧರ್ಮದ ಆಧಾರ ಗ್ರಂಥಗಳೆಂದು ಕರೆಯಲಾಗುವ, ವೇದಗಳು, ಉಪನ್ನಿಷತ್ತುಗಳು, ಪುರಾಣಗಳು, ಹಾಗೇ ಮನುವಿನ ಸಿದ್ಧಾಂತ ಇಂಥವುಗಳನ್ನು ಅಂಬೇಡ್ಕರ್ ಅವರು ಎಷ್ಟೊಂದು ಆಳವಾಗಿ ಅಧ್ಯಯನ ಮಾಡಿದ್ದರು ಎಂಬುದು ಅವರು ಸಿದ್ಧಪಡಿಸಿದ ಒಗಟುಗಳನ್ನು ನೋಡಿದರೆ ಯಾರಿಗಾದರೂ ಗೊತ್ತಾಗುತ್ತದೆ. ಅವರ ಒಗಟುಗಳನ್ನು ಬಿಡಿಸಬೇಕಾದರೆ ಅವರಿಗಿಂತ ಹೆಚ್ಚು ಅಲ್ಲದಿದ್ದರೂ ಅವರಷ್ಟಾದರೂ ಅವನ್ನು ಓದಿಕೊಳ್ಳಬೇಕಾಗುತ್ತದೆ.

ಆದರೆ ಅವರ ಸಂಖ್ಯೆ ಎಷ್ಟಿದೆ ನಮ್ಮಲ್ಲಿ? ಅವರು ಅಂದು ಕೇಳಿರುವ ಈ ಒಗಟುಗಳನ್ನು ಇದುವರೆಗೂ ಯಾವ ಮಹಾತ್ಮನಿಗೂ ಉತ್ತರಿಸಲು ಆಗಿಲ್ಲ! ಹೀಗಿರುವಾಗ ಆ ಕಾಲದಲ್ಲಿ ಅವರ ಸವಾಲುಗಳು ಕೆಲವರನ್ನು ಕೆರಳಿಸಿದ್ದರಲ್ಲಿ ಆಶ್ಚರ್ಯವಿರಲಾರದು! ಅಂಬೇಡ್ಕರ್ ಹೇಳುವುದನ್ನು ಒಪ್ಪಿಕೊಳ್ಳಲೂ ಅಗದೇ ಅವರ ವಾದವನ್ನು ಸಮಂಜಸ ಪ್ರತಿ ವಾದಗಳೊಂದಿಗೆ ಅಲ್ಲಗಳೆಯಲೂ ಆಗದೇ ಹೋದಾಗ ಅವರಿಗೆಲ್ಲ ಸಿಟ್ಟುಮಾಡಿಕೊಂಡು ವಿವಾದಮಾಡುವುದನ್ನು ಬಿಟ್ಟು ಇನ್ಯಾವ ಆಯ್ಕೆಗಳಿದ್ದವು?

ಆದರೆ ಒಳ್ಳೆಯ ಪುಸ್ತಕವೊಂದರ ಪ್ರಕಟಣೆ ಮತ್ತು ಪ್ರಚಾರವನ್ನು ಕೆಟ್ಟ ಉದ್ದೇಶದಿಂದ ತಡೆಯುವ ಪ್ರಯತ್ನಗಳು ಮೇಲ್ನೋಟಕ್ಕೆ ಯಶಸ್ವಿಯಾದಂತೆ ಕಂಡರೂ ಅಂತಿಮವಾಗಿ ಅವು ಕಾಣುವುದು ಸೋಲನ್ನೇ ಹೊರತು ಗೆಲುವನ್ನಲ್ಲ. ಇಲ್ಲಿಯೂ ಆದದ್ದು ಅದೇ. ಅಂಬೇಡ್ಕರ್ ಅವರ ಆಳವಾದ ಅಧ್ಯಯನ ತರ್ಕಬದ್ಧವಾದ ವಾದಗಳ ಎದುರು ಈ ಜೊಳ್ಳು ತರಲೆಗಳೆಲ್ಲ ತರಗೆಲೆಗಳಂತೆ ಹಾರಿಹೋಗಿ ಕೊನೆಗೂ ಆ ಸಂಪುಟವೂ ಸೇರಿದಂತೆ ಒಟ್ಟು ಹದಿನಾಲ್ಕು ಸಂಪುಟಗಳು ಹೊರಬಂದು ಅಂಬೇಡ್ಕರ್ ಅಂದರೆ ಏನು ಎಂಬುದು ಕೊನೆಗೂ ಜಗತ್ತಿಗೆ ಗೊತ್ತಾಗಿಬಿಟ್ಟಿತು!

ಮಹಾರಾಷ್ಟ್ರ ಸರ್ಕಾರ ಹೊರತಂದ ಅಂಬೇಡ್ಕರ್ ಅವರ ಈ ಸಮಗ್ರ ಸಾಹಿತ್ಯ ಪ್ರಕಟವಾದದ್ದು ಇಂಗ್ಲಿಷಿನಲ್ಲಿ. ಈ ‘ಇಂಗ್ಲಿಷ್ ಕಾಲುವೆ’ಯ ಮೂಲಕ ಅಂಬೇಡ್ಕರ್ ಸಾಹಿತ್ಯ ಜಗತ್ತಿನ ಎಲ್ಲಭಾಷೆಗಳ, ದೇಶಗಳ ಜನರನ್ನು ತಲುಪಲು ಸಾಧ್ಯವಾಯಿತು ಎಂಬುದು ಮಹತ್ವದ ಸಂಗತಿ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಅಷ್ಟಕ್ಕೆ ನಿಂತರೆ ಅದು ಸಾಕಾಗುತ್ತಿರಲಿಲ್ಲ. ಏಕೆಂದರೆ ಅದರೊಂದಿಗೆ ಇಂಗ್ಲಿಷ್ ಬಲ್ಲವರು ಮಾತ್ರ ಅವನ್ನು ಓದಬಹುದಾದ ಮಿತಿಯೊಂದು ನಿರ್ಮಾಣವಾಯಿತು. ಈ ಮಿತಿಯನ್ನು ಮೀರಬೇಕಾದ ಏಕೈಕ ದಾರಿಯೆಂದರೆ ಅವರ ಈ ಎಲ್ಲ ಬರೆಹ ಮತ್ತು ಭಾಷಣಗಳ ಸಂಪುಟಗಳನ್ನು ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸುವುದು. ಈ ಅವಶ್ಯಕತೆಯನ್ನು ಮೊಟ್ಟಮೊದಲು ಮನಗಂಡು ಕಾರ್ಯಪ್ರವೃತ್ತವಾದ ರಾಜ್ಯವೆಂದರೆ ಕರ್ನಾಟಕ ಎಂಬುದು ನಾವೆಲ್ಲ ಹೆಮ್ಮೆಪಡುವ ಸಂಗತಿ.

ಮಹಾರಾಷ್ಟ್ರ ಸರ್ಕಾರ ಈ ಸಂಪುಟ ತರುತ್ತಿರುವಾಗಲೇ, ಅದರಲ್ಲೂ ಈ ಯೋಜನೆಯ ನಾಲ್ಕನೇ ಸಂಪುಟ ವಿವಾದಕ್ಕೆ ಗುರಿಯಾದ ದಿನಗಳಲ್ಲಿಯೆ ಅಂದರೆ ೧೯೮೮ ರಲ್ಲಿಯೇ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ನೇತೃತ್ವದ ಕರ್ನಾಟಕ ಸರ್ಕಾರ ಅಂಬೇಡ್ಕರ್ ಅವರ ಬಹು ಪರಿಚಿತವಾದ ಹದಿನಾಲ್ಕು ಬಿಡಿ ಕೃತಿಗಳನ್ನು ಕನ್ನಡಕ್ಕೆ ತರಲು ಮಹತ್ವದ ನಿರ್ಣಯವೊಂದನ್ನು ಕೈಗೊಂಡಿತು. ಇದಕ್ಕಾಗಿ ಹಿರಿಯ ವಿದ್ವಾಂಸ ಡಾ.ಎ.ಎಂ. ರಾಜಶೇಖರಯ್ಯ, ಕವಿ ಡಾ.ಸಿದ್ಧಲಿಂಗಯ್ಯ ಮತ್ತು ಚಿಂತಕ ದೇವನೂರು ಮಹಾದೇವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನೊಳಗೊಂಡ ನಾಲ್ಕುಜನರ ಸಮಿತಿಯೊಂದು ರಚನೆಯಾಯಿತು.

ಈ ಸಮಿತಿ ಮಾಡಿದ ಮಹತ್ವದ ಕೆಲಸವೆಂದರೆ ಅಂಬೇಡ್ಕರ್ ಅವರ ಸುಪರಿಚಿತವಾದ ಹದಿನಾಲ್ಕು ಬಿಡಿ ಕೃತಿಗಳನ್ನು ಮಾತ್ರ ಅನುವಾದ ಮಾಡದೇ ಮಹಾರಾಷ್ಟ್ರ ಸರ್ಕಾರದ ಯೋಜನೆಯಂತೆ ಪ್ರಕಟವಾಗುತ್ತಿರುವ ಎಲ್ಲ ಸಂಪುಟಗಳನ್ನೂ ಮಹಾರಾಷ್ಟ್ರ ಸರ್ಕಾರದ ಅನುಮತಿ ಪಡೆದುಕೊಂಡು ಭಾಷಾಂತರಿಸಬೇಕೆಂದು ನಿರ್ಣಯ ಮಾಡಿದ್ದು. ಈ ಸಮಿತಿಯ ನಿರ್ಣಯವನ್ನು ಗೌರವಿಸಿದ ಕರ್ನಾಟಕ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಲೆ ಅನುಮತಿ ಕೋರಿ ಬರೆದ ಪತ್ರಕ್ಕೆ ಅಲ್ಲಿನ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿ ೧೯೮೯ರಲ್ಲಿ ಅನುಮತಿ ನೀಡಿದ್ದು ಕನ್ನಡದಲ್ಲಿ ಬಾಬಾಸಾಹೇಬರ ಕೃತಿಗಳು ವ್ಯವಸ್ಥಿತವಾಗಿ ಭಾಷಾಂತರವಾಗಿ ಬೆಳಕುಕಾಣಲು ಕಾರಣವಾಯಿತು ಎನ್ನಬೇಕು.

ಹೀಗೆ ಮೂವತ್ತು ವರ್ಷಗಳ ಹಿಂದೆ ಆರಂಭವಾದ ಈ ಅನುವಾದ ಕಾರ್ಯದಲ್ಲಿ ಕನ್ನಡದ ಅನೇಕ ವಿದ್ವಾಂಸರು ಭಾಗವಹಿಸಿ ಈ ಯೋಜನೆಯನ್ನು ಯಶಸ್ವಿಗೊಳಿಸಿದರು. ಅಂಬೇಡ್ಕರ್ ಅವರ ಇಂಗ್ಲಿಷ್ ಭಾಷೆಯ ಪ್ರೌಢಿಮೆ, ಮತ್ತು ಕ್ಲಿಷ್ಟತೆಗಳನ್ನು ನಿವಾರಿಸಿಕೊಳ್ಳಲು, ಅನುವಾದಿತ ಕೃತಿಗಳ ಪರಿಶೀಲನೆಗಾಗಿ ಡಾ. ಆರ್. ಸಿ. ಹಿರೇಮಠ, ಡಾ. ದೇ. ಜವರೇಗೌಡ ಅವರಂಥ ಹಿರಿಯರ ನೆರವನ್ನೂ ಪಡೆಯಲಾಯಿತು. ಆರಂಭಿಕ ಹಂತದಲ್ಲಿ ಈ ಅನುವಾದಕರು, ಸಂಪಾದಕರು, ಪರೀಶೀಲಕರು ಮಾಡಿದ ಕಾರ್ಯ ನಿಜಕ್ಕೂ ಸ್ತುತ್ಯಾರ್ಹವಾದದ್ದು.

ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರ ಆರಂಭಿಸಿದ ಈ ಯೋಜನೆಗೆ ಮುಂದೆ ಬಂದ ಸರ್ಕಾರಗಳೂ ಸಕಾರಾತ್ಮಕ ಬೆಂಬಲ ನೀಡಿದ್ದರಿಂದ, ವೀರಪ್ಪ ಮೊಯಿಲಿ, ಎಚ್.ಡಿ.ದೇವೇಗೌಡ, ಜೆ.ಎಚ್. ಪಟೇಲ್‌, ಎಸ್.ಎಂ. ಕೃಷ್ಣ ಇವರುಗಳು ಮುಖ್ಯಮಂತ್ರಿಗಳಾಗಿದ್ದಾಗಿನ ಅವಧಿಯಲ್ಲಿ ಅಂಬೇಡ್ಕರ್ ಅವರ ಸಮಗ್ರ ಸಾಹಿತ್ಯದ ಬಹಳಷ್ಟು ಸಂಪುಟಗಳು ಹೊಸದಾಗಿ ಮತ್ತು ಮರುಮುದ್ರಣವಾಗಿ ಕಡಿಮೆ ಬೆಲೆಯಲ್ಲಿ ಹೊರಬಂದು ಕನ್ನಡ ಓದುಗರಿಗೆ ದೊರೆಯಲು ಸಾಧ್ಯವಾಯಿತು.

ಈ ಸಂಪುಟಗಳು ಕನ್ನಡ ಓದುಗರನ್ನು ವೈಚಾರಿಕವಾಗಿ ನಿರೀಕ್ಷಿತ ಮಟ್ಟದಲ್ಲಿ ಎತ್ತರಿಸುವಲ್ಲಿ ಸಫಲವಾದವೇ ಎಂಬುದು ಹೆಚ್ಚು ಚರ್ಚೆಯನ್ನು ನಿರೀಕ್ಷಿಸುವ ಅಂಶ. ಆದರೆ ಆ ಎಲ್ಲ ಸಂಪುಟಗಳು ಖರ್ಚಾದದ್ದು ನಿಜ. ಬಹಳಷ್ಟು ಸುಂದರವಾಗಿಯೂ ಪ್ರಕಟವಾಗಿದ್ದ ಬೃಹತ್ ಗಾತ್ರದ ಈ ಸಂಪುಟಗಳ ಬೆಲೆ ಅತ್ಯಂತ ಕಡಿಮೆ ಇದ್ದದ್ದರಿಂದ ಓದಲಾಗದವರೂ, ಓದಲೊಲ್ಲದವರೂ ‘ಮನೆಯಲ್ಲಿ ಇರಲಿ’ ಎಂಬ ಗೌರವದ ಭಾವನೆಯಿಂದ ಒಯ್ದದ್ದೂ ಇದೆ. ಇದರಿಂದಾಗಿ ನಿಜವಾದ ಓದುಗರಿಗೆ ಇವು ಸಿಗದಂತಾದದ್ದೂ ಇದೆ. ನಿಜವಾದ ಓದುಗರು ಈ ಸಂಪುಟಗಳ ಮರುಮುದ್ರಣಕ್ಕಾಗಿ ಒತ್ತಾಯ ತರುತ್ತಾ ಅವುಗಳನ್ನು ಪಡೆಯಲು ಜಾತಕ ಪಕ್ಷಿಗಳಂತೆ ಕಾದದ್ದಂತೂ ಸುಳ್ಳಲ್ಲ.

ಇಂತಹವರಿಗೆಲ್ಲ ಸಂತೋಷದ ಸಂಗತಿಯಾಗಿ ಕಳೆದ ಬಾರಿ ಸಿದ್ರಾಮಯ್ಯ ನೇತೃತ್ವದ ಸರ್ಕಾರ ಅಂಬೇಡ್ಕರ್ ಅವರ ಸಾಹಿತ್ಯವನ್ನು ಮರುಮುದ್ರಣ ಮಾಡಿ ಸುಲಭ ಬೆಲೆಗೆ ವಿತರಿಸುವ ನಿರ್ಣಯ ಕೈಗೊಂಡ ಫಲವಾಗಿ ಈ ಸಮಗ್ರ ಸಾಹಿತ್ಯದ ಇಪ್ಪತ್ತೆರಡು ಬೃಹತ್ ಸಂಪುಟಗಳು ಬಹಳ ಒಳ್ಳೆಯಗುಣಮಟ್ಟದ ಹಾಳೆಗಳಲ್ಲಿ ಮುದ್ರಣಗೊಂಡು ಅಷ್ಟೇ ಉತ್ತಮ ಬೈಂಡಿಂಗ್ ಒಂದಿಗೆ ಆಕರ್ಷಕವಾದ ಹೊಸ ವಿನ್ಯಾಸದಲ್ಲಿ ಹೊರಬಂದಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಇವುಗಳನ್ನು ಹೊರತರುವ ಕಾರ್ಯವನ್ನು ಮಾಡಿರುವ ‘ಕುವೆಂಪು ಭಾಷಾಭಾರತಿ’ ಯ ಕಾರ್ಯ ನಿಜಕ್ಕೂ ಅಭಿನಂದನೀಯ.

ಭಾರತದ ಬಹಳಷ್ಟು ಜನ ಇಂದು ಬುದ್ಧಿವಂತರಾಗುವುದಕ್ಕಿಂತ ಭಾವಜೀವಿಗಳಾಗುತ್ತಿದ್ದಾರೆ. ಅವರನ್ನು ಕೆಲವು ಆಳುವ ಉಡಾಳರು ದಾಳಗಳನ್ನಾಗಿ ಮಾಡಿಕೊಂಡು ಅಧಿಕಾರದ ಆಟವಾಡುತ್ತಿದ್ದಾರೆ. ದೇವರ ಧರ್ಮಗಳಂತಹ ಭಾವನಾತ್ಮಕ ವಿಷಯಗಳಲ್ಲಿ ಜನರನ್ನು ಉನ್ಮಾದಗೊಳಿಸುವ ಚಟುವಟಿಕೆಗಳು ತೀವ್ರಗೊಂಡು ನಮ್ಮಜನ ನಮ್ಮ ಸಮಾಜದ ಮೂಲಗುಣವಾದ `ಸಹನೆ’ಯನ್ನು ಕಳೆದುಕೊಳ್ಳುತ್ತಿದ್ದಾರೆ. ಭಾರತವನ್ನು ಭದ್ರವಾಗಿ ಕಟ್ಟಿರುವ ಬಹುಸಂಸ್ಕೃತಿಯ ಬಂಧನ ಸಡಿಲಗೊಳ್ಳುತ್ತಿದೆ. ವಿವಿಧ ಜನಸಮುದಾಯಗಳ ನಡುವಿನ ಸೌಹಾರ್ದತೆ ದಿನದಿನಕ್ಕೂ ಕಡಿಮೆಯಾಗುತ್ತಾ ಹೋಗುತ್ತಿದ್ದು ಪರಸ್ಪರರಲ್ಲಿ ಅಸಹನೆ, ಅಪನಂಬಿಕೆಗಳು ಬೆಳೆಯುತ್ತಿವೆ.

ಇವೆಲ್ಲ ಸಮಸ್ಯೆಗಳನ್ನು ಭಾರತ ಗಂಭೀರವಾಗಿ ಎದುರಿಸುತ್ತಿದ್ದರೂ ಅವೆಲ್ಲವನ್ನೂ ಮರೆಮಾಚಿ ದೇಶ ಬಲಿಷ್ಠಗೊಳ್ಳುತ್ತಿದೆಯೆಂದೂ, ಇಡೀ ಪ್ರಪಂಚಕ್ಕೆ ಬುದ್ಧಿಹೇಳುವ ಸ್ಥಾನಕ್ಕೆ ಭಾರತ ನಡೆಯುತ್ತಿದೆಯೆಂದೂ, ಜನರನ್ನು ಮರುಳುಗೊಳಿಸಲಾಗುತ್ತಿದೆ. ಇಂತಹ ಮೋಡಿಗೊಳಗಾಗುತ್ತಿರುವ ಜನರಲ್ಲಿ ಯುವಜನತೆಯೇ ಹೆಚ್ಚಿರುವುದು ಆತಂಕದ ಸಂಗತಿಯಾಗಿದೆ.

ಇಂತಹ ಹೊತ್ತಿನಲ್ಲಿ ಭಾರತದ ಜನಸಮೂದಾಯದ ಅದರಲ್ಲಿಯೂ ದೇಶದ ಭವಿಷ್ಯವನ್ನು ರೂಪಿಸಬೇಕಾದ ಯುವಜನತೆಯ ವೈಚಾರಿಕೆ ಶಕ್ತಿಯನ್ನು ಬೆಳೆಸುವುದು ಅತ್ಯಂತ ಅವಶ್ಯಕವಾಗಿದೆ. ಏಕೆಂದರೆ ಯಾರದೋ ತಾಳಕ್ಕೆ ಕುಣಿಯುವ ಗೊಂಬೆಗಳಾಗದೇ ಅವರು ಸ್ವತಂತ್ರ ಆಲೋಚನಾಶಕ್ತಿಯನ್ನು ರೂಪಿಸಿಕೊಂಡರೆ ಮಾತ್ರ ಈ ದೇಶಕ್ಕೆ ಭವಿಷ್ಯ. ಈ ಭವಿಷ್ಯ ರೂಪುಗೊಳ್ಳಬೇಕಾದರೆ ನಾವೆಲ್ಲ ಅಂಬೇಡ್ಕರ್ ಅವರ ಬರೆಹಗಳನ್ನು ಓದುವುದು ಮತ್ತು ನಮ್ಮ ಯುವಸಮುದಾಯಕ್ಕೆ ಓದಿಸುವುದು ಅವಶ್ಯ. ಏಕೆಂದರೆ ಈ ಲೇಖನದ ಆರಂಭದಲ್ಲಿಯೇ ಪ್ರಸ್ತಾಪಿಸಿದಂತೆ ಅಂಬೇಡ್ಕರ್ ಅವರನ್ನು ಓದುವುದು ಅಂದರೆ ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದು ಎಂದೇ ಅರ್ಥ.

ಡಾ. ರಾಜೇಂದ್ರ ಬುರಡಿಕಟ್ಟಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

Published

on

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು 

  1. ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್‌ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
  2. ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್‌ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
  3. ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  4. ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
  5. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್‌ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್‌ಐಎ ತಿಳಿಸಿದೆ.
  6. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್‌ನ ಬುಸಾನನ್ ಆಂಗ್‌ಬಾಮ್‌ರುಂಗ್‌ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
  7. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್‌ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!

ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ...

ದಿನದ ಸುದ್ದಿ7 hours ago

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ...

ದಿನದ ಸುದ್ದಿ10 hours ago

ಕವಿತೆ | ಒಂದು ಕಪ್ ಕಾಫಿ

ಲಕ್ಕೂರು ಆನಂದ್ ಕೊನೆಯ ಸಾರಿ ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ? ನಾನು ತಪ್ಪು ಮಾಡಿದೆನೊ, ನೀನು ತಪ್ಪು ಮಾಡಿದೆಯೊ, ಬಿಟ್ಟು ಬಿಡೋಣ: ಕೊನೆಯ ಸಾರಿ...

ದಿನದ ಸುದ್ದಿ10 hours ago

ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ...

ದಿನದ ಸುದ್ದಿ19 hours ago

ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು

ರುದ್ರಪ್ಪ ಹನಗವಾಡಿ ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ...

ದಿನದ ಸುದ್ದಿ1 day ago

ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ...

ದಿನದ ಸುದ್ದಿ1 day ago

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು...

ಕ್ರೀಡೆ2 days ago

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು  ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ...

ದಿನದ ಸುದ್ದಿ2 days ago

ಈ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ ; ರಾಜ್ಯದ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ...

ದಿನದ ಸುದ್ದಿ2 days ago

ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ...

Trending