Connect with us

ದಿನದ ಸುದ್ದಿ

ನಾಟಿ ವ್ಯದ್ಯನ ನ‌ಕರಾ ಟ್ರಿಟ್ಮೆಂಟ್ ;  ಇವನು ಡಮ್ಮಿ ಡಾಕ್ಟರ್… !

Published

on

ಸುದ್ದಿದಿನ,ವಿಶೇಷ : ವ್ಯದ್ಯೋ ನಾರಾಯಣ ಹರಿ‌ ಅಂತ ಡಾಕ್ಟರನ ಯಾಕ್ಕೆ ಕರೀತಿವಿ ಅಂದ್ರೆ, ದೇವರು ಬಿಟ್ರೆ ಆ ಸ್ಥಾನವನ್ನು ತುಂಬಬಲ್ಲ ಮತ್ತೊಂದು ಸ್ಥಾನವೇ ಈ ಡಾಕ್ಟರ್.ಅಂತಹ ನಾಮಕ್ಕೆ ಇಲ್ಲೊಬ್ಬ ಡಮ್ಮಿ ಡಾಕ್ಟರ್ ಕಳಂಕತಂದಿಟು ಮುದ್ದಾದ ಮಗುವಿನ ಜೀವನದಲ್ಲಿ ಮುಳ್ಳಾಗಿದ್ದಾನೆ. ಡಾಕ್ಟರ್ ಮಾಡಿದ ಕೆಲಸಕ್ಕೆ ಜೀವನ‌ ಪರೀಯಂತ ಹುಡುಗನ ‌ಕೈ ಇಲದಂತೆ ಮಾಡಿ ಅಂಗವಿಕಲನನಾಗಿ ಮಾಡಿದ್ದಾನೆ.

ಈ ಹುಡುಗನ ಹೆಸರು ಆದರ್ಶ. ನಾಟಿವ್ಯದ್ಯನು ಮಾಡ್ಡಿದ ಅವಾಂತರಗಳಿಂದ.ಜೀವನ ಪರಿಯಂತ ಕೈ ಕಳೆದುಕೊಂಡು ತನ್ನ ಆಸೆ ಆಕಾಂಕ್ಷೆ ಆದರ್ಶಗಳು‌ ಇನ್ನು ಮುಂದೆ ಯುವಕನ ಬಾಳಲ್ಲಿ ಕೇವಲ ಕೈ ಚೀಲದ ಕನಸುಗಳಂತಾಗಿದೆ.ತನ್ನ ಸ್ನೇಹಿತರ ಜೊತೆ ಆಟವಾಡಲು ಸಹ ಇವನಿಗೆ ಆಗುತ್ತಿಲ್ಲ.ಇವನ ತರ್ಲೆ ತುಟಾಂಟಗಳು ಹೆತ್ತವರಿಗೆ ದಿನೇ ‌ದಿನೇ‌ ಕ್ಷಿಣಿಸುತ್ತಿದೆ. ಕೇವಲ ನೆನಪುಗಳಾಗಿ ಕಾಡುತ್ತಿದೆ.ಇನ್ನು ಇವನ ಸ್ನೆಹೀತರಿಗಂತು ಇವನ್ನು ಕೈ ಕಳೆದುಕೊಂಡಿದು ಕಾಣದ ಕನಸಾಗಿದೆ.

ಶಾಲಾ ರಜಾದಿನಗಳಲ್ಲಿ ‌ಮಕ್ಕಳ ಆಟ, ತುಟಾಂಟ. ಗಲಾಟೆ,ಹೆತ್ತವರಿಗಂತು ಸಾಕ್ಕಪ‌ ಸಾಕ್ಕು ಈ ರಜಾ ದಿನಗಳು. ಯಾವಾಗ ಮುಗಿದು ಶಾಲೆ ಪ್ರಾರಂಭವಾಗುತ್ತೆ ಅನಿಸ್ಸಿರುತ್ತೆ. ಹೀಗೆ ಮನೆಯವರ ಕೈ ಗೆ ಸಿಗದೆ ಆಟವಾಡುತ್ತಿದ 8 ವರ್ಷದ ಬಾಲಕ‌ ಆದರ್ಶ ಕಾಲು ಜಾರಿ ಬಿಳುತ್ತಾನೆ. ಕೈ ಗೆ ಬಲವಾದ ಪೆಟ್ಟು ಬಿದಿರುವದರಿಂದ ಆದರ್ಶನನ್ನು ಲಿಂಗಸುಗೂರಿನ ಎಲಬು ಮತ್ತು ಕೀಲು‌ ತಜ್ಞ ಡಾ,ಹರ್ಷವರ್ಧನ ಹತ್ತಿರ ಚಕಿತ್ಸೆ ಕೊಡಿಸುತ್ತಾರೆ.ಯಾವುದೇ ಕಾರಣಕ್ಕು ಕೈಗೆ ಹಾಕ್ಕಿದ ಪಟ್ಟಿಯನ್ನು ಬಿಚ್ಚಬಾರದು ಅಂತಾ ಹೇಳಿರುತ್ತಾರೆ.

ನಕಲಿ ವೈದ್ಯನ ಕರಾಮತ್ತು

ಇನ್ನೇನು ರಜಾ ದಿನಗಳು ಮುಗ್ಗಿದು ಶಾಲೆ ಪ್ರಾರಂಭವಾಗುವ ದಿನ ಬಾಲಕ ಬೇಗ ಚೇತರಿಸಿಕೊಳ್ಳಲ್ಲಿ‌ ಅಂತಾ ಹೆತ್ತವರು ನೆರೆ ಹೊರೆಯರ ಮಾತು‌ಕೇಳಿ ದೇವದುರ್ಗ ತಾಲೂಕಿನ ಚೀಚೊಂಡಿ ಗ್ರಾಮದ ಪರಮಣ್ಣ ಬನಗುಂಡಿ ಎಂಬ ನಾಟಿ ವ್ಯದ್ಯನ‌ ಹತ್ತಿರ ಕರೆದುಕೊಂಡು ಹೊಗುತ್ತಾರೆ.
ಅಲ್ಲಿ ಕಾದಿತ್ತು ನೋಡಿ ಗಂಡಾತಂರ.

ಈ ಹುಡುಗನ‌ ಬಾಳಿನಲ್ಲಿ ಎಲ್ಲಿ ಅಡಗಿ ಕುತ್ತಿದನೋ ಈ ನಾಟಿ‌ ವ್ಯದ್ಯ ಪರಮಣ್ಣ .ಬ್ರಹ್ಮ‌ಬರೆದ ವಿಧಿಯನ್ನೆ ಬದಲಾಯಿಸಬಿಟ್ಟ .ಅದು ಯಾವ ವಿಶ್ವ ವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದನೋ ಗೊತ್ತಿಲ್ಲ ಯಾವ ಫಾರಿನ ಟ್ರಿಟ್ಮೆಂಟ್ ಕೊಟ್ಟನೋ ಎನ್ನೋ…ಡಾಕ್ಟರ್ ಹಾಕ್ಕಿದ ಪ್ಲಾಸ್ಟರ್ ಬಿಚ್ಚಿ ಅವನ ನಾಟಿ‌ ಔಷಧಿ ಯನ್ನು ಹಾಕ್ಕಿ ಬೀಗಿಯಾಗಿ ಎಳೆದು ಕಟ್ಟಿದ್ದಾನೆ . 8 ವರ್ಷದ ಎಳೆಯ‌ ಕೈ ಗಳು‌ ಮರುದಿನವೇ ಅಡ್ಡ ಪರಿಣಾಮ ಬೀರಿ‌ ಏಕಾಏಕಿ ಕೈ ಗಳು ಬಾವು,ನೊವು ಕಾಣಿಸಿಕೊಂಡಿದೆ.ಹೆತ್ತವರಿಗೆ ಭಯ ಉಟಾಂಗಿ ನಾಟಿ ವ್ಯದ್ಯನನ್ನು ಸಂಪರ್ಕಿಸಿದ್ದಾರೆ.ನಾಟಿ ವೈದ್ಯ ನಾಟಿ ನಾಟಿಯಾಗಿ ಉತ್ತರಿಸಿದ್ದಾನೆ. ಯಾವುದೇ ಕಾರಣಕ್ಕು 21 ದಿನಗಳವರೆಗೆ ಬಿಚ್ಚಬೇಡಿ ಎಂದಿದ್ದಾನೆ‌.ಆದ್ದರೆ ಮಗುವಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದೆ. ಇದನ್ನು ಕಂಡ ಹೆತ್ತವರು ಡಾ,ಹರ್ಷವರ್ಧನ ಹತ್ತಿರ ಕರೆದುಕೊಂಡು ಹೊಗಿದ್ದಾರೆ .ಅಲ್ಲಿ ಕಾದಿತ್ತು‌ ನೋಡಿ ನಾಟಿ ವ್ಯದ್ಯ ನ ತರಲೆ ಚಿಕಿತ್ಸೆ. ನಾಟಿ ವ್ಯದ್ಯ ನ‌ ಪಟ್ಟಿಯನ್ನು ಬಿಚ್ಚಿ ನೋಡಿದ ಡಾ,ಹರ್ಷವರ್ಧನಗೆ ಆ ದೃಶ್ಯವನ್ನು ಕಂಡು ಒಂದು ಕ್ಷಣ ಸಿಡಿಲು ಬಡ್ಡಿದಂತಾಗಿದೆ .ಯಾಕಂದ್ರೆ ಕೈ ಗಳು ರಕ್ತ ಚಲನೆ ಇಲ್ಲದೆ ಕಪ್ಪು ಬಣ್ಣಕ್ಕೆ ತಿರುಗಿ ಕೈ ನರಗಳು ಸತ್ತು ಹೋಗಿವೆ.ಇದರಿಂದ ಭಯ ಭಿತ್ತರಾಗಿ ಬಾಲಕನನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಹಾರಾಷ್ಟ್ರ ದ ಮೀರಜ್ ಜೆ.ಎಸ್ ಕೆ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೊಗಿದ್ದಾರೆ.

ಖಾಸಗಿ ಆಸ್ಪತ್ರೆ ಯಲ್ಲಿ ವೈದ್ಯರು ಹೇಳಿದಂತೆ ನಾಟಿ ಔಷಧಿಯ ಅಡ್ಡಪರಿಣಾಮದಿಂದ ಮಗುವಿನ ನರಗಳು ಸತ್ತುಹೊಗಿದೆ.ಹೀಗೆ ಬಿಟ್ಟರೆ ದೇಹದಲ್ಲಿ ಹರಡಿಕೊಳ್ಳುತದೆ.ಇದರಿಂದ ಮಗುವಿನ‌ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ.ಕೈ ಬೇಕು ಅಂದ್ರೆ ಪ್ರಾಣ ಇರಲ್ಲ ಪ್ರಾಣ ಬೇಕು ಅಂದ್ರೆ ಕೈ ಕತ್ತರಿಸಲೆಬೇಕು ಎಂದಾಗ ಅನಿವಾರ್ಯವಾಗಿ ಮಗುವಿನ ಮೋಣ ಕೈ ಕೆಳಗೆ ಕತ್ತರಿಸಲಾಗುತ್ತದೆ.ಮೋದಲೆ ಬಡ ಕುಟುಂಬ ಸುಮಾರ ಎರಡು ಲಕ್ಷ ಕಳೆದುಕೊಂಡು ಸಾಲಗಾರರಾಗಿ ತಿರುಗುತ್ತಿದ್ದಾರೆ.ಇತ್ತಕಡೆ ಜಾಲಹಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾದರು ಪ್ರಯೋಜನವಾಗಿಲ್ಲ. ವೈದ್ಯನಿಂದ ಯಾವುದೇ ಸಹಾಯವು ಇಲ್ಲ. ಘಟನೆ ನಡೆದ ದಿನದಿಂದ ನಾಟಿ ವ್ಯದ್ಯ ಪರಾರಿಯಾಗ್ಗಿದಾನೆ .ಇನ್ನು ಮಗನ ಚಿಕಿತ್ಸೆಗಾಗಿ ಹೆತ್ತವರು ಕಂಡ ಕಂಡವರ ಹತ್ತಿರ ಕೈ ಚಾಚಿದ್ದಾರೆ. ಸಾಲಕ್ಕಾಗಿ ಮೋರೆ ಹೋಗಿದ್ದಾರೆ.
ಇಂತಹ ನಾಟಿ ವ್ಯದ್ಯರಿಂದ ಅದೆಷ್ಟೋ ಬಡ ಕುಟುಂಬಗಳು ಮೋಸಹೋಗಿದ್ದಾರೆ.ಮುಗ್ದಜನರನ್ನು ಮೋಸ ಮಾಡುವ ಇಂತಹ ವ್ಯದ್ಯರನ್ನು ಬಿಟ್ಟು ಇಗಲಾದರು ಎಚ್ಚರಿಕೆಯಿಂದ ಇರಿ.

ಪತ್ರಕರ್ತ
ರಾಯಚೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬ್ಯಾಂಕ್ ದರೋಡೆ ಹೆಚ್ಚಳ ; ಭದ್ರತಾ ಮಾನದಂಡಗಳನ್ನು ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಎಸ್ಪಿ ಉಮಾ ಪ್ರಶಾಂತ್ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್‍ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್‍ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್‍ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು.

ಬ್ಯಾಂಕ್‍ನ ಒಳಗೆ ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್‍ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೋಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್‍ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್‍ಗಳಿಗೆ ಪ್ರತಿದಿನ ಬೀಟ್ ಪೋಲೀಸರು ಭೇಟಿ ನೀಡುವ ಬಗ್ಗೆ ಇ-ಬೀಟ್ ವ್ಯವಸ್ಥೆ ಮಾಡುವುದು. ಪ್ರತಿ ಬೀಟ್ ಸಿಬ್ಬಂದಿಗಳು ಭೇಟಿ ನೀಡುತ್ತಿರುವ ಬಗ್ಗೆ ರಾತ್ರಿ ಗಸ್ತಿನ ಉಸ್ತುವಾರಿ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದರು.

ಜಿಲ್ಲಾ ಕಂಟ್ರೋಲ್ ರೂಂನವರು ಪ್ರತಿದಿನ ಬ್ಯಾಂಕ್‍ಗಳಿಗೆ ಬೀಟ್ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತಿನ ಅಧಿಕಾರಿಗಳು ಭೇಟಿ ನೀಡುತ್ತಿರುವ ಬಗ್ಗೆ ಕಡ್ಡಾಯವಾಗಿ ಮಾಹಿತಿ ಪಡೆದು ನಮೂದು ಮಾಡುವುದು. ಹೊರವಲಯಗಳಲ್ಲಿರುವ ಬ್ಯಾಂಕ್‍ಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ಠಾಣಾ ವ್ಯಾಪ್ತಿಯ ಪಿಐ ಮತ್ತು ಪಿಎಸ್‍ಐ ರವರು ಸೆಕ್ಯೂರಿಟಿ ಆಡಿಟ್ ವರದಿಯನ್ನು ಕಡ್ಡಾಯವಾಗಿ ಪಡೆದು ಜಿಲ್ಲಾ ಪೆÇಲೀಸ್ ಕಚೇರಿಗೆ ಕಳುಹಿಸಿಕೊಡಬೇಕು. ಬ್ಯಾಂಕುಗಳ ಒಳಭಾಗ ಮತ್ತು ಹೊರಭಾಗದಲ್ಲಿ, ಎಟಿಎಂ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮೋಷನ್ ಸಿಸಿ ಟಿವಿಗಳನ್ನು ಅಳವಡಿಸಿ ಈ ಛಾಯಾಚಿತ್ರ ಮತ್ತು ರೆಕಾಡಿರ್ಂಗ್‍ನ್ನು ಡ್ರೈವ್‍ನಲ್ಲಿ ಸೇವ್ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಹಾಪೌರರಾದ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪ ಪೊಲೀಸ್ ಅಧೀಕ್ಷಕರಾದ ಮಂಜುನಾಥ್, ಎಎಸ್‍ಪಿ ಸ್ಯಾಮ್ ವರ್ಗೀಸ್ ಮತ್ತು ವಿವಿಧ ಬ್ಯಾಂಕ್‍ಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ

Published

on

ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವಜನತೆ ಮೊಬೈಲ್ ಬಳಸುವುದರಿಂದ ಆಗುವ ಅನಾನುಕೂಲಗಳು ಮತ್ತು ಹಿಂದಿನ ಯುವಜನತೆ ಅದನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದರ ಮುಖಾಂತರ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದ ಅವರು, ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಗೆ ಸಭೆಯಲ್ಲಿ ಮನವರಿಕೆ ಮಾಡಿದರು.

ಈ ಕಾರ್ಯಕ್ರಮದ ಮತ್ತೊಬ್ಬ ಅತಿಥಿಗಳಾದ ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಸಿಓಓ ಎಸ್. ಪಂಚಾಕ್ಷರಿ ಮಾತನಾಡಿ, ಬಿ.ಎಸ್.ಎಸ್ ಸಂಸ್ಥೆಯು ತನ್ನ ಸಿಎಸ್ಆರ್ ಇಂಟಿಗ್ರೇಟಡ್ ಅಡಿಯಲ್ಲಿ ಆರೋಗ್ಯ, ಶಿಕ್ಷಣ, ಹೈನುಗಾರಿಕೆಗಳಲ್ಲಿ ಸಮಾಜಸೇವಾ ಕಾರ್ಯ ಮಾಡುತ್ತಿದ್ದು, ಅಗತ್ಯ ಪೂರಕ ವಸ್ತುಗಳ ವಿತರಣೆ ಮತ್ತು ಸಹಾಯ ಹಸ್ತದ ನೆರವು ನೀಡಲಾಗುತ್ತಿದೆ. ಸಮಜಾಮುಖಿ ಕೆಲಸಗಳಲ್ಲಿ ಒಂದಾದ ವಿದ್ಯಾರ್ಥಿ ವೇತನ ವಿತರಣೆ ಮುಖೇನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡಲಾಗುತ್ತಿದೆ ಎಂದರು.

ಮಹಿಳೆಯರು ಅವಶ್ಯಕತೆಗೆ ತಕ್ಕಷ್ಟು ಸಾಲವನ್ನು ಪಡೆದು ಮರುಪಾವತಿ ಶಿಸ್ತನ್ನು ಕಾಪಾಡಿಕೊಳ್ಳಬೇಕು ಮತ್ತು ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಕೇವಲ ಸಾಲ ಸೌಲಭ್ಯವನ್ನು ಮಾತ್ರವಲ್ಲದೆ ಸಂಸ್ಥೆಯು ಎಲ್ಲಾ ಕಡೆಗೂ ಸಮಾಜಮುಖಿ ಕಾರ್ಯಗಳಾದ ಶಾಲಾ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರವಾಹ ಪರಿಸ್ಥಿತಿಗಳು, ಬರಗಾಲ ಪರಿಸ್ಥಿತಿಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ, ಪೀಟೋಪಕರಣಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ನೀಡಲು ಕಂಪ್ಯೂಟರ್ ಒದಗಿಸುವುದು ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬಿಎಸ್ಎಸ್ ಸಂಸ್ಥೆಯ ಸಿಇಓ ಕುಮಾರ್, ಸಿಫ್ ಓ ಸುರತ್ ಬಚ್ಚು, ರಘು ಎನ್.ಸಿ., ಕೆ. ಸಿದ್ದು, ತಿಮ್ಮಾರಾಯಸ್ವಾಮಿ, ಎಸ್. ಗಿರೀಶ್, ಪಂಡಿತ್, ದೇವರಾಜ್ ಎಸ್., ಸತೀಶ ಡಿ.ಎಸ್., ಕಿರಣ್, ಪ್ರಶಾಂತ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

Published

on

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.

ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ.‌ ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.

ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.

ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.

ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.

ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.

ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ‌ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್‌ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ಬ್ಯಾಂಕ್ ದರೋಡೆ ಹೆಚ್ಚಳ ; ಭದ್ರತಾ ಮಾನದಂಡಗಳನ್ನು ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಎಸ್ಪಿ ಉಮಾ ಪ್ರಶಾಂತ್ ಸೂಚನೆ

ಸುದ್ದಿದಿನ,ದಾವಣಗೆರೆ:ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು....

ದಿನದ ಸುದ್ದಿ2 days ago

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್...

ಅಂತರಂಗ2 days ago

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ...

ದಿನದ ಸುದ್ದಿ1 week ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ1 week ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ2 weeks ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ2 weeks ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ2 weeks ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ3 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ3 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

Trending