ದಿನದ ಸುದ್ದಿ
ಬಹುಮುಖ ಪ್ರತಿಭೆ ದ್ವಾರಕೇಶ್ ; ಬದುಕಿನ ಪಯಣ
![](https://suddidina.com/wp-content/uploads/2024/06/Dwarakish_Indian_actor_suddidina.jpg)
- ಹೆಚ್.ವಿ. ಮಂಜುನಾಥಸ್ವಾಮಿ
ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆಯ ಪ್ರತಿಭೆ, ಜನಪ್ರಿಯ ವ್ಯಕ್ತಿ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಎಂದೆ ಪ್ರಖ್ಯಾತರಾದ ದ್ವಾರಕೀಶ್ ಇಹಲೋಕ ತ್ಯಜಿಸಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಶ್ರೀಯುತ ದ್ವಾರಕೇಶ್ ರವರ ಬದುಕಿನ ಪಯಣವನ್ನು ಸಂಕ್ಷಿಪ್ತವಾಗಿ ಮೇಲುಕು ಹಾಕಿ ನೋಡೋಣ.
1942 ಆಗಸ್ಟ್ 19 ರಂದು ಜನಿಸಿದ ಇವರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದಂತಹ ಅಪರೂಪದ ನಟ. ಡಾ. ರಾಜಕುಮಾರ್, ವಿಷ್ಣುವರ್ಧನ್, ಶಂಕರನಾಗ್, ರಜನಿಕಾಂತ್, ಶ್ರೀನಾಥ್, ಅಂಬರೀಶ್, ಟೈಗರ್ ಪ್ರಭಾಕರ್ ರವರಂತಹ ಮೇರು ನಟರೊಂದಿಗೆ ನಟಿಸಿದ ಮೇಧಾವಿ. ಅವರು ಹೆಸರು ಮಾಡಿದ ಚಿತ್ರಗಳೆಂದರೆ ಮೇಯರ್ ಮುತ್ತಣ್ಣ, ಕುಳ್ಳ ಏಜೆಂಟ್ 000, ಭಕ್ತ ಕುಂಬಾರ, ಭಾಗ್ಯವಂತರು, ಗುರು ಶಿಷ್ಯರು, ಆಪ್ತಮಿತ್ರ, ದೇವರ ದುಡ್ಡು, ಅವರದೇ ಆದ ವಿಶೇಷ ಶೈಲಿಯಿಂದ ಒಬ್ಬ ಹಾಸ್ಯ ನಟರಾಗಿ, ನಂತರ ನಟರಾಗಿ, ಪೋಷಕ ನಟರಾಗಿ, ಸುಮಾರು ಐವತ್ತು ದಶಕಗಳಕಾಲ ಅಭಿನಯಿಸಿ, ನಿರ್ದೇಶಕ, ನಿರ್ಮಾಪಕರಾಗಿ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿದ್ದಾರೆ.
ಹೀಗೆ 300 ಚಿತ್ರಗಳಲ್ಲಿ ನಟನೆ, 30 ಚಿತ್ರಗಳ ನಿರ್ದೇಶನ, 50 ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಚಿತ್ರರಂಗದಲ್ಲಿ ಅಪಾರ ಪ್ರೀತಿ ಹೊಂದಿದ್ದ ದ್ವಾರಕೀಶ್ ರವರು ಸದಾ ಸಿನಿಮಾ ಅಂತಲೇ ತಮ್ಮ ಜೀವನವನ್ನು ಚಿತ್ರರಂಗಕ್ಕೆ ಮುಡುಪಾಗಿಟ್ಟಿದ್ದ ಧೀಮಂತ ವ್ಯಕ್ತಿ.
ಸಿನಿಮಾ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು, ಹೊಸ ಹೊಸ ಆಲೋಚನೆಗಳೊಂದಿಗೆ ಕಠಿಣ ಸಾಹಸಕ್ಕೆ ಕೈ ಹಾಕುವ ಹುಚ್ಚಿನಲ್ಲಿ ನಿರ್ಮಿಸುವ ಕನಸು ಹೊಂದಿದ್ದ ಶ್ರೀಯುತ ದ್ವಾರಕೇಶ್ರವರು ಅನೇಕ ಹೊಸ ಪ್ರತಿಭೆ ಹೊಂದಿರುವ ನಟರನ್ನು ಚಿತ್ರರಂಗಕ್ಕೆ ಪರಿಚಯಿಸಿ, ಬೆಳೆಸಿದ್ದಾರೆ ಮತ್ತು ಮಾರ್ಗದರ್ಶಕರಾಗಿ ಪ್ರೋತ್ಸಾಹಿಸಿದ್ದಾರೆ. ಸದಾ ಹುರುಪು ಹುಮ್ಮಸ್ಸಿನಿಂದ ಇದ್ದ ಶ್ರೀ ದ್ವಾರಕೇಶ್ ರವರು ಹೆಸರಿಗೆ ಕುಳ್ಳ. ಅಷ್ಟೇ ಆದರೆ ಚಿತ್ರರಂಗ ಕ್ಷೇತ್ರದಲ್ಲಿ ಮತ್ತು ಅನುಭವದಲ್ಲಿ ಬಹಳ ಎತ್ತರಕ್ಕೆ ಬೆಳೆದಂತಹ ಮೇಧಾವಿ.
ಚಿತ್ರರಂಗದಲ್ಲಿ ಅನೇಕ ಏರು-ಇಳಿವು, ಸೋಲು-ಗೆಲುವು ಅನುಭವಿಸಿದ್ದರು ಮತ್ತೆ ಗೆದ್ದೇ ಗೆಲ್ಲುತ್ತೇನೆ ಎಂಬ ಭರವಸೆ, ಆಸೆ, ಛಲ, ನಂಬಿಕೆ ಹೊಂದಿದ ಉತ್ಸಾಹದ ಚಿಲುಮೆ ಮತ್ತು ಅದ್ಭುತ ಸಾಧನೆ ಮಾಡಿದ್ದಾರೆ. ಇದು ಸಾಮಾನ್ಯ ಸಾಧನೆಯಲ್ಲ, ಹೀಗೆ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಎಲ್ಲರ ಮನಸ್ಸಿನಲ್ಲಿ ಮಾಸದೇ ಉಳಿದಿರುವ ಜನಪ್ರಿಯ ನಟ ಕನ್ನಡದ ಕಣ್ಮಣಿ ದ್ವಾರಕೇಶ್ ರವರು ಅನೇಕರಿಗೆ ಮಾದರಿಯಾಗಿದ್ದಾರೆ.
1967 ಏಪ್ರಿಲ್ 26ರಂದು ಶ್ರೀಮತಿ ಅಂಬುಜಾ ರವರನ್ನು ಮದುವೆಯಾದರು. ಇವರಿಗೆ ಇಬ್ಬರು ಪತ್ನಿಯರು ಮೊದಲ ಪತ್ನಿ ಅಂಬುಜ ಎರಡನೇ ಪತ್ನಿ ಶೈಲಜಾ ಮೊದಲ ಪತ್ನಿ ಅಂಬುಜ ಅವರನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದರು. ಇವರಿಗೆ ಒಟ್ಟು ಐದು ಜನ ಗಂಡು ಮಕ್ಕಳು, ಇವರದು ಸುಖೀ ಕುಟುಂಬ. (ಬರಹ ಹೆಚ್.ವಿ. ಮಂಜುನಾಥಸ್ವಾಮಿ,ಮೊ.: 9844882366)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!