ದಿನದ ಸುದ್ದಿ
ನೆರೆ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಗೆ ಸಲಹೆ
ಸುದ್ದಿದಿನ,ಯಾದಗಿರಿ : ಜಿಲ್ಲೆಯಲ್ಲಿ ಕಳೆದ ತಿಂಗಳು ನೆರೆ ಹಾವಳಿಯಿಂದ ಕೃಷ್ಣಾ ಮತ್ತು ಭೀಮಾ ನದಿಪಾತ್ರದ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಹಾನಿಯಾಗಿರುತ್ತದೆ. ಈ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರೈತರು ಭತ್ತದ ಗದ್ದೆಗಳಲ್ಲಿ ಪರ್ಯಾಯವಾಗಿ ಮತ್ತೆ ಭತ್ತವನ್ನು ಬೆಳೆಯಲು ಮುಂದಾದರೆ ಹತ್ತಿ ಮತ್ತು ತೊಗರಿ ಬೆಳೆಗಳು ಹಾನಿಯಾದ ಪ್ರದೇಶಗಳಲ್ಲಿ ಪರ್ಯಾಯ ಬೆಳೆ ಬೆಳೆಯುವುದು ಅನಿವಾರ್ಯವಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಕೆಂಗನಾಳ ಅವರು ಸಲಹೆ ನೀಡಿದರು.
ಶಹಾಪೂರ ತಾಲ್ಲೂಕಿನ ಕೃಷ್ಣಾ ನದಿ ಪ್ರವಾಹದಿಂದ ಬೆಳೆ ಹಾನಿಯಾಗಿರುವ ಕೊಳ್ಳೂರ ಎಂ. ಗ್ರಾಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಪರ್ಯಾಯ ಬೆಳೆಗಳ ಬೇಸಾಯ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭತ್ತ, ಹತ್ತಿ, ತೊಗರಿ ಹಾಗೂ ಮತ್ತಿತರೆ ಬೆಳೆಗಳು ಮುಳುಗಡೆಯಾದಲ್ಲಿ ಬೇರೆ ಬೆಳೆಗಳನ್ನು ಬೆಳೆಯಲು ಈಗ ಸರಿಯಾದ ಸಮಯವಾಗಿದೆ. ಅದರಲ್ಲಿ ಪ್ರಮುಖವಾಗಿ ಕಪ್ಪು ಮಣ್ಣಿನ ಭೂಮಿಗಳಲ್ಲಿ ಬಿಳಿಜೋಳ, ಕಡಲೆ, ಅಗಸಿ ಮತ್ತು ಕುಸುಬೆ ಬೆಳೆಯಲು ಸೂಕ್ತವಾಗಿದೆ. ಇದರೊಂದಿಗೆ ಹಿಂಗಾರು ಸೂರ್ಯಕಾಂತಿ ಬೆಳೆಯನ್ನೂ ಸಹ ಬೆಳೆಯಬಹುದು. ನೀರಾವರಿ ವ್ಯವಸ್ಥೆ ಇರುವ ರೈತರು ಹೈಬ್ರಿಡ್ ಜೋಳ, ಸಜ್ಜೆ, ಶೇಂಗಾ ಮತ್ತು ಸೂರ್ಯಕಾಂತಿ ಬೆಳೆ ಬೆಳೆಯಬಹುದಾಗಿದೆ ಎಂದು ತಿಳಿಸಿದರು.
ಕೆಂಪು ಭೂಮಿಯಲ್ಲಿ ಶೇಂಗಾ, ಸಜ್ಜೆ ಮತ್ತು ಗೋವಿನಜೋಳ ಬೆಳೆಯುವುದು ಒಳ್ಳೆಯದು. ರೈತರು ಕೃಷಿ ಇಲಾಖೆಯಲ್ಲಿ ಜಾರಿಯಲ್ಲಿರುವ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಲಭ್ಯವಿರುವ ಯೋಜನೆಯಲ್ಲಿ ರಿಯಾಯಿತಿ ದರದಲ್ಲಿ ಬೀಜಗಳನ್ನು ಪಡೆಯಬೇಕು. ಕೀಟ ಮತ್ತು ರೋಗಗಳ ನಿಯಂತ್ರಣಕ್ಕೆ ಜೈವಿಕ ಪೀಡೆನಾಶಕಗಳನ್ನು ಬಳಸಿ ಬೇಸಾಯದ ಖರ್ಚು ಕಡಿಮೆ ಮಾಡಿಕೊಳ್ಳಲು ಸಲಹೆ ನೀಡಿದರು.
ರೈತರು ಬೆಳೆಗಳಿಗೆ ಬಳಸುವ ಕೀಟನಾಶಕಗಳನ್ನು ಅದರಲ್ಲಿ ಪ್ರಮುಖವಾಗಿ ಹತ್ತಿ, ಭತ್ತ ಮತ್ತು ತೊಗರಿ ಬೆಳೆಯಲ್ಲಿ ಹೆಚ್ಚು ಜಾಗರೂಕವಾಗಿ ಬಳಸಬೇಕು. ಸಿಂಪರಣೆ ಮಾಡುವಾಗ ಸುರಕ್ಷಾ ಕವಚ ಅಥವಾ ಉಡುಪು ಬಳಸಿ ಸಿಂಪರಣೆ ಮಾಡಲು ಹೇಳಿದರು. ಇದರೊಂದಿಗೆ ಶಿಫಾರಿಸಿದ ಪೀಡೆನಾಶಕಗಳನ್ನು ಮಾತ್ರ ಬಳಸಲು ರೈತರಿಗೆ ಕರೆ ನೀಡಿದರು.
ತರಬೇತಿಯಲ್ಲಿ ಸುಮಾರು 60ಕ್ಕೂ ಹೆಚ್ಚು ರೈತರು ಭಾಗವಹಿಸಿ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ18 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ21 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ22 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ18 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ18 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

