ದಿನದ ಸುದ್ದಿ
ಫ್ಯಾಷನ್ ಪ್ರಿಯರಿಗಿದು ಸಿಹಿ ಸುದ್ದಿ..!
ಸುದ್ದಿದಿನ,ಬೆಂಗಳೂರು : ದೇಶದ ಫ್ಯಾಷನ್ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ಫ್ಯಾಷನ್ ಪ್ರಿಯರಿಗೊಂದು ಶುಭ ಸುದ್ದಿ. ತ್ವಶಿ ಸಮೂಹದ ನೂತನ ಎಕ್ಲೂಸಿವ್ ಮಳಿಗೆ ನಗರದಲ್ಲಿ ನಿನ್ನೆ ಭಾನುವಾರ ಉದ್ಘಾಟನೆಗೊಂಡಿತು.
ಕನ್ನಡ ಸಿನಿಮಾ ನಟಿ ಸುಧಾ ಬೆಳವಾಡಿ ಮತ್ತು 2016 ನೇ ಸಾಲಿನ ಮಿಸೆಸ್ ಕರ್ನಾಟಕ ಶ್ರೀಮತಿ ಶುಭಾ ಶ್ರೀರಾಮ್ ಈ ಸಂದರ್ಭದಲ್ಲಿ ಹಾಜರಿದ್ದರು. ಬೆಂಗಳೂರಿನಲ್ಲಿ ಕಾರ್ಯಾರಂಭಿಸುವುದರೊಂದಿಗೆ, ತಶ್ವಿ ಬಳಗವು ಭಾರತದ ಪ್ರಮುಖ ನಗರದಲ್ಲಿ ತನ್ನ ಛಾಪನ್ನು ಒತ್ತುತ್ತಿದೆ.ಜನಪ್ರಿಯ ಶಾಪಿಂಗ್ ತಾಣವಾಗಿರುವ 196, ಮೊದಲನೇ ಮಹಡಿ, ನ್ಯೂ ಬಿ ಎಲ್ ರೋಡ್, ಆರ್ಎಂವಿ 2 ನೇ
ಹಂತದಲ್ಲಿದೆ.
ಈ ಮಳಿಗೆಯಲ್ಲಿ ತಶ್ವಿಯ ವಿಶೇಷ ವಿನ್ಯಾಸಗಳು ಮಧ್ಯಮ ದರದಿಂದ ಆರಂಭಗೊಂಡು ವಿವಿಧ ದರದಲ್ಲಿ ಲಭ್ಯವಿದೆ. ಭಾರತೀಯತೆಯೊಂದಿಗೆ ಪಾಶ್ಚಿಮಾತ್ಯತೆಯ ಸೊಬಗು ಹೊಂದಿರುವ ವಿನ್ಯಾಸಗಳು ಇಲ್ಲಿಯ ಪ್ರಮುಖ ಆಕರ್ಷಣೆ. ತ್ವಿಶಿಯ ವಿನ್ಯಾಸಗಳು ಪ್ರತಿಯೊಬ್ಬರಿಗೂ ವಿಶೇಷ ಹಾಗು ಶ್ರೀಮಂತಿಕೆಯ ಮೆರಗು ತಂದುಕೊಡುತ್ತವೆ. ಇಲ್ಲಿ ಇಂದಿನ ಯುವ ಪೀಳಿಗೆಯ ಅಭಿರುಚಿಗೆ ತಕ್ಕುದಾದ ಆಯ್ಕೆ ಇರುವುದಲ್ಲದೆ, ಇತರ ವಯೋಮಾನದವರ
ಮನೋಭಿಲಾಷೆಗೂ ಹೊಂದುವಂತಹ ವಿನ್ಯಾಸಗಳೂ ಲಭ್ಯವಿದೆ. ಈ ಹೊಸ ಮಳಿಗೆ ವಿಶಾಲವಾಗಿದೆ.
ಆಯ್ದ, ಕೈಯಿಂದ ಮಾಡಲಾದ ಕೆಲವು ವಿನ್ಯಾಸಗಳಿಗೆ ವಿಶೇಷ ರಿಯಾಯಿತಿ ಲಭ್ಯವಿದ್ದು, ಇದು ನಿಜವಾಗಿಯೂ ಶಾಪಿಂಗ್ ಪ್ರಿಯರ ಸ್ವರ್ಗ ಎನಿಸುವುದರಲ್ಲಿ ಸಂದೇಹವಿಲ್ಲ. ಈ ಮಳಿಗೆಯಲ್ಲಿ ಸಾಂಪ್ರದಾಯಿಕ, ಭಾರತೀಯ ಮತ್ತು ಪಾಶ್ಚಾತ್ಯ ಶೈಲಿ ಸೇರಿದಂತೆ ವಿಭಿನ್ನ ವಿನ್ಯಾಸದ ಸೀರೆಗಳ ಸಂಗ್ರಹವಿದೆ. ಅಲ್ಲದೆ, ಸಾಂಪ್ರದಾಯಿಕ, ಕ್ಯಾಶುವಲ್, ಪಾರ್ಟಿ, ಹಬ್ಬಗಳಿಗೆ ಮತ್ತು ವಿವಾಹ ಸಂದರ್ಭಗಳಿಗೆ ಸರಿಹೊಂದುವ ದಿರಿಸುಗಳ ಸಂಗ್ರಹವಿದೆ.
“ಬೆಂಗಳೂರಿನಲ್ಲಿ ನಮ್ಮ ಸಮೂಹದ ಮೊದಲನೇ ಮಳಿಗೆಯನ್ನು ಬೆಂಗಳೂರಿನಲ್ಲಿ ಆರಂಭಿಸಿರುವುದು ನಮಗೆ ಅತ್ಯಂತ ಸಂತೋಷಕರ ವಿಷಯವಾಗಿದೆ. ಇದು ನಮ್ಮ ಉತ್ಪನ್ನಗಳಿಗೆ ಪ್ರಮುಖ ಮಾರುಕಟ್ಟೆ ಆಗುವುದರಲ್ಲಿ ಸಂಶಯವಿಲ್ಲ. ಬೆಂಗಳೂರಿನ ಫ್ಯಾಶನ್ ಪ್ರಿಯರಿಗೆ ಆಹ್ಲಾದಕಾರ ವಾತಾವರಣದಲ್ಲಿ ತ್ವಿಶಿಯ ವಿವಿಧ ಬ್ರಾಂಡ್ಗಳನ್ನು ಪರಿಚಯಿಸುತ್ತದೆ. ಅಷ್ಟೇ ಅಲ್ಲದೆ, ಸಾಂಪ್ರದಾಯಿಕ ಶೈಲಿಯಲ್ಲಿ ಸಮಕಾಲೀನ ವಿನ್ಯಾಸಗಳು, ಪಾಶ್ಚಿಮಾತ್ಯಮತ್ತು ವಿವಿಧ ಜೀವನಶೈಲಿಗೆ ಸಂಬಂಧಿಸಿದ ವಿವಿಧ ಆಯ್ಕೆಗಳು ಇಲ್ಲಿ ಲಭ್ಯವಿದೆ”ಎನ್ನುತ್ತಾರೆ ತ್ವಿಶಿ ಮಳಿಗೆಯ ಸಹ ಸಂಸ್ಥಾಪಕಿ ಮತ್ತು ಪಾಲುಗಾರರೂ ಆಗಿರುವ ಶಲೀನ್ ಸುಬ್ಬಯ್ಯ.
“ನಾವು ಈ ಮಳಿಗೆಯನ್ನು ಆರಂಭಿಸಲು ಉತ್ಸುಕರಾಗಿದ್ದೇವೆ. ಇಂದು ಎಲ್ಲೆಡೆಯೂ ಸ್ಪರ್ಧೆ
ಇದೆ. ತ್ವಿಶಿಯಲ್ಲಿ ನಾವು ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಉತ್ಪನ್ನಗಳನ್ನು ಪೂರೈಸುತ್ತೇವೆ. ಗ್ರಾಹಕರಿಗೆ ಉತ್ತಮ ದರ್ಜೆಯ ಉತ್ಪನ್ನಗಳ ಪೂರೈಕೆ, ಉತ್ತಮ ಸೇವೆ ಮತ್ತು ಶಾಪಿಂಗ್ಗೆ ಚೇತೋಹಾರಿ ವಾತಾವರಣವನ್ನು ಒದಗಿಸುವುದು ತ್ವಶಿಯ ಗುರಿ’ ಎನ್ನುತ್ತಾರೆ ತ್ವಿಶಿ ಮಳಿಗೆಯ ಇನ್ನೋರ್ವ ಸಹ ಸಂಸ್ಥಾಪಕಿ ಮತ್ತು ಪಾಲುಗಾರರೂ ಆಗಿರುವ ವರ್ಷಾ ವೆಂಕಟೇಶ್”.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

