Connect with us

ನೆಲದನಿ

ಮಾಗಿದ ಕಾಲದಲ್ಲಿ ಸಾಹಿತ್ಯ ಕೃಷಿಗೆ ನಿಂತ ಪ್ರೊ.ಜಿ.ಪರಮೇಶ್ವರಪ್ಪ ಅವರ ಸಾಹಿತ್ಯ ಪಯಣ

Published

on

  • ಡಾ.ಕೆ.ಎ.ಓಬಳೇಶ್

ಭಾರತದಂತಹ ವಿಶಿಷ್ಟ ಸಾಂಸ್ಕೃತಿಕ ನಾಡಿನಲ್ಲಿ ವಿಭಿನ್ನ ಪ್ರಕಾರದ ಕಲೆಗಳು ಜನ್ಮತಳೆದಿವೆ. ಈ ಎಲ್ಲಾ ವಿಭಿನ್ನ ಕಲಾ ಪ್ರಕಾರಗಳು ಈ ನೆಲದ ಬಹುತ್ವವನ್ನು ಎತ್ತಿಹಿಡಿಯುವ ಪ್ರಯತ್ನ ಮಾಡಿವೆ. ಇಂತಹ ಬಹುತ್ವವೇ ಭಾರತದ ಸೌಹಾರ್ದತೆಗೆ ಸಾಕ್ಷಿಯಾಗಿರುವುದು ಈ ನೆಲದ ಹೆಮ್ಮೆಯ ಪ್ರತೀಕ.

ಇದಕ್ಕೆ ಪೂರಕವೆಂಬಂತೆ ಕನ್ನಡ ನಾಡಿನಲ್ಲಿ ಹಲವಾರು ಸಾಹಿತಿಗಳು ಈ ನೆಲದ ವಿವಿಧತೆಯನ್ನು ಅನಾವರಣಗೊಳಿಸುವ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇಂತಹ ದೇಶಿ ಸೊಗಡನ್ನು ಸಾಹಿತ್ಯದ ಮೂಲಕ ಸೆರೆಹಿಡಿಯುತ್ತ ಬಂದಿರುವ ಸಾಹಿತಿಗಳಲ್ಲಿ ಪ್ರೊ.ಜಿ.ಪರಮೇಶ್ವರಪ್ಪನವರು ಒಬ್ಬರಾಗಿದ್ದಾರೆ.

ಮಧ್ಯ ಕರ್ನಾಟಕದ ಐತಿಹಾಸಿಕ ನಗರವಾಗಿರುವ ಚಿತ್ರದುರ್ಗ ಪ್ರಾಂತ್ಯವು ಕರ್ನಾಟಕದ ಸಾಂಸ್ಕೃತಿಕ ಹಿರಿಮೆ ಮತ್ತು ಗರಿಮೆಗೆ ತನ್ನದೇ ಆದ ವಿಶಿಷ್ಟ ಕಾಣಿಕೆಯನ್ನು ನೀಡಿರುವುದು ಚಾರಿತ್ರಿಕ ಸತ್ಯ. ಇಂತಹ ಸಾಂಸ್ಕೃತಿಕ ಶ್ರೀಮಂತ ನೆಲದಲ್ಲಿ ಹುಟ್ಟಿ ಬೆಳೆದು, ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ಅಂತರ್ಗತವಾಗಿರುವ ಸಾಹಿತ್ಯದ ದೇಶೀಯತೆ ಹಾಗೂ ಅದರ ವೈಶಿಷ್ಟ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯ ಚಟುವಟಿಕೆಗೆ ತೊಡಗಿಸಿಕೊಂಡ ಜಿ.ಪರಮೇಶ್ವರಪ್ಪನವರ ಬದುಕಿನ ಸುತ್ತ ಒಂದು ಕೀರುನೋಟ ಬೀರುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಶ್ರೀಯುತ ಜಿ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕು ಹರ್ತಿಕೋಟೆ ಸಮೀಪದ ಕಪಿಲೆಹಟ್ಟಿ ಗ್ರಾಮದಲ್ಲಿ ದಿನಾಂಕ 15 ನವಂಬರ್1950ರಲ್ಲಿ ಜಡಿಯಪ್ಪ ಹಾಗೂ ಸಕ್ರಮ್ಮ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರ್ತಿಕೋಟೆಯಲ್ಲಿ, ಪ್ರೌಢ ಶಿಕ್ಷಣವನ್ನು ಐಮಂಗಳದಲ್ಲಿ, ಪದವಿಪೂರ್ವ ಶಿಕ್ಷಣವನ್ನು ಚಿತ್ರದುರ್ಗದಲ್ಲಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮೈಸೂರಿನಲ್ಲಿ ಪಡೆದರು.

ಕನ್ನಡ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದ ಇವರು ನಂತರದ ದಿನಮಾನಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಾದ ಬೀದರ್, ಅಥಣಿ, ಮಾಯಕೊಂಡ, ಚಳ್ಳಕೆರೆ ಹಾಗೂ ಚಿತ್ರದುರ್ಗದಲ್ಲಿ 1980 ರಿಂದ 2020 ರವರೆಗೆ ಸುಮಾರು 30 ವರ್ಷಗಳ ಕಾಲ ಬೋಧಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.

ಬಾಲ್ಯದ ದಿನಗಳಿಂದಲೂ ಗ್ರಾಮೀಣ ಬದುಕಿನೊಂದಿಗೆ ನಂಟನ್ನು ಹೊಂದಿದ್ದ ಇವರಿಗೆ ಜಾನಪದ ಕಲೆ ಹಾಗೂ ಸಾಹಿತ್ಯದೊಂದಿಗೆ ಬೆರೆತು ಹೋಗಿದ್ದರು. ಹಾಗೆಯೇ ಸಾಹಿತ್ಯದ ವಿದ್ಯಾರ್ಥಿಯಾದ ಇವರಿಗೆ ಕನ್ನಡ ಸಾಹಿತ್ಯ ಹಾಗೂ ಹಲವಾರು ಕನ್ನಡ ಸಾಹಿತಿಗಳಿಗೆ ಮಾರುಹೋಗಿದ್ದರು. ಆದರೆ ಸಾಹಿತ್ಯದ ಬರವಣಿಗೆಯ ಬಗ್ಗೆ ಇವರಿಗೆ ಒಂದಷ್ಟು ಭಯವನ್ನು ಕಟ್ಟಿಕೊಂಡ ಕಾರಣ ತಮ್ಮ ಬೋಧನಾ ಅವಧಿಯುದ್ದಕ್ಕೂ ಬರವಣಿಗೆಯಿಂದ ದೂರವೇ ಉಳಿದಿದ್ದರು.

ಶ್ರೀಯುತರು ಬರವಣಿಗೆಯಿಂದ ದೂರ ಉಳಿದಿದ್ದರೂ ಬೋಧನೆಯೊಂದಿಗೆ ಸಾಹಿತ್ಯ ಪ್ರೀತಿಯನ್ನು ಸದಾ ಕಾಪಾಡಿಕೊಂಡಿದ್ದರು. ಪಂಪ, ರನ್ನ, ಕುಮಾರವ್ಯಾಸರಂತಹ ಪ್ರಾಚೀನ ಕವಿಗಳು ಹಾಗೆಯೇ ಕುವೆಂಪು, ಬೇಂದ್ರೆ, ಶಿವರಾಮ ಕಾರಂತ್, ಸಿ.ಪಿ.ಕೃಷ್ಣಮೂರ್ತಿ, ಜಿ.ಎಚ್.ನಾಯಕರಂತಹ ಆಧುನಿಕ ಸಾಹಿತಿಗಳ ಬರಹಗಳು ಇವರ ಮೇಲೆ ಸಾಕಷ್ಟು ಪ್ರೇರಣೆ ಮತ್ತು ಪ್ರಭಾವವನ್ನು ಬೀರಿದ್ದವು.

ಇಂತಹ ಸಾಹಿತ್ಯ ಪರಂಪರೆಯಿಂದ ಸಾಹಿತ್ಯಾಭಿರುಚಿಯನ್ನು ಮೈಗೂಡಿಸಿಕೊಂಡಿರುವ ಜಿ.ಪರಮೇಶ್ವರಪ್ಪನವರು ತಮ್ಮ ವಿದ್ಯಾರ್ಥಿಗಳಿಗೂ ಸಾಹಿತ್ಯಾಸಕ್ತಿಯನ್ನು ಮೂಡಿರುವ ಕಾಯಕದಲ್ಲಿ ತಮ್ಮ ಬೋಧನಾ ವೃತ್ತಿಯನ್ನು ಮುನ್ನಡೆಸಿಕೊಂಡು ಬಂದವರು. ಹಾಗೆಯೇ ಹಳಗನ್ನಡ, ವ್ಯಾಕರಣ, ಛಂದಸ್ಸಿನಲ್ಲಿ ವಿಶೇಷವಾದ ಪರಿಣಿತಿಯನ್ನು ಹೊಂದಿದ್ದ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹೆಚ್ಚು ಬೋಧನೆ ಮಾಡಿ, ಇವುಗಳನ್ನು ಕರಗತ ಮಾಡಿಕೊಂಡಿದ್ದರು. ಹೀಗಾಗಿ ಕನ್ನಡ ಸಾಹಿತ್ಯದ ಛಂದೋ ಪ್ರಕಾರದ ತಾಳ, ಲಯವನ್ನು ಸ್ಪಷ್ಟವಾಗಿ ಅರಿತವರಾಗಿದ್ದರು. ಇದು ಮುಂದೆ ಶ್ರೀಯುತರ ಸಾಹಿತ್ಯ ಚಟುವಟಿಕೆಗೆ ವರವಾಗಿ ಪರಿಣಮಿಸಿತು.

ಶ್ರೀಯುತ ಜಿ.ಪರಮೇಶ್ವರಪ್ಪನವರು ತಮ್ಮ ವೃತ್ತಿ ಬದುಕಿನ ಅವಧಿಯಲ್ಲಿ ಸಾಹಿತ್ಯ ರಚನೆಗೆ ತೊಡಗಿದ್ದು ತೀರಾ ವಿರಳ. ಕೆಲವು ಸ್ನೇಹಿತರ ಒತ್ತಡ, ಸಭೆ ಸಮಾರಂಭಗಳಲ್ಲಿ ಉಪನ್ಯಾಸ ನೀಡುವುದಕ್ಕಾಗಿ ಮಾಡಿಕೊಂಡ ಟಿಪ್ಪಣಿಗಳು ಹಾಗೂ ವಿಶೇಷ ದಿನಗಳಿಗಾಗಿ ಪತ್ರಿಕೆಗಳಿಗೆ ಕೆಲವೊಂದು ಲೇಖನಗಳನ್ನು ಬರೆದಿರುವುದನ್ನು ಬಿಟ್ಟರೆ ಸಾಹಿತ್ಯದ ಯಾವುದೇ ಪ್ರಕಾರದಲ್ಲೂ ತಮ್ಮನ್ನು ಗುರುತಿಸಿಕೊಂಡವರಲ್ಲ. ಈ ಎಲ್ಲಾ ಲೇಖನಗಳನ್ನು ಸಂಗ್ರಹಿಸಿ ‘ಚದುರಿದ ಚಿಂತನೆಗಳು’ ಎಂಬ ಕೃತಿಯನ್ನು 2020ರಲ್ಲಿ ಹೊರತಂದಿದ್ದಾರೆ.

ಪ್ರಸ್ತುತ ಕೃತಿಯಲ್ಲಿ ಜಾನಪದ, ಹಳಗನ್ನಡ ಸಾಹಿತ್ಯ, ವಚನಸಾಹಿತ್ಯ ಹಾಗೂ ವೈಚಾರಿಕ ಚಿಂತನೆಗಳ ಮೇಲೆ ಬೆಳಕು ಚೆಲ್ಲಿರುವುದು ಕಂಡುಬರುತ್ತದೆ. ಈ ಕೃತಿಯು ಅವರ ಓದಿನ ವಿಸ್ತಾರ ಹಾಗೂ ಅವರಿಗಿದ್ದ ಸಾಹಿತ್ಯದ ತುಡಿತವನ್ನು ಅನಾವರಣಗೊಳಿಸುತ್ತದೆ. ಆದರೆ ಪರಮೇಶ್ವರಪ್ಪನವರಿಗೆ ಸವಾಲಾಗಿ ಪರಿಣಮಿಸಿದ್ದು ಮಾತ್ರ ಶಾಸ್ತçಬದ್ಧವಾದ ಸಾಹಿತ್ಯ ರಚನೆಗೆ ಮುಂದಾದ ಸಂದರ್ಭ. ತಮ್ಮ ಸುತ್ತಮುತ್ತಲಿನ ಸಾಂಸ್ಕೃತಿಕ ಪರಿಸರದಲ್ಲಿ ತಲಾತಲಾಂತರದಿಂದ ಬಾಯಿಂದ ಬಾಯಿಗೆ ಹರಿದು ಬಂದು, ಜನಜೀವನದಲ್ಲಿ ಬೆರೆತು ಹೋಗಿದ್ದ ಜಾನಪದೀಯ ಮಹಾಕಾವ್ಯವಾದ ‘ಪಾರ್ಥಲಿಂಗ ಚಾರಿತಾಮೃತ’ ಎಂಬ ಕೃತಿಯನ್ನು ಸಂಪಾದಿಸುವುದಕ್ಕೆ ತೊಡಗಿಸಿಕೊಂಡರು.

ಈ ಸಂದರ್ಭದಲ್ಲಿ ಗದ್ಯ ಪ್ರಕಾರದಲ್ಲಿಯೇ ಸಾಹಿತ್ಯ ರಚನೆಗೆ ಮುಂದಾದರು. ಆಗ ಅಲ್ಲಿನ ವಕ್ತೃ ಹಾಗೂ ಪಾರ್ಥಲಿಂಗ ಭಕ್ತರ ಅಭಿಲಾಷೆಯು ಇದನ್ನು ಭಾಮಿನಿ ಷಟ್ಟದಿಯಲ್ಲಿಯೇ ರಚಿಸಬೇಕು ಎಂಬುದಾಗಿತ್ತು. ಇದಕ್ಕೆ ಕಾರಣ ಗದ್ಯದಲ್ಲಿ ಪಾರ್ಥಲಿಂಗನ ಕಾವ್ಯವನ್ನು ಬರೆದರೆ ಯಾರೋ ಓದು ಬರಹ ಕಲಿತವರು ಓದಿ ಸುಮ್ಮನಾಗುತ್ತಾರೆ. ಆದರೆ ರಾಗ, ತಾಳ, ಲಯಬದ್ಧವಾದ ಭಾಮಿನಿ ಛಂದೋ ಪ್ರಕಾರದಲ್ಲಿ ರಚಿಸಿದರೆ ಯಾರೋ ಒಬ್ಬ ಹಾಡಿದರೆ ಅಕ್ಷರ ಬಲ್ಲವರು ಹಾಗೂ ಅಕ್ಷರ ವಂಚಿತರೆಲ್ಲ ಆಸಕ್ತಿಯಿಂದ ಕುಳಿತು ಕೇಳಿ ಆಸ್ವಾದಿಸುತ್ತಾರೆ ಎಂಬುದು ಅವರ ನಿಲುವಾಗಿತ್ತು.

ಆಗ ಕುಮಾರವ್ಯಾಸ ಮಾಡಿದ ಅಂತಹ ಸಾಧನೆಯು ನನ್ನಿಂದ ಸಾಧ್ಯವೇ ಎಂಬ ಅನುಮಾನ ಲೇಖಕರಲ್ಲಿ ಮೂಡಿತು. ಆಗ ಹಳಗನ್ನಡದ ಜನಪ್ರಿಯ ಸಾಹಿತ್ಯ ಪ್ರಕಾರಗಳಲ್ಲಿ ಒಂದಾಗಿರುವ ಷಟ್ಪದಿಯ ಭಾಮಿನಿ ಛಂದೋ ಪ್ರಕಾರದಲ್ಲಿಯೇ ಈ ಕಾವ್ಯವನ್ನು ರಚಿಸಬೇಕು ಎಂದು ಮುಂದಾದ ಸಂದರ್ಭದಲ್ಲಿ ಇದೊಂದು ಸವಾಲಿನ ಕೆಲಸವಾಗಿ ಪರಿಣಮಿಸಿತು. ಸುಮಾರು ಆರು ತಿಂಗಳ ಕಾಲ ನಿರಂತರವಾದ ಪ್ರಯತ್ನ ಮಾಡುತ್ತ ಬರೆಯುವ, ಹರಿಯುವ ಕಾಯಕದಲ್ಲಿ ನಿರತರಾದರು.

ಆಗ ಇದು ಭಾಮಿನಿ ಷಟ್ಪದಿಯ ಪಾಠ ಮತ್ತು ಪ್ರವಚನದಷ್ಟು ಸುಲಭವಾಗಿ ಛಂದೋ ಪ್ರಕಾರದ ಸಾಹಿತ್ಯ ರಚನೆ ಮಾಡಲಾಗದು ಎಂಬ ಅನುಭವವಾಯಿತು. ಈ ಯೋಜನೆಯಿಂದ ದೂರ ಉಳಿದು, ಇದು ನನ್ನಿಂದ ಸಾಧ್ಯವಾಗದ ಕೆಲಸವೆಂದು ಕೈಚೆಲ್ಲಿ ಕುಳಿತರು. ಇಂತಹ ಸಂದರ್ಭದಲ್ಲಿ ಪಾಥಲಿಂಗ ದೈವದ ಭಕ್ತರು ಹಾಗೂ ಕಾವ್ಯವನ್ನು ಹಾಡುವ ವಕ್ತೃಗಳು ಇದು ನಿಮ್ಮಿಂದ ಮಾತ್ರ ಸಾಧ್ಯ. ಪಾರ್ಥಲಿಂದ ದೈವವು ಕೂಡ ಅದು ನಿಮ್ಮಿಂದ ಮಾತ್ರವೇ ಸಾಧ್ಯವಾಗುವ ಕೆಲಸವೆಂದು ಅಪ್ಪಣೆ ನೀಡಿದೆ ಎಂದು ಒತ್ತಡ ಹಾಕಿದಾಗ, ಅವರ ದೈವಕೇಂದ್ರಿತವಾದ ನಂಬಿಕೆಗೆ ಕಟ್ಟುಬಿದ್ದು ಮತ್ತೇ ಛಂದೋಬದ್ಧ ಸಾಹಿತ್ಯ ಪ್ರಯೋಗದಲ್ಲಿ ತಮ್ಮನ್ನು ದುಡಿಮೆಗಚ್ಚಿದರು.

ಪಾರ್ಥಲಿಂಗನ ಭಕ್ತಾಧಿಗಳ ಒತ್ತಡ ಹಾಗೂ ಅವರ ಪ್ರೀತಿಯ ಹಠಕ್ಕೆ ಮಣಿದು, ಕವಿ ಕುಮಾರವ್ಯಾಸ ಹರಿ ಸ್ಮರಣೆಯಿಂದ ಕಾವ್ಯ ರಚನೆಗೆ ಮುಂದಾದಂತೆ ಶ್ರೀಯುತ ಜಿ.ಪರಮೇಶ್ವರಪ್ಪನವರು ಪಾರ್ಥಲಿಂಗನ ಸ್ಮರಣೆಯೊಂದಿಗೆ ಕಾವ್ಯಾಭ್ಯಾಸದ ಗರಡಿಯಲ್ಲಿ ಗಟ್ಟಿಗರಾಗಿ ನಿಂತರು. ಹೀಗೆ ಸಂಪ್ರದಾಯ ಬದ್ಧವಾಗಿ ಮೂಡಿ ಬಂದ ಛಂದೋ ಪ್ರಕಾರದಲ್ಲಿ ಸಾಹಿತ್ಯ ರಚನೆಗೆ ಮುಂದಾದ ಶ್ರೀಯುತರು ಪ್ರಸ್ತುತ ಕಥೆ ರಚನೆಯ ಕುರಿತಾದ ತಮ್ಮ ನಿಲುವನ್ನು ಕುಮಾರವ್ಯಾಸನಂತೆಯೇ ಹಂಚಿಕೊಂಡಿದ್ದಾರೆ;

ಬಾಯಿ ಮಾತಲಿ ಬಸವ ಹೇಳಿದ ತಾಯಿ ಭೂಮಿಯ ಜನರ ಕಿವಿಯಲಿ ಮಾಯೆಯಿಲ್ಲದ ನಿಗಮ ಗೋಚರನಾ ಪುರಾಣವನು ದಾಯಕನೊಲಿದು ಬರೆಸಿದ ಜನಪದೀಯರಾಡುವ ಪಾರ್ಥಕಥೆಯನು ಶಾಯಿಯಿಂದಲಿ ಕೃತಿ ರಚಿಸಿದೆನು ವಿಮಲ ಮನಸಿನಲಿ

ಇಲ್ಲಿ ಲೇಖಕರು ಕುಮಾರವ್ಯಾಸನಂತೆ ತನ್ನನ್ನು ಕೇವಲ ಲಿಪಿಕಾರ ಎಂಬುದಾಗಿ ಬಿಂಬಿಸಿಕೊಂಡಿದ್ದಾರೆ. ಹಾಗೆಯೇ ಇಲ್ಲಿ ತಾನೊಬ್ಬ ಕವಿಯೆಂಬುದನ್ನು ಕೂಡ ಕುಮಾರವ್ಯಾಸನಂತೆ ಛಂದೋ ನೆಲೆಯಲ್ಲಿ ಅಭಿವ್ಯಕ್ತಿಸಿರುವುದನ್ನು ಕಾಣಬಹುದಾಗಿದೆ.

ವೇದ ಶಾಸ್ತ್ರಾಗಮ ಪುರಾಣಗಳೋದಿ ತಲೆಗಳು ಚಿಟ್ಟು ಹಿಡಿದಿವೆ ವಾದ ಗೈವರಿಗೋದು ಬರದವರಿಗೆಡೆಯಿಲ್ಲಲ್ಲಿ ಓದು ಬರದವರಿಲ್ಲಿ ತಿಳಿವುದು ವಾದ ಮಾಡುವರಿಲ್ಲಿ ಬರಬಹು ದೋದಿ ಕುಣಿಸುವನಿಲ್ಲಿ ಕವಿ ಪರಮೇಶ್ವರೆಂಬುವನು

ಹೀಗೆ ತನ್ನನ್ನು ಪರಮೇಶ್ವರ ಕವಿ ಎಂಬುದಾಗಿ ಗುರುತಿಸಿಕೊಂಡು ಪಾರ್ಥಲಿಂಗ ಸ್ಮರಣೆಯ ಮೂಲಕವೇ ಕಾವ್ಯ ರಚನೆಗೆ ಗಟ್ಟಿಯಾಗಿ ನಿಂತರು. ಇಂತಹ ಗಟ್ಟಿತನದ ಪ್ರತೀಕವಾಗಿ ಆರಂಭಿಕ ದಿನಗಳಲ್ಲಿ ದಿನಕ್ಕೊಂದು ಕಾವ್ಯವನ್ನು ಛಂದೋಬದ್ಧವಾಗಿ ರೂಪಿಸುವಲ್ಲಿ ಯಶಸ್ವಿಯಾದರು.

ಹೀಗೆ ಅಳುಕಿನಿಂದಲೇ ಆರಂಭವಾದ ಛಂದೋಬದ್ಧ ಸಾಹಿತ್ಯ ಕೃಷಿಯನ್ನು ಕರಗತ ಮಾಡಿಕೊಂಡು ಸುಮಾರು 497 ಪದ್ಯಗಳಿಂದ ಕೂಡಿದ ಒಟ್ಟು ಏಳು ಅಧ್ಯಾಯಗಳ ‘ಶ್ರೀ ಪಾರ್ಥಲಿಂಗ ಚರಿತಾಮೃತ’ ಎಂಬ ಭಾಮಿನಿ ಷಟ್ಪದಿ ಕಾವ್ಯ ಕೃತಿಯನ್ನು ಛಂದೋ ವಿನ್ಯಾಸಕ್ಕೆ ಚ್ಯುತಿಯಾಗದಂತೆ ಬರೆದು ಮುಗಿಸಿದ ಕೀರ್ತಿ ಕವಿ ಜಿ.ಪರಮೇಶ್ವರಪ್ಪ ಅವರಿಗೆ ಸಲ್ಲುತ್ತದೆ. ‘ಕನ್ನಡದಲ್ಲಿ ಮಹಾಕಾವ್ಯಗಳ ಕಾಲ ಮುಗಿಯಿತು.

ಛಂದೋಬದ್ಧವಾದ ರಚನೆಗಳ ಕಾಲ ಮುಗಿಯಿತು ಎಂಬ ಮಾತುಗಳು ಹುಸಿಯಾಗಿವೆ’ ಎಂಬ ಡಾ.ಬಿ.ವಿ.ವಸಂತಕುಮಾರ್ ಅವರ ಮಾತುಗಳಿಗೆ ಜಿ.ಪರಮೇಶ್ವರಪ್ಪ ಅವರು ರಚಿಸಿರುವ ಛಂದೋಬದ್ಧ ‘ಪಾರ್ಥಲಿಂಗ ಚರಿತಾಮೃತ’ ಸಾಕ್ಷಿಯಾಗಿ ನಿಲ್ಲುತ್ತದೆ.

ಪ್ರಸ್ತುತ ಕೃತಿಯು ಶ್ರೀಯುತ ಜಿ.ಪರಮೇಶ್ವರಪ್ಪನವರಿಗೆ ಸಾಹಿತಿ ಎಂಬ ಬಿರುದಾವಳಿಯನ್ನು ಮಾತ್ರವಲ್ಲದೆ, ಅವರನ್ನು ಪಾರ್ಥಲಿಂಗ ಚರಿತಾಮೃತದ ಕವಿಯೆಂದು ಗುರುತಿಸುವಷ್ಟು ಹೆಗ್ಗಳಿಕೆಯನ್ನು ತಂದುಕೊಟ್ಟಿದೆ.

ಹಾಗೆಯೇ ಈ ಕೃತಿಯು ಸಾಕಷ್ಟು ಜನಮಾನಸದಲ್ಲಿ ಬೆರೆತು ಹೋಗಿದ್ದು, ಈಗಾಗಲೇ ಸುಮಾರು ಐವತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಪಠನ ಮಾಡಲಾಗಿದೆ. ಇದು ಕವಿಗಳ ಶ್ರಮಕ್ಕೆ ಸಿಕ್ಕ ನಿಜವಾದ ಪ್ರತಿಫಲ. ಕವಿಯಾದವನು ಇದರಾಚೆ ಏನನ್ನು ನಿರೀಕ್ಷಿಸಲಾರ.

ಅಳುಕಿನಿಂದಲೇ ಸಾಹಿತ್ಯ ಕ್ಷೇತ್ರಕ್ಕೆ ಕಾಲಿಟ್ಟ ಜಿ.ಪರಮೇಶ್ವರಪ್ಪನವರು ಛಂದೋಬದ್ಧ ಕಾವ್ಯ ರಚನೆಯಲ್ಲಿ ಮೊದಲ ಯಶಸ್ಸು ಗಳಿಸಿದ ತರುವಾಯ ‘ವದ್ದಿಕೆರೆ ಸಿದ್ಧೇಶ್ವರ ಚರಿತೆ’ಯನ್ನು ಇದೇ ಛಂದೋ ವಿನ್ಯಾಸದಲ್ಲಿ ರಚನೆಗೆ ಮುಂದಾಗಿದ್ದು, ಇದನ್ನು ಒಂದೇ ವರ್ಷದಲ್ಲಿ ಮುಗಿಸುವಷ್ಟು ಛಂದೋಬದ್ಧ ಸಾಹಿತ್ಯ ಕ್ಷೇತ್ರದಲ್ಲಿ ಹಿಡಿತವನ್ನು ಸಾಧಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ಪ್ರಸ್ತುತ ಕೃತಿಯು ಕೂಡ ದೈವ ಕೇಂದ್ರಿತವಾದ ಪುರಾಣ ನೆಲೆಯಿಂದ ಕೂಡಿದ್ದು, ಜನಪದರ ಬದುಕಿನೊಳಗೆ ಬೆರೆತು ಹೋದ ಮೌಖಿಕ ಕಥನವೊಂದನ್ನು ಛಂದೋಬದ್ಧ ಹಾಡುಗಬ್ಬವಾಗಿ ರೂಪಿಸುವ ಮಹತ್ತರ ಕಾರ್ಯವೊಂದನ್ನು ಇವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಶ್ರೀಯುತ ಪರಮೇಶ್ವರಪ್ಪನವರ ಎರಡನೇ ಕೃತಿಯಾಗಿರುವ ‘ವದ್ದಿಕೆರೆ ಸಿದ್ಧೇಶ್ವರ ಚರಿತೆ’ಯು ಹರಿಹರನ ‘ಶಿವಶರಣರ ರಗಳೆ’ಯ ಕಥನ ಮಾದರಿಯಿಂದ ಪ್ರಭಾವಿತಗೊಂಡಂತಿದೆ.

ಇದನ್ನೂ ಓದಿ |ವಿಮರ್ಶೆ | ಸ್ವಪ್ನದಲ್ಲಿ ಸೊರಗಿದ ಪ್ರೀತಿ

ಈ ಕೃತಿಯು ಒಟ್ಟು 311ಷಟ್ಪದಿ ಪದ್ಯಗಳಿಂದ ಕೂಡಿದೆ. ಇಲ್ಲಿಯೂ ಕೂಡ ಕವಿಗಳು ಪ್ರಾಚೀನ ಕಾವ್ಯ ಪರಂಪರೆಯ ಮುಂದುವರಿಕೆಯ ಭಾಗವೆಂಬಂತೆ ದೈವ ಸ್ತುತಿಯೊಂದಿಗೆ ಕಾವ್ಯಾರಂಭಕ್ಕೆ ಮುಂದಾಗಿರುವುದನ್ನು ಕಾಣಬಹುದಾಗಿದೆ.

ಶುದ್ಧಮನದಲಿ ಖುದ್ದು ಹೇಳುವೆ ಸಿದ್ಧ ಪುರುಷನ ಸಿದ್ಧ ಕಥೆಯನು ಬುದ್ಧ ಜನಗಳು ಮೆಚ್ಚುವಂದದಿ ಹಾಡುಗಬ್ಬದಲಿ ಬಿದ್ದು ಗಂಗೆಯಲೆದ್ದು ಬಂದಂತೆದ್ದು ಹೋಗುವವಿದ್ದ ರುಜಿನಗ ಳೆದ್ದು ಬರುವಾ ಜನ್ಮ ಚಕ್ರವನೊದ್ದು ಹೋಗುವುದು

ಹೀಗೆ ಪ್ರಾಚೀನ ಕಾವ್ಯ ಪರಂಪರೆಯ ತಂತ್ರವನ್ನು ಅನುಸರಿಸುತ್ತಲೇ ಜಾನಪದೀಯ ಕಥನವನ್ನು ಶಿಷ್ಟ ಸಾಹಿತ್ಯದ ಚೌಕಟ್ಟಿಗೆ ಒಳಪಡಿಸುವ ಮೂಲಕ ಛಂದೋಬದ್ಧಗೊಳಿಸುವಲ್ಲಿ ಕವಿ ಜಿ.ಪರಮೇಶ್ವರಪ್ಪನವರ ಪಾತ್ರ ಮಹತ್ವದ್ದಾಗಿದೆ. ಜನಪದರ ಸಾಂಸ್ಕೃತಿಕ ಬದುಕಿನಲ್ಲಿ ಬೆರೆತುಕೊಂಡಿರುವ ಮೌಖಿಕ ಕಥನವನ್ನು ಶಿಷ್ಟ ಪರಂಪರೆಯೊಂದಿಗೆ ಅನುಸಂಧಾನಗೊಳಿಸುವ ಮೂಲಕ ಹಾಡುಗಬ್ಬಗೊಳಿಸಿದ ಕವಿಯ ತಂತ್ರಗಾರಿಕೆಯ ಹಿಂದೆ ನೆಲಮೂಲದ ತುಡಿತ-ಮಿಡಿತವಿದೆ.

ಜನಪದ ಮತ್ತು ಶಿಷ್ಟ ಪರಂಪರೆಯ ನಡುವಿನ ಬೇಲಿ ಹಾಗೂ ಅಂತರವನ್ನು ಕಡಿದು ಹಾಕಿ ಇವೆರಡ ನಡುವೆ ಸಂಕರವನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಇವರು ನಮ್ಮ ಮುಂದಿನ ಅಪರೂಪದ ಸಾಹಿತಿಗಳಲ್ಲಿ ಒಬ್ಬರಾಗಿ ಕಂಡುಬರುತ್ತಾರೆ.
ಶ್ರೀಯುತರ ಈ ಛಂದೋಬದ್ಧ ಕಾವ್ಯದ ದುಡಿಮೆಯ ಹಿಂದೆ ಒಂದು ಪ್ರಾಮಾಣಿಕ ಪ್ರಯತ್ನವಿದೆ. ಈ ಪ್ರಯತ್ನ ಕಾಯಕ ಪ್ರಧಾನತೆಯಿಂದ ಕೂಡಿದೆ. ಇಂತಹ ಕಾಯಕ ಪ್ರಧಾನ ಕೃಷಿಯು ಇವರ ಸತತ ಪ್ರಯತ್ನವೆಂಬ ತಪಸ್ಸಿನ ಪ್ರತೀಕವಾಗಿ ಕಂಡುಬರುತ್ತದೆ.

ಇಂತಹ ತಪದ ಪ್ರತೀಕ ಹಾಗೂ ಬಾಲ್ಯದ ದಿನಗಳಿಂದ ಮೈಮನಗಳಲ್ಲಿ ಬೆರತು ಹೋದ ಜನಪದ ಸೊಗಡು, ಅಧ್ಯಯನದೊಂದಿಗೆ ಆಸಕ್ತಿಯಾಗಿ ವಿಷಯವಾಗಿ ಪ್ರಭಾವ ಬೀರಿದ ಸಾಹಿತ್ಯಾಭಿರುಚಿ, ಸುದೀರ್ಘವಾದ ಬೋಧನಾನುಭವ ಹಾಗೂ ನಿವೃತ್ತಿಯ ಸಮಯದಲ್ಲಿನ ಸಾಹಿತ್ಯಾಸಕ್ತ ಸಮಾನ ಮನಸ್ಕರ ಪ್ರೇರಣೆ ಮತ್ತು ಪ್ರೋತ್ಸಾಹದ ಫಲವಾಗಿ ಕನ್ನಡ ಸಾರಸ್ವತ ಲೋಕಕ್ಕೆ ‘ಪಾರ್ಥಲಿಂಗ ಚರಿತಾಮೃತ’, ವದ್ದಿಕೆರೆ ಸಿದ್ಧೇಶ್ವರ ಚರಿತೆ’, ‘ವೀರ ಕರಿಯಣ್ಣ’, ‘ಚಿತ್ತಯ್ಯ-ಕಾಟಯ್ಯ’ ಎಂಬ ಛಂದೋ ವಿನ್ಯಾಸದ ಮೌಲ್ಯಯುತ ಷಟ್ಪದಿ ಕೃತಿಗಳನ್ನು ಹಾಗೂ ‘ಚದುರಿದ ಚಿಂತನೆಗಳು’ ಎಂಬ ವೈಚಾರಿಕ ಕೃತಿಯನ್ನು ನೀಡಿದ ಕವಿ, ಸಾಹಿತಿ, ಚಿಂತಕರಾಗಿರುವ ಶ್ರೀಯುತ ಜಿ.ಪರಮೇಶ್ವರಪ್ಪ ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತಗೊಳ್ಳಲಿ ಎಂಬುದು ನಮ್ಮ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ

Published

on

  • ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.

ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.

ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು

ಬದುಕಿಸುವುದು ಇತ್ಯಾದಿ..

ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.

ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.

ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;

“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”

ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.

ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.

ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;

“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”

ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;

“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”

ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;

“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”

ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;

“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”

ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

Published

on

  • ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.

ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.

ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.

ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.

ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಲೇಖಕರು : ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.

ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.

ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.

ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.

ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.

ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.

ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.

ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending