ದಿನದ ಸುದ್ದಿ
ಬಂಡೀಪುರ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ಪ್ರಾಣಿಗಳ ಫೋಟೋಗಳಲ್ಲ ಇವು ; ಸತ್ಯ ಮಾಹಿತಿ ಒಳಗಿದೆ ತಪ್ಪದೆ ಓದಿ..!
ಸುದ್ದಿದಿನ ಡೆಸ್ಕ್ : ಕಳೆದ ಮೂರು ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಗೋಪಾಲ ಸ್ವಾಮಿ ಬೆಟ್ಟದ ವಲಯದ ಸುಮಾರು 2ಸಾವಿರ ಹೆಕ್ಟೇರ್ ಅರಣ್ಯ ಸಂಪತ್ತು ಅಕ್ಷರಶಃ ಸುಟ್ಟು ಭಸ್ಮವಾಗಿದೆ.
ಈ ಕಾಡ್ಗಿಚ್ಚಿನ ಸುದ್ದಿ ಕೂಡ ಇಡೀ ಕರ್ನಾಟಕವನ್ನೆ ಬೆಚ್ಚಿ ಬೀಳಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಅರಣ್ಯ ಸಂಪತ್ತು, ಪ್ರಾಣಿಗಳು ಸುಟ್ಟು ಕರುಕಲಾಗಿರುವ ಮನಕರಗುವ ಫೋಟೋಗಳೂ ಕೂಡ ಕಾಡ್ಗಿಚ್ಚಿನಂತೆ ಹಬ್ಬಿಕೊಂಡಿದೆ. ಆದರೆ ಈ ಫೋಟೋಗಳ್ಯಾವುವೂ ಬಂಡೀಪುರ ಅರಣ್ಯದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋದ ಪ್ರಾಣಿಗಳಲ್ಲ.
ಹೌದು ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ರುದ್ರನರ್ತನ ಮಾಡುತ್ತಾ ಕರುಣೆಯೇ ಇಲ್ಲದೆ ತನ್ನ ಕೆನ್ನಾಲಿಗೆ ಚಾಚಿದೆ. ಮುಗಿಲೆತ್ತರಕ್ಕೆ ಬೆಳೆದ ಅಚ್ಚಹಸಿರು ಮರಗಳೆಲ್ಲ ಸುಟ್ಟು ಬೂದಿಯಾಗಿವೆ. ಆದರೆ ಅರಣ್ಯದ ವನ್ಯಜೀವಿಗಳಿಗೆಲ್ಲ ಯಾವುದೇ ಪ್ರಾಣಾಪವಾಗಿಲ್ಲ ಎಂಬ ಮಾಹಿತಿಯನ್ನು ಖಾಸಗಿ ಮಾದ್ಯಮವೊಂದಕ್ಕೆ ಅರಣ್ಯ ವನ್ಯಜೀವಿ ಸಂರಕ್ಷಣಾ ಅಧಿಕಾರಿ ಪುನ್ನತಿ ಶ್ರೀಧರ್ ಅವರು ನೀಡಿದ್ದಾರೆ.
ಕಾಡ್ಗಿಚ್ಚಿನಿಂದ ಅರಣ್ಯ ನಾಶವಾಗಿದ್ದು, ಯಾವುದೇ ಪ್ರಾಣಿಗಳು ಬೆಂಕಿ ಅನಾಹುತಕ್ಕೆ ತುತ್ತಾಗಿರುವ ಬಗ್ಗೆ ಮಾಹಿತಿ ಇಲ್ಲ. ವನ್ಯ ಜೀವಿಗಳು ಬೆಂಕಿಯ ಶಾಖ ಮುಟ್ಟುತ್ತಿದ್ದಂತೆ ಓಡಿ ಹೋಗುತ್ಗವೆ ಎಂದಿದ್ದಾರೆ.
No wild animal death is reported so far in forest fire at BNP. News and photographs of charred animals circulated in the social media and other media are far from truth. No dead animals are seen so far during fire fighting operations.#karnataka #forest #wildlife #bandipur
— Karnataka Forest Department (@aranya_kfd) February 25, 2019
ಬೆಂಕಿಗೆ ಹಾವೊಂದು ಸುಟ್ಟು ಕರುಕಲಾಗಿರು ಹಾವಿನ ಫೋಟೋವು 2015 ಏಪ್ರಿಲ್ 24 ರಂದು ವಾಯುವ್ಯ ಕೊಲಂಬಿಯಾದಲ್ಲಿ ಆ್ಯಂಡಿಕ್ಯೂ ನದ್ದಾಗಿದೆ.
ಕಾಡ್ಗಿಚ್ವಿಗೆ ಸುಟ್ಟು ಕರಕಲಾಗಿರುವ ಮೊಲದ ಫೋಟೋವು 2018 ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ಮಲಿಬುನದ್ದಾಗಿದೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ
ಗೊರಿಲ್ಲಾ ರೀತಿ ಕಾಣುವ ಒರಾಕುಟನ್ ಜಾತಿಗೆ ಸೇರಿದ ಈ ಪ್ರಾಣಿಯ ಚಿತ್ರವನ್ನು ಒರಾಗುಟನ್ ಸಂರಕ್ಷಣಾ ಕೇಂದ್ರ 2016ರಲ್ಲಿ ಬಿಡುಗಡೆ ಮಾಡಿತ್ತು. ಅಲ್ಲದೇ ಈ ಪ್ರಭೇದದ ಒರಾಕುಟನ್ ಬಂಡಿಪುರದಲ್ಲಿ ಕಂಡು ಬರುವುದಿಲ್ಲ ಇದು ಕೇವಲ ಬೋರೆನಾ ಸುಮಾತ್ರದಲ್ಲಿ ಕಂಡು ಬರುವ ಪ್ರಾಣಿ ಪ್ರಬೇಧ.
ಲಿಂಕ್ ಮೇಲೆ ಕ್ಲಿಕ್ ಮಾಡಿ
https://en.m.wikipedia.org/wiki/Orangutan
ಕ್ಯಾಲಿಫೋರ್ನಿಯಾದ ಕಾಡ್ಗಿಚ್ವಿಗೆ ಸುಟ್ಟು ಬೆಂದಿರುವ ಜಿಂಕೆ, ಮತ್ತು ಇತರೆ ಪ್ರಾಣಿಗಳ ಫೊಟೋ ವಿಡಿಯೋ 2017 ರದ್ದಾಗಿದೆ.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

