Connect with us

ದಿನದ ಸುದ್ದಿ

ಗ್ಯಾರಂಟಿಗಳಿಂದ ಆರ್ಥಿಕಾಭಿವೃದ್ದಿ ; ಯೋಜನೆ ಟೀಕೆ ಮಾಡುತ್ತಿದ್ದವರು ಅನುಷ್ಟಾನದ ಅಧ್ಯಯನ ಮಾಡುವಂತಾಗಿದೆ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕಾಭಿವೃದ್ದಿಯಾಗುತ್ತಿದ್ದು ಯೋಜನೆಗಳ ಅನುಷ್ಟಾನಕ್ಕೆ ಅಪಸ್ವರವೆತ್ತಿದವರು ರಾಜ್ಯಕ್ಕೆ ಬಂದು ಗ್ಯಾರಂಟಿ ಯೋಜನೆಗಳ ಅಧ್ಯಯನ ಮಾಡುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಇಂಧನ, ಸಾರಿಗೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಂದ ಏರ್ಪಡಿಸಲಾದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕಚೇರಿ ಉದ್ಘಾಟನೆ ನೆರವೇರಿಸಿ ಸಮಾರಂಭದಲ್ಲಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಕಷ್ಟ, ಇದರಿಂದ ಆರ್ಥಿಕ ನಷ್ಟವಾಗಿ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿದ್ದರು. ಆದರೆ ಯೋಜನೆಗಳನ್ನು ಕಳೆದೆರಡು ವರ್ಷಗಳಿಂದ ಯಶಸ್ವಿಯಾಗಿ ಅನುಷ್ಟಾನ ಮಾಡಲಾಗಿದೆ. ಯಶಸ್ವಿಯಾದ ಯೋಜನೆಗಳ ಕುರಿತು ವಿವಿಧ ರಾಜ್ಯಗಳು ಕರ್ನಾಟಕಕ್ಕೆ ಬಂದು ಅಧ್ಯಯನ ಮಾಡುವಂತಾಗಿದೆ. ಪ್ರತಿ ಕುಟುಂಬಕ್ಕೆ 4 ರಿಂದ 6 ಸಾವಿರದಷ್ಟು ಯೋಜನೆಗಳ ಲಾಭ ಸಿಗುತ್ತಿರುವುದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದ್ದು ಪರೋಕ್ಷವಾಗಿ ಆರ್ಥಿಕಾಭಿವೃದ್ದಿಯಾಗಿ ಜೀವನ ನಿರ್ವಹಣಾ ಮಟ್ಟ ಹೆಚ್ಚಳವಾಗಿದೆ ಎಂದರು.

ಪಂಚ ಗ್ಯಾರಂಟಿ ನೇರವಾಗಿ ಜನರಿಗೆ ತಲುಪುವುದರಿಂದ ಇನ್ನೂ ಪಾರದರ್ಶಕವಾಗಿ ಯೋಜನೆಗಳನ್ನು ಅನುಷ್ಟಾನ ಮಾಡಿ ಜನರಿಗೆ ತಲುಪಿಸುವ ಕೆಲಸವನ್ನು ಸಮಿತಿಯಿಂದ ಮಾಡಬೇಕಾಗಿದೆ. ಆರ್ಥಿಕ ಸೌಲಭ್ಯ ನೀಡುವ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳನ್ನು ಪ್ರತಿ ತಿಂಗಳು 1 ರಿಂದ 5 ನೇ ತಾರೀಖಿನೊಳಗೆ ತಲುಪಿಸುವಂತೆ ಮಾಡಬೇಕೆಂದರು.

ಶಕ್ತಿ ಯೋಜನೆಯಡಿ ದಾವಣಗೆರೆ ಕೆಎಸ್‍ಆರ್‍ಟಿಸಿಗೆ ರೂ.213.48 ಕೋಟಿ, ಅನ್ನಭಾಗ್ಯ ಯೋಜನೆಯಡಿ 3.44 ಲಕ್ಷ ಕಾರ್ಡ್‍ದಾರರು ಹಾಗೂ 12.42 ಲಕ್ಷ ಫಲಾನುಭವಿಗಳಿಗೆ ರೂ.346 ಕೋಟಿ, ಗೃಹಜ್ಯೋತಿ ಯೋಜನೆಯಡಿ 5.03 ಲಕ್ಷ ಆರ್.ಆರ್.ಸಂಖ್ಯೆ ಹೊಂದಿದ ಕುಟುಂಬಗಳಿಗೆ ರೂ.409 ಕೋಟಿ ವಿದ್ಯುತ್ ಸಬ್ಸಿಡಿ, ಗೃಹಲಕ್ಷ್ಮಿಯಡಿ 3.6 ಲಕ್ಷ ಯಜಮಾನಿಯರಿಗೆ ರೂ.1255 ಕೋಟಿ ಮತ್ತು ಯುವನಿಧಿಯಡಿ 9094 ವಿದ್ಯಾರ್ಥಿಗಳಿಗೆ ರೂ.13 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ನೂತನ ಕಚೇರಿ ಉದ್ಘಾಟನೆಯಲ್ಲಿ ಭಾಗಿಯಾಗಿ ಸಮಾರಂಭದಲ್ಲಿ ಮಾತನಾಡಿ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಕಳೆದೆರಡು ವರ್ಷಗಳಲ್ಲಿ ರೂ.82 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರ ಯೋಜನೆಗಳನ್ನು ಬರೀ ಚುನಾವಣೆಗಾಗಿ ರೂಪಿಸಿಲ್ಲ, ಜನರ ಕಲ್ಯಾಣಕ್ಕಾಗಿ ಅನುಷ್ಟಾನ ಮಾಡುತ್ತಿದೆ.

ಉಳುವವನೇ ಭೂ ಒಡೆಯ, ಪದವೀಧರರಿಗೆ ಸ್ಟೈಫಂಡ್, ಸಿಇಟಿ ಮೂಲಕ ಉನ್ನತ ವ್ಯಾಸಂಗಕ್ಕೆ ಆಯ್ಕೆ, ರೈತರಿಗೆ ಉಚಿತ ವಿದ್ಯುತ್, ಬೆಂಗಳೂರು ಐಟಿ, ಬಿಟಿ ನಗರವನ್ನಾಗಿ ಅಭಿವೃದ್ದಿ, ಕಳೆದ ಸರ್ಕಾರದ ಅವಧಿಯಲ್ಲಿ ನೀಡಿದ 165 ಭರವಸೆಗಳಲ್ಲಿ ಎಲ್ಲವನ್ನು ಈಡೇರಿಸಲಾಗಿದೆ. ಈಗ ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡಿದ್ದು ಈ ಯೋಜನೆಗಳು ಮನೆ ಮಾತಾಗಿವೆ ಎಂದರು.

ಹಿಂದೆ ಗುಜರಾತ್ ಮಾದರಿ ಎಂದು ಹೇಳಲಾಗುತ್ತಿತ್ತು, ಆದರೆ ಈಗ ಕರ್ನಾಟಕ ಮಾದರಿ ಎಂದು ಹೇಳುವಂತಾಗಿದ್ದು ಅನೇಕ ರಾಜ್ಯಗಳು ನಮ್ಮ ಪಂಚ ಗ್ಯಾರಂಟಿಗಳನ್ನು ಅನುಕರಣೆ ಮಾಡುವ ನಿಟ್ಟಿನಲ್ಲಿ ಸಾಗಿವೆ. ಪಂಚ ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 450 ಕೋಟಿಯಷ್ಟು ಮಹಿಳೆಯರು ಎಲ್ಲಾ ಜಿಲ್ಲೆಗಳಿಂದ ಪ್ರಯಾಣಿಸಿದ್ದು ಇದಕ್ಕಾಗಿ ರೂ.11188 ಕೋಟಿ ವೆಚ್ಚ ಭರಿಸಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಕಾರ್ಡ್‍ದಾರರಿಗೆ ರೂ.11821 ಕೋಟಿ, ಗೃಹಜ್ಯೋತಿಯಡಿ 1.63 ಕೋಟಿ ಕುಟುಂಬಗಳಿಗೆ ರೂ.14950 ಕೋಟಿ, ಗೃಹಲಕ್ಷ್ಮಿಯಡಿ 1.22 ಕೋಟಿ ಯಜಮಾನಿಯರಿಗೆ ರೂ.42552 ಕೋಟಿ ಮತ್ತು ಯುವನಿಧಿಯಡಿ 2.74 ಲಕ್ಷ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ರೂ.326.95 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ರೂ.82000 ಕೋಟಿಯಷ್ಟು ವೆಚ್ಚ ಮಾಡಲಾಗಿದೆ. ಇದರಿಂದ ಮಹಿಳೆಯರ ಆದಾಯ ಹೆಚ್ಚಳವಾಗಿ ಕೊಡು, ಕೊಳ್ಳುವಿಕೆ ಸಾಮಥ್ರ್ಯ ಹೆಚ್ಚಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದರು.

ಮಾಯಕೊಂಡ ಕ್ಷೇತ್ರದ ಶಾಸಕ ಕೆ,ಎಸ್.ಬಸವಂತಪ್ಪ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಜೆಗಳ ಹಿತಕ್ಕಾಗಿ ಜಾರಿಗೊಳಿಸಲಾಗಿದ್ದು, ನಿರಂತರ 2 ವರ್ಷಗಳಿಂದ ಈ ಯೋಜನೆಯ ನೀಡುತ್ತಾ ಬಂದಿದೆ. ಇಂತಹ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಸಲುವಾಗಿ ಗ್ಯಾರಂಟಿ ಯೋಜನಾ ಸಮಿತಿ ಸ್ಥಾಪಿಸಲಾಗಿದೆ. ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯಡಿ ನೀಡುವ ಹಣವನ್ನು ಯಾವುದೇ ಬ್ಯಾಂಕ್‍ಗಳು ಇತರೆ ಸಾಲಗಳಿಗೆ ಜಮಾ ಮಾಡದಂತೆ ಜಿಲ್ಲಾಧಿಕಾರಿಗಳಿಗೆ ಕ್ರಮ ವಹಿಸಬೇಕೆಂದರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ಗ್ಯಾರಂಟಿ ಅನುಷ್ಠಾನ ಸಮತಿಯಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯೋಜನೆಗಳನ್ನು ತಲುಪಿಸುವ ಕಾರ್ಯ ಮಾಡಲಾಗುತ್ತದೆ. ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಪ್ರತಿ ಕುಟುಂಬವೂ ಪ್ರೀತಿ, ಸಹಬಾಳ್ವೆ, ಸಾಮರಸ್ಯದಿಂದ ನೆಮ್ಮದಿಯಾಗಿ ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ. ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ. ಸಿಇಓ ಸುರೇಶ್ ಬಿ.ಇಟ್ನಾಳ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್, ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ಮಾಜಿ ಮೇಯರ್ ಚಮನ್ ಸಾಬ್, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending