Connect with us

ನೆಲದನಿ

ನೆಲದನಿ : ಜಾನಪದ ಹಾಡುಗಾರ್ತಿ ವಡ್ಡಗೆರೆ ಕದರಮ್ಮ

Published

on

ನಾಡೋಜ ಎಚ್.ಎಲ್.ನಾಗೇಗೌಡ ಜನ್ಮ ಶತಮಾನೋತ್ಸವದ ಪ್ರಯುಕ್ತ ರಾಮನಗರದ ಜಾನಪದ ಲೋಕವು, 2015ನೆ ಸಾಲಿನ ಜಾನಪದಲೋಕ ಪ್ರಶಸ್ತಿಗೆ ತುಮಕೂರು ಜಿಲ್ಲೆ ವಡ್ಡಗೆರೆ ಗ್ರಾಮದ ಜಾನಪದ ಹಾಡುಗಾರ್ತಿ ವಡ್ಡಗೆರೆ ಕದರಮ್ಮ ಅವರನ್ನು ಆಯ್ಕೆ ಮಾಡಿದೆ. ದಿನಾಂಕ 08.02.2015ರ ರವಿವಾರ ರಾಮನಗರ ಪಟ್ಟಣದ ಜಾನಪದಲೋಕದಲ್ಲಿ ನಡೆದ ಲೋಕೋತ್ಸವ-2015 ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಜಾನಪದ ಪರಂಪರೆಯಲ್ಲಿಯೇ ಕಿರೀಟ ಪ್ರಾಯವೆನ್ನಿಸಿದ ಬಂಡುಕೋರ ಆಸಾದಿ ಕಾವ್ಯವನ್ನು ಮತ್ತು ತತ್ವಪದಗಳನ್ನು ಹಾಡುತ್ತಿದ್ದ ಜಾನಪದ ಕವಿ-ಗಾಯಕರ (ತಿಮ್ಮಯ್ಯ-ಚಿಕ್ಕಮ್ಮ) ಕುಟುಂಬದಲ್ಲಿ ಹುಟ್ಟಿದ ವಡ್ಡಗೆರೆ ಕದರಮ್ಮ ಮೂಲತಃ ತುಮಕೂರು ಜಿಲ್ಲೆಯವರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು, ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಬಡ ದಲಿತ ಕುಟುಂಬದಲ್ಲಿ ಜಾನಪದ ಕವಿ-ಗಾಯಕರ ಮಗಳಾಗಿ ಹುಟ್ಟಿದ ಕದರಮ್ಮ ಹತ್ತು ವರ್ಷದ ಹುಡುಗಿಯಾಗಿರುವಾಗಲೇ, ಮೈನೆರೆಯುವ ಮುಂಚೆಯೇ ಬಾಲ್ಯವಿವಾಹವಾಗಿ, ಇದೇ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಮೇಲ್ಜಾತಿ ಭೂಮಾಲಕರ ಮನೆಯಲ್ಲಿಜೀತಗಾರನಾಗಿದ್ದ ಹನುಮಂತಯ್ಯ ಎಂಬ ಯುವಕನ ಕೈಹಿಡಿದು ವಡ್ಡಗೆರೆ ಗ್ರಾಮಕ್ಕೆ ಬಂದಾಗ ಕದರಮ್ಮನಲ್ಲಿದ್ದ ಜಾನಪದ ಪ್ರತಿಭೆಯನ್ನು ಗುರುತಿಸಿ ಪೋಷಿಸಿದ್ದು ಆಕೆಯ ಅತ್ತೆ ಸಣ್ಣಹನುಮಕ್ಕಜ್ಜಿ. ಸ್ವತಃ ಜಾನಪದ ಕವಯಿತ್ರಿ-ಗಾಯಕಿ-ಕಲಾವಿದೆಯಾಗಿದ್ದ ಸಣ್ಣಹನುಮಕಜ್ಜ್ಕಿ, ಕದರಮ್ಮನಿಗೆ ವ್ಯವಸಾಯದ ಕೆಲಸಗಳೊಂದಿಗೆ ನೂರಾರು ಜಾನಪದ ಹಾಡು, ಕಥೆ, ಪುರಾಣ, ಒಗಟು, ಲಾವಣಿ, ಸಾಂಪ್ರದಾಯಿಕ ಆಚರಣೆಗಳು ಮುಂತಾದವುಗಳನ್ನು ಕಲಿಸಿಕೊಟ್ಟರು. ಸಣ್ಣಹನುಮಕ್ಕಜ್ಜಿಯ ವಾರಿಗೆಯ ದಲಿತ ಜಾನಪದ ಗಾಯಕಿಯರಾಗಿದ್ದ ದಿ.ನರಸಕ್ಕಜ್ಜಿ, ದಿ.ಬುಡ್ಡಗದರಮ್ಮಜ್ಜಿ, ದಿ.ನಾಗಮ್ಮಜ್ಜಿ, ದಿ.ಕೆಂಪನಾಗಮ್ಮಜ್ಜಿ ಮುಂತಾದವರು ವಡ್ಡಗೆರೆ ನಾಗಮ್ಮನ ಕಾವ್ಯವನ್ನು ಹಾಡುವುದರಲ್ಲಿ ತುಂಬಾ ಹೆಸರುವಾಸಿಯಾಗಿದ್ದರು. ಅವರೆಲ್ಲರ ನೆರವಿನಿಂದ ವಡ್ಡಗೆರೆ ಕದರಮ್ಮ, ವಡ್ಡಗೆರೆ ನಾಗಮ್ಮನ ಕಾವ್ಯವನ್ನು ಸಲಿಲವಾಗಿ ಹಾಡುವುದನ್ನು ರೂಢಿಸಿಕೊಂಡರು. ವಡ್ಡಗೆರೆಯ ಗ್ರಾಮದೇವತೆ ವಡ್ಡಗೆರೆ ನಾಗಮ್ಮ.

ವಚನಕಾರ ಬಸವಣ್ಣನನ್ನು ಕುರಿತು ಅಮ್ಮ ವಡ್ಡಗೆರೆ ಕದರಮ್ಮ ಮತ್ತು ಅಕ್ಕನಾದ ವಡ್ಡಗೆರೆ ಮುದ್ದುನಾಗಮ್ಮ ಹಾಡಿರುವ ಜಾನಪದ ಗೀತೆ

ನಾಗಮ್ಮನ ಜೀವನದ ವೃತ್ತಾಂತವನ್ನು ಸಾರುವ ಈ ಕಾವ್ಯವು ಸುಮಾರು ಒಂಭೈನೂರು ವರ್ಷಗಳ ಪುರಾತನ ಚರಿತ್ರೆಯನ್ನು ಗರ್ಭೀಕರಿಸಿಕೊಂಡಿದೆ.ನಾಗಮ್ಮ ಎಂಬ ಏಳು ವರ್ಷದ ಎಳೆಪ್ರಾಯದ ಹೆಣ್ಣುಮಗಳೊಬ್ಬಳು ಮೈನೆರೆಯುವ ಮೊದಲೇ ವಡ್ಡಗೆರೆಯ ಸಿರಿವಂತರ ಮಗ ನಾಗಣ್ಣನನ್ನುಬಾಲ್ಯವಿವಾಹ ಮಾಡಿಕೊಂಡು ವಡ್ಡಗೆರೆಗೆ ಬಂದ. ಕೆಲ ದಿನಗಳಲ್ಲಿಯೇ ನಾಗಣ್ಣ ಯುದ್ಧಕ್ಕೆ ಹೋಗಿ ರಣರಂಗದಲ್ಲಿ ವೀರಮರಣವನ್ನಪ್ಪುತ್ತಾನೆ. ಬಾಲ ವಿಧವೆಯಾದ ನಾಗಮ್ಮ ತನ್ನ ಸತ್ತ ಗಂಡನೊಂದಿಗೆ ಚಿತೆಯೇರಿ ಪ್ರಾಣಾರ್ಪಣೆ ಮಾಡಿಕೊಂಡು ಮಹಾಸತಿ ವೀರನಾಗಮ್ಮ ಎಂದು ಕರೆಸಿಕೊಳ್ಳುತ್ತಾಳೆ. ಮಹಾಸತಿ ನಾಗಮ್ಮನ ಬದುಕಿನ ದುರಂತಮಯ ಮತ್ತು ಕರುಣಾಜನಕ ಕಥಾನಕವು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಜನಪದ ದಲಿತ ಕವಯಿತ್ರಿಯರ ನಾಲಗೆ ಮೇಲೆ ಜಾನಪದ ಕಾವ್ಯವಾಗಿ ಓನಾಮ ಮಂತ್ರದಂತೆ ನೆಲೆಸುತ್ತದೆ. ಮಹಾಸತಿ ವೀರನಾಗಮ್ಮ ವಡ್ಡಗೆರೆಯ ಗ್ರಾಮದೇವತೆಯಾಗಿ ನೆಲೆಸುವ ಮೂಲಕ ಅನೇಕ ಪವಾಡಗಳನ್ನು ಮೆರೆಯುತ್ತಾಳೆ. ಸುಮಾರು ಒಂದು ಸಾವಿರ ವರ್ಷಗಳಷ್ಟು ಪುರಾತನವಾಗಿರುವ ವಡ್ಡಗೆರೆ ನಾಗಮ್ಮನ ಕಾವ್ಯವು ಆದಿಮ ಅಚ್ಚಗನ್ನಡ ಭಾಷಾಸೌಷ್ಠವತೆಯಲ್ಲಿ ಕರ್ನಾಟಕದ ತುಮಕೂರು ಜಿಲ್ಲೆ, ಚಿತ್ರದುರ್ಗ ಜಿಲ್ಲೆ, ನೆಲಮಂಗಲ ಸೀಮೆ, ದೊಡ್ಡಬಳ್ಳಾಪುರ ಸೀಮೆ, ಆಂದ್ರಪ್ರದೇಶದ ಅನಂತಪುರ ಜಿಲ್ಲೆ, ತಮಿಳುನಾಡಿನ ಕೊಯಮತ್ತೂರು ಸೀಮೆ ಮುಂತಾದ ಪ್ರದೇಶಗಳಲ್ಲಿ ಇಂದಿಗೂ ನರದ ರಕ್ತದಂತೆ ಜನಪದ ಕವಿಗಳ ನಾಲಗೆ ಮೇಲೆ ಹರಿದಾಡುತ್ತಿದೆ. ಕುಂಚಿಟಿಗ ಜನಾಂಗದ ಕುಲಚರಿತ್ರೆಯನ್ನು ಸಾರುವ ವಡ್ಡಗೆರೆ ನಾಗಮ್ಮನ ಕಾವ್ಯವನ್ನು ವಡ್ಡಗೆರೆಯ ಜನಪದ ದಲಿತ ಕವಯಿತ್ರಿಯರು ಹರಕೆ ಹೊತ್ತ ಭಕ್ತರ ಮನೆಗಳಿಗೆ ಹೋಗಿ ಹಾಡಿಬರುವ ಕಾಯಕವನ್ನು ನೂರಾರು ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದ್ದಾರೆ.

ಈ ಕವಿ-ಗಾಯಕರ ಪೈಕಿ ವಡ್ಡಗೆರೆ ಕದರಮ್ಮನವರಿಗೆ ಪ್ರಧಾನ ಸ್ಥಾನವಿದೆ.ಜಾನಪದ ಕುರಿತ ಇವರ ಅರಿವು ಮತ್ತು ಅಮೂಲ್ಯ ಮಾಹಿತಿಗಳನ್ನು ನಾಡಿನ ಅನೇಕ ಸಂಶೋಧಕರು ತಮ್ಮ ಗ್ರಂಥಗಳಲ್ಲಿ ಬಳಸಿಕೊಂಡಿದ್ದಾರೆ. ಅನೇಕ ಸಂಶೋಧಕರು ಪಿಎಚ್ಡಿ ಪದವಿಗಳನ್ನೂ ಪಡೆದುಕೊಂಡಿದ್ದಾರೆ. ಅಂತಹ ಕೆಲವು ಗ್ರಂಥಗಳಲ್ಲಿ ವಡ್ಡಗೆರೆ ಗ್ರಾಮದ ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ಡಿ.ವೀರಕ್ಯಾತಯ್ಯ ಬರೆದಿರುವ ಕುಂಚಿಟಿಗರ ಜನಾಂಗ, ಇತಿಹಾಸ ಹಾಗೂ ಸಂಪ್ರದಾಯಗಳು(1994), ಎಂ.ವೀರಕ್ಯಾತಯ್ಯ ಬರೆದಿರುವ ವಿಜಯೀ ವೀರಕೇತುರಾಯ (ನಾಟಕ 1999), ಎಂ.ಹೆಚ್. ನಾಗರಾಜು ಅವರ ಸಂಶೋಧನಾ ಕೃತಿ ಕುಂಚಿಟಿಗರ ಸಾಂಸ್ಕೃತಿಕ ಇತಿಹಾಸ(2003), ಡಾ.ರಾಜಣ್ಣ ಹುಣಿಸೇಪಾಳ್ಯ ಅವರಮಹಾಸತಿ ಶಿವಶರಣೆ ವೀರನಾಗಮ್ಮದೇವಿ(1996), ಡಾ.ಓ.ನಾಗರಾಜು ಅವರ ಪಿಎಚ್.ಡಿ ಸಂಶೋಧನಾ ಪ್ರಬಂಧ ತುಮಕೂರು ಜಿಲ್ಲೆಯ ಗ್ರಾಮದೇವತೆಗಳು: ಒಂದು ಅಧ್ಯಯನ(2007) ಹಾಗೂ ವಡ್ಡಗೆರೆ ನಾಗರಾಜಯ್ಯ ಸಂಪಾದಿಸಿರುವ ವಡ್ಡಗೆರೆ ನಾಗಮ್ಮ: ಮಹಾಸತಿ ಕಾವ್ಯ(2010) ಮುಂತಾದ ಕೃತಿಗಳು ಪ್ರಮುಖವಾಗಿವೆ. ವಡ್ಡಗೆರೆನಾಗಮ್ಮ: ಮಹಾಸತಿ ಕಾವ್ಯವನ್ನು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು 2015-16ನೆ ಇಸವಿಯಿಂದ ಜಾರಿಗೆ ಬರುವಂತೆ ಅಂತಿಮ ವರ್ಷದಲ್ಲಿ ಎಂ.ಎ ಪದವಿ ವ್ಯಾಸಂಗಮಾಡುತ್ತಿರುವ ಕನ್ನಡ ಸಾಹಿತ್ಯದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನಾಗಿ ಅಂಗೀಕರಿಸಿದೆ. ಇದರ ಜೊತೆಗೆ ವಡ್ಡಗೆರೆ ಕದರಮ್ಮ ಅವರು ರಿಯಲ್ ಚಾಲೆಂಜರ್ಸ್ ಟೀಮ್ಗಾಗಿ ಈಶ್ವರ್ ಗುಬ್ಬಿ ನಿರ್ದೇಶಿಸಿ, ಶ್ರೀ ರಾಘವ್ ನಿರ್ಮಿಸಿರುವ ‘‘ಮುಗ್ಧ’’ ಸಾಕ್ಷಚಿತ್ರದಲ್ಲಿ ಮುಗ್ದ ಯುವಕನೊಬ್ಬನ ತಾಯಿಯ ಪಾತ್ರದಲ್ಲಿಯೂ ಅಭಿನಯಿಸಿದ್ದಾರೆ. ತುಮಕೂರು ಜಿಲ್ಲೆಯ ದಲಿತ ಕವಿ-ಚಿಂತಕ ಹಾಗೂ ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯರಾಗಿರುವ ವಡ್ಡಗೆರೆ ನಾಗರಾಜಯ್ಯ ಇದೇ ಕದರಮ್ಮನವರ ಮಗನಾಗಿ ನಾಡಿನಲ್ಲಿ ಹೆಸರಾಗಿದ್ದಾರೆ. ಪ್ರಸ್ತುತ ಜಾನಪದ ಗಾಯಕಿಯರಾದ ವಡ್ಡಗೆರೆ ಕದರಮ್ಮ(75) ಹಾಗೂ ವಡ್ಡಗೆರೆ ಮುದ್ದನಾಗಮ್ಮ(72) ಈ ಕಥಾಕಾವ್ಯವನ್ನು ಮೂಲಧಾಟಿಯಲ್ಲಿ ನಿರೂಪಿಸುವ ಅಸಲಿ ಕವಯಿತ್ರಿ-ಕಲಾವಿದರಾಗಿದ್ದಾರೆ. ವಡ್ಡಗೆರೆ ನಾಗಮ್ಮನ ಪದಗಳು, ಗಂಗೆ-ಗೌರಿ ಕಾವ್ಯ, ಬಿಲ್ಲಾಳರಾಯ-ಗೊಲ್ಲಾಳರಾಯನ ಪದ, ಬೆಟ್ಟದಮದ್ದೆಮ್ಮನ ಪದ, ಗುಣಸಾಗರಿ ಕಾವ್ಯ, ಕರಿಭಂಟನ ಪದ, ತತ್ವಪದ, ಆಂಜನೇಯನ ಪದ, ಚಂದ್ರಮನ ಪದ, ಜಾಂಬವರ ಪದ, ಮಾರಮ್ಮನ ಪದ, ಕರಿಯಮ್ಮನ ಪದ, ಆದಿಜಾಂಬವ ಪುರಾಣ, ಹೊಸಗೆ ಪದ, ಮದುವೆ-ಸೋಬಾನೆ ಪದಗಳು, ಹಸೆ ಪದಗಳು, ಸುಗ್ಗಿ ಪದಗಳು, ಲಾಲಿ ಹಾಡುಗಳು, ಗಂಗಭಾರತ ಕಾವ್ಯ ಮುಂತಾದ ಅನೇಕ ಜಾನಪದ ಹಾಡುಗಬ್ಬಗಳನ್ನು ಹಾಡುವಲ್ಲಿ ಸುತ್ತಮುತ್ತಲ ಊರುಗಳಲ್ಲಿ ಹೆಸರಾಗಿದ್ದಾರೆ. ಎರಡು ವರ್ಷಗಳ ಹಿಂದೆ ಕೆಂಪನಾಗಮ್ಮಜ್ಜಿ ಎಂಬ ಮುಖ್ಯ ಕಲಾವಿದೆಯು ನಿಧನರಾದ ಬಳಿಕ, ವಡ್ಡಗೆರೆ ಕದರಮ್ಮನವರು ಮುಮ್ಮೇಳದ ಮುಖ್ಯ ಕವಯಿತ್ರಿ-ಹಾಡುಗಾರ್ತಿಯಾಗಿ ತನ್ನ ತಂಡವನ್ನು ಮುನ್ನಡೆಸುವುದರೊಂದಿಗೆ ಹೊಸ ತಲೆಮಾರಿನವರಿಗೆ ಜಾನಪದ ಹಾಡುಗಳನ್ನು ಕಲಿಸಿಕೊಡುತ್ತಿದ್ದಾರೆ. ಪ್ರಸ್ತುತ ವಡ್ಡಗೆರೆ ಗ್ರಾಮದಲ್ಲಿ ಜಾನಪದ ಕವಯಿತ್ರಿ-ಗಾಯಕಿಯರಾದ ವಡ್ಡಗೆರೆ ಕದರಮ್ಮ, ವಡ್ಡಗೆರೆ ಮುದ್ದನಾಗಮ್ಮ, ಲಕ್ಷ್ಮಮ್ಮ ಮತ್ತು ಸಂಜೀವಮ್ಮ ಇವರು ಜಾನಪದ ವಕ್ತಾರರಾಗಿ ವಡ್ಡಗೆರೆ ಗ್ರಾಮ ಮತ್ತು ಸುತ್ತಮುತ್ತಲ ಹಳ್ಳಿಗಳಲ್ಲಿ ಜಾನಪದ ಹಾಡುಗಳನ್ನು ಹಾಡುತ್ತಾ ಮೂಲ ಜಾನಪದ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ.

ವಡ್ಡಗೆರೆ ಕದರಮ್ಮನವರ ನೇತೃತ್ವದಲ್ಲಿ ಈ ಕಲಾವಿದರು ತುಮಕೂರು ನಗರದ ಸರಸ್ವತಿಪುರಂನಲ್ಲಿ ದಿನಾಂಕ 30.11.2014ರಂದು, ರಂಗರಂಗ ಕಲಾಕೇಂದ್ರದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಹಾಡಿರಿ ರಾಗಗಳ…. ಎಂಬ ವಿಶಿಷ್ಟ ಜಾನಪದ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ದಿನಾಂಕ 05.01.2015ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಶಿರಾ ತಾಲೂಕು ಗಡಿನಾಡ ಸಂಪರ್ಕಾಧ್ಯಯನ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಿದ್ದ ಗ್ರಾಮ ಸಂಸ್ಕೃತಿ ಉತ್ಸವ ಸುಗ್ಗಿ-ಹುಗ್ಗಿ ಉತ್ಸವದಲ್ಲಿ ಜಾನಪದ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಿನಾಂಕ: 08-02-2015 ರಂದು ನಾಡಿನಲ್ಲಿಯೇ ಪ್ರಖ್ಯಾತವಾಗಿರುವ ಜಾನಪದ ಲೋಕದಲ್ಲಿ ನಡೆಯುತ್ತಿರುವ ‘ಜಾನಪದ ಲೋಕೋತ್ಸವ’ದಲ್ಲಿ ಮಹಾಸತಿ ವಡ್ಡಗೆರೆ ನಾಗಮ್ಮನ ಕಾವ್ಯದ ಆಯ್ದ ಭಾಗವನ್ನು ಮಂಡಿಸಿದರು.

 

-ಲೇಖಕರು : ಡಾ. ಬಗ್ಗನಡು ನಾಗಭೂಷಣ

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ13 hours ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ13 hours ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ14 hours ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ15 hours ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

ದಿನದ ಸುದ್ದಿ1 day ago

ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು....

ದಿನದ ಸುದ್ದಿ3 days ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ4 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ6 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

Trending