Connect with us

ಬಹಿರಂಗ

ಅಂಬೇಡ್ಕರ್ ಬರೆಹಗಳು ಮತ್ತು ವೈಚಾರಿಕೆ ಪ್ರಜ್ಞೆ

Published

on

ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕಾದರೆ ನಾವು ಯಾರನ್ನು ಓದದಿದ್ದರೂ ನಡೆದೀತು ಆದರೆ ಅಂಬೇಡ್ಕರ್ ಅವರನ್ನು ಓದದಿದ್ದರೆ ನಡೆಯುವುದಿಲ್ಲ ಅನ್ನುವಷ್ಟರ ಮಟ್ಟಿಗೆ ಈ ದೇಶದ ಇತಿಹಾಸ, ಸಮಾಜ, ದೇವರು-ಧರ್ಮ, ರಾಜಕಾರಣ, ತತ್ವಶಾಸ್ತ್ರ, ಆರ್ಥಿಕತೆ, ಹೀಗೆ ಬಹುಮುಖ್ಯವಾದ ಎಲ್ಲ ಮಗ್ಗಲುಗಳನ್ನು ಆಳವಾಗಿ ಅಧ್ಯಯನಮಾಡಿ ಕರಾರುವಕ್ಕಾಗಿ ತಮ್ಮ ವಿಚಾರಗಳನ್ನು ಪ್ರಬುದ್ಧವಾಗಿ ಮಂಡಿಸಿದ ಅಂಬೇಡ್ಕರ್ ಅವರಂಥ ಮತ್ತೊಬ್ಬ ವಿದ್ವಾಂಸ ಬಹುಶಃ ಭಾರತದಲ್ಲಿ ನಮಗೆ ದೊರೆಯಲಾರನೇನೊ.

ಜಾತಿಯ ಕಾರಣಕ್ಕೆ ಎಲ್ಲ ಬಗೆಯ ಸಾಮಾಜಿಕ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತನಾಗಿ, ಪಡಬಾರದ ಕಷ್ಟಗಳನ್ನೆಲ್ಲ ಪಟ್ಟು, ಎಲ್ಲ ಬಗೆಯ ದೌರ್ಜನ್ಯಗಳನ್ನು ಎದುರಿಸಿ ಬೆಳೆದ ದಲಿತ ಹುಡುಗನೊಬ್ಬ ಆ ಕಾಲದ ಎಲ್ಲ ಸೌಲಭ್ಯಗಳನ್ನು ಜಾತಿಯ ಕಾರಣದಿಂದಲೇ ಪಡೆಯುತ್ತಿದ್ದ ಯಾವೊಬ್ಬ ಸವರ್ಣಿಯನೂ ಬೆಳೆಯಲಾಗದಷ್ಟು ಎತ್ತರಕ್ಕೆ ಬೆಳೆದದ್ದು ಸಣ್ಣ ಸಂಗತಿಯೇನಲ್ಲ. ಆಧುನಿಕ ವಿದ್ಯಾಭ್ಯಾಸದ ಅತ್ಯುನ್ನತ ಪದವಿಗಳಾದ ಪಿಎಚ್.ಡಿ, ಡಿ.ಎಸ್ಸಿ.ಯಂಥವುಗಳನ್ನು ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ, ತಮ್ಮ ನಿಷ್ಠೆ, ಶ್ರದ್ಧೆ, ಪರಿಶ್ರಮಗಳಿಂದ ಕಷ್ಟಪಟ್ಟು, ಆಳವಾದ ಅಧ್ಯಯನ ಮತ್ತು ಮೊನಚು ವಿಶ್ಲೇಷಣೆಗಳಿಂದ ಗಳಿಸಿಕೊಂಡ ಅಪಾರವಾದ ಜ್ಞಾನವನ್ನು ಸಮಾಜೋದ್ಧಾರಕ್ಕಾಗಿ ಅವರಷ್ಟು ಬಳಸಿಕೊಂಡವರೂ ವಿರಳ. ಅಂಬೇಡ್ಕರ್ ಅವರ ವಿದ್ವತ್ತನ್ನು ಜಗತ್ತು ಇಂದು ಸರಿಯಾಗಿಯೇ ಗುರುತಿಸಿ ದೊಡ್ಡಮಟ್ಟದಲ್ಲಿ ಗೌರವಿಸುತ್ತಿದೆ. ಅವರ ಜನ್ಮದಿನವನ್ನು ವಿಶ್ವಸಂಸ್ಥೆ ‘ಜಾಗತಿಕ ಜ್ಞಾನದಿನ’ವನ್ನಾಗಿ ಘೋಷಿಸಿರುವುದು ಇದರ ಒಂದು ಉದಾಹರಣೆ ಮಾತ್ರ.

ಇಂತಹ ಮಹಾನ್ ಮೇಧಾವಿಗೆ ಭಾರತೀಯರಾದ ನಾವು ಏನು ಮಾಡಿದ್ದೇವೆ ಎಂಬುದನ್ನು ಕೇಳಿಕೊಂಡರೆ ಒಂದಿಷ್ಟು ನಾಚಿಕೆಯಾದೀತು. ಏಕೆಂದರೆ ಈಗಲೂ ಭಾರತದಲ್ಲಿ ಬಹುಪಾಲು ಜನರಿಗೆ ‘ಅಂಬೇಡ್ಕರ್’ ಅಂದ ತಕ್ಷಣಕ್ಕೆ ನೆನಪಿಗೆ ಬರುವುದು ಅವರ ‘ಜಾತಿ’ಯೇ ಹೊರತು ‘ಜ್ಣಾನ’ವಲ್ಲ! ಒಂದು ರಾಜ್ಯದ ಸೇನಾಕಾರ್ಯದರ್ಶಿ ಅಂತಹ ದೊಡ್ಡ ಹುದ್ದೆಯಲ್ಲಿದ್ದರೂ ದಲಿತನೆಂಬ ಕಾರಣಕ್ಕೆ ಅವರಿಗೆ ವಾಸಿಸಲು ಒಂದು ಬಾಡಿಗೆ ಮನೆ ನಮ್ಮ ದೇಶದಲ್ಲಿ ಸಿಗಲಿಲ್ಲ! ಅವರೇ ಬರೆದ ಸಂವಿಧಾನದ ಪ್ರಕಾರವೆ ನಡೆದ ಮೊದಲ ಚುನಾವಣೆಯಲ್ಲಿಯೇ ಅವರನ್ನು ಸೋಲಿಸಿದ ‘ಭವ್ಯಭಾರತ ನಮ್ಮದು!

ಅಂಬೇಡ್ಕರ್ ಅಂದರೆ ಏನು ಅವರ ವಿದ್ವತ್ತು ಯಾವ ಮಟ್ಟದ್ದು ಆಧುನಿಕ ಭಾರತದ ನಿರ್ಮಾಣದಲ್ಲಿ ಅವರ ಕೊಡುಗೆ ಏನು ಎಂಬುದು ಇಂದಿಗೂ ನಮ್ಮಲ್ಲಿ ಬಹುಜನಕ್ಕೆ ಗೊತ್ತಿಲ್ಲ. ಅವರನ್ನು ಸದಾ ತೆಗಳುವ ವರ್ಗವೊಂದುಕಡೆ ಇದ್ದರೆ ಅದಕ್ಕೆ ವಿರುದ್ಧವಾಗಿ ಅವರನ್ನು ಆರಾಧಿಸುವ ವರ್ಗವೊಂದು ಕಾಲದ ಅಗತ್ಯವಾಗಿ ಬೆಳೆದುಬಂತು. ಅವರನ್ನು ವಿರೋಧಿಸುವವರಿರಲಿ, ಆರಾಧಿಸುವವರಲ್ಲಿ ಕೂಡ ಬಹಳ ಜನ ಅಂಬೇಡ್ಕರ್ ಅವರನ್ನು ಸರಿಯಾಗಿ ಓದಿಕೊಳ್ಳಲಿಲ್ಲ ಎಂಬುದು ವಾಸ್ತವ ಸಂಗತಿ.

ಇದಕ್ಕೆ ಅವರ ಬರಹಗಳ ಅಲಭ್ಯತೆಯೂ ಒಂದು ದೊಡ್ಡ ಕಾರಣವಾಗಿತ್ತು. ಅಂಬೇಡ್ಕರ್ ತೀರಿಕೊಂಡ ಮೇಲೆ ಬಹಳಷ್ಟು ದೊಡ್ಡ ಲೇಖಕರ ಬೌದ್ಧಿಕ ಆಸ್ತಿಗಳಂತೆ ಅಂಬೇಡ್ಕರ್ ಅವರ ಬರೆಹಗಳು ಕೂಡ ಕುಟುಂಬದ ಆಸ್ತಿವಿವಾದಕ್ಕೆ ತುತ್ತಾದವು. ಈ ಕೊರತೆಯನ್ನು ನೀಗಿಸುವ ಪ್ರಯತ್ನವೊಂದು ಮೊಟ್ಟಮೊದಲು ಮೂವತ್ತು ವರ್ಷಗಳ ಹಿಂದೆ ಆರಂಭವಾಯಿತು. ಆದರೆ ಒಂದು ರಾಜ್ಯ ಸರ್ಕಾರದ ಸತತ ಮತ್ತು ಪ್ರಾಮಾಣಿಕ ಪ್ರಯತ್ನದ ಫಲವಾಗಿ ಕೊನೆಗೂ ಅಂಬೇಡ್ಕರ್ ಅವರ ಬಹುಮುಖ್ಯ ಬರಹಗಳು ಸಾರ್ವಜನಿಕರಿಗೆ ದೊರೆಯುವಂತಾಯಿತು.

ಅಂತಹ ಮಹತ್ವದ ಕೆಲಸವೊಂದನ್ನು ಸುಮಾರು ನಲವತ್ತೈದು ವರ್ಷಗಳ ಹಿಂದೆ ಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾದದ್ದು ಶರದ್ ಪವಾರ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ.
ಬಹುತೇಕ ಇಂಗ್ಲಿಷ್ ಮತ್ತು ಮರಾಠಿಯಲ್ಲಿ ಅಲ್ಲಲ್ಲಿ ಬಿಡಿಬಿಡಿಯಾಗಿದ್ದ ಮತ್ತು ಅಳಿವಿನ ಅಂಚಿಗೆ ಸಾಗುತ್ತಿದ್ದ ಅವರ ಬರೆಹ ಮತ್ತು ಭಾಷಣಗಳನ್ನೆಲ್ಲ ಒಟ್ಟುಮಾಡಿ ಪ್ರಕಟಿಸುವ ಯೋಜನೆಯೊಂದನ್ನು1976ರಲ್ಲಿ ಶರದ್ ಪವಾರ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಹಮ್ಮಿಕೊಂಡು ಅದಕ್ಕೆ ಸಂಬಂಧಿಸಿದ ವಾರಸುದಾರರಿಂದ ಅನುಮತಿ ಪಡೆದುಕೊಂಡು ಕಾರ್ಯಪ್ರವೃತ್ತವಾದದ್ದು ಭಾರತೀಯ ವೈಚಾರಿಕ ಸಾಹಿತ್ಯದ ಚರಿತ್ರೆಯಲ್ಲಿ ಒಂದು ಮಹತ್ವದ ಹೆಜ್ಜೆ ಎನ್ನಬೇಕು.

ಈ ಸಮಿತಿಯ ಪ್ರಾಮಾಣಿಕ ಪರಿಶ್ರಮದಿಂದಾಗಿ 1979ರಲ್ಲಿ ಅಂಬೇಡ್ಕರ್ ಅವರ ಬರೆಹ-ಭಾಷಣಗಳ ಮೊದಲ ಸಂಪುಟ ಹೊರಬರುವ ಮೂಲಕ ಈ ಯೋಜನೆಗೆ ಚಾಲನೆ ಸಿಕ್ಕು 1982ಮತ್ತು 1987ರಲ್ಲಿ ಕ್ರಮವಾಗಿ ಎರಡನೇ ಮತ್ತು ಮೂರನೇ ಸಂಪುಟಗಳು ಯಾವುದೇ ಸಮಸ್ಯೆಗಳು ಇಲ್ಲದೆ ಬಿಡುಗಡೆಯಾದವಾದರೂ ೧೯೮೭ರಲ್ಲಿಯೇ ಬಿಡುಗಡೆಯಾದ ನಾಲ್ಕನೇ ಸಂಪುಟ ವಿವಾದದ ಬಿರುಗಾಳಿಯನ್ನೆಬ್ಬಿಸಿತು!

‘The Riddles of Hinduism’ (ಈಗ ‘ಹಿಂದೂ ಧರ್ಮದ ಒಗಟುಗಳು’ ಎಂಬ ಹೆಸರಿನಲ್ಲಿ ಕನ್ನಡದಲ್ಲಿ ಲಭ್ಯವಿರುವ) ಎಂಬ ಅವರ ಅತ್ಯಂತ ಮಹತ್ವದ ಪುಸ್ತಕವನ್ನು ಆ ಸಂಪುಟ ಒಳಗೊಂಡಿದ್ದು ಕೆಲವು ಸ್ವಯಂ ಘೋಷಿತ ಧಾರ್ಮಿಕ ನಾಯಕರು ಅನಗತ್ಯ ವಿವಾದವೆಬ್ಬಿಸಿದ್ದು ಈ ಗ್ರಂಥಗಳ ಹೊರಬರುವಿಕೆಗೆ ತಾತ್ಕಾಲಿಕ ತಡೆಯೊಡ್ಡಿತು. ಅಂಬೇಡ್ಕರ್ ಅವರ ಆ ಪುಸ್ತಕದಲ್ಲಿ ‘ಹಿಂದೂ ಧರ್ಮದ ಒಗಟುಗಳು’ ಎಂದು ಕರೆದು ಸಮಂಜಸ ವಿವರಣೆಗೆ ಆಹ್ವಾನ ನೀಡಲಾಗಿದ್ದ ಒಟ್ಟು ಇಪ್ಪತ್ನಾಲ್ಕು ಸವಾಲುಗಳಿದ್ದವು. ಇವುಗಳಲ್ಲಿ ಹದಿನೈದು ಒಗಟುಗಳು ಧಾರ್ಮಿಕ ವಿಷಯಕ್ಕೆ, ಐದು ಒಗಟುಗಳು ಸಾಮಾಜಿಕ ವಿಷಯಯಕ್ಕೆ ಸೇರಿದ್ದರೆ ಉಳಿದ ನಾಲ್ಕು ಒಗಟುಗಳು ರಾಜಕೀಯಕ್ಕೆ ಸಂಬಂಧಿಸಿದ್ದವು.

ಹಿಂದೂ ಧರ್ಮದ ಆಧಾರ ಗ್ರಂಥಗಳೆಂದು ಕರೆಯಲಾಗುವ, ವೇದಗಳು, ಉಪನ್ನಿಷತ್ತುಗಳು, ಪುರಾಣಗಳು, ಹಾಗೇ ಮನುವಿನ ಸಿದ್ಧಾಂತ ಇಂಥವುಗಳನ್ನು ಅಂಬೇಡ್ಕರ್ ಅವರು ಎಷ್ಟೊಂದು ಆಳವಾಗಿ ಅಧ್ಯಯನ ಮಾಡಿದ್ದರು ಎಂಬುದು ಅವರು ಸಿದ್ಧಪಡಿಸಿದ ಒಗಟುಗಳನ್ನು ನೋಡಿದರೆ ಯಾರಿಗಾದರೂ ಗೊತ್ತಾಗುತ್ತದೆ. ಅವರ ಒಗಟುಗಳನ್ನು ಬಿಡಿಸಬೇಕಾದರೆ ಅವರಿಗಿಂತ ಹೆಚ್ಚು ಅಲ್ಲದಿದ್ದರೂ ಅವರಷ್ಟಾದರೂ ಅವನ್ನು ಓದಿಕೊಳ್ಳಬೇಕಾಗುತ್ತದೆ.

ಆದರೆ ಅವರ ಸಂಖ್ಯೆ ಎಷ್ಟಿದೆ ನಮ್ಮಲ್ಲಿ? ಅವರು ಅಂದು ಕೇಳಿರುವ ಈ ಒಗಟುಗಳನ್ನು ಇದುವರೆಗೂ ಯಾವ ಮಹಾತ್ಮನಿಗೂ ಉತ್ತರಿಸಲು ಆಗಿಲ್ಲ! ಹೀಗಿರುವಾಗ ಆ ಕಾಲದಲ್ಲಿ ಅವರ ಸವಾಲುಗಳು ಕೆಲವರನ್ನು ಕೆರಳಿಸಿದ್ದರಲ್ಲಿ ಆಶ್ಚರ್ಯವಿರಲಾರದು! ಅಂಬೇಡ್ಕರ್ ಹೇಳುವುದನ್ನು ಒಪ್ಪಿಕೊಳ್ಳಲೂ ಅಗದೇ ಅವರ ವಾದವನ್ನು ಸಮಂಜಸ ಪ್ರತಿ ವಾದಗಳೊಂದಿಗೆ ಅಲ್ಲಗಳೆಯಲೂ ಆಗದೇ ಹೋದಾಗ ಅವರಿಗೆಲ್ಲ ಸಿಟ್ಟುಮಾಡಿಕೊಂಡು ವಿವಾದಮಾಡುವುದನ್ನು ಬಿಟ್ಟು ಇನ್ಯಾವ ಆಯ್ಕೆಗಳಿದ್ದವು?

ಆದರೆ ಒಳ್ಳೆಯ ಪುಸ್ತಕವೊಂದರ ಪ್ರಕಟಣೆ ಮತ್ತು ಪ್ರಚಾರವನ್ನು ಕೆಟ್ಟ ಉದ್ದೇಶದಿಂದ ತಡೆಯುವ ಪ್ರಯತ್ನಗಳು ಮೇಲ್ನೋಟಕ್ಕೆ ಯಶಸ್ವಿಯಾದಂತೆ ಕಂಡರೂ ಅಂತಿಮವಾಗಿ ಅವು ಕಾಣುವುದು ಸೋಲನ್ನೇ ಹೊರತು ಗೆಲುವನ್ನಲ್ಲ. ಇಲ್ಲಿಯೂ ಆದದ್ದು ಅದೇ. ಅಂಬೇಡ್ಕರ್ ಅವರ ಆಳವಾದ ಅಧ್ಯಯನ ತರ್ಕಬದ್ಧವಾದ ವಾದಗಳ ಎದುರು ಈ ಜೊಳ್ಳು ತರಲೆಗಳೆಲ್ಲ ತರಗೆಲೆಗಳಂತೆ ಹಾರಿಹೋಗಿ ಕೊನೆಗೂ ಆ ಸಂಪುಟವೂ ಸೇರಿದಂತೆ ಒಟ್ಟು ಹದಿನಾಲ್ಕು ಸಂಪುಟಗಳು ಹೊರಬಂದು ಅಂಬೇಡ್ಕರ್ ಅಂದರೆ ಏನು ಎಂಬುದು ಕೊನೆಗೂ ಜಗತ್ತಿಗೆ ಗೊತ್ತಾಗಿಬಿಟ್ಟಿತು!

ಮಹಾರಾಷ್ಟ್ರ ಸರ್ಕಾರ ಹೊರತಂದ ಅಂಬೇಡ್ಕರ್ ಅವರ ಈ ಸಮಗ್ರ ಸಾಹಿತ್ಯ ಪ್ರಕಟವಾದದ್ದು ಇಂಗ್ಲಿಷಿನಲ್ಲಿ. ಈ ‘ಇಂಗ್ಲಿಷ್ ಕಾಲುವೆ’ಯ ಮೂಲಕ ಅಂಬೇಡ್ಕರ್ ಸಾಹಿತ್ಯ ಜಗತ್ತಿನ ಎಲ್ಲಭಾಷೆಗಳ, ದೇಶಗಳ ಜನರನ್ನು ತಲುಪಲು ಸಾಧ್ಯವಾಯಿತು ಎಂಬುದು ಮಹತ್ವದ ಸಂಗತಿ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಅಷ್ಟಕ್ಕೆ ನಿಂತರೆ ಅದು ಸಾಕಾಗುತ್ತಿರಲಿಲ್ಲ. ಏಕೆಂದರೆ ಅದರೊಂದಿಗೆ ಇಂಗ್ಲಿಷ್ ಬಲ್ಲವರು ಮಾತ್ರ ಅವನ್ನು ಓದಬಹುದಾದ ಮಿತಿಯೊಂದು ನಿರ್ಮಾಣವಾಯಿತು. ಈ ಮಿತಿಯನ್ನು ಮೀರಬೇಕಾದ ಏಕೈಕ ದಾರಿಯೆಂದರೆ ಅವರ ಈ ಎಲ್ಲ ಬರೆಹ ಮತ್ತು ಭಾಷಣಗಳ ಸಂಪುಟಗಳನ್ನು ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸುವುದು. ಈ ಅವಶ್ಯಕತೆಯನ್ನು ಮೊಟ್ಟಮೊದಲು ಮನಗಂಡು ಕಾರ್ಯಪ್ರವೃತ್ತವಾದ ರಾಜ್ಯವೆಂದರೆ ಕರ್ನಾಟಕ ಎಂಬುದು ನಾವೆಲ್ಲ ಹೆಮ್ಮೆಪಡುವ ಸಂಗತಿ.

ಮಹಾರಾಷ್ಟ್ರ ಸರ್ಕಾರ ಈ ಸಂಪುಟ ತರುತ್ತಿರುವಾಗಲೇ, ಅದರಲ್ಲೂ ಈ ಯೋಜನೆಯ ನಾಲ್ಕನೇ ಸಂಪುಟ ವಿವಾದಕ್ಕೆ ಗುರಿಯಾದ ದಿನಗಳಲ್ಲಿಯೆ ಅಂದರೆ ೧೯೮೮ ರಲ್ಲಿಯೇ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ನೇತೃತ್ವದ ಕರ್ನಾಟಕ ಸರ್ಕಾರ ಅಂಬೇಡ್ಕರ್ ಅವರ ಬಹು ಪರಿಚಿತವಾದ ಹದಿನಾಲ್ಕು ಬಿಡಿ ಕೃತಿಗಳನ್ನು ಕನ್ನಡಕ್ಕೆ ತರಲು ಮಹತ್ವದ ನಿರ್ಣಯವೊಂದನ್ನು ಕೈಗೊಂಡಿತು. ಇದಕ್ಕಾಗಿ ಹಿರಿಯ ವಿದ್ವಾಂಸ ಡಾ.ಎ.ಎಂ. ರಾಜಶೇಖರಯ್ಯ, ಕವಿ ಡಾ.ಸಿದ್ಧಲಿಂಗಯ್ಯ ಮತ್ತು ಚಿಂತಕ ದೇವನೂರು ಮಹಾದೇವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನೊಳಗೊಂಡ ನಾಲ್ಕುಜನರ ಸಮಿತಿಯೊಂದು ರಚನೆಯಾಯಿತು.

ಈ ಸಮಿತಿ ಮಾಡಿದ ಮಹತ್ವದ ಕೆಲಸವೆಂದರೆ ಅಂಬೇಡ್ಕರ್ ಅವರ ಸುಪರಿಚಿತವಾದ ಹದಿನಾಲ್ಕು ಬಿಡಿ ಕೃತಿಗಳನ್ನು ಮಾತ್ರ ಅನುವಾದ ಮಾಡದೇ ಮಹಾರಾಷ್ಟ್ರ ಸರ್ಕಾರದ ಯೋಜನೆಯಂತೆ ಪ್ರಕಟವಾಗುತ್ತಿರುವ ಎಲ್ಲ ಸಂಪುಟಗಳನ್ನೂ ಮಹಾರಾಷ್ಟ್ರ ಸರ್ಕಾರದ ಅನುಮತಿ ಪಡೆದುಕೊಂಡು ಭಾಷಾಂತರಿಸಬೇಕೆಂದು ನಿರ್ಣಯ ಮಾಡಿದ್ದು. ಈ ಸಮಿತಿಯ ನಿರ್ಣಯವನ್ನು ಗೌರವಿಸಿದ ಕರ್ನಾಟಕ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಲೆ ಅನುಮತಿ ಕೋರಿ ಬರೆದ ಪತ್ರಕ್ಕೆ ಅಲ್ಲಿನ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿ ೧೯೮೯ರಲ್ಲಿ ಅನುಮತಿ ನೀಡಿದ್ದು ಕನ್ನಡದಲ್ಲಿ ಬಾಬಾಸಾಹೇಬರ ಕೃತಿಗಳು ವ್ಯವಸ್ಥಿತವಾಗಿ ಭಾಷಾಂತರವಾಗಿ ಬೆಳಕುಕಾಣಲು ಕಾರಣವಾಯಿತು ಎನ್ನಬೇಕು.

ಹೀಗೆ ಮೂವತ್ತು ವರ್ಷಗಳ ಹಿಂದೆ ಆರಂಭವಾದ ಈ ಅನುವಾದ ಕಾರ್ಯದಲ್ಲಿ ಕನ್ನಡದ ಅನೇಕ ವಿದ್ವಾಂಸರು ಭಾಗವಹಿಸಿ ಈ ಯೋಜನೆಯನ್ನು ಯಶಸ್ವಿಗೊಳಿಸಿದರು. ಅಂಬೇಡ್ಕರ್ ಅವರ ಇಂಗ್ಲಿಷ್ ಭಾಷೆಯ ಪ್ರೌಢಿಮೆ, ಮತ್ತು ಕ್ಲಿಷ್ಟತೆಗಳನ್ನು ನಿವಾರಿಸಿಕೊಳ್ಳಲು, ಅನುವಾದಿತ ಕೃತಿಗಳ ಪರಿಶೀಲನೆಗಾಗಿ ಡಾ. ಆರ್. ಸಿ. ಹಿರೇಮಠ, ಡಾ. ದೇ. ಜವರೇಗೌಡ ಅವರಂಥ ಹಿರಿಯರ ನೆರವನ್ನೂ ಪಡೆಯಲಾಯಿತು. ಆರಂಭಿಕ ಹಂತದಲ್ಲಿ ಈ ಅನುವಾದಕರು, ಸಂಪಾದಕರು, ಪರೀಶೀಲಕರು ಮಾಡಿದ ಕಾರ್ಯ ನಿಜಕ್ಕೂ ಸ್ತುತ್ಯಾರ್ಹವಾದದ್ದು.

ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರ ಆರಂಭಿಸಿದ ಈ ಯೋಜನೆಗೆ ಮುಂದೆ ಬಂದ ಸರ್ಕಾರಗಳೂ ಸಕಾರಾತ್ಮಕ ಬೆಂಬಲ ನೀಡಿದ್ದರಿಂದ, ವೀರಪ್ಪ ಮೊಯಿಲಿ, ಎಚ್.ಡಿ.ದೇವೇಗೌಡ, ಜೆ.ಎಚ್. ಪಟೇಲ್‌, ಎಸ್.ಎಂ. ಕೃಷ್ಣ ಇವರುಗಳು ಮುಖ್ಯಮಂತ್ರಿಗಳಾಗಿದ್ದಾಗಿನ ಅವಧಿಯಲ್ಲಿ ಅಂಬೇಡ್ಕರ್ ಅವರ ಸಮಗ್ರ ಸಾಹಿತ್ಯದ ಬಹಳಷ್ಟು ಸಂಪುಟಗಳು ಹೊಸದಾಗಿ ಮತ್ತು ಮರುಮುದ್ರಣವಾಗಿ ಕಡಿಮೆ ಬೆಲೆಯಲ್ಲಿ ಹೊರಬಂದು ಕನ್ನಡ ಓದುಗರಿಗೆ ದೊರೆಯಲು ಸಾಧ್ಯವಾಯಿತು.

ಈ ಸಂಪುಟಗಳು ಕನ್ನಡ ಓದುಗರನ್ನು ವೈಚಾರಿಕವಾಗಿ ನಿರೀಕ್ಷಿತ ಮಟ್ಟದಲ್ಲಿ ಎತ್ತರಿಸುವಲ್ಲಿ ಸಫಲವಾದವೇ ಎಂಬುದು ಹೆಚ್ಚು ಚರ್ಚೆಯನ್ನು ನಿರೀಕ್ಷಿಸುವ ಅಂಶ. ಆದರೆ ಆ ಎಲ್ಲ ಸಂಪುಟಗಳು ಖರ್ಚಾದದ್ದು ನಿಜ. ಬಹಳಷ್ಟು ಸುಂದರವಾಗಿಯೂ ಪ್ರಕಟವಾಗಿದ್ದ ಬೃಹತ್ ಗಾತ್ರದ ಈ ಸಂಪುಟಗಳ ಬೆಲೆ ಅತ್ಯಂತ ಕಡಿಮೆ ಇದ್ದದ್ದರಿಂದ ಓದಲಾಗದವರೂ, ಓದಲೊಲ್ಲದವರೂ ‘ಮನೆಯಲ್ಲಿ ಇರಲಿ’ ಎಂಬ ಗೌರವದ ಭಾವನೆಯಿಂದ ಒಯ್ದದ್ದೂ ಇದೆ. ಇದರಿಂದಾಗಿ ನಿಜವಾದ ಓದುಗರಿಗೆ ಇವು ಸಿಗದಂತಾದದ್ದೂ ಇದೆ. ನಿಜವಾದ ಓದುಗರು ಈ ಸಂಪುಟಗಳ ಮರುಮುದ್ರಣಕ್ಕಾಗಿ ಒತ್ತಾಯ ತರುತ್ತಾ ಅವುಗಳನ್ನು ಪಡೆಯಲು ಜಾತಕ ಪಕ್ಷಿಗಳಂತೆ ಕಾದದ್ದಂತೂ ಸುಳ್ಳಲ್ಲ.

ಇಂತಹವರಿಗೆಲ್ಲ ಸಂತೋಷದ ಸಂಗತಿಯಾಗಿ ಕಳೆದ ಬಾರಿ ಸಿದ್ರಾಮಯ್ಯ ನೇತೃತ್ವದ ಸರ್ಕಾರ ಅಂಬೇಡ್ಕರ್ ಅವರ ಸಾಹಿತ್ಯವನ್ನು ಮರುಮುದ್ರಣ ಮಾಡಿ ಸುಲಭ ಬೆಲೆಗೆ ವಿತರಿಸುವ ನಿರ್ಣಯ ಕೈಗೊಂಡ ಫಲವಾಗಿ ಈ ಸಮಗ್ರ ಸಾಹಿತ್ಯದ ಇಪ್ಪತ್ತೆರಡು ಬೃಹತ್ ಸಂಪುಟಗಳು ಬಹಳ ಒಳ್ಳೆಯಗುಣಮಟ್ಟದ ಹಾಳೆಗಳಲ್ಲಿ ಮುದ್ರಣಗೊಂಡು ಅಷ್ಟೇ ಉತ್ತಮ ಬೈಂಡಿಂಗ್ ಒಂದಿಗೆ ಆಕರ್ಷಕವಾದ ಹೊಸ ವಿನ್ಯಾಸದಲ್ಲಿ ಹೊರಬಂದಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಇವುಗಳನ್ನು ಹೊರತರುವ ಕಾರ್ಯವನ್ನು ಮಾಡಿರುವ ‘ಕುವೆಂಪು ಭಾಷಾಭಾರತಿ’ ಯ ಕಾರ್ಯ ನಿಜಕ್ಕೂ ಅಭಿನಂದನೀಯ.

ಭಾರತದ ಬಹಳಷ್ಟು ಜನ ಇಂದು ಬುದ್ಧಿವಂತರಾಗುವುದಕ್ಕಿಂತ ಭಾವಜೀವಿಗಳಾಗುತ್ತಿದ್ದಾರೆ. ಅವರನ್ನು ಕೆಲವು ಆಳುವ ಉಡಾಳರು ದಾಳಗಳನ್ನಾಗಿ ಮಾಡಿಕೊಂಡು ಅಧಿಕಾರದ ಆಟವಾಡುತ್ತಿದ್ದಾರೆ. ದೇವರ ಧರ್ಮಗಳಂತಹ ಭಾವನಾತ್ಮಕ ವಿಷಯಗಳಲ್ಲಿ ಜನರನ್ನು ಉನ್ಮಾದಗೊಳಿಸುವ ಚಟುವಟಿಕೆಗಳು ತೀವ್ರಗೊಂಡು ನಮ್ಮಜನ ನಮ್ಮ ಸಮಾಜದ ಮೂಲಗುಣವಾದ `ಸಹನೆ’ಯನ್ನು ಕಳೆದುಕೊಳ್ಳುತ್ತಿದ್ದಾರೆ. ಭಾರತವನ್ನು ಭದ್ರವಾಗಿ ಕಟ್ಟಿರುವ ಬಹುಸಂಸ್ಕೃತಿಯ ಬಂಧನ ಸಡಿಲಗೊಳ್ಳುತ್ತಿದೆ. ವಿವಿಧ ಜನಸಮುದಾಯಗಳ ನಡುವಿನ ಸೌಹಾರ್ದತೆ ದಿನದಿನಕ್ಕೂ ಕಡಿಮೆಯಾಗುತ್ತಾ ಹೋಗುತ್ತಿದ್ದು ಪರಸ್ಪರರಲ್ಲಿ ಅಸಹನೆ, ಅಪನಂಬಿಕೆಗಳು ಬೆಳೆಯುತ್ತಿವೆ.

ಇವೆಲ್ಲ ಸಮಸ್ಯೆಗಳನ್ನು ಭಾರತ ಗಂಭೀರವಾಗಿ ಎದುರಿಸುತ್ತಿದ್ದರೂ ಅವೆಲ್ಲವನ್ನೂ ಮರೆಮಾಚಿ ದೇಶ ಬಲಿಷ್ಠಗೊಳ್ಳುತ್ತಿದೆಯೆಂದೂ, ಇಡೀ ಪ್ರಪಂಚಕ್ಕೆ ಬುದ್ಧಿಹೇಳುವ ಸ್ಥಾನಕ್ಕೆ ಭಾರತ ನಡೆಯುತ್ತಿದೆಯೆಂದೂ, ಜನರನ್ನು ಮರುಳುಗೊಳಿಸಲಾಗುತ್ತಿದೆ. ಇಂತಹ ಮೋಡಿಗೊಳಗಾಗುತ್ತಿರುವ ಜನರಲ್ಲಿ ಯುವಜನತೆಯೇ ಹೆಚ್ಚಿರುವುದು ಆತಂಕದ ಸಂಗತಿಯಾಗಿದೆ.

ಇಂತಹ ಹೊತ್ತಿನಲ್ಲಿ ಭಾರತದ ಜನಸಮೂದಾಯದ ಅದರಲ್ಲಿಯೂ ದೇಶದ ಭವಿಷ್ಯವನ್ನು ರೂಪಿಸಬೇಕಾದ ಯುವಜನತೆಯ ವೈಚಾರಿಕೆ ಶಕ್ತಿಯನ್ನು ಬೆಳೆಸುವುದು ಅತ್ಯಂತ ಅವಶ್ಯಕವಾಗಿದೆ. ಏಕೆಂದರೆ ಯಾರದೋ ತಾಳಕ್ಕೆ ಕುಣಿಯುವ ಗೊಂಬೆಗಳಾಗದೇ ಅವರು ಸ್ವತಂತ್ರ ಆಲೋಚನಾಶಕ್ತಿಯನ್ನು ರೂಪಿಸಿಕೊಂಡರೆ ಮಾತ್ರ ಈ ದೇಶಕ್ಕೆ ಭವಿಷ್ಯ. ಈ ಭವಿಷ್ಯ ರೂಪುಗೊಳ್ಳಬೇಕಾದರೆ ನಾವೆಲ್ಲ ಅಂಬೇಡ್ಕರ್ ಅವರ ಬರೆಹಗಳನ್ನು ಓದುವುದು ಮತ್ತು ನಮ್ಮ ಯುವಸಮುದಾಯಕ್ಕೆ ಓದಿಸುವುದು ಅವಶ್ಯ. ಏಕೆಂದರೆ ಈ ಲೇಖನದ ಆರಂಭದಲ್ಲಿಯೇ ಪ್ರಸ್ತಾಪಿಸಿದಂತೆ ಅಂಬೇಡ್ಕರ್ ಅವರನ್ನು ಓದುವುದು ಅಂದರೆ ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದು ಎಂದೇ ಅರ್ಥ.

ಡಾ. ರಾಜೇಂದ್ರ ಬುರಡಿಕಟ್ಟಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ5 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ6 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ1 week ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ1 week ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ2 weeks ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

Trending