Connect with us

ದಿನದ ಸುದ್ದಿ

ತಪ್ಪದೇ ಬಳಸಿ ತುಪ್ಪ | ಆರೋಗ್ಯಕ್ಕೆ ಅತೀ ಅಗತ್ಯ ; ತಿಳಿಯಿರಿ ತುಪ್ಪದ ಮಹತ್ವ

Published

on

ನಾವು ಅಡುಗೆಯಲ್ಲಿ ಬಳಸುವಂತಹ ತುಪ್ಪದಲ್ಲಿ ಹಲವಾರು ಬಗೆಯ ಆರೋಗ್ಯ ಗುಣಗಳು ಇವೆ. ತುಪ್ಪವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಂಡು ಬಂದಿದೆ. ಶುದ್ಧ ದೇಶಿ ತುಪ್ಪವನ್ನು ಬಳಸಿದರೆ ಆರೋಗ್ಯ ವೃದ್ಧಿಸುತ್ತದೆ. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪ ಸೇವನೆ ಮಾಡಿದರೆ ದೇಹಕ್ಕೆ ನಾನಾ ರೀತಿಯ ಲಾಭಗಳು ಆಗುತ್ತವೆ. ಹಾಗಾದರೆ ತುಪ್ಪ ಸೇವನೆ ಮಾಡಿದರೆ ದೇಹಕ್ಕೆ ಆಗುವ ಲಾಭಗಳ ಬಗ್ಗೆ ತಿಳಿಯಿರಿ.

ತುಪ್ಪ ಸೇವನೆಯಿಂದ ಜೀರ್ಣಕ್ರಿಯೆ ಕಿಣ್ವವು ಸ್ರವಿಸುವುದನ್ನು ಉತ್ತೇಜಿಸಿ ಜೀರ್ಣಕ್ರಿಯೆಯು ಸರಾಗವಾಗುವುದು. ಜೀರ್ಣಕ್ರಿಯೆ ಆಮ್ಲವನ್ನು ಉತ್ಪತ್ತಿ ಮಾಡಲು ಇದು ಸಹಕಾರಿ.

ತುಪ್ಪದಿಂದ ಆ ದಿನದ ಆರಂಭ ಮಾಡಿದರೆ ಆಗ ದೇಹಕ್ಕೆ ಶಕ್ತಿ ಸಿಗುವುದು. ದೇಹವು ತುಂಬಾ ಉಲ್ಲಾಸ ಮತ್ತು ಕೇಂದ್ರೀಕೃತವಾಗಿರಲು ಸಹಕಾರಿ.

ತುಪ್ಪವು ತೂಕ ಹೆಚ್ಚಿಸುವುದು ಎನ್ನುವ ತಪ್ಪು ಕಲ್ಪನೆಯು ಇದೆ. ಆದರೆ ಮಿತವಾಗಿ ಸೇವಿಸಿದರೆ ತೂಕ ನಿರ್ವಹಿಸಲು ಸಹಕಾರಿ.

ತುಪ್ಪದಲ್ಲಿ ಇರುವ ಕೊಬ್ಬು ಮೆದುಳಿನ ಆರೋಗ್ಯಕ್ಕೆ ಅತೀ ಅಗತ್ಯ. ಮೆದುಳಿನ ಅಂಗಾಂಶಗಳು ಬೆಳವಣಿಗೆ ಆಗಲು ಹಾಗೂ ಸರಿಯಾಗಿ ನಿರ್ವಹಿಸಿ ಪೋಷಕಾಂಶಗಳನ್ನು ಒದಗಿಸುವುದು.

ತುಪ್ಪದಲ್ಲಿ ಬ್ಯುಟರಿಕ್‌ ಆಮ್ಲವಿದ್ದು, ಇದು ಸಣ್ಣ ಸರಪಳಿ ಕೊಬ್ಬಿನಾಮ್ಲ, ಉರಿಯೂತ ಶಮನಕಾರಿ ಮತ್ತು ಪ್ರತಿರೋಧಕ ಶಕ್ತಿ ವೃದ್ಧಿ ಮಾಡುವ ಗುಣಗಳು ಇವೆ.

ಹಾರ್ಮೋನ್‌ ಉತ್ಪಾದನೆ ಮತ್ತು ನಿಯಂತ್ರಣಕ್ಕೆ ಆರೋಗ್ಯಕಾರಿ ಕೊಬ್ಬು ಅಗತ್ಯ. ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ಹಾರ್ಮೋನ್‌ ಮಟ್ಟವನ್ನು ನಿಯಂತ್ರಿಸುತ್ತದೆ.

ತುಪ್ಪದಲ್ಲಿ ವಿಟಮಿನ್‌ ಎ, ಡಿ, ಇ ಮತ್ತು ಕೆ ಜೊತೆಗೆ ಆ್ಯಂಟಿಆಕ್ಸಿಡೆಂಟ್‌ ಉತ್ತಮ ಪ್ರಮಾಣದಲ್ಲಿದೆ. ಇದು ಚರ್ಮಕ್ಕೆ ಪೋಷಣೆ ನೀಡುವುದು ಹಾಗೂ ಆರೋಗ್ಯವಾಗಿಡುವ ಜತೆಗೆ ಕಾಂತಿ ಒದಗಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending