Connect with us

ರಾಜಕೀಯ

ಸಚಿವ ಸುರೇಶ್ ಕುಮಾರ್ ರಾಜಕೀಯ ಭವಿಷ್ಯದ ನಿರ್ಧಾರಕ್ಕಿದು ಸಕಾಲ..! : ಸಚಿವರ ಮುಂದಿರೋ ಎರಡು ದಾರಿಗಳು..!

Published

on

ಜಿ.ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಣ ಇಲಾಖೆಯ ಬಗ್ಗೆ ಆರೋಪ ಮಾಡುವುದು ಬಿಡಿ, ಕನಿಷ್ಠ ಇಲಾಖೆಯ ಬಗ್ಗೆ ಪಾಸಿಂಗ್ ಕಮೆಂಟ್ ಮಾಡಲೂ ರಾಜಕಾರಣಿಗಳು ಹೆದರುತ್ತಿದ್ದರು.‌ ಅದಕ್ಕೆ ಕಾರಣ ಗೋವಿಂದೇಗೌಡರು ಇಲಾಖೆಯಲ್ಲಿ ತಂದಿದ್ದ ಶಿಸ್ತು. ಅವತ್ತಿನಿಂದ ಇವತ್ತಿವರೆಗೆ ಶಿಕ್ಷಣ ಇಲಾಖೆಯೆಂದರೆ ಆ ಗತ್ತು, ಗೌರವ ಉಳಿಸಿಕೊಂಡು ಬಂದಿದೆ. ಎಸ್ ಸುರೇಶ್ ಕುಮಾರ್ ರವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಳಿಕ ಇಲಾಖೆ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡುವಂತಾಗಿದೆ. ಪ್ರತಿಭಟನೆಗಳು ಭುಗಿಲೇಳುತ್ತಿದೆ.

ಎಸ್ ಸುರೇಶ್ ಕುಮಾರ್ ಶಿಕ್ಷಣ ಸಚಿವರಾದ ಮೇಲೆ ವಿದ್ಯಾರ್ಥಿ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಖಾಸಾಗಿ ಶಿಕ್ಷಣ ಮಾಫಿಯಾಗೆ ಪೂರಕವಾಗಿ ಕೆಲಸ ಮಾಡುತ್ತಿರುವ ಸುರೇಶ್ ಕುಮಾರ್ ರಿಂದಾಗಿ ಇಷ್ಟೆಲ್ಲಾ ಸಮಸ್ಯೆಗಳು ಉದ್ಭವಿಸುತ್ತಿದೆ ಅನ್ನೋದಂತೂ ಸ್ಪಷ್ಟ.

ದಕ್ಷ, ಪ್ರಾಮಾಣಿಕ ಎಂಬ ವರ್ಚಸ್ಸನ್ಜು ಹೊಂದಿದ್ದ ಎಸ್ ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಾಗ ರಾಜ್ಯದ ಪ್ರಜ್ಞಾವಂತರು ಹಲವು ನಿರೀಕ್ಷೆಗಳನ್ನು ಹೊಂದಿದ್ದರು. ಅದೆಲ್ಲವನ್ನೂ ಸುರೇಶ್ ಕುಮಾರ್ ಹುಸಿ ಮಾಡಿದ್ರು. ಸುರೇಶ್ ಕುಮಾರ್ ರವರ ಸೈಟ್ ಹಗರಣ, ಮಾರುಕಟ್ಟೆ ದರ ವಂಚನೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಪ್ರಕರಣಗಳನ್ನೆಲ್ಲಾ ಜನ ಮರೆತು ಶಿಕ್ಷಣ ಸಚಿವರನ್ನಾಗಿ ಸ್ವೀಕರಿಸಿದರು. ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸುರೇಶ್ ಕುಮಾರ್ ಗೆ ಇರಬೇಕಿತ್ತು.

ಶಾಲೆಯನ್ನು ಆರಂಭಿಸಿ ಎಂದು ಮನವಿ ಕೊಟ್ಟದ್ದು ಖಾಸಗಿ ಶಾಲೆಗಳು ಮಾತ್ರ. ಸಾಮಾಜಿಕ ಜಾಲತಾಣಿಗರು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಶಾಲೆ ಆರಂಭಿಸಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಜನಾಭಿಪ್ರಾಯವನ್ನು ಈ ರೀತಿ ಒಬ್ಬ ಜನಪ್ರತಿನಿಧಿ ಕಸದ ಬುಟ್ಟಿಗೆ ಹಾಕಿದ್ದು ಇದೇ ಮೊದಲು ! ಎಲ್ಲರನ್ನೂ ದಿಕ್ಕರಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಡೊನೇಷನ್ ವಸೂಲಿಗೆ ಅವಕಾಶ ಕೊಡಲು ಶಾಲೆ ಆರಂಭಿಸಲು ತಯಾರಿಯನ್ನು ಶಿಕ್ಷಣ ಸಚಿವರು ಮಾಡುತ್ತಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸದೇ ಎಲ್ಲರನ್ನೂ ಪಾಸ್ ಮಾಡಲು ಇರೋ ಅಡ್ಡಿ ಆತಂಕಗಳೇನು ? ಎಂಬುದನ್ನು ಪ್ರಾಜ್ಞರಾದ ಸುರೇಶ್ ಕುಮಾರ್ ಜನರಿಗೆ ತಿಳಿಸಬೇಕು. ಲಕ್ಷ ಲಕ್ಷ ವಿದ್ಯಾರ್ಥಿಗಳ ಪ್ರಾಣ ಒತ್ತೆ ಇಟ್ಟು ಪರೀಕ್ಷೆ ನಡೆಸುವ ಅಗತ್ಯ ಏನು ? ವಿದ್ಯಾರ್ಥಿಗೆ ಬಂದ ಅಂಕ, ರ್ಯಾಂಕ್ ಆಧರಿಸಿ ಖಾಸಗಿ ಶಾಲೆಗಳು ಬಿಸಿನೆಸ್ ಮಾಡಬಹುದು ಎಂಬುದನ್ನು ಬಿಟ್ಟು ಬೇರೆ ಪ್ರಯೋಜನವೇನಾದ್ರೂ ಇದೆಯೇ ?

ರ್ಯಾಂಕ್ ಬಂದರೆ ಪ್ರತಿಷ್ಠಿತ ಖಾಸಗಿ ಶಾಲೆಗಳು ಉಚಿತ ಎಜುಕೇಶನ್ ಕೊಟ್ಟು ಆ ವಿದ್ಯಾರ್ಥಿಯ ಫೋಟೋ ಹಾಕಿ ತನ್ನ ಶಾಲೆಯಲ್ಲಿ ಜಾಹೀರಾತಿಗೆ ಬಳಸುತ್ತಾರೆ. ಕಡಿಮೆ ಅಂಕ ಬಂದವರು ರ‌್ಯಾಂಕ್ ಸ್ಟುಡೆಂಟ್ಸ್ ಕಲೀತಿರೋ ಶಾಲೆಯಲ್ಲಿ ಕಲಿಯಬೇಕಾದರೆ ಭಾರೀ ಮೊತ್ತದ ಡೊನೇಷನ್ ನೀಡಬೇಕು. ಇದಲ್ಲದೇ ಬೇರೆ ಯಾವ ಪ್ರಯೋಜನವೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಇಲ್ಲ. ಎಸ್ಎಸ್ಎಲ್ಸಿ ರ‌್ಯಾಂಕ್ ನೋಡಿ ಎಲ್ಲೂ ಕೆಲಸವಂತೂ ಸಿಗೋ ಅವಕಾಶವಿಲ್ಲ. ಕಾಲೇಜುಗಳಲ್ಲಿ ಸೀಟು ಪಡೆಯಲಷ್ಟೇ ಅಂಕಗಳು ಮತ್ತು ರ‌್ಯಾಂಕ್ ಗಳು ಪ್ರಯೋಜನಕಾರಿ. ಇದೊಂದು ಪಕ್ಕಾ ಖಾಸಗಿ ಶಾಲಾ ಮಾಫಿಯಾ !

ಜೂನ್ 07 ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.‌ ಶಿಕ್ಷಕರು ಮತ್ತು ಮಕ್ಕಳನ್ನು ಜೀವನ್ಮರಣ ಸ್ಥಿತಿಗೆ ತಳ್ಳುವ ಪರೀಕ್ಷೆಯನ್ನು ನಡೆಸಕೂಡದು ಎಂಬುದು ಅದ್ಯಾಪಕರ ಆಗ್ರಹ. ನೂರಾರು ಶಿಕ್ಷಕರು, ಲಕ್ಷಾಂತರ ವಿದ್ಯಾರ್ಥಿಗಳು, ಲಕ್ಷಾಂತರ ಪೋಷಕರ ಅಭಿಪ್ರಾಯವನ್ನು ಧಿಕ್ಕರಿಸಿ ಕೈಗೊಳ್ಳುವ ನಿರ್ಧಾರದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎನ್ನೋ ಅಂಗೈ ಹುಣ್ಣಿಗೆ ಕನ್ನಡಿ ಬೇಡ.

ಸಚಿವ ಸುರೇಶ್ ಕುಮಾರ್ ಜನವಿರೋಧಿ ನಿರ್ಧಾರ ವಿರೋಧಿಸಿ ಜೂನ್ 07 ರಂದು ನಡೆಯುವ ಪ್ರತಿಭಟನೆಗೆ ಪೂರಕವಾಗಿ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ಸೋಶಿಯಲ್ ಮೀಡಿಯಾ ಕ್ಯಾಂಪೇನ್ ಮಾಡಲು ನಿರ್ಧರಿಸಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಒಂದೋ ಸುರೇಶ್‌ಕುಮಾರ್ ಜನಾಭಿಪ್ರಾಯಕ್ಕೆ ಮಣಿದು ಪರೀಕ್ಷೆ ರದ್ದು, ಶಾಲೆ ಆರಂಭಗೆ ತಡೆ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದೇ ಇದ್ದರೆ ರಾಜೀನಾಮೆ ಕೊಡಬೇಕು. ಇವೆರಡೇ ದಾರಿ ಸುರೇಶ್ ಕುಮಾರ್ ಇರುವುದು !

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.

ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending