ದಿನದ ಸುದ್ದಿ
ತಪ್ಪದೇ ಬಳಸಿ ತುಪ್ಪ | ಆರೋಗ್ಯಕ್ಕೆ ಅತೀ ಅಗತ್ಯ ; ತಿಳಿಯಿರಿ ತುಪ್ಪದ ಮಹತ್ವ
![](https://suddidina.com/wp-content/uploads/2024/06/ghee_suddidina_Tuppa.jpg)
ನಾವು ಅಡುಗೆಯಲ್ಲಿ ಬಳಸುವಂತಹ ತುಪ್ಪದಲ್ಲಿ ಹಲವಾರು ಬಗೆಯ ಆರೋಗ್ಯ ಗುಣಗಳು ಇವೆ. ತುಪ್ಪವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಂಡು ಬಂದಿದೆ. ಶುದ್ಧ ದೇಶಿ ತುಪ್ಪವನ್ನು ಬಳಸಿದರೆ ಆರೋಗ್ಯ ವೃದ್ಧಿಸುತ್ತದೆ. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪ ಸೇವನೆ ಮಾಡಿದರೆ ದೇಹಕ್ಕೆ ನಾನಾ ರೀತಿಯ ಲಾಭಗಳು ಆಗುತ್ತವೆ. ಹಾಗಾದರೆ ತುಪ್ಪ ಸೇವನೆ ಮಾಡಿದರೆ ದೇಹಕ್ಕೆ ಆಗುವ ಲಾಭಗಳ ಬಗ್ಗೆ ತಿಳಿಯಿರಿ.
ತುಪ್ಪ ಸೇವನೆಯಿಂದ ಜೀರ್ಣಕ್ರಿಯೆ ಕಿಣ್ವವು ಸ್ರವಿಸುವುದನ್ನು ಉತ್ತೇಜಿಸಿ ಜೀರ್ಣಕ್ರಿಯೆಯು ಸರಾಗವಾಗುವುದು. ಜೀರ್ಣಕ್ರಿಯೆ ಆಮ್ಲವನ್ನು ಉತ್ಪತ್ತಿ ಮಾಡಲು ಇದು ಸಹಕಾರಿ.
ತುಪ್ಪದಿಂದ ಆ ದಿನದ ಆರಂಭ ಮಾಡಿದರೆ ಆಗ ದೇಹಕ್ಕೆ ಶಕ್ತಿ ಸಿಗುವುದು. ದೇಹವು ತುಂಬಾ ಉಲ್ಲಾಸ ಮತ್ತು ಕೇಂದ್ರೀಕೃತವಾಗಿರಲು ಸಹಕಾರಿ.
ತುಪ್ಪವು ತೂಕ ಹೆಚ್ಚಿಸುವುದು ಎನ್ನುವ ತಪ್ಪು ಕಲ್ಪನೆಯು ಇದೆ. ಆದರೆ ಮಿತವಾಗಿ ಸೇವಿಸಿದರೆ ತೂಕ ನಿರ್ವಹಿಸಲು ಸಹಕಾರಿ.
ತುಪ್ಪದಲ್ಲಿ ಇರುವ ಕೊಬ್ಬು ಮೆದುಳಿನ ಆರೋಗ್ಯಕ್ಕೆ ಅತೀ ಅಗತ್ಯ. ಮೆದುಳಿನ ಅಂಗಾಂಶಗಳು ಬೆಳವಣಿಗೆ ಆಗಲು ಹಾಗೂ ಸರಿಯಾಗಿ ನಿರ್ವಹಿಸಿ ಪೋಷಕಾಂಶಗಳನ್ನು ಒದಗಿಸುವುದು.
ತುಪ್ಪದಲ್ಲಿ ಬ್ಯುಟರಿಕ್ ಆಮ್ಲವಿದ್ದು, ಇದು ಸಣ್ಣ ಸರಪಳಿ ಕೊಬ್ಬಿನಾಮ್ಲ, ಉರಿಯೂತ ಶಮನಕಾರಿ ಮತ್ತು ಪ್ರತಿರೋಧಕ ಶಕ್ತಿ ವೃದ್ಧಿ ಮಾಡುವ ಗುಣಗಳು ಇವೆ.
ಹಾರ್ಮೋನ್ ಉತ್ಪಾದನೆ ಮತ್ತು ನಿಯಂತ್ರಣಕ್ಕೆ ಆರೋಗ್ಯಕಾರಿ ಕೊಬ್ಬು ಅಗತ್ಯ. ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ಹಾರ್ಮೋನ್ ಮಟ್ಟವನ್ನು ನಿಯಂತ್ರಿಸುತ್ತದೆ.
ತುಪ್ಪದಲ್ಲಿ ವಿಟಮಿನ್ ಎ, ಡಿ, ಇ ಮತ್ತು ಕೆ ಜೊತೆಗೆ ಆ್ಯಂಟಿಆಕ್ಸಿಡೆಂಟ್ ಉತ್ತಮ ಪ್ರಮಾಣದಲ್ಲಿದೆ. ಇದು ಚರ್ಮಕ್ಕೆ ಪೋಷಣೆ ನೀಡುವುದು ಹಾಗೂ ಆರೋಗ್ಯವಾಗಿಡುವ ಜತೆಗೆ ಕಾಂತಿ ಒದಗಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ; ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
![](https://suddidina.com/wp-content/uploads/2022/05/puc_results_2022_suddidina.jpg)
ಸುದ್ದಿದಿನ,ದಾವಣಗೆರೆ:ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು
![](https://suddidina.com/wp-content/uploads/2024/06/actor_darshan_suddidina_arrested.jpg)
ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಾಡೋಜೆ ಡಾ. ಕಮಲಾ ಹಂಪನಾಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಗಣ್ಯರಿಂದ ಅಂತಿಮ ನಮನ
![](https://suddidina.com/wp-content/uploads/2024/06/kamalahampana_suddidina_siddaramaiah.jpg)
ಸುದ್ದಿದಿನ,ಬೆಂಗಳೂರು:ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವೀಂದ್ರ ಕಲಾಕ್ಷೇತ್ರದಲ್ಲಿ ಪಡೆದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ, ಕಮಲಾ ಹಂಪನಾ, ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು ಅಂತಿಮನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದೆ.
ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ.
ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48… pic.twitter.com/bCsMRaY2r6— Siddaramaiah (@siddaramaiah) June 22, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ಅಂತರಂಗ7 days ago
ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು
-
ದಿನದ ಸುದ್ದಿ6 days ago
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
-
ದಿನದ ಸುದ್ದಿ7 days ago
ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ
-
ದಿನದ ಸುದ್ದಿ3 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ3 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ6 days ago
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
-
ದಿನದ ಸುದ್ದಿ5 days ago
ವಯನಾಡ್ ಸಂಸದ ಸ್ಥಾನ ತ್ಯಜಿಸಲು ನಿರ್ಧರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ
-
ದಿನದ ಸುದ್ದಿ6 days ago
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ