Connect with us

ದಿನದ ಸುದ್ದಿ

ನಾಡಿನೆಲ್ಲೆಡೆ ಗೌರಿ-ಗಣೇಶ ಸಂಭ್ರಮ

Published

on

ಇಂದು ಗೌರಿ ಹಬ್ಬ. ರಾಜ್ಯದೆಲ್ಲೆಡೆ ಗೌರಿ-ಗಣೇಶ ಹಬ್ಬದ (Gauri Ganesh Festival ) ಸಂಭ್ರಮ ಕಂಡು ಬರುತ್ತಿದೆ. ವ್ಯಾಪಕ ಮಳೆ ಮತ್ತು ಪ್ರವಾಹದ ನಡುವೆಯೂ ಹಬ್ಬಕ್ಕಾಗಿ ಗೌರಿ ಮತ್ತು ಗಣೇಶ ಮೂರ್ತಿಗಳ ಖರೀದಿ ನಡೆಯುತ್ತಿದೆ. ವಿಶೇಷವಾಗಿ ಮಣ್ಣಿನ ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಮಾರಾಟ ಹೆಚ್ಚಾಗಿದೆ. ಹಬ್ಬಕ್ಕೆ ಅಗತ್ಯವಾಗಿರುವ ವಸ್ತುಗಳ ಖರೀದಿ ಮತ್ತು ಮಾರಾಟ ಜೋರಾಗಿದೆ.

ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹಬ್ಬಕ್ಕಾಗಿ ಹೂವು, ಹಣ್ಣು ಮತ್ತಿತರ ವಸ್ತುಗಳ ಖರೀದಾಗಿ ಜನ ಮುಗಿ ಬಿದ್ದಿದ್ದಾರೆ. ಮಾರುಕಟ್ಟೆಯ ಗಿಜಿಗುಡುವ ವಾತಾವರಣದಲ್ಲಿ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆ ಆಸುಪಾಸಿನಲ್ಲಿ ಬೆಳಿಗ್ಗೆ 4 ಗಂಟೆಯಿಂದಲೇ ವಾಹನ ದಟ್ಟಣೆ ಕಂಡು ಬಂತು. ಮಲ್ಲೇಶ್ವರಂ, ಜಯನಗರ ಮತ್ತಿತರ ಪ್ರದೇಶಗಳಲ್ಲೂ ಸಹ ಹಬ್ಬದ ಸಡಗರ ಕಂಡು ಬಂದಿದೆ.

ಮೈಸೂರಿನಲ್ಲಿ ಕುಶಲ ಕರ್ಮಿಗಳು ಗೌರಿ ಹಬ್ಬದಂದು ಬಾಗಿನ ನೀಡಲು ಬಳಸುವ ’ಗೌರಿ ಮೊರ’ ತಯಾರಿಕೆಯಲ್ಲಿ ತೊಡಗಿದ್ದಾರೆ. ಹಬ್ಬದ ದಿನದಂದು ಗೌರಿ ಮೊರದಲ್ಲಿ ಧಾನ್ಯ, ಬೆಲ್ಲ ಇತ್ಯಾದಿ ವಸ್ತುಗಳನ್ನು ತುಂಬಿ ಬಾಗಿನ ಅರ್ಪಿಸುವ ಸಂಪ್ರದಾಯ ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹೀಗಾಗಿ ಬಿದಿರಿನ ಮೊರಕ್ಕೆ ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಕಾರ್ಮಿಕರಾದ ಪಾರ್ವತಿ, ಸುಮಾರು ೧೫ ವರ್ಷಗಳಿಂದ ಬುಟ್ಟಿ ಹೆಣೆಯುತ್ತಿದ್ದು, ಗೌರಿ ಹಬ್ಬ ಸಂದರ್ಭದಲ್ಲಿ ಉತ್ತಮ ಬೇಡಿಕೆ ಬರುತ್ತದೆ ಎಂದರು.

ಮತ್ತೋರ್ವ ಕಾರ್ಮಿಕರಾದ ಭಾಗ್ಯಮ್ಮ ಮಾತನಾಡಿ, ಗೌರಿಗೆ ಮೊರದಲ್ಲಿ ಬಾಗಿನ ಅರ್ಪಿಸುವುದರಿಂದ ಈ ಹಬ್ಬದ ವೇಳೆ ಬೇಡಿಕೆ ಹೆಚ್ಚಾಗಿದೆ ಎಂದರು.

ಗ್ರಾಹಕರಾದ ಮೋನಿಕಾ ಈಗಲೂ ಸಂಪ್ರದಾಯಬದ್ಧವಾಗಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಹಬ್ಬದ ವೇಳೆ ವಿವಿಧ ಬುಟ್ಟಿಗಳ ಮೂಲಕ ಬಾಗಿನ ಅರ್ಪಿಸುತ್ತೇವೆ ಎಂದರು.
ಶುಭ ಎಂಬವರು ಮಾತನಾಡಿ, ಗೌರಿ-ಗಣೇಶ ಹಬ್ಬದಂದು ಬಿದಿರಿನ ಬುಟ್ಟಿಗಳನ್ನು ಬಳಕೆ ಮಾಡಲಾಗುತ್ತದೆ. ಹೀಗಾಗಿ ಗೌರಿ ಮೊರವನ್ನು ಖರೀದಿಸುತ್ತಿದ್ದೇವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending