ದಿನದ ಸುದ್ದಿ
ಫ್ಯಾಷನ್ ಪ್ರಿಯರಿಗಿದು ಸಿಹಿ ಸುದ್ದಿ..!
ಸುದ್ದಿದಿನ,ಬೆಂಗಳೂರು : ದೇಶದ ಫ್ಯಾಷನ್ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ಫ್ಯಾಷನ್ ಪ್ರಿಯರಿಗೊಂದು ಶುಭ ಸುದ್ದಿ. ತ್ವಶಿ ಸಮೂಹದ ನೂತನ ಎಕ್ಲೂಸಿವ್ ಮಳಿಗೆ ನಗರದಲ್ಲಿ ನಿನ್ನೆ ಭಾನುವಾರ ಉದ್ಘಾಟನೆಗೊಂಡಿತು.
ಕನ್ನಡ ಸಿನಿಮಾ ನಟಿ ಸುಧಾ ಬೆಳವಾಡಿ ಮತ್ತು 2016 ನೇ ಸಾಲಿನ ಮಿಸೆಸ್ ಕರ್ನಾಟಕ ಶ್ರೀಮತಿ ಶುಭಾ ಶ್ರೀರಾಮ್ ಈ ಸಂದರ್ಭದಲ್ಲಿ ಹಾಜರಿದ್ದರು. ಬೆಂಗಳೂರಿನಲ್ಲಿ ಕಾರ್ಯಾರಂಭಿಸುವುದರೊಂದಿಗೆ, ತಶ್ವಿ ಬಳಗವು ಭಾರತದ ಪ್ರಮುಖ ನಗರದಲ್ಲಿ ತನ್ನ ಛಾಪನ್ನು ಒತ್ತುತ್ತಿದೆ.ಜನಪ್ರಿಯ ಶಾಪಿಂಗ್ ತಾಣವಾಗಿರುವ 196, ಮೊದಲನೇ ಮಹಡಿ, ನ್ಯೂ ಬಿ ಎಲ್ ರೋಡ್, ಆರ್ಎಂವಿ 2 ನೇ
ಹಂತದಲ್ಲಿದೆ.
ಈ ಮಳಿಗೆಯಲ್ಲಿ ತಶ್ವಿಯ ವಿಶೇಷ ವಿನ್ಯಾಸಗಳು ಮಧ್ಯಮ ದರದಿಂದ ಆರಂಭಗೊಂಡು ವಿವಿಧ ದರದಲ್ಲಿ ಲಭ್ಯವಿದೆ. ಭಾರತೀಯತೆಯೊಂದಿಗೆ ಪಾಶ್ಚಿಮಾತ್ಯತೆಯ ಸೊಬಗು ಹೊಂದಿರುವ ವಿನ್ಯಾಸಗಳು ಇಲ್ಲಿಯ ಪ್ರಮುಖ ಆಕರ್ಷಣೆ. ತ್ವಿಶಿಯ ವಿನ್ಯಾಸಗಳು ಪ್ರತಿಯೊಬ್ಬರಿಗೂ ವಿಶೇಷ ಹಾಗು ಶ್ರೀಮಂತಿಕೆಯ ಮೆರಗು ತಂದುಕೊಡುತ್ತವೆ. ಇಲ್ಲಿ ಇಂದಿನ ಯುವ ಪೀಳಿಗೆಯ ಅಭಿರುಚಿಗೆ ತಕ್ಕುದಾದ ಆಯ್ಕೆ ಇರುವುದಲ್ಲದೆ, ಇತರ ವಯೋಮಾನದವರ
ಮನೋಭಿಲಾಷೆಗೂ ಹೊಂದುವಂತಹ ವಿನ್ಯಾಸಗಳೂ ಲಭ್ಯವಿದೆ. ಈ ಹೊಸ ಮಳಿಗೆ ವಿಶಾಲವಾಗಿದೆ.
ಆಯ್ದ, ಕೈಯಿಂದ ಮಾಡಲಾದ ಕೆಲವು ವಿನ್ಯಾಸಗಳಿಗೆ ವಿಶೇಷ ರಿಯಾಯಿತಿ ಲಭ್ಯವಿದ್ದು, ಇದು ನಿಜವಾಗಿಯೂ ಶಾಪಿಂಗ್ ಪ್ರಿಯರ ಸ್ವರ್ಗ ಎನಿಸುವುದರಲ್ಲಿ ಸಂದೇಹವಿಲ್ಲ. ಈ ಮಳಿಗೆಯಲ್ಲಿ ಸಾಂಪ್ರದಾಯಿಕ, ಭಾರತೀಯ ಮತ್ತು ಪಾಶ್ಚಾತ್ಯ ಶೈಲಿ ಸೇರಿದಂತೆ ವಿಭಿನ್ನ ವಿನ್ಯಾಸದ ಸೀರೆಗಳ ಸಂಗ್ರಹವಿದೆ. ಅಲ್ಲದೆ, ಸಾಂಪ್ರದಾಯಿಕ, ಕ್ಯಾಶುವಲ್, ಪಾರ್ಟಿ, ಹಬ್ಬಗಳಿಗೆ ಮತ್ತು ವಿವಾಹ ಸಂದರ್ಭಗಳಿಗೆ ಸರಿಹೊಂದುವ ದಿರಿಸುಗಳ ಸಂಗ್ರಹವಿದೆ.
“ಬೆಂಗಳೂರಿನಲ್ಲಿ ನಮ್ಮ ಸಮೂಹದ ಮೊದಲನೇ ಮಳಿಗೆಯನ್ನು ಬೆಂಗಳೂರಿನಲ್ಲಿ ಆರಂಭಿಸಿರುವುದು ನಮಗೆ ಅತ್ಯಂತ ಸಂತೋಷಕರ ವಿಷಯವಾಗಿದೆ. ಇದು ನಮ್ಮ ಉತ್ಪನ್ನಗಳಿಗೆ ಪ್ರಮುಖ ಮಾರುಕಟ್ಟೆ ಆಗುವುದರಲ್ಲಿ ಸಂಶಯವಿಲ್ಲ. ಬೆಂಗಳೂರಿನ ಫ್ಯಾಶನ್ ಪ್ರಿಯರಿಗೆ ಆಹ್ಲಾದಕಾರ ವಾತಾವರಣದಲ್ಲಿ ತ್ವಿಶಿಯ ವಿವಿಧ ಬ್ರಾಂಡ್ಗಳನ್ನು ಪರಿಚಯಿಸುತ್ತದೆ. ಅಷ್ಟೇ ಅಲ್ಲದೆ, ಸಾಂಪ್ರದಾಯಿಕ ಶೈಲಿಯಲ್ಲಿ ಸಮಕಾಲೀನ ವಿನ್ಯಾಸಗಳು, ಪಾಶ್ಚಿಮಾತ್ಯಮತ್ತು ವಿವಿಧ ಜೀವನಶೈಲಿಗೆ ಸಂಬಂಧಿಸಿದ ವಿವಿಧ ಆಯ್ಕೆಗಳು ಇಲ್ಲಿ ಲಭ್ಯವಿದೆ”ಎನ್ನುತ್ತಾರೆ ತ್ವಿಶಿ ಮಳಿಗೆಯ ಸಹ ಸಂಸ್ಥಾಪಕಿ ಮತ್ತು ಪಾಲುಗಾರರೂ ಆಗಿರುವ ಶಲೀನ್ ಸುಬ್ಬಯ್ಯ.
“ನಾವು ಈ ಮಳಿಗೆಯನ್ನು ಆರಂಭಿಸಲು ಉತ್ಸುಕರಾಗಿದ್ದೇವೆ. ಇಂದು ಎಲ್ಲೆಡೆಯೂ ಸ್ಪರ್ಧೆ
ಇದೆ. ತ್ವಿಶಿಯಲ್ಲಿ ನಾವು ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಉತ್ಪನ್ನಗಳನ್ನು ಪೂರೈಸುತ್ತೇವೆ. ಗ್ರಾಹಕರಿಗೆ ಉತ್ತಮ ದರ್ಜೆಯ ಉತ್ಪನ್ನಗಳ ಪೂರೈಕೆ, ಉತ್ತಮ ಸೇವೆ ಮತ್ತು ಶಾಪಿಂಗ್ಗೆ ಚೇತೋಹಾರಿ ವಾತಾವರಣವನ್ನು ಒದಗಿಸುವುದು ತ್ವಶಿಯ ಗುರಿ’ ಎನ್ನುತ್ತಾರೆ ತ್ವಿಶಿ ಮಳಿಗೆಯ ಇನ್ನೋರ್ವ ಸಹ ಸಂಸ್ಥಾಪಕಿ ಮತ್ತು ಪಾಲುಗಾರರೂ ಆಗಿರುವ ವರ್ಷಾ ವೆಂಕಟೇಶ್”.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ37 minutes agoಆಯುರ್ವೇದ ಆರೋಗ್ಯಕರ ಜೀವನ ಶೈಲಿ

