ದಿನದ ಸುದ್ದಿ
ನನಸಾಗುವುದೇ ಬಾಪೂಜಿ ಕಂಡ ಗ್ರಾಮೀಣಾಭಿವೃದ್ಧಿಯ ಕನಸು..?
- ಕುಮಾರಸ್ವಾಮಿ.ವಿ.ಕೆ
ಭಾರತ ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳು ನಮ್ಮ ದೇಶದ ಹೃದಯವಿದ್ದಂತೆ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಸುಮಾರು 70% ಮಂದಿ ಇಂದು ಗ್ರಾಮೀಣ ಭಾಗಗಳಲ್ಲಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಹಳ್ಳಿ ಮಂದಿಯ ಸಂಸ್ಕøತಿ, ಆಚಾರ – ವಿಚಾರಗಳು ವಿಶಿಷ್ಟ, ಆಹಾರ, ವಿಹಾರ, ಉಡುಗೆ-ತಿಡುಗೆ ಹೀಗೆ ಎಲ್ಲವೂ ವಿಭಿನ್ನ. ಪ್ರಸ್ತುತ ಜಗತ್ತನ್ನ ಮೊದಲುಗೊಂಡು ನಮ್ಮ ಹಿಂದೂಸ್ಥಾನವನ್ನೂ ಕಿತ್ತು ತಿನ್ನುತ್ತಿರುವ ವಿಷಕ್ರಿಮಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇಂದು ನಿಜಕ್ಕೂ ಹಳ್ಳಿಗರ ಸಂಘಟನಾತ್ಮಕ ವರ್ತನೆ ಶ್ಲಾಘನೀಯ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಇಂದು ಅತೀ ಹೆಚ್ಚು ಇಕ್ಕಟ್ಟಿಗೆ ಸಿಲುಕುತ್ತಿರುವುದು ನಗರ ವಾಸಿಗಳೇ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಸಂಬಂಧವಾಗಿ ನಗರ ವಾಸಿಗಳಲ್ಲಿಲ್ಲದ ಬುದ್ಧಿಮತ್ತೆ, ಪ್ರಜ್ಞೆ, ಕಾಲಕ್ಕೆ ತಕ್ಕಂತ ಜ್ಞಾನ ನಮ್ಮ ಹಳ್ಳಿಗರಲ್ಲಿದ್ದು, ಇದು ನಿಜಕ್ಕೂ ಮೆಚ್ಚುವಂತದ್ದು. ಒಂದೆಡೆ ಕೊರೋನಾಕ್ಕಿಂತ ಕೆಲವು ವಿದ್ಯಾವಂತ ಮೂರ್ಖರೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದರೆ, ಮತ್ತೊಂದೆಡೆ ನಮ್ಮ ಹಳ್ಳಿಗರು ನಿರುಮ್ಮಳವಾಗಿ ಮತ್ತು ಯಶಸ್ವಿಯಾಗಿ ಜೀವನದ ರಥ ಎಳೆಯುತ್ತಿದ್ದಾರೆ.
ಜೊತೆ ಜೊತೆಗೇ ಇಡೀ ದೇಶವನ್ನೇ ಪೋಷಿಸಲು ಸಜ್ಜಾಗುತ್ತಿದ್ದಾರೆ. ಇಂದು ಇತರ ಅಗತ್ಯಗಳಿಗಿಂತ ಹೆಚ್ಚಾಗಿ ಜೀವ ಉಳಿಸಿಕೊಳ್ಳಲು ಅಗತ್ಯವಾದ ಮೂರು ಹೊತ್ತಿನ ಊಟ ನಮ್ಮೆಲ್ಲರಿಗೂ ಸಮರ್ಪಕವಾಗಿ ಸಿಗುತ್ತಿದೆಯೆಂದರೆ ಅದಕ್ಕೆ ಕಾರಣಕರ್ತರಾದ ನಮ್ಮೆಲ್ಲರ ಅನ್ನದಾತನನ್ನು ಮರೆಯುವಂತಿಲ್ಲ.
ಹೆಚ್ಚುತ್ತಿದೆ ಗ್ರಾಮೀಣ ವಲಸೆ
ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಾಗುತ್ತಿದ್ದ ಬಹುತೇಕ ನಗರ ವಾಸಿಗಳ ಇಂದಿನ ಆದ್ಯತೆ ಪ್ರಾಣ ಭಿಕ್ಷೆಯಷ್ಟೇ ಆಗಿದೆ. ಲೋಕದ ಅರಿವೇ ಇಲ್ಲದಂತೆ ಸ್ವಾರ್ಥಕ್ಕಾಗಿಯೇ ಬದುಕುತ್ತಿದ್ದ ಗರಿಷ್ಠ ಮಂದಿ ಇಂದು ಕಂಗಾಲಾಗಿ ಹೋಗಿ, ಪ್ರಾಣ ಉಳಿಸಿಕೊಳ್ಳಲು ಹಳ್ಳಿಗಳತ್ತ ಮುಖ ಮಾಡಿದ್ದಾರೆ.
ಸಾಫ್ಟ್ವೇರ್, ಹಾರ್ಡ್ವೇರ್ಗಳ ಜಂಜಾಟಗಳ ನಡುವೆ ಬೀಗುತ್ತಿದ್ದ ಮಂದಿ ಇಂದು ರೂರಲ್ ವೇರ್ ಆಗಿ ಬದಲಾಗುತ್ತಿದ್ದಾರೆ. ಕಂಪ್ಯೂಟರ್, ಲ್ಯಾಪ್ಟಾಪ್, ಟ್ಯಾಬ್ಗಳ ಮೇಲೆ ಬೆರಳಾಡಿಸುತ್ತಿದ್ದವರೆಲ್ಲಾ ಈಗ ಗುದ್ದಲಿ, ಹಾರೆ, ಬಾಂಡಲಿಗಳನ್ನು ಹಿಡಯುವ ಕಾಲ ಬಂದಿದೆ.
ನಾವೆಷ್ಟೇ ಮುಂದುವರಿದರೂ ಅನ್ನವನ್ನು ಕಂಪ್ಯೂಟರ್ನಲ್ಲಿ ಡೌನ್ಲೋಡ್ ಮಾಡಿಕೊಂಡು ತಿನ್ನಲು ಸಾಧ್ಯವಿಲ್ಲವೆಂಬ ಕಟುಸತ್ಯದ ಅರಿವಿನ ದರ್ಶನ ಇಂದು ಆಗುತ್ತಿದೆ. ಆದರೆ ಇವರಲ್ಲಿನ ಸಕಾರಾತ್ಮಕ ಬದಲಾವಣೆ ಹೀಗೆಯೇ ಇದ್ದರೆ ಒಳಿತು, ಇಲ್ಲದಿದ್ದರೆ ಹಳ್ಳಿ-ದಿಲ್ಲಿಯ ವ್ಯತ್ಯಾಸವಿಲ್ಲದೆ ಎಲ್ಲವನ್ನೂ ಅತಂತ್ರ ಮಾಡಿಯಾರು ಎಂಬ ಅನುಮಾನ ನಮ್ಮನ್ನು ಕಾಡಲು ಶುರುವಿಟ್ಟಿಕೊಳ್ಳುತ್ತದೆ.
ಕ್ಷೀಣಿಸುತ್ತಿದೆ ತಾತ್ಸಾರ ಮನೋಭಾವ
ಒಂದೆಡೆ ಬೆಳ್ಳಂಬೆಳಗ್ಗೆಯೇ ಎಲ್ಲೆಂದರಲ್ಲಿ ಗೋಬಿ ಮಂಚೂರಿ, ಪಾನಿಪೂರಿ ತಿನ್ನುವ ಮಂದಿ, ಮಾಲ್, ಪಬ್, ಸಿನಿಮಾ ಮಂದಿರಗಳು, ಬಾರ್ಗಳ ಮುಂದೆ ಕ್ಯೂ ನಿಲ್ಲುತ್ತಿದ್ದವರ ಗುಂಪು, ಎದುರಿಗೆ ಬಂದವರನ್ನೂ ನೋಡದೆ ಗುದ್ದುಕೊಂಡೇ ಕರ್ತವ್ಯಕ್ಕೆ ಹೊರಟ ಜನರ ಹಿಂಡು, ಎಲ್ಲಕ್ಕೂ ತಾ ಮುಂದು, ನಾ ಮುಂದು ಎಂದು ದುಂಬಾಲು ಬೀಳುತ್ತಿದ್ದ ಸಮುದಾಯ ಇವುಗಳಷ್ಟೇ ನಗರ ವಾಸಿಗಳ ಪ್ರತಿನಿತ್ಯ ಜೀವನದ ಕಥೆಯಾಗಿತ್ತು.
ಇನ್ನೊಂದೆಡೆ ಮನೆಯ ಮುಂದೆ ಸಗಣಿ ನೀರಿನಿಂದ ಸಾರಿಸಿ, ರಂಗವಲ್ಲಿ ಹಾಕಿ, ರೊಟ್ಟಿ, ಮುದ್ದೆ ಹೀಗೆ ಗಟ್ಟಿ ಆಹಾರ ಸೇವಿಸಿ, ನೆರೆ ಮನೆಯವರ ಉಭಯಕುಶಲೋಪರಿಯನ್ನು ವಿಚಾರಿಸಿ, ತಂತಮ್ಮ ಕೆಲಸಗಳಲ್ಲಿ ತೊಡಗುತ್ತಿದ್ದವರು ನಮ್ಮ ಹಳ್ಳಿ ಮಂದಿ. ಈ ಮೊದಲು ಸಿಟಿ ವಾಸಿಗಳಿಗೆ ಹಳ್ಳಿಗಳೆಂದರೆ, ಹಳ್ಳಿಗರ ಜೀವನ ಶೈಲಿ ಎಂದರೆ ಅದೇನೋ ಅಹಂಕಾರ ಮತ್ತು ತಾತ್ಸಾರ ಮನೋಭಾವವೇ ಹೆಚ್ಚು.
ಆದರೀಗ ಬದಲಾದ ಜಾಯಮಾನದಲ್ಲಿ ಎಲ್ಲವೂ ವೈಪರಿತ್ಯವಾಗಿದೆ. ತಮ್ಮ ಮಕ್ಕಳನ್ನು ರಜಾ ದಿನಗಳಲ್ಲಿ ಅಜ್ಜ-ಅಜ್ಜಿಯಂದಿರ ಮನೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದ ಕೆಲವು ಮಂದಿ ಇಂದು ಊರು ಬಿಟ್ಟು ಹೋಗಿ ಎಂದು ಹೇಳುವ ಪರಿಸ್ಥಿತಿ ನಿರ್ಮಿಸಿಕೊಂಡಿದ್ದಾರೆ. ಆದರೆ ನಮ್ಮ ಉದಾರಿ ರೈತ ಬಾಂಧವರು ಯಾವುದೇ ಫಲಾಪೇಕ್ಷೆ ಇಲ್ಲದೆ ಎಲ್ಲರನ್ನೂ ಸಂಭಾಳಿಸುತ್ತದ್ದಾರೆ. ಇದಕ್ಕೇ ಹೇಳುವುದು ‘ಕಾಲಾಯ ತಸ್ಮೈ ನಮಃ’ ಎಂದು.
ಬಲಿಷ್ಠವಾಗಬೇಕಿದೆ ಹಳ್ಳಿಗಳು
ಸ್ವಾತಂತ್ರ್ಯ ನಂತರದ ದಶಕಗಳಲ್ಲೂ ಹಳ್ಳಿಗಳಲ್ಲಿ ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ ಎಂದರೆ ಮೂಲಭೂತ ಸೌಕರ್ಯಗಳ ಕೊರತೆ. ನಾವೆಲ್ಲಾ ಚಂದ್ರಯಾನದಂತಹ ಹೆಮ್ಮೆಯ ಗಗನಯಾನವನ್ನು ಕೈಗೊಳ್ಳುವಷ್ಟು ಸಮರ್ಥರಿದ್ದರೂ ಇಂತಹ ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಬದಿಗಿಡುತ್ತಲೇ ಸಾಗುತ್ತಿರುವುದು ನೋವಿನ ಸಂಗತಿ. ಆದರೆ ಅದೇ ಹಳ್ಳಿಗಳು ಮುಂದೊಂದು ದಿನ ಸಕಲ ಸೌಕರ್ಯಗಳುಳ್ಳ ಸ್ಥಳಗಳಾಗಿ ಮಾರ್ಪಡುವ ಕಾಲ ಸನ್ನಿಹಿತವಾಗುತ್ತಿದೆ.
ಆದರೆ ಇದಕ್ಕೆ ಕೇವಲ ಸರ್ಕಾರದ ಸವಲತ್ತುಗಳನ್ನೇ ಕಾಯದೇ ಅಬೇಧವಾಗಿ ಎಲ್ಲರೂ ಕೈ ಜೋಡಿಸಬೇಕಿದೆ. ಒಂದರ್ಥದಲ್ಲಿ ಇಷ್ಟು ವರ್ಷಗಳ ಕಾಲ ನಮಗೆ ಅನ್ನ ಹಾಕಿ ಶುಶ್ರೂಷೆ ಮಾಡುತ್ತಿದ್ದ ಹಳ್ಳಿಗರಿಗಿಂದು ನಗರ ವಾಸಿಗಳು ಹೊರೆಯಾಗುತ್ತಿದ್ದಾರೆ. ಆದರೆ ಹಳ್ಳಿಗರ ಔದಾರ್ಯದ ಮುಂದೆ ಇದೆಲ್ಲಾ ಮಂಕಾಗುತ್ತಿದೆ.
ಪ್ರಾಯಶಃ ಇಂದು ‘ಜೈ ಕಿಸಾನ್’ ಎಂಬ ಘೋಷವಾಕ್ಯ ಪ್ರತಿಧ್ವನಿಸುತ್ತಿದೆ. ಅದೇನೆ ಇದ್ದರೂ ಹಳ್ಳಿಗಳಿಂದು ಎಲ್ಲ ಕೊರತೆಗಳಿಂದ ಮುಕ್ತವಾಗಬೇಕಿದೆ. ಆರೋಗ್ಯ, ತಂತ್ರಜ್ಞಾನ, ಜಲ ಸಂರಕ್ಷಣೆ, ಶಿಕ್ಷಣ, ರಸ್ತೆಗಳ ನಿರ್ಮಾಣ, ಹೀಗೆ ಹತ್ತು ಹಲವು ಯೋಜನೆಗಳು ಇಂದು ಜಾರಿಯಲ್ಲಿದ್ದರೂ ಯಾವುಗಳು ಪೂರ್ಣ ಪ್ರಮಾಣದಲ್ಲಿ ಫಲಕಾರಿಯಾಗಿಲ್ಲ ಎಂಬುದನ್ನು ಈಗಲಾದರೂ ಮನಗಾಣಬೇಕಿದೆ.
ಬದಲಾದೀತೇ ಕ್ರೂರ ಮನಸ್ಥಿತಿ?
ನಗರಗಳೆಂದರೆ ಹಾಗೆ, ಪ್ರತಿ ಕ್ಷಣವೂ ಟೆನ್ಷನ್, ಭಯ ನಿರ್ಮಿತ ವಾತಾವರಣ, ಕೊಲೆ, ಸುಲಿಗೆ, ದರೋಡೆ, ಸಣ್ಣ ಸಣ್ಣ ವಿಚಾರಗಳಿಗೆಲ್ಲಾ ಗಲಭೆ, ಗಲಾಟೆ, ಮಾಲಿನ್ಯ, ಅನಾರೋಗ್ಯ. ಒಂದರ್ಥದಲ್ಲಿ ‘ಎಲ್ಲ ಇದ್ದು ಏನೂ ಇರದ ಹಾಗೆ’ ಬದುಕು ಸಾಗಿಸುವ ಅನಿವಾರ್ಯತೆ ಅಲ್ಲಿತ್ತು. ಆದರೆ ನಮ್ಮ ಹಳ್ಳಿಗರ ಪರಿಸ್ಥಿತಿ ಹೇಗಿತ್ತೆಂದರೆ ‘ಏನೂ ಇರದಿದ್ದರೂ ಎಲ್ಲ ಇದೆ’ ಎಂದು ಬದುಕುವ ರೀತಿಯಲ್ಲಿತ್ತು.
ಹೀಗೆ ಸದಾ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಜನ ಇಂದು ಹಳ್ಳಿಗಳನ್ನು ಸೇರಿ ಒಂದಷ್ಟು ಸಮಾಧಾನಿಸುತ್ತಿದ್ದಾರೆ. ಇದು ಅವರ ಮೂಲಭೂತ ವರ್ತನೆಯಲ್ಲಿ ಬಹುತೇಕ ಬದಲಾವಣೆ ತರುವ ಕಾಲವೂ ಆಗಿದೆ. ಶಾಂತಪ್ರಿಯ ಭಾರತದಲ್ಲಿ ಇವೆಲ್ಲವೂ ಸದ್ದಿಲ್ಲದೆ ನಡೆಯುತ್ತಿತ್ತು ಎಂಬುದನ್ನು ನಾವು ನಂಬಲೇಬೇಕಿದೆ. ಆದರೆ ಈಗ ಸರಳ ಜೀವನದ ಪಾಠ ಕಲಿಸುತ್ತಿರುವ ನಿರಕ್ಷಕರಕುಕ್ಷಿಗಳಿಗೆ ನಾವೊಂದು ಸಲಾಮ್ ಸಲ್ಲಿಸೋಣ.
ಹೆಚ್ಚಳವಾಗಲಿದೆ ನಿರೀಕ್ಷಿತ ಜೀವಿತಾವಧಿ
ನಗರವಾಸಿಗಳಲ್ಲಿ ಸದಾಕಾಲ ಅತೀವ ಅನಾರೋಗ್ಯ ಪೀಡಿತರ ಸಂಖ್ಯೆಯೇ ಹೆಚ್ಚು. ಅಲ್ಲಿನ ಮಾಲಿನ್ಯ, ಜನಜಂಗುಳಿ, ಕ್ರೌರ್ಯ, ಅವರ ಆಹಾರ ಪದ್ಧತಿಗಳು ವಿಚಿತ್ರ ಹಾಗೂ ಅನಾರೋಗ್ಯಕರವಾಗಿವೆ. ಹೀಗಾಗಿ ಬಹುತೇಕ ನಗರ ವಾಸಿಗಳ ನಿರೀಕ್ಷಿತ ಜೀವಿತಾವಧಿ (ಆಯಸ್ಸು) ಕಡಿಮೆಯೇ ಇತ್ತೆಂಬುದು ಆಶ್ಚರ್ಯವೇನಲ್ಲ.
ಬದಲಾದ ಇಂದಿನ ಸನ್ನಿವೇಶದಲ್ಲಿ ನಮ್ಮ ದೇಶವಾಸಿಗಳ ಆಯಸ್ಸು ಹೆಚ್ಚಾಗುವ ನಿರೀಕ್ಷೆಯಿದೆ. ಇದಕ್ಕೆಲ್ಲಾ ಕಾರಣಕರ್ತರಾಗುತ್ತಿರುವ ನಮ್ಮ ಹಳ್ಳಿಗರನ್ನ ನಾವು ಮತ್ತೊಮ್ಮೆ ಗೌರವಿಸದೆ ಇರಬಾರದು. ಜೀವನವನ್ನಷ್ಟೇ ಅಲ್ಲ ಜೀವವನ್ನೂ ವೃದ್ಧಿಸುತ್ತಿರುವುದು ಇಂದು ನಮ್ಮ ಹಳ್ಳಿಗರೆ. ಆದರೆ ಇದಕ್ಕೆ ಪೂರಕವಾದ ಸನ್ನಿವೇಶಗಳು ಗ್ರಾಮೀಣ ಭಾಗದಲ್ಲಿ ಮತ್ತಷ್ಟು ದೊರಕುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದಿದೆ.
ಕೃಷಿಗೆ ದೊರಬೇಕಿದೆ ಮತ್ತಷ್ಟು ಆದ್ಯತೆ
ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ವಲಯಗಳ ಪೈಕಿ ಈ ಮೊದಲು ನಮ್ಮ ರಾಷ್ಟ್ರೀಯ ಆದಾಯದ ಸಿಂಹಪಾಲು ಕೃಷಿಯದ್ದೇ ಆಗಿತ್ತು. ಆದರೆ ಜಾಗತೀಕರಣ, ಖಾಸಗೀಕರಣ ಮತ್ತು ಉದಾರಿಕರಣಗಳ ಫಲವಾಗಿ ಇತ್ತೀಚೆಗೆ ಕೃಷಿ ವಲಯ ನಿರ್ಲಕ್ಷಕ್ಕೆ ಒಳಪಟ್ಟಿರುವುದು ಬೇಸರ ಹಾಗೂ ಆತಂಕಕಾರಿ ಸಂಗತಿಯಾಗಿದೆ.
ಇಂದಿನ ಪರಿಸ್ಥಿತಿಯಲ್ಲಿ ಅನ್ನ ತಿಂದು ಜೀವ ಉಳಿಸಿಕೊಳ್ಳಲು ಸಾಧ್ಯವೇ ಹೊರತು, ಬೇರೇನೂ ಅಲ್ಲ ಎಂಬಂತಾಗಿದೆ. ಮತ್ತೊಮ್ಮೆ ನಮ್ಮ ಅನ್ನದಾತನಿಗೆ ಬೆಲೆ ಬರುತ್ತಿದೆ. ಆದರೆ ಅನ್ನದಾತನತ್ತ ನಮ್ಮ ಸರ್ಕಾರಳ ಚಿತ್ತ ಬೀಳಬೇಕಿದೆ. ಇತರ ವಲಯಗಳಂತೆಯೇ ಕೃಷಿಯನ್ನೂ ಅಭಿವೃದ್ಧಿಪಡಿಸಬೇಕಿದೆ. ಇಲ್ಲವಾದಲ್ಲಿ ಕೊರೋನಾ ವಿಷ ಕ್ರಿಮಿಯ ಲಗ್ಗೆ ಹೀಗೆಯೇ ಹೆಚ್ಚಾಗುತ್ತಿದ್ದರೆ, ಮುಂದೊಂದು ದಿನ ತಿನ್ನಲು ಅನ್ನವೂ ಇಲ್ಲದಂತಾಗಿ, ಗೆಡ್ಡೆ, ಗೆಣಸುಗಳನ್ನು ತಿಂದು ಆದಿ ಮಾನವರಂತೆ ಬದುಕುವ ಕಾಲ ಬಂದರೂ ಆಶ್ಚರ್ಯವೇನಿಲ್ಲ!
ನನಸಾಗುವುದೇ ಬಾಪೂಜಿ ಕನಸು?
“ಹಳ್ಳಿಗಳ ಉದ್ದಾರದಿಂದಲೇ ದೇಶದ ಉದ್ದಾರ” ಎಂಬ ಮಾತನ್ನು ನಮ್ಮ ರಾಷ್ಟ್ರಪಿತ ಗಾಂಧೀಜಿಯವರು ಸುಮಾರು ವರ್ಷಗಳ ಹಿಂದೆಯೇ ನುಡಿದಿದ್ದಾರೆ. ಮದ್ಯಪಾನಮುಕ್ತ ಗ್ರಾಮಗಳು, ಗುಡಿ ಕೈಗಾರಿಕೆಗಳಿಗೆ ಆದ್ಯತೆ, ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ, ಸ್ವದೇಶಿ ವಸ್ತುಗಳ ಬಳಕೆ, ಅಧಿಕಾರ ವಿಕೇಂದ್ರಿಕರಣದ ಮೂಲಸ್ಥಾನ ಹೀಗೆ ಗ್ರಾಮೀಣಾಭಿವೃದ್ಧಿಯ ಬಗ್ಗೆ ಬಾಪೂಜಿ ಅಂದೇ ದೊಡ್ಡ ದೊಡ್ಡ ಕನಸುಗಳನ್ನು ಕಂಡಿದ್ದರು.
ಇಂದಿನ ಪರಿಸ್ಥಿತಿ ನೋಡಿದರೆ ಆ ಕಾಲ ಬಹುಬೇಗ ಬರುವುದೇ? ಎಂದು ಕಾದು ನೋಡಬೇಕಿದೆ. ಹಾಗೆ ನೋಡಿದರೆ ಇಂದು ನಿಜಕ್ಕೂ ನಗರಳಲ್ಲಿನ ದ್ವಿತೀಯ ಹಾಗೂ ತೃತೀಯ ವಲಯಗಳ ಬಹುತೇಕ ಚಟುವಟಕೆಗಳಲ್ಲಿ ಕೃಷಿಯ ಸಹಕಾರವೇ ಹೆಚ್ಚು. ಈ ಹಿನ್ನೆಲೆಯಲ್ಲಿ ನಮ್ಮ ಗ್ರಾಮೀಣ ಭಾಗಗಳನ್ನು ಮುನ್ನೆಲೆಗೆ ತರುವಂತಹ ಕ್ರಮಗಳು ಇಂದು ಅಪೇಕ್ಷಣಿಯ.
ಕೈಗಾರಿಕೆಗಳ ಮೂಲ ನೆಲೆಯಾದೀತೇ?
ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸುವಲ್ಲಿ ಕೃಷಿ ಕ್ಷೇತ್ರದ ಸಾಮಥ್ರ್ಯ ಹೆಚ್ಚಿದ್ದರೂ, ವರ್ಷವಿಡೀ ಕೃಷಿಯಲ್ಲಿ ಉದ್ಯೋಗ ಲಭ್ಯತೆ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿರುದ್ಯೋಗಿಗಳಾಗುತ್ತಿದ್ದ ನಮ್ಮ ಗ್ರಾಮೀಣ ಭಾಗದ ಜನರು ನಗರಗಳತ್ತ ವಲಸೆ ಹೋಗುತ್ತಿದ್ದರು. ಆದರೆ ಇಂದು ಅದೇ ವಲಸೆ ಪುನರಾವರ್ತಿತವಾಗುತ್ತಿದೆ.
ಇಂತಹ ಕೃಷಿ ಕಾರ್ಮಿಕತನ್ನು ಒಂದೆಡೆ ಸಂಘಟಿಸಿ ಇಂದು ಅವರಿಗೆ ಸರಿ ಹೊಂದುವ ಉದ್ಯೋಗ ಸೃಷ್ಟಿಗೆ ಸರ್ಕಾರಗಳು ಮುಂದಾಗಬೇಕಿದೆ. ತಾವಿರುವ ಸ್ಥಳಗಳಲ್ಲಿಯೇ ಸಾಧ್ಯವಿರುವ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಿದರೆ ನಿರುದ್ಯೋಗ ಸಮಸ್ಯೆಯ ನಿವಾರಣೆ ಜೊತೆಗೆ ದೇಶದ ಆರ್ಥಿಕತೆಯೂ ಸಹ ಬಲಿಷ್ಠವಾಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಕೃಷಿ ಪದ್ಧತಿಗೆ ಮತ್ತೊಮ್ಮೆ ಜೀವ ತುಂಬಲು ಸಾಧ್ಯವಿದೆ.
(ಕುಮಾರಸ್ವಾಮಿ.ವಿ.ಕೆ
(ಕುಮಾರ್ ಭಾರದ್ವಾಜ್)
ಹವ್ಯಾಸಿ ಬರಹಗಾರರು, ವಿರುಪಾಪುರ,
ಸುಗ್ಗನಹಳ್ಳಿ ಅಂಚೆ, ತಿಪ್ಪಸಂದ್ರ ಹೋಬಳಿ,
ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ.
ಮೊಬೈಲ್ : 9113906120, 9740840678)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


