ದಿನದ ಸುದ್ದಿ

ಚನ್ನಗಿರಿ | ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ನಡೆದ ಶಿವಗಂಗೋತ್ರಿ ಯುವಜನೋತ್ಸವ- 2023 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಚನ್ನಗಿರಿ ಕಾಲೇಜಿನ ವಿದ್ಯಾರ್ಥಿಗಳು 3 ಸ್ಪರ್ಧೆಯಲ್ಲಿ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ ಮಧುವಂತಿ ವಿ ಹಿರೇಮಠ್ (ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಹಾಗೂ ಹಿಂದುಸ್ತಾನಿ ಭಜನ್ ) ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ಆಗಿದ್ದಾರೆ. ಏಕಾಂಕ ನಾಟಕದ 12 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆಯುವ ಮೂಲಕ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಹಾಗೂ ಮಾತುಗಾರಿಕೆಯಲ್ಲಿ ಆಲಿಯಾ ಮುಸ್ಕಾನ್ ತೃತೀಯ ಸ್ಥಾನ ಪಡೆದಿದ್ದಾರೆ. ಇದೆ ಜನವರಿಯಲ್ಲಿ ಕಲಬುರ್ಗಿಯಲ್ಲಿ ನಡೆಯುವ ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಶ್ರೀ ಷಣ್ಮುಖಪ್ಪ ಕೆ ಎಚ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ‌ ಭಾಗವಹಿಸಿದ್ದರು. ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಪ್ರೊ ಹಾಲಸಿದ್ದಪ್ಪ ಸಿ ಬಿ ಅವರು ಪ್ರಶಂಸಿಸಿದ್ದು ದಕ್ಷಿಣ ಭಾರತದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾಗುವಂತೆ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರೊ ಅಮೃತೇಶ್ವರ್ , ಅಬ್ದುಲ್ ರೆಹಮಾನ್, ಡಾ.ಹೊನ್ನೇಗೌಡ, ಕಲ್ಲೇಶ್ವಪ್ಪ ದೈಹಿಕ ನಿರ್ದೇಶಕರು, ಶ್ರೀಮತಿ ಗೌರಮ್ಮ, ಶ್ರೀ ಜಯನಾಯ್ಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version