ದಿನದ ಸುದ್ದಿ
‘ಮತ ಚಲಾಯಿಸಿ ಸೆಲ್ಫಿ ಕಳುಹಿಸಿ’ : ಬಹುಮಾನ ಗೆಲ್ಲಿ..!
ಸುದ್ದಿದಿನ,ಧಾರವಾಡ: 18 ವರ್ಷ ಪೂರ್ಣಗೂಂಡ ಯವಕ, ಯುವತಿಯರು ಫಾರಂ ಇದೇ ಮೊದಲ ಬಾರಿಗೆ ಮತದಾನದ ಹಕ್ಕು ಪಡೆದಿರುವ ಅರ್ಹರು ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಿದ ನಂತರ, ನಿಮ್ಮ ಕೈ ಬೆರಳಿನ ಶಾಹಿ ಕಾಣುವ ಹಾಗೆ ಸೆಲ್ಫಿ ತೆಗೆದುಕೊಂಡು ಸ್ವೀಪ್ ಸಮಿತಿಗೆ ಕಳುಹಿಸಬೇಕು. ಜಿಲ್ಲಾಡಳಿತದಿಂದ ಅತ್ಯುತ್ತಮ ಸೆಲ್ಫಿಗೆ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ. ಬಿ.ಸಿ. ಸತೀಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವೀಪ್ ಸಮಿತಿ ಅಡಿಯಲ್ಲಿ ಆಯೋಜಿಸಿರುವ ಮತದಾರರ ಜಾಗೃತಿ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಅಂಜುಮನ್ ಮಹಾವಿದ್ಯಾಲಯದ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ, ಮಾತನಾಡಿದರು.
ಮತದಾನ ಪ್ರತಿಯೊಬ್ಬರ ಪವಿತ್ರ ಕರ್ತವ್ಯ ಮತ್ತು ಹಕ್ಕು ಆಗಿದೆ. ಪ್ರಜ್ಞಾವಂತ ಯುವಜನರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಭಾಗೀದಾರರಾಗಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಮೂಲಕ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದರು.
ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಪದವಿ ವಿದ್ಯಾಲಯದ ಚುನಾವಣಾ ಸಾಕ್ಷರತಾ ಕ್ಲಬ್ನ ರಾಯಭಾರಿ ಸಚಿನ್ ಸಾಲಿಮಠ, ಸದಸ್ಶರಾದ ರಮೇಶ ವಾಲೀಕಾರ, ಬಸವರಾಜ ನಂದಪ್ಪನವರ, ಉಮರ್ ಜಕಾತಿ, ರುದ್ರಪ್ಪ ಮರೇವಾಡ ಅವರು ಸೈಕಲ್ ಜಾಥಾ ಮೂಲಕ ಅಮ್ಮಿನ ಭಾವಿ, ಹಾರೋಬೆಳವಡಿ, ಮನಸೂರ, ಮನಗುಂಡಿ, ಕ್ಯಾರಕೊಪ್ಪ, ನುಗ್ಗಿಕೇರಿ, ಕಣವಿ ಹೊನ್ನಾಪೂರ, ಹುಬ್ಬಳ್ಳಿ ಭೈರಿದೇವರ ಕೊಪ್ಪ, ಸತ್ತೂರಗಳಲ್ಲಿ ಸಂಚರಿಸಿ ಮಾರ್ಚ್ 16 ರಂದು ಸಾಯಂಕಾಲ 4 ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣ ತಲುಪುವರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಕೆ.ಎಮ್. ಶೇಖ್, ಜೆ.ಎನ್. ನಂದನ್, ಪ್ರೊ.ಎಂ.ಎಂ. ಜವಳಿ, ಪ್ರೊ. ಆರ್.ಬಿ. ಸೋನೆಖಾನ್, ಎಂ.ಎಸ್. ಕಿಲ್ಲೇದಾರ ಹಾಗೂ ಕಿಟೆಲ್, ಅಂಜುಮನ್ ಹಾಗೂ ಸರ್ಕಾರಿ ಮಹಿಳಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ5 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

