ಬಹಿರಂಗ
ಅಂಬೇಡ್ಕರರ ಸಂವಿಧಾನಶಿಲ್ಪಿ ಪಟ್ಟವನ್ನು ಪ್ರಶ್ನಿಸುವವರಿಗೆ ನನ್ನದೊಂದು ನೇರ ಚಾಲೆಂಜ್
- ರಘೋತ್ತಮ ಹೊ.ಬ
ಕೆಲ ದಿನಗಳ ಹಿಂದೆ ನಾನು ನಾಲ್ವಡಿಯವರು ಕೆ ಆರ್ ಎಸ್ ಕಟ್ಟಿದ್ದು ಎಂದು ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದಾಕ್ಷಣ ಒಂದಿಬ್ಬರು ಕೇಳಿದ್ದು ಹಾಗಿದ್ದರೆ ಅಂಬೇಡ್ಕರ್ ಸಂವಿಧಾನ ಬರೆದರಾ ಎಂದು. ಹಾಗೆಯೇ ಈಚೆಗೆ ಕನ್ನಡದ ಪ್ರಮುಖ ಪತ್ರಿಕೆಯೊಂದು ಕೂಡ ಸಂವಿಧಾನ ಕರಡು ರಚಿಸಿದ್ದು ಬಿ.ಎನ್.ರಾವ್ ಎಂದೂ ಇದನ್ನು ಅಂಬೇಡ್ಕರ್ ಕೂಡ ಸ್ಮರಿಸಿದ್ದಾರೆ ಎಂದೂ ಸಂವಿಧಾನ ರಚನಾ ಕಾರ್ಯ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಿತು.
ನನ್ನ ಚಾಲೆಂಜ್ ಇಷ್ಟೇ, ಸಂವಿಧಾನ ನಾನು ಬರೆದದ್ದು ಎಂದು ಅಂಬೇಡ್ಕರ್ ರವರು ಎಂದಾದರೂ ತಾವೇ ಪ್ರತಿಪಾದಿಸಿ, ನನ್ನನ್ನು ಸಂವಿಧಾನ ಶಿಲ್ಪಿ ಎಂದು ಕರೆಯಿರಿ ಎಂದು ಯಾರನ್ನಾದರೂ ಕೇಳಿದ್ದಾರೆಯೇ? ಇಲ್ಲ. ಆದರೆ ಸಂವಿಧಾನ ರಚನೆಯ ಅಂತಿಮ ಹಂತದಲ್ಲಿ ಅದನ್ನು ಅಂಗೀಕರಿಸುವ ಅಂತಿಮ ಕ್ಷಣಗಳಲ್ಲಿ ಆ ಸಂವಿಧಾನ ಕುರಿತು ರಚನಾ ಸಭೆಯ 290 ಕ್ಕೂ ಹೆಚ್ಚು ಸದಸ್ಯರು ಮಾತನಾಡಿದ್ದಾರೆ ಮತ್ತು
ಪ್ರತಿಯೊಬ್ಬ ಸದಸ್ಯನೂ ಅಂಬೇಡ್ಕರರನ್ನು “ಆಧುನಿಕ ಮನು”, “ಹಿಂದಿನ ಸಂವಿಧಾನ ಮನುಸ್ಮೃತಿಯಾದರೆ ಈ ಸಂವಿಧಾನ ಭೀಮಸ್ಮೃತಿ”, “ತಮ್ಮ ಈ ಸಂವಿಧಾನದಿಂದಾಗಿ ಅಂಬೇಡ್ಕರರು ತಾವು ಇಂಗ್ಲೆಂಡ್ ನ ಮುಖ್ಯ ನ್ಯಾಯಮೂರ್ತಿಯಾಗಲು ಅರ್ಹರು.
ಅವರ ಕಾನೂನಿನ ಜ್ಞಾನಕ್ಕೆ ಅದಕ್ಕಿಂತ ಕಡಿಮೆ ಮಟ್ಟದ ಹುದ್ದೆ ತಕ್ಕುದ್ದೇ ಅಲ್ಲ” ಹೀಗೆ ಹೇಳಿದ್ದಾರೆ, ಅಂಬೇಡ್ಕರರನ್ನು ಹಾಡಿ ಹೊಗಳಿದ್ದಾರೆ. ಆ ಹೊಗಳಿಕೆಗಳೆಲ್ಲವೂ ಭಾರತದ ಸಂವಿಧಾನ ರಚನಾ ಚರ್ಚಾ ನಡಾವಳಿ ಸಂಪುಟ (Constitution Assembly Debates) ಗಳಲ್ಲಿ ಅಕ್ಷರ ಅಕ್ಷರವಾಗಿ ಪದ ಪದವಾಗಿ ದಾಖಲಾಗಿದೆ. ರಾಜ್ಯ ಸರ್ಕಾರ ಕೂಡ ಈಚೆಗಷ್ಟೆ “ಕುವೆಂಪು ಭಾಷಾ ಭಾರತಿ ಸಂಸ್ಥೆ” ಅಡಿಯಲ್ಲಿ ಆ ನಡಾವಳಿ ಸಂಪುಟಗಳನ್ನು ಅನುವಾದಿಸಿ ಕನ್ನಡಕ್ಕೂ ತಂದಿದೆ. ಅಂದಹಾಗೆ ಆ ಸಂಪುಟಗಳಲ್ಲಿ ಕಂಡುಬರುವ ಒಂದು ಕುತೂಹಲಕಾರಿ ಸಾಕ್ಷಿಯಾಗಿ ಪರಿಗಣಿಸಲ್ಪಡಬಹುದಾದ ಅಂಶವೆಂದರೆ ಆ ಕಾಲದಲ್ಲಿ ರಚಿತ ಸಂವಿಧಾನಕ್ಕೆ ಸ್ವತಃ ಅಂಬೇಡ್ಕರರ ಜಾತಿಯನ್ನೂ ತಳುಕು ಹಾಕಿರುವ ಘನವೆತ್ತ ಆಗಿನ ಕಾಲದ ಆ ಸದಸ್ಯರುಗಳು ಈ ಸಂವಿಧಾನವನ್ನು “ಮಹಾರ್ ಕಾನೂನು ಎಂದು ಕರೆಯಬಹುದು” ಎಂದಿರುವುದು.
ಪ್ರಶ್ನೆ ಇಷ್ಟೇ, ಯಾಕೆ ಆ ಸದಸ್ಯರು ಅಂಬೇಡ್ಕರರನ್ನು ಹೀಗೆ ಹಾಡಿ ಹೊಗಳಿದರು? ಅಂಬೇಡ್ಕರರೇನಾದರೂ ಕೇಳಿಕೊಂಡಿದ್ದರಾ “ನನ್ನನ್ನು ಹಾಗೆ ಕರೆಯಿರಿ, ಆಧುನಿಕ ಮನು ಅಂತ ಹೇಳಿ” ಎಂದು? ಖಂಡಿತ ಇಲ್ಲ. ವಾಸ್ತವ ಏನೆಂದರೆ ಸುಮಾರು ಮೂರು ವರ್ಷಗಳ ಸುದೀರ್ಘ ಅವಧಿವರೆಗೆ ಗೌರವಾನ್ವಿತ ಆ ಸದಸ್ಯರುಗಳು ಅಂಬೇಡ್ಕರರ ಆ ಸಂವಿಧಾನ ರಚನಾ ಕಾರ್ಯವನ್ನು, ಕೌಶಲವನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿದರು. ಅದಕ್ಕೆ ಅವರು ಹಾಗೆ ಹೇಳಿದರು. ದುರಂತ ಎಂದರೆ ಈಗೀಗ ಬಿ.ಎನ್.ರಾವ್ ಎಂಬ ಹೆಸರನ್ನು ಮುಂದೆ ತರಲಾಗುತ್ತಿದೆ. ಆದರೆ ನನ್ನ ನೇರ ಪ್ರಶ್ನೆ ಇಷ್ಟೇ, ಮೇಲೆ ಹೇಳಿದ ರೀತಿ ಸಂವಿಧಾನ ಸಭೆಯ ಆ ಗೌರವಾನ್ವಿತ ಸದಸ್ಯರು ಅಂಬೇಡ್ಕರರನ್ನು ಹೊಗಳುತ್ತಿದ್ದಾಗ ಸದರಿ ಬಿ.ಎನ್.ರಾವ್ ಭಾರತದಲ್ಲೇ ಇದ್ದರೂ ಯಾಕೆ ಗೌರವಾನ್ವಿತ ಆ ಸದಸ್ಯರುಗಳು ಬಿ.ಎನ್.ರಾವ್ ರನ್ನು ಸಂವಿಧಾನ ರಚನಾ ಆ ಪ್ರಕ್ರಿಯೆಗೆ ತಳುಕು ಹಾಕಲಿಲ್ಲ? ಅಥವಾ ಹೊಗಳಲಿಲ್ಲ? ಅಥವಾ ಆ ಸಂವಿಧಾನಕ್ಕೆ ಬಿ.ಎನ್.ರಾವ್ ರ ಜಾತಿಯ ಹೆಸರನ್ನು ತಳುಕು ಹಾಕದೆ ಮಹಾರ್ ಕಾನೂನು ಎಂದರು ಯಾಕೆ?!
ಆದ್ದರಿಂದ ನನ್ನ ನೇರ ಚಾಲೆಂಜ್ ಇಷ್ಟೇ ಈ ನಿಟ್ಟಿನಲ್ಲಿ ಬಿ.ಎನ್. ರಾವ್ ಅಥವಾ ಮತ್ತ್ಯಾರದಾದರೂ ಹೆಸರು ಮುಂದೆ ತರಬೇಕಾದರೆ ಅಂಬೇಡ್ಕರರನ್ನು “ಆಧುನಿಕ ಮನು”, “ಮನುಸ್ಮೃತಿಯಲ್ಲ ಇದು ಭೀಮಸ್ಮೃತಿ”, “ಮನುವಿನ ಕಾನೂನು ಹೋಗಿ ಮಹಾರ್ ಕಾನೂನು ಬಂದಿದೆ” ಎಂದು ಹಿಂದೆ ಹೇಳಿದ್ದಾರಲ್ಲ ಘನತೆವೆತ್ತ ಆ ಸದಸ್ಯರುಗಳನ್ನು ಗೋರಿಯಿಂದ ಎಬ್ಬಿಸಿ ಅವರ ಬಾಯಲ್ಲಿ ಬಿ.ಎನ್.ರಾವ್ ಹೆಸರು ಹೇಳಿಸಿ. ಆಗ ನಿಮ್ಮ ಈ ಬಿ.ಎನ್.ರಾವ್ ವಾದ ಒಪ್ಪುತ್ತೇವೆ. ಹಾಗೆ ಆಗೋದಿಲ್ವೋ ಸುಮ್ಮನೆ ದೂಸ್ರಾ ಮಾತಾಡದೆ ಒಪ್ಪಿಕೊಳ್ಳಿ “ಸಂವಿಧಾನ ಶಿಲ್ಪಿ ಅಂಬೇಡ್ಕರ್” ಅಂತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


