Connect with us

ಸಿನಿ ಸುದ್ದಿ

“ಹೋದ ಉಸಿರು”ಬಹುಭಾಷೆಯ ಕಿರುಚಿತ್ರ ನೋಡಿ,ತಬ್ಬಲಿ ಜಾತಿಯ ಅಲೆಮಾರಿಯಾದ ಚಂದ್ರು ಯಡವಲ್ ರವರ ವಿಲನ್ ಪಾತ್ರವನ್ನು ನೋಡಿ ಅಭಿನಂದಿಸಿ ಪ್ರೋತ್ಸಾಹಿಸಿ..!

Published

on

ಸಿನಿಮಾ ಅಂದರೆ ಸಾಕು ಎಲ್ಲ ಭಾಗದಿಂದಲೂ ಹೆಚ್ಚಾಗಿ ಕೇಳಿ ಬರುವ ಹೆಸರು ಬೆಂಗಳೂರು-ಮೈಸೂರಿನ ಮಂಡ್ಯ ಕಡೆಯವರು,ಬಲ್ಯಾಡರು,ದುಡ್ಡಿದ್ದ ಶ್ರೀಮಂತರೆ ಸಿನಿಮಾ ಮಾಡುತ್ತಾರೆ,ಅದರಲ್ಲೂ ಕಿರುಚಿತ್ರವೆಂದರೆ ಸಾಕು ಬೆಂಗಳೂರು-ಮೈಸೂರು,ಹುಬ್ಬಳ್ಳಿ-ಧಾರವಾಡದ ಜನತೆಯೆ ಮುಂದು ಹಾಗೂ ಪರಿಣಿತರೂ ಸಹ ಹೌದು ಎಂಬ ಭಾವನೆ ನಮ್ಮ ಭಾಗದವರ ಸರ್ವೇಸಾಮಾನ್ಯವಾದ ಮನೋಭಾವನೆ.ಆದರೆ ಇದರ ಮಧ್ಯೆಯೂ ಪಕ್ಕಾ ಅಲೆಮಾರಿಯೊಬ್ಬನ ಪ್ರತಿಭೆಯೊಂದು ಯಾವ ರಂಗಭೂಮಿಯ ತರಬೇತಿಯಿಲ್ಲದೆ

(ಒಂಥರಾ ಅಲೆಮಾರಿಗಳೆಲ್ಲ ಕಲಾವಿದರೇ)
ಇವರು ಚಿಕ್ಕಂದಿನಲ್ಲಿ ಹಗಲುವೇಷಗಾರನಾಗಿ ತಂದೆಯ ಜೊತೆ ಹಗಲುವೇಷಗಾರಿಕೆಯ ಪಾತ್ರದ ಮುಖಾಂತರ ತಮಿಳುನಾಡು,ಆಂಧ್ರಪ್ರದೇಶ,ಕರ್ನಾಟಕದ ಕೆಲವು ಭಾಗದಲ್ಲಿಯೂ ಕುಟುಂಬದ ಜೀವನೋಪಯಕ್ಕಾಗಿ ಹಿರಿಯರಿಂದ ಬಂದ ಬಳುವಳಿಯ ವೃತ್ತಿಯಾದ ವೇಷಗಾರಿಕೆಯನ್ನು ಮಾಡಿರುತ್ತಾರೆ.

ಆ ಹಗಲುವೇಷಗಾರಿಕೆ ಇಂದು ಕೈ ಹಿಡಿದಿದೆ ಅಂತಲೇ ಎನ್ನಬಹುದು ಮತ್ತು ಸರಿಯಾದ ಉನ್ನತ ವಿದ್ಯಾಭ್ಯಾಸವನ್ನು ಕಲಿಯದ ಬಡ ಅಲೆಮಾರಿ ಕುಟುಂಬದ ಹಿನ್ನೆಲೆಯಲ್ಲಿ ಬಂದಿರುವ ಹಾಗೂ *ಇಂದಿಗೂ ತನ್ನ ಬೇರೆ-ಬೇರೆ ವೃತ್ತಿ ಕಾಯಕದ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ರಾಯಚೂರು ಜಿಲ್ಲೆಯ ಮಾನ್ವಿ (ನೂತನ ಸಿರವಾರ) ತಾಲ್ಲೂಕಿನ ಕವಿತಾಳ ಎಂಬ ಪಟ್ಟಣದ ವ್ಯಕ್ತಿಯಾದ ನನ್ನ ಸಂಬಂಧಿಯಾದ(ಮಾವ),ಮಾರ್ಗದರ್ಶಿ,
ಹಿತೈಷಿ,ಅಲೆಮಾರಿಗಳ ಸಾಮಾಜಿಕ ಹೋರಾಟಗಾರ, ಅಲೆಮಾರಿಗಳ ಕಾಳಜಿಯುಳ್ಳ ಅಪ್ಪಟ ಅಲೆಮಾರಿಗಳ ಭಾವಿನಾಯಕ,ಅಲೆಮಾರಿ ಸಮಾಜದ ಹೆಮ್ಮೆಯ ಕುಡಿಯಾದ ನಮ್ಮ ನಿಮ್ಮೆಲ್ಲರ ನೆಚ್ಚಿನ ಆತ್ಮೀಯರಾದ,ಸಹೋದರ ಚಂದ್ರಶೇಖರ್ ಯಡವಲ್ ಎಂಬುವವರು ನಿಖಿತ್ ಪರಿಚಯಿಸುವ ಬಹುಭಾಷೆಯ ಕಿರುಚಿತ್ರವಾದ ಹೋದ ಉಸಿರು ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸಿ, ನಿರ್ಮಾಪಕರಾಗಿಯೂ ಕೆಲಸ ಮಾಡಿರುತ್ತಾರೆ.

ಅವರು ವಿಲನ್ ಪಾತ್ರದಲ್ಲಿ ಅಭಿನಯಿಸಿರುವ ಚೊಚ್ಚಲ(ಮೊದಲ) ಸಿನಿಮಾ “ಹೋದ ಉಸಿರು” ಕಿರುಚಿತ್ರವು ಆರ್ ಪ್ರೊಡಕ್ಷನ್ ಅರ್ಪಿಸುವ ನಿದೇರ್ಶನ,
ಛಾಯಾಗ್ರಹಣರಾದ ರಾಕೇಶ್ ಆಚಾರ್ಯರವರ ಕಥೆ-ಚಿತ್ರಕಥೆ‌:-ಸಂಪತ್ ರಾಯ್ ನೇತೃತ್ವದಲ್ಲಿ ಮೂಡಿಬಂದಿದೆ. ಇದೊಂದು ಪಕ್ಕಾ ಹಳ್ಳಿಯ ನೈಜ ಘಟನಾಧಾರಿತವಾದ ಪ್ರೀತಿಯ ಬಲೆಗೆ ಬಿದ್ದು ಪ್ರೇಮಿ ಕೊಲೆಯಾಗುವ ಕಥೆಯಾಗಿದ್ದು,ಈ ಕಿರುಚಿತ್ರವು ರಾಜ್ಯಾದ್ಯಂತ ಏಕಕಾಲಕ್ಕೆ ಬಹುಭಾಷೆಯಲ್ಲಿ ಅಂದರೆ ಐದು ಭಾಷೆಯಲ್ಲಿ
(ಕನ್ನಡ,ತೆಲುಗು,
ತಮಿಳು,ಮಲಯಾಳಂ,ಹಿಂದಿ)
Youtube ಲಿ ಬಿಡುಗಡೆಗೊಳ್ಳಲಿದೆ ಮತ್ತು
ಮುಂದುವರೆದು ಚಿತ್ರಮಂದಿರಗಳಲ್ಲಿಯೂ ಪ್ರಸಾರವಾಗುವ ಸಾಧ್ಯತೆಗಳು ಹೆಚ್ಚಾಗಿವೆ.ಆದ್ದರಿಂದ ತಾವುಗಳು ಈ ಚಿತ್ರವನ್ನು ತಮ್ಮ ಸ್ನೇಹಿತರೊಂದಿಗೆ ಮತ್ತು ಬಂದು ಬಳಗದವರ ಜೊತೆ ಹಂಚಿಕೊಂಡು ಕಿರುಚಿತ್ರವನ್ನು ನೋಡುವುದರ ಮೂಲಕ ಈ ಕಿರುಚಿತ್ರದಲ್ಲಿ ಬಹುಭಾಷೆಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡ ಈ ಭಾಗದ ಹಳ್ಳಿಯ, ಅಪ್ಪಟ್ಟ ಅಲೆಮಾರಿಯ ಯುವ ಪ್ರತಿಭೆಯಾದ ಚಂದ್ರಶೇಖರ್ ಯಡವಲ್ ಹಾಗೂ ಇನ್ನೊಬ್ಬ ನಾಯಕ-ನಟನಾದ ಸಂಪತ್ ರಾಯ್ ಇವರನ್ನು ಗುರುತಿಸಿ, ಪ್ರೋತ್ಸಾಹಿಸಿ,ಸಹಕರಿಸಿ ಆರ್ಶಿವಾದಿಸಬೇಕಾಗಿ ಸಕಲರಲ್ಲಿ ವಿನಂತಿ.

ಇನ್ನೂ ಅನೇಕ ಸಾಮಾಜಿಕ ಕಳಕಳಿಯುಳ್ಳ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ಜನಮನ್ನಣೆ ಪಡೆದು ಆದಷ್ಟು ಬೇಗನೆ ಚಿತ್ರರಂಗಕ್ಕೆ ಅಲೆಮಾರಿ ಬಂಧುವಾದ ಚಂದ್ರಶೇಖರ್ ಯಡವಲ್ ರವರು ಪಾದಾರ್ಪಣೆಯನ್ನು ಮಾಡಲೆಂದು,ಮುಂದಿನ ಚಿತ್ರರಂಗದ ಅವರ ಬದುಕು ಸುಗಮವಾಗಿ ಸಾಗಿ ಯಶಸ್ಸು ಲಭಿಸಲೆಂದೂ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

ಶಿವರಾಜ್ ಮೋತಿ ಹಟ್ಟಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending