Connect with us

ಬಹಿರಂಗ

ಸ್ವಾಭಿಮಾನ v/s ಜೀತಗಾರಿಕೆ

Published

on

ಸ್ವಾಭಿಮಾನ ಅಥವಾ ಆತ್ಮಗೌರವ ಅಥವಾ ಸ್ವಂತಿಕೆ… ಹೀಗೆ ಹೇಗೆ ಬೇಕಾದರೂ ಕರೆಯಿರಿ ಅದು ಮಾನವ ಜೀವನದ ಬಹುದೊಡ್ಡ ಅಂಗ ಅಥವಾ ಅಂಶ. ಅದು ಹೇಗಿರುತ್ತದೆ? ಯಾವ ರೂಪದಲ್ಲಿ ಇರುತ್ತದೆ? ಬಹುಶಃ ಅದನ್ನು ಪದಗಳಲ್ಲಿ ಹೇಳುವುದು, ವರ್ಣಿಸುವುದು ಅಸಾಧ್ಯ. ಬದಲಿಗೆ ಬದುಕಿ ತೋರಬೇಕಷ್ಟೆ. ಬದುಕು ಎಂದಾಕ್ಷಣ ಸ್ವಾಭಿಮಾನ ಎಂಬ ಆ ಅಂಶ ಸಂದರ್ಭದ ರೂಪದಲ್ಲಿ ಎದುರಾಗುತ್ತದೆ, ಕಾಲದ ನಿರಂತರ ಪರೀಕ್ಷೆಯಲ್ಲಿ ಅದು ಮತ್ತೆ ಮತ್ತೆ ಎದುರು ಬರುತ್ತದೆ.

ಉದಾಹರಣೆಗೆ ಒಬ್ಬ ಮಹಿಳೆಗೆ ಒಬ್ಬ ಪುರುಷನ ಎದುರು ಸ್ವಾಭಿಮಾನ ಮತ್ತು ಸ್ವಾವಲಂಬನೆ ಸರಿದೂಗಿಸಕೊಳ್ಳುವುದು ಅಥವಾ ಕಾಪಾಡಿಕೊಳ್ಳುವುದು ಕಷ್ಟವಾದರೆ, ಒಬ್ಬ ಬಡವನಿಗೆ ಸಿರಿವಂತನ ಎದುರು ಅದೇ ಸ್ವಾಭಿಮಾನ ಸರಿದೂಗಿಸಿಕೊಳ್ಳುವುದು, ಕಾಪಾಡಿಕೊಳ್ಳುವುದು ಕಷ್ಟ. ಅಂದಹಾಗೆ ಸ್ವಾಭಾವಿಕವಾಗಿ ಅಲ್ಲಿ ಸಂಘರ್ಷದ ವಾತಾವರಣ ಏರ್ಪಡುತ್ತದೆ ಮತ್ತು ಅಂತಹ ಸಂಘರ್ಷದ ವಾತಾವರಣವನ್ನು ಪರಸ್ಪರರು ನಿಭಾಯಿಸುವುದರ ಮೂಲಕ ಪರಸ್ಪರರ ಸ್ವಾಭಿಮಾನವನ್ನು ಕಾಪಾಡಿಕೊಳ್ಳಬಹುದು. ವಾಸ್ತವವೆಂದರೆ ಹೀಗೆಯೇ ಶೋಷಿತ ಸಮುದಾಯಗಳು ಮತ್ತು ಮೇಲ್ವರ್ಗಗಳ ನಡುವೆ ಕೂಡ ಇಂತಹ ಸ್ವಾಭಿಮಾನದ ಪ್ರಶ್ನೆ ಬರುತ್ತದೆ ಎಂಬುದು.

ನಿಜ, ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಅಲ್ಲಿ ಮತ್ತದೆ ಸಂಘರ್ಷದ ಪ್ರಶ್ನೆ ಕೂಡ ಎದುರಾಗುತ್ತದೆ. “ನಿನ್ನನ್ನು ಮುಟ್ಟಿಸಿಕೊಳ್ಳುವುದಿಲ್ಲ, ನೀನು ಆಚೆ ನಿಲ್ಲು, ನೀನು ದೇವಸ್ಥಾನ ಪ್ರವೇಶಿಸಬೇಡ, ನೀನು ನಮ್ಮ ಬೀದಿ ಪ್ರವೇಶಿಸಬೇಡ, ನೀನು ನಮ್ಮ ಬೀದಿಯ ಕೀಳು ಕೆಲಸಗಳನ್ನು ಮಾಡಲೆಂದೇ ಇರುವುದು, ನೀನು ನಮ್ಮ ಜಮೀನಿನಲ್ಲಿ ಜೀತಮಾಡಲೆಂದೇ ಇರುವುದು…” ಇತ್ಯಾದಿ ಸಂದರ್ಭಗಳು ಶೋಷಿತ ಸಮುದಾಯಗಳ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲವು ಸಂದರ್ಭಗಳು. ಹಾಗಂತ ಇಲ್ಲಿ ಸ್ವಾಭಿಮಾನ ಅಡ ಇಡಬೇಕೆ? ಖಂಡಿತ ಸಲ್ಲದು. ಇದನ್ನೆ ಬಾಬಾಸಾಹೇಬ್ ಅಂಬೇಡ್ಕರ್‌ರವರು ಹೇಳಿದ್ದು “ಸ್ವಾಭಿಮಾನ ಇಲ್ಲದ ಮನುಷ್ಯನ ಬಾಳು ಜೀವಂತ ಶವದಂತೆ” ಎಂದು. ಅರ್ಥಾತ್ ಸ್ವಾಭಿಮಾನ ಗಳಿಸಿಕೊಳ್ಳಲು ಶೋಷಿತ ಸಮುದಾಯಗಳು ನಿರಂತರ ಯತ್ನಿಸಬೇಕು ಎಂಬುದು ಅಂಬೇಡ್ಕರರ ಆಶಯ.

ಈ ಸಂದರ್ಭದಲ್ಲಿ ಇಲ್ಲಿ ಮತ್ತದೇ ಅಂದರೆ ಸಂಘರ್ಷದ ಪ್ರಶ್ನೆ ಬರುತ್ತದೆ. ಏಕೆಂದರೆ ಶೋಷಿತ ಸಮುದಾಯಗಳಿಗೆ ಬಡತನ ಇರುತ್ತದೆ, ಸ್ವಾವಲಂಬನೆಗಾಗಿ ಉದ್ಯೊÃಗ ಇರುವುದಿಲ್ಲ, ಜಮೀನು ಇರುವುದಿಲ್ಲ. ಹಾಗೆಯೇ ಆತನಿಗೆ ಆತನ ಮಾನ-ಪ್ರಾಣದ ಪ್ರಶ್ನೆ ಎದುರಾಗುತ್ತದೆ. ತನ್ನ ಮನೆಯ ಹೆಣ್ಣು ಮಕ್ಕಳ ಮಾನದ ಪ್ರಶ್ನೆ ಎದುರಾಗುತ್ತದೆ. ಏಕೆಂದರೆ ತನ್ನ ಬಡತನದ ಕಾರಣಕ್ಕಾಗಿ ಆತ ಮೇಲ್ವರ್ಗದವರ ಮುಂದೆ ಕೈಚಾಚಬೇಕಾಗಬಹುದು, ಉದ್ಯೊÃಗ ಇಲ್ಲದ ಕಾರಣಕ್ಕಾಗಿ ಅವರ ಮುಂದೆ ಕೈಚಾಚಬೇಕಾಗಬಹುದು. ಹಾಗೆಯೇ ತನ್ನ ಮನೆಯ ಹೆಣ್ಣು ಮಕ್ಕಳ ರಕ್ಷಣೆಗಾಗಿ ಆತ ಮೇಲ್ವರ್ಗದವರ ಮುಂದೆ ಕೈಚಾಚಬೇಕಾಗಬಹುದು.

ಖಂಡಿತ, ಇಂತಹ ಕೈಚಾಚುವಿಕೆಯ ಸಂದರ್ಭ ಬರುತ್ತದೆ ಎಂಬ ಕಾರಣಕ್ಕಾಗಿಯೇ ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೊಡಿಸಿದ್ದು. ಬಜೆಟ್‌ನಲ್ಲಿ ಸರ್ಕಾರ ಇವರಿಗೋಸ್ಕರ ಸಾಕಷ್ಟು ಅನುದಾನ ಮೀಸಲಿಡುವ ಪದ್ಧತಿ ಜಾರಿಗೆ ತಂದದ್ದು. ಹಾಗೆಯೇ ಇವರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ, ಸಂಘರ್ಷದ ವಾತಾವರಣ ಮೂಡುತ್ತದೆ, ರಕ್ಷಣೆ ಸಿಗಲಿ ಎಂಬ ಕಾರಣಕ್ಕಾಗಿಯೇ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆ ರೂಪಿಸುವಿಕೆಗೆ ಸಂವಿಧಾನದಲ್ಲಿ ಅವಕಾಶ ನೀಡಿದ್ದು.

ಅಂದಹಾಗೆ ಇಂತಹ ಸಾರ್ವಜನಿಕ ಅವಕಾಶಗಳನ್ನು ನೀಡಿಸುವುದರಷ್ಟರಲ್ಲಿಯೇ ಅಂಬೇಡ್ಕರ್‌ರವರು ತೃಪ್ತಿ ಹೊಂದಿದರೇ? ಊಹ್ಞೂಂ, ಸ್ವತಃ ಅವರೇ ಸ್ವಾಭಿಮಾನದ ಸಂಕೇತವಾಗಿ ಬದುಕಿದರು. ಉದಾಹರಣೆಗೆ ಯಾವ ಸಮಾಜ ಕನಿಷ್ಠ ಶಿಕ್ಷಣ ಪಡೆಯಲು ಪರದಾಡುತ್ತಿತ್ತೋ ಅಂತಹ ಸಮಾಜದ ಮುಂದೆ ಅಂಬೇಡ್ಕರ್‌ರವರು ಸ್ವತಃ ಸಾಲು ಸಾಲು ಪದವಿಗಳನ್ನು ಪಡೆದರು, ಮಾದರಿಯಾದರು. ಹಾಗೆಯೇ ಯಾವ ಸಮಾಜ ಬರೀ ಹರಿದ, ಚಿಂದಿಯಾದ ಕೊಳಕು ಬಟ್ಟೆಗಳನ್ನು ಧರಿಸಿ ಸಮಾಜದ ಮುಂದೆ ತನ್ನನ್ನು ತಾನಿರುವುದೇ ಹೀಗೆ ಎಂದು ಬಿಂಬಿಸಿಕೊಂಡಿತ್ತೊ ಅಥವಾ ಸಮಾಜ ಹಾಗೆ ಬಿಂಬಿಸಿತ್ತೊ ಅದಕ್ಕೆ ವಿರುದ್ಧವಾಗಿ ಅಂಬೇಡ್ಕರ್‌ರವರು ಸದಾ ಗರಿ ಗರಿ ಕೋಟು ಧರಿಸಿದರು. ಮಾದರಿಯಾದರು. ಹಾಗೆಯೇ ಯಾವ ಸಮಾಜ ತನ್ನ ನಡುವಿನ ಮೇಲ್ವರ್ಗದವರನ್ನು ಸದಾ “ಬುದ್ಧಿ, ಸ್ವಾಮಿ” ಎಂದು ಉಚ್ಛಾರಣೆಯಲ್ಲಿಯೂ ಜೀತಗಾರಿಕೆ ತೋರುತ್ತಿತ್ತೊ, ಸ್ವಾಭಿಮಾನ ಮರೆಯುತ್ತಿತ್ತೊ ಅಂತಹ ಉಚ್ಛಾರಣೆಯ ಜೀತಗಾರಿಕೆಯ ನಡುವೆ ಅಂಬೇಡ್ಕರ್‌ರವರು “ಮಿಸ್ಟರ್, ಸರ್” ಎಂಬ ಪದ ಬಳಸಿದರು. ಉದಾಹರಣೆಗೆ 1932ರಲ್ಲಿ ಅಂದರೆ ಸುಮಾರು 90 ವರ್ಷಗಳ ಹಿಂದೆಯೇ ಪೂನಾ ಒಪ್ಪಂದದ ಸಂದರ್ಭದಲ್ಲಿ ಅಂಬೇಡ್ಕರ್‌ರವರು ಸ್ವತಃ ಮಹಾತ್ಮ ಗಾಂಧಿಯವರನ್ನು “ಮಿಸ್ಟರ್ ಗಾಂಧಿ” ಎಂದು ಉಚ್ಛರಿಸಿರುವುದನ್ನು ಅವರ ಬರಹಗಳು ಮತ್ತು ಭಾಷಣಗಳಲ್ಲಿ ನಾವು ಈಗಲೂ ಕಾಣಬಹುದು. ಈ ನಿಟ್ಟಿನಲ್ಲಿ ಹೇಳುವುದಾದರೆ ಅದು ಉಚ್ಛಾರಣೆಯಲ್ಲಿಯೂ ಸ್ವಾಭಿಮಾನದ ಸಂಕೇತಿಸುವಿಕೆಗೆ ಶೋಷಿತ ಸಮುದಾಯಗಳಿಗೆ ಅಕ್ಷರಶಃ ಮಾದರಿಯಾಗುತ್ತದೆ.

ಹಾಗಿದ್ದರೆ ಅಂಬೇಡ್ಕರ್‌ರವರು ಹೀಗೆಲ್ಲ ಕಾನೂನಾತ್ಮಕ ಮತ್ತು ವಯಕ್ತಿಕ ಬದುಕಿನ ಮೂಲಕ ನಮಗೆ ಸ್ವಾಭಿಮಾನದ ದಾರಿ ತೋರಿಸಿದರು ಎಂದಾಕ್ಷಣ ಸ್ವಾಭಿಮಾನ ಸಿಕ್ಕಿಯೇ ಬಿಟ್ಟಿತು ಎಂದರ್ಥವೇ? ಖಂಡಿತ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಅಂಬೇಡ್ಕರ್‌ರವರು ಹಿಂದೂ ಧರ್ಮದಲ್ಲಿಯೇ ಶೋಷಿತ ಸಮುದಾಯದ ವ್ಯಕ್ತಿಯೋರ್ವ ಉಳಿದರೆ ಆತನ ಮುಂದೆ ಮತ್ತದೇ ಸ್ವಾಭಿಮಾನದ ಸಂಘರ್ಷದ ಸಂದರ್ಭ ಎದುರಾಗುತ್ತದೆ ಎಂದು ಮತಾಂತರದ ಮತ್ತೊಂದು ಹಾದಿ ತೋರಿದರು.

ಮತಾಂತರ, ಅದೊಂದು ಈಗಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದ ಬದಲಾವಣೆಯಷ್ಟೆ ಹೊರತು ಇನ್ನೊಬ್ಬರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕ್ರಿಯೆಯಲ್ಲ. ಈ ನಿಟ್ಟಿನಲ್ಲಿ ಸ್ವತಃ ಅಂಬೇಡ್ಕರ್‌ರವರು ಬೌದ್ಧ ಧರ್ಮಕ್ಕೆ ತಮ್ಮ 10 ಲಕ್ಷ ಅನುಯಾಯಿಗಳೊಡನೆ ಅ ಕಾಲದಲ್ಲೆ ಮತಾಂತರ ಹೊಂದಿದರು. ಎಲ್ಲಿ ಸ್ವಾಭಿಮಾನವಿಲ್ಲವೋ ಅಲ್ಲಿ ನನ್ನ ಚಪ್ಪಲಿಯನ್ನೂ ಸಹ ಬಿಡುವುದಿಲ್ಲ ಎಂದು ವ್ಯವಸ್ಥೆಗೆ ಸಾರಿ ಹೇಳಿದರು ಮತ್ತು ಹಾಗೆ ಬದುಕಿ ತೋರಿಸಿದರೂ ಕೂಡ. ಅಕ್ಷರಶಃ ಅಂಬೇಡ್ಕರ್‌ರವರು ಅನುಸರಿಸಿದ ಈ ಬೌದ್ಧ ಧರ್ಮದೆಡೆಗಿನ ಮತಾಂತರದ ಹಾದಿ ಕೂಡ ಪ್ರಸ್ತುತದ ಶೋಷಿತ ಸಮುದಾಯಗಳ ಸ್ವಾಭಿಮಾನದ ತಾಕಲಾಟಕ್ಕೆ ಖಂಡಿತ ಉತ್ತರವಾಗುತ್ತದೆ.

ಈ ನಡುವೆ ಬಾಬಾಸಾಹೇಬ್ ಅಂಬೇಡ್ಕರ್‌ರವರ ಬದುಕು ಎಂದಾಕ್ಷಣ ಅಲ್ಲಿ ರಾಜಕೀಯ ಬದುಕಿನ ಪ್ರಶ್ನೆಯೂ ಬರುತ್ತದೆ. ಅಲ್ಲಿಯೂ ಅಷ್ಟೆ ಅಂಬೇಡ್ಕರ್‌ರವರು ತಮ್ಮದೇ ಸ್ವಂತ ಪಕ್ಷಗಳ ಮೂಲಕ ರಾಜಕಾರಣ ಮಾಡಿ ಬದುಕಿದರೇ ವಿನಹ ಆಗ ಅಸ್ತಿತ್ವದಲ್ಲಿದ್ದ ಇತರೆ ರಾಜಕೀಯ ಪಕ್ಷಗಳನ್ನು ಅವರು ಸೇರಲಿಲ್ಲ. ಮತ್ತೆ ಹೇಳುವುದಾದರೆ ಇಲ್ಲಿಯೂ ಅವರಿಗೆ ಎದುರಾದದ್ದು ಮತ್ತದೇ ಸ್ವಾಭಿಮಾನದ ಪ್ರಶ್ನೆ.

ಹೀಗಿರುವಾಗ, ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗೆ ಒದಗಿಸಿಕೊಟ್ಟ ಹಕ್ಕುಗಳು ಮತ್ತು ಅವರು ಬದುಕಿದ ರೀತಿ ಹೀಗಿರುವಾಗ ಅಂದರೆ ಸ್ವಾಭಿಮಾನದ ದಿಟ್ಟ ಮಾರ್ಗವಾಗಿರುವಾಗ ಶೋಷಿತ ಸಮುದಾಯಗಳು ಪ್ರಸ್ತುತ ಹೇಗೆ ಬದುಕಬೇಕು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸ್ವಾಭಿಮಾನದ ನಡೆಗಳಿಗೆ ವಿರುದ್ಧವಾಗಿ ರಾಜಿಯಾಗಬೇಕೆ? ಆತ್ಮಗೌರವ ಮಾರಿಕೊಳ್ಳಬೇಕೆ? ಎಂಬ ಪ್ರಶ್ನೆಗಳು ಮೂಡಿಬರುತ್ತವೆ. ಅಕ್ಷರಶಃ ಹೇಳುವುದಾದರೆ ಶೋಷಿತ ಸಮುದಾಯಗಳು ಸ್ವಾಭಿಮಾನಕ್ಕೆ, ಸ್ವಾಭಿಮಾನ ಉಳಿಸಿಕೊಳ್ಳುವ ದಿಕ್ಕಿನಲ್ಲಿ ಎಂದಿಗೂ ರಾಜಿಯಾಗಬಾರದು ಎಂಬುದು.

ಹಾಗಿದ್ದರೆ ಸಂಘರ್ಷ? ಉತ್ತರ: ಸಂಘರ್ಷದ ವಾತಾವರಣದಿಂದ ದೂರ ಸರಿಯಬೇಕಷ್ಟೆ. ಉದಾಹರಣೆಗೆ ಬಾಬಾಸಾಹೇಬ್ ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗಾಗಿ ಪ್ರತ್ಯೇಕ ಹಳ್ಳಿಗಳ ವ್ಯವಸ್ಥೆ ಮಾಡಬೇಕು ಎಂದಿದ್ದರು. ಇದರರ್ಥ ಹಿಂದೂಗಳೊಡಗಿನ ಸಂಘರ್ಷದಿಂದ ಮುಕ್ತರಾಗುವುದೇ ಆಗಿತ್ತು. ಹಾಗೆಯೇ ಅಸಮಾನ ಸಾಮಾಜಿಕ ವಾತಾವರಣದಿಂದ ಹೊರಬರಲು ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುವುದು ಮತ್ತು ಅಲ್ಲಿ ತಮ್ಮಿಷ್ಟ ಬಂದ ಉದ್ಯೋಗ ಅನುಸರಿಸುವುದು… ಇದೂ ಕೂಡ ಸ್ವಾಭಿಮಾನದ ಮಾರ್ಗವಾಗಿದೆ. ಹಾಗೆಯೇ ಧಾರ್ಮಿಕ ಸ್ವಾಭಿಮಾನಕ್ಕೆ ಧಕ್ಕೆ. ಮೊದಲೇ ಹೇಳಿದ ಹಾಗೆ ಇದಕ್ಕೂ ಕೂಡ ಅಂಬೇಡ್ಕರರು ತೋರಿದ ಬೌದ್ಧ ಧರ್ಮದ ಪರಿಹಾರವಿದೆ. ಇನ್ನು ರಾಜಕಾರಣ, ಅಲ್ಲಿಯೂ ಕೂಡ ತಮ್ಮದೇ ಸ್ವಂತ ಪಕ್ಷಗಳ ಮೂಲಕ ರಾಜಕಾರಣ ಮಾಡುವ ಪರಿಹಾರವಿದೆ. ಇನ್ನು ಶಿಕ್ಷಣ, ಉದ್ಯೋಗ, ಉತ್ತಮ ಬದುಕು, ಉತ್ತಮ ಮಾತುಕತೆಯ(ಮೇಲ್ವರ್ಗದವರೊಡನೆ) ಶೈಲಿ, ಉತ್ತಮ ಆರೋಗ್ಯ… ಇವೆಲ್ಲವೂ ಕೂಡ ಸ್ವಾಭಿಮಾನದ ಬದುಕಿನ ವಿವಿಧ ಮಾದರಿಗಳಾಗಿವೆ. ಅಂಬೇಡ್ಕರರು ಬದುಕಿದ ರೀತಿಗಳಾಗಿವೆ.

ಹಾಗಿದ್ದರೆ ಇಂತಹ ಸ್ವಾಭಿಮಾನ ಮತ್ತು ಅದಕ್ಕೆ ವಿರುದ್ಧವಾದ ಪರಿಕಲ್ಪನೆಯಾದ ಜೀತಗಾರಿಕೆ ಅರ್ಥಾತ್ ಗುಲಾಮಗಿರಿಯ ಬದುಕು ಇವುಗಳ ನಡುವೆ ಅಂತಹ ವ್ಯತ್ಯಾಸವೇನಿದೆ ಎಂಬ ಪ್ರಶ್ನೆ ಬರುತ್ತದೆ. ಉತ್ತರವೇನೆಂದರೆ ಅವೆರಡರ ಅಂದರೆ ಸ್ವಾಭಿಮಾನ ಮತ್ತು ಜೀತಗಾರಿಕೆಯ ನಡುವಿನ ಅಂತರ ತುಂಬಾ ತೆಳುವಾದದ್ದು ಎಂಬುದು. ಹಾಗಿದ್ದರೆ ಅದರ ವ್ಯಾಖ್ಯಾನ? ಖಂಡಿತ, ಅದನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಬದಲಿಗೆ ನಾವು ಬದುಕುವ ರೀತಿಯ ಮೇಲೆ ಅದು ನಿರ್ಧರಿತವಾಗುತ್ತದೆ. ಅಂದರೆ ಹೆಜ್ಜೆ ಹೆಜ್ಜೆಗೂ ಶೋಷಿತ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳಿಗೆ ತಾನು ಜೀತಗಾರಿಕೆಗೆ ಬೀಳುವುದಿಲ್ಲ ಅಥವಾ ತನ್ನ ಸಮುದಾಯವನ್ನು ಬೀಳಿಸುವುದಿಲ್ಲ, ಬದಲಿಗೆ ಸ್ವಾಭಿಮಾನದಿಂದ ಬದುಕುತ್ತೇನೆ, ಆ ಮಾರ್ಗದಲ್ಲಿಯೇ ನಡೆಯುತ್ತೇನೆ ಎಂಬ ಪ್ರಜ್ಞೆ ಇರಬೇಕು. ನಿಜ ಇದು ಕಷ್ಟದ ಹಾದಿ. ಆದರೆ ಅನಿವಾರ್ಯದ ಹಾದಿ ಕೂಡ ಇದಾಗಿದೆ. ಹಾಗೆಯೇ ಇದು ಬರೀ ಸಿದ್ಧಾಂತವಲ್ಲ. ಬದಲಿಗೆ ನಿರಂತರ ಪ್ರಾಯೋಗಿಕವಾದುದು. ಹಾಗೆ ಇದು ಯಾರೋ ಒಬ್ಬರಿಗೆ ಅಥವಾ ಶೋಷಿತ ಸಮುದಾಯಗಳೊಳಗೆ ಬರುವ ಯಾವುದೋ ಒಂದು ಉಪಜಾತಿಗೆ ಅನ್ವಯವಾಗುತ್ತದೆಯೆಂಬಂತೆಯಲ್ಲ. ಬದಲಿಗೆ ಎಲ್ಲಾ ಉಪಜಾತಿಗಳಿಗೆ ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಇದು ಅನ್ವಯವಾಗುತ್ತದೆ.ಉದಾಹರಣೆಗೆ ಮಲ ಹೊರುವ, ಶೌಚಾಲಯ ಶುಚಿಗೊಳಿಸುವ ವೃತ್ತಿಯಲ್ಲಿ ಅಂತಹ ಸ್ವಾಭಿಮಾನದ ಅಂಶವೇನಿದೆ? ಖಂಡಿತ ಇಲ್ಲ. ಪರಿಹಾರ ಅಂತಹ ವೃತ್ತಿಗಳನ್ನು ಮಾಡುವುದನ್ನು ಕೈಬಿಡುವುದೇ ಆಗಿದೆ.

ಆದ್ದರಿಂದ ಅಂಬೇಡ್ಕರ್ ಜಯಂತಿಯ ಈ ಸಂದರ್ಭದಲ್ಲಿ ಶೋಷಿತ ಸಮುದಾಯಗಳಿಗೆ ಸೇರಿದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾಭಿಮಾನದ ಇಂತಹ ಪಾಠ ಕಲಿಯಬೇಕಿದೆ. ಆ ಮೂಲಕ ಸಮಾನತೆಯ ಬದುಕಿನೆಡೆಗೆ ದಿಟ್ಟ ಹೆಜ್ಜೆ ಇಡಬೇಕಿದೆ.

ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ1 week ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ1 week ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ1 week ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ3 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ4 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ4 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ4 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending